AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vehicle Scrapping: ಗುಜರಿ ಪಾಲಿಸಿ ಅಡಿ ಹೊಸ ಕಾರು ಖರೀದಿದಾರರಿಗೆ ಭರ್ಜರಿ ಆಫರ್

ಹಳೆಯ ವಾಹನಗಳನ್ನು ರಸ್ತೆಯಿಂದ ಮುಕ್ತಗೊಳಿಸಲು ಪರಿಣಾಮಕಾರಿ ನೀತಿಗಳನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರವು ಇದೀಗ ಮತ್ತೊಂದು ಮಹತ್ವದ ಯೋಜನೆ ಪ್ರಕಟಿಸಿದೆ.

Vehicle Scrapping: ಗುಜರಿ ಪಾಲಿಸಿ ಅಡಿ ಹೊಸ ಕಾರು ಖರೀದಿದಾರರಿಗೆ ಭರ್ಜರಿ ಆಫರ್
ಗುಜರಿ ಪಾಲಿಸಿ ಅಡಿ ಹೊಸ ಕಾರು ಖರೀದಿದಾರರಿಗೆ ಭರ್ಜರಿ ಆಫರ್
Praveen Sannamani
|

Updated on: Aug 28, 2024 | 10:47 PM

Share

ಹಳೆಯ ವಾಹನಗಳಿಗೆ ರಸ್ತೆಯಿಂದ ಮುಕ್ತಿ ನೀಡುವ ಸಂಬಂಧ ಕೇಂದ್ರ ಸರ್ಕಾರವು ಸ್ವಯಂ ಪ್ರೇರಿತ ವಾಹನಗಳ ಗುಜುರಿ ನೀತಿಗೆ ಈಗಾಗಲೇ ಚಾಲನೆ ನೀಡಿದ್ದು, ಇದೀಗ ಹಳೆಯ ವಾಹನಗಳನ್ನು ಗುಜರಿಗೆ ಹಾಕಿ ಹೊಸ ವಾಹನಗಳನ್ನು ಖರೀದಿಸುವ ಗ್ರಾಹಕರಿಗೆ ಹೆಚ್ಚಿನ ಮಟ್ಟದ ವಿನಾಯ್ತಿಗಳನ್ನು ನೀಡುವುದಾಗಿ ಘೋಷಣೆ ಮಾಡಲಾಗಿದೆ.

ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಚರರ್ಸ್ ಸಂಸ್ಥೆಯ ಸಭೆಯಲ್ಲಿ ಮಾತನಾಡಿರುವ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿಯವರು ಹಳೆಯ ವಾಹನಗಳನ್ನು ಗುಜರಿಗೆ ಹಾಕಿ ಹೊಸ ವಾಹನ ಖರೀದಿಸುವ ಗ್ರಾಹಕರಿಗೆ ಉತ್ತಮ ರಿಯಾಯ್ತಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಹಳೆಯ ವಾಹನಗಳನ್ನು ಗುಜರಿಗೆ ಹಾಕುವ ಮೂಲಕ ಹೊಸ ವಾಹನಗಳ ಖರೀದಿ ವೇಳೆ ಶೇಕಡಾ 1.5 ರಿಂದ ಶೇಕಡಾ 3.5 ರಿಯಾಯಿತಿ ನೀಡಲು ನಿರ್ಧರಿಸಿದ್ದು, ಕೇಂದ್ರ ಸರ್ಕಾರ ಹೊಸ ಯೋಜನೆಗೆ ಬಹುತೇಕ ವಾಹನ ಉತ್ಪಾದನಾ ಕಂಪನಿಗಳು ಒಪ್ಪಿಗೆ ಸೂಚಿಸಿವೆ. ಈ ಹಿಂದೆ ಶೇ. 5 ರಷ್ಟು ರಿಯಾಯ್ತಿ ಸೂಚಿಸಿದ್ದ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದ ವಾಹನ ಉತ್ಪಾದನಾ ಕಂಪನಿಗಳು ಇದೀಗ ವಿವಿಧ ವಾಹನಗಳು ಮತ್ತು ಅವುಗಳ ಸ್ಥಿತಿಗತಿಗಳ ಮೇಲೆ ಶೇ. 1.50 ರಿಂದ 3.5 ರ ತನಕ ರಿಯಾಯ್ತಿ ನೀಡುವುದಾಗಿ ಒಪ್ಪಿಗೆ ಸೂಚಿಸಿವೆ.

ಹೊಸ ರಿಯಾಯ್ತಿ ಯೋಜನೆಯಡಿ ಪ್ರಯೋಜನ ಪಡೆಯುವ ಗ್ರಾಹಕರು ತಮ್ಮ ಹಳೆಯ ವಾಹನಗಳನ್ನು ನೋಂದಾಯಿತ ಗುಜರಿ ಕೇಂದ್ರಗಳಲ್ಲಿ ಸ್ಕ್ರಾಪ್ ಮಾಡಿಸುವ ಮೂಲಕ ಪ್ರಮಾಣ ಪತ್ರ ಪಡೆದುಕೊಳ್ಳಬೇಕಿದ್ದು, ಆ ಪ್ರಮಾಣ ಪತ್ರವನ್ನು ಕಾರು ಡೀಲರ್ಸ್ ಸಲ್ಲಿಸುವ ಮೂಲಕ ನಿಮ್ಮ ಇಷ್ಟದ ವಾಹನಗಳ ಖರೀದಿ ಮೇಲೆ ನಿಗದಿತ ಆಫರ್ ಗಳನ್ನು ಪಡೆದುಕೊಳ್ಳಬಹುದಾಗಿದೆ.

ಇದರೊಂದಿಗೆ ಕೇಂದ್ರ ಸರ್ಕಾರವು 2025ರ ಮಾರ್ಚ್‌ ವೇಳೆಗೆ 90 ಸಾವಿರ ಹಳೆಯ ಸರ್ಕಾರಿ ವಾಹನಗಳನ್ನು ಕೂಡಾ ಗುಜರಿಗೆ ಹಾಕಲು ನಿರ್ಧರಿಸಿದ್ದು, ಹಂತ-ಹಂತವಾಗಿ ಹಳೆಯ ವಾಹನಗಳ ಬಳಕೆಗೆ ಗುಡ್ ಬೈ ಹೇಳುತ್ತಿರುವುದು ಗಮರ್ನಾಹ ಬೆಳವಣಿಗೆಯಾಗಿದೆ. ಈ ಮೂಲಕ ಹಳೆಯ ವಾಹನಗಳಿಂದ ಉತ್ಪತ್ತಿಯಾಗುತ್ತಿರುವ ಮಾಲಿನ್ಯ ತಗ್ಗಿಸುವುದರ ಜೊತೆಗೆ ಗುಜರಿಯಿಂದ ಸಂಗ್ರಹವಾಗುವ ಹಳೆಯ ವಾಹನಗಳ ಬಿಡಿಭಾಗಗಳು ಮರುಬಳಕೆಯು ಉತ್ಪಾದನಾ ವೆಚ್ಚವನ್ನು ಸಹ ತಗ್ಗಿಸಲಿದೆ.

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​