AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Registered Vehicle Scrapping Policy: ಸರ್ಕಾರದ ಅಸಡ್ಡೆ – ಹಳೆಯ ವಾಹನಗಳ ಸ್ಕ್ರಾಪ್​ ನೀತಿಯೇ ಸ್ಕ್ರಾಪ್ ಆಗುತ್ತದಾ?

ಹಳೆಯ ವಾಹನಗಳ ಸ್ಕ್ರಾಪಿಂಗ್ ಕಡ್ಡಾಯಗೊಳಿಸಿಲ್ಲ. ಹಾಗಾಗಿ ಜನ ಸ್ವಯಂಪ್ರೇರಿತವಾಗಿ ಮುಂದೆ ಬರುತ್ತಿಲ್ಲ. ಸಾರಿಗೆ ಇಲಾಖೆಯ ಅಧಿಕಾರಿಗಳೂ ಈ ನೀತಿಯನ್ನು ಜಾರಿಗೊಳಿಸುವ ಬಗ್ಗೆ ಹೆಚ್ಚು ಚಿಂತಿತರಾಗಿಲ್ಲ. ಜನರನ್ನು ಪ್ರೇರೇಪಿಸಲು ಜಾಹೀರಾತುಗಳ ಮೂಲಕ ಜಾಗೃತಿ ಮೂಡಿಸುವ ಸಾಹಸಕ್ಕೂ ಕೈಹಾಕುತ್ತಿಲ್ಲ. ಹೆಚ್ಚು ಕೇಳಿದರೆ ಕರ್ನಾಟಕದಲ್ಲಿ ವಾಹನಗಳ ಸ್ಕ್ರಾಪಿಂಗ್ ಜಾರಿಗೊಳಿಸುವ ಜವಾಬ್ದಾರಿಯನ್ನು ಹೊತ್ತಿರುವುದು ಎರಡು ಖಾಸಗಿ ಕಂಪನಿಗಳು ಅವುಗಳೇ ಜಾಗೃತಿ/ ಪ್ರಚಾರದಲ್ಲಿ ತೊಡಗಬೇಕು ಎಂದು ಕಡ್ಡಿ ಮುರಿದಂತೆ ಹೇಳುತ್ತಾರೆ ಇಲಾಖೆಯ ಉನ್ನತಾಧಿಕಾರಿಗಳು.

Registered Vehicle Scrapping Policy: ಸರ್ಕಾರದ ಅಸಡ್ಡೆ - ಹಳೆಯ ವಾಹನಗಳ ಸ್ಕ್ರಾಪ್​ ನೀತಿಯೇ ಸ್ಕ್ರಾಪ್ ಆಗುತ್ತದಾ?
ಹಳೆಯ ವಾಹನಗಳ ಸ್ಕ್ರಾಪ್​ ನೀತಿಯೇ ಸ್ಕ್ರಾಪ್ ಆಗುತ್ತದಾ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jul 13, 2024 | 10:40 AM

Share

ಬೆಂಗಳೂರು: ರಾಜ್ಯದಲ್ಲಿ ನೋಂದಾಯಿತ ವಾಹನಗಳ ಸ್ಕ್ರ್ಯಾಪಿಂಗ್ ನೀತಿಯನ್ನು ಕರ್ನಾಟಕ ಸರ್ಕಾರ ( Karnataka Registered Vehicle Scrapping Policy) ಇತ್ತೀಚೆಗೆ ಮಾರ್ಪಡಿಸಿದೆ. ಹಳೆಯ ವಾಹನವನ್ನು ಸ್ಕ್ರಾಪ್ ಮಾಡಿದ ನಂತರ ಅದರ ಮಾಲೀಕರು ನೂತನ ವಾಹನ ತೆಗೆದುಕೊಳ್ಳುವಾಗ ಮೋಟಾರು ವಾಹನ ತೆರಿಗೆಯಲ್ಲಿ ಪರಿಷ್ಕೃತ ದರಗಳ ರಿಯಾಯಿತಿ ಈ ಹಿಂದಿನಂತೆ ಮುಂದುವರಿಯಲಿದೆ . ಟ್ರಾಕ್ಟರ್ ಸೇರಿದಂತೆ ಎಲ್ಲಾ ನಿರ್ಮಾಣ ಸಲಕರಣೆಗಳ ವಾಹನಗಳ ಮೇಲೆ 10% ತೆರಿಗೆ ರಿಯಾಯಿತಿ ಸಿಗಲಿದೆ. ಹೊಸದಾಗಿ ನೋಂದಾಯಿಸಲಾದ ಸಾರಿಗೆ ವಾಹನಗಳಿಗೆ ಜೀವಿತಾವಧಿ ತೆರಿಗೆ (ಎಲ್‌ಟಿಟಿ) ಮೇಲೆ 10 % ತೆರಿಗೆ ರಿಯಾಯಿತಿ, ಪಾವತಿಸಬೇಕಾದ ಒಟ್ಟು ತೆರಿಗೆಯ ಮೇಲೆ 10 % ತೆರಿಗೆ ರಿಯಾಯಿತಿ ಸಿಗಲಿದೆ. ಹೊಸದಾಗಿ ನೋಂದಾಯಿಸಲಾದ ಸಾರಿಗೆ ವಾಹನಗಳಿಗೆ 8 ವರ್ಷಗಳವರೆಗೆ ವಾರ್ಷಿಕವಾಗಿ 50 ರೂಪಾಯಿ ತೆರಿಗೆ ರಿಯಾಯಿತಿಯನ್ನು (ತ್ರೈಮಾಸಿಕದಲ್ಲಿ) ನೀಡಲಾಗುತ್ತದೆ. ನೋಂದಾಯಿತ ವಾಹನ ಸ್ಕ್ರ್ಯಾಪಿಂಗ್ ನೀತಿ ಕರ್ನಾಟಕ-2022 ರ ಪ್ರಕಾರ ಕರ್ನಾಟಕದ ಮೊದಲ ನೋಂದಾಯಿತ ವಾಹನ ಸ್ಕ್ರ್ಯಾಪಿಂಗ್ ಸೌಲಭ್ಯ (Karnataka’s first Registered Vehicles Scrapping Facility -RVSF) ) ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ವಿಜಯಪುರದಲ್ಲಿದೆ. ಇದು ಖಾಸಗಿ ಮರುಬಳಕೆ ಕೇಂದ್ರವಾಗಿದ್ದು, ಸಂಸ್ಥೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಹಳೆಯ ವಾಹನಗಳ ಮಾಲೀಕರು ಸ್ವಯಂಪ್ರೇರಣೆಯಿಂದ ತಮ್ಮ ಹಳೆಯ ಮತ್ತು ಸಂಚಾರ ಯೋಗ್ಯವಲ್ಲದ ವಾಹನಗಳನ್ನು ಸ್ಕ್ರ್ಯಾಪ್ ಮಾಡಬಹುದು. ಈ ಕೇಂದ್ರವು ಆರಂಭದಲ್ಲಿ ಸೀಮಿತ ಸ್ಕ್ರ್ಯಾಪಿಂಗ್ ಸಾಮರ್ಥ್ಯವನ್ನು ಹೊಂದಿದೆ. ಇನ್ನೊಂದು ಸ್ಕ್ರ್ಯಾಪಿಂಗ್ ಕೇಂದ್ರವು ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಕೊಳಲ ಹೋಬಳಿಯಲ್ಲಿವೆ. ಕರ್ನಾಟಕದ ಎಲ್ಲಾ ಸ್ಕ್ರ್ಯಾಪ್ ವಾಹನಗಳನ್ನು ಸಂಸ್ಕರಿಸುವ ಹೊರೆ ಈ...

Published On - 10:35 am, Sat, 13 July 24

Follow Us

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ