AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Energy crisis: ವಿದ್ಯುತ್ ಬಿಕ್ಕಟ್ಟಿನಿಂದಾಗಿ ಇವಿ ವಾಹನಳ ಬಳಕೆಗೆ ಬಿತ್ತು ಬ್ರೇಕ್!

ವಿಶ್ವಾದ್ಯಂತ ಇವಿ ವಾಹನಗಳ ಬಳಕೆ ಹೆಚ್ಚುತ್ತಿರುವ ಸಮಯದಲ್ಲಿ ಇವಿ ವಾಹನಗಳಿಗೆ ಸಮರ್ಪಕವಾದ ವಿದ್ಯುತ್ ಪೂರೈಕೆಯು ಸಾಕಷ್ಟು ಸವಾಲಾಗಿದೆ. ವಿದ್ಯುತ್ ಕೊರತೆಯ ನಡುವೆ ಇವಿ ವಾಹನಗಳ ಬಳಕೆಯು ಕೆಲವು ರಾಷ್ಟ್ರಗಳಲ್ಲಿ ಹೊಸ ಸಮಸ್ಯೆಗಳಿಗೆ ಕಾರಣವಾಗುತ್ತಿದ್ದು, ವಿದ್ಯುತ್ ಬಿಕ್ಕಟ್ಟು ಪರಿಣಾಮ ತಾತ್ಕಾಲಿಕವಾಗಿ ಬಳಕೆಗೆ ನಿಷೇಧ ಹೇರಲಾಗುತ್ತಿದೆ.

Energy crisis: ವಿದ್ಯುತ್ ಬಿಕ್ಕಟ್ಟಿನಿಂದಾಗಿ ಇವಿ ವಾಹನಳ ಬಳಕೆಗೆ ಬಿತ್ತು ಬ್ರೇಕ್!
ವಿದ್ಯುತ್ ಬಿಕ್ಕಟ್ಟಿನಿಂದಾಗಿ ಇವಿ ವಾಹನಳ ಬಳಕೆಗೆ ಬಿತ್ತು ಬ್ರೇಕ್!
TV9 Web
| Edited By: |

Updated on:Dec 06, 2022 | 8:30 PM

Share

ಹೆಚ್ಚುತ್ತಿರುವ ಇಂಧನಗಳ ದರ ಮತ್ತು ಮಾಲಿನ್ಯ ಕಾರಣಕ್ಕಾಗಿ ವಿಶ್ವಾದ್ಯಂತ ಎಲೆಕ್ಟ್ರಿಕ್ ವಾಹನಗಳ(Electric Vehicles) ಬಳಕೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಆದ್ರೆ ಇವಿ ವಾಹನ ಬಳಕೆಯು ಭವಿಷ್ಯದಲ್ಲಿ ಹೊಸ ಸಮಸ್ಯೆಗಳಿಗೆ ಕಾರಣವಾಗಬಹುದು ಎನ್ನಲಾಗುತ್ತಿದ್ದು, ಇದೇ ಕಾರಣಕ್ಕೆ ಯುರೋಪಿನ ಮುಖ್ಯ ರಾಷ್ಟ್ರವೊಂದು ಇವಿ ವಾಹನಗಳ ಬಳಕೆಯನ್ನು ಬ್ಯಾನ್ ಮಾಡಿದೆ. ಹೌದು, ಇವಿ ವಾಹನಗಳ ಬಳಕೆಯು ಪರಿಸರ ಸ್ನೇಹಿಯಾಗಿದ್ದರೂ ಇವಿ ವಾಹನಗಳಿಗೆ ಮುಖ್ಯವಾಗಿರುವ ಸಮರ್ಪಕ ವಿದ್ಯುತ್ ಪೂರೈಕೆಯು ಹೊಸ ಸವಾಲಾಗಿ ಪರಿಣಮಿಸುತ್ತಿದೆ.

ಇವಿ ವಾಹನಗಳಿಗೆ ಹೆಚ್ಚಿನ ಮಟ್ಟದ ವಿದ್ಯುತ್ ಪೂರೈಕೆಗಾಗಿ ಪ್ರಮುಖ ರಾಷ್ಟ್ರಗಳು ಹೊಸ ಯೋಜನೆಗಳಿಗೆ ಚಾಲನೆ ನೀಡುತ್ತಿದ್ದು, ಸದ್ಯ ಲಭ್ಯವಿರುವ ವಿದ್ಯುತ್ ಉತ್ಪಾದನಾ ಪ್ರಮಾಣವನ್ನು ಮುಂಬರುವ ದಿನಗಳಲ್ಲಿ ದ್ವಿಗುಣಗೊಳಿಸಬೇಕಿದೆ. ಆದರೆ ಲಭ್ಯವಿರುವ ವಿದ್ಯುತ್ ಪ್ರಮಾಣವು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಇವಿ ವಾಹನಗಳಿಗೆ ಅನುಗುಣವಾಗಿ ಲಭ್ಯವಿಲ್ಲ ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ಯುರೋಪಿನ ಮುಖ್ಯ ಆರ್ಥಿಕ ಕೇಂದ್ರಗಳಲ್ಲಿ ಒಂದಾಗಿರುವ ಸ್ವಿಜರ್ಲ್ಯಾಂಡ್ ನಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ತಾತ್ಕಾಲಿಕವಾಗಿ ಬ್ಯಾನ್ ಮಾಡಲಾಗಿದೆ.

ಚಳಿಗಾಲ ಆರಂಭವಾಗಿರುವುದರಿಂದ ಸ್ವಿಜರ್ಲ್ಯಾಂಡ್ ನಲ್ಲಿ ವಿದ್ಯುತ್ ಉತ್ಪಾದನೆಯು ಗಣನೀಯವಾಗಿ ಇಳಿಕೆಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಇವಿ ವಾಹನಗಳ ಬಳಕೆಯನ್ನು ಮುಂದಿನ ಕೆಲ ತಿಂಗಳು ಕಾಲ ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ. ಚಳಿಗಾಲ ಆರಂಭವಾಗಿರುವುದರಿಂದ ಸ್ವಿಜರ್ಲ್ಯಾಂಡ್ ನ ಪ್ರಮುಖ ಡ್ಯಾಂಗಳಿಗೆ ಹರಿದುಬರುವ ನೀರಿನ ಮೂಲಗಳು ಮಂಜುಗಡ್ಡೆಗಳಾಗಿ ಬದಲಾಗುತ್ತಿದ್ದು, ಜಲವಿದ್ಯುತ್ ಉತ್ಪಾದನಾ ಪ್ರಮಾಣವು ಹಂತ-ಹಂತವಾಗಿ ಕಡಿತವಾಗುತ್ತಿದೆ. ಪ್ರತಿಕೂಲಕರ ವಾತಾವರಣದಿಂದ ಸ್ವಿಜರ್ಲ್ಯಾಂಡ್ ರಾಷ್ಟ್ರವು ಮುಖ್ಯವಾಗಿ ಜಲವಿದ್ಯುತ್ ಉತ್ಪಾದನೆಯನ್ನು ಅವಲಂಬಿಸಿದ್ದು, ಚಳಿಗಾಲದಲ್ಲಿ ವಿದ್ಯುತ್ ಬಳಕೆಯ ಪ್ರಮಾಣವು ಹೆಚ್ಚಳವಾಗುವುದು ಮತ್ತೊಂದು ಸವಾಲಾಗಿದೆ.

ಸ್ವಿಜರ್ಲ್ಯಾಂಡ್ ನಲ್ಲಿ ಚಳಿಗಾಲದ ಸಂದರ್ಭದಲ್ಲಿ ವಿದ್ಯುತ್ ಬಳಕೆಯ ಪ್ರಮಾಣವು ತೀವ್ರವಾಗಿ ಏರಿಕೆಯಾಗಲಿದ್ದು, ಈ ಹಿನ್ನಲೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಬ್ರೇಕ್ ಹಾಕಲಾಗಿದೆ. ವಿದ್ಯುತ್ ಉತ್ಪಾದನಾ ಪ್ರಮಾಣವನ್ನು ಆಧರಿಸಿ ಮುಂದಿನ ಕೆಲವು ತಿಂಗಳು ಕಾಲ ಇವಿ ವಾಹನಗಳನ್ನು ಬಳಸದಂತೆ ಆದೇಶ ಹೊರಡಿಸಲಾಗಿದೆ. ಆದರೆ ತುರ್ತು ಸೇವೆಗಳಲ್ಲಿ ನಿಯೋಜಿಸಲಾಗಿರುವ ಇವಿ ವಾಹನಗಳ ಬಳಕೆಗೆ ವಿನಾಯ್ತಿ ನೀಡಲಾಗಿದೆ. ಚಳಿಗಾಲದ ಸಂದರ್ಭದಲ್ಲಿ ಪ್ರಮುಖ ರಾಷ್ಟ್ರಗಳಿಂದ ಸ್ವಿಜರ್ಲ್ಯಾಂಡ್ ವಿದ್ಯುತ್ ಆಮದು ಮಾಡಿಕೊಳ್ಳಲಿದ್ದು, ಈ ಬಾರಿ ಅದು ಕೂಡಾ ಹೊಡೆತ ಕೊಡುವ ಸಾಧ್ಯತೆಗಳಿವೆ. ಯಾಕೆಂದರೆ ರಷ್ಯಾ-ಯುಕ್ರೇನ್ ಯುದ್ದದಿಂದಾಗಿ ಯುರೋಪಿನ ಆಮದು ನೀತಿಗಳಲ್ಲಿನ ಕೆಲವು ಕಠಿಣ ಕ್ರಮಗಳು ವಿದ್ಯುತ್ ಆಮದು ಮೇಲೆ ಪರಿಣಾಮ ಬೀರಬಹುದಾಗಿದೆ.

ಈ ಎಲ್ಲಾ ಕಾರಣಗಳಿಂದ ಸ್ವಿಜರ್ಲ್ಯಾಂಡ್ ನಲ್ಲಿ ಮುಂದಿನ ಕೆಲ ತಿಂಗಳು ಕಾಲ ಇವಿ ವಾಹನಗಳು ಸ್ತಬ್ಧಗೊಳ್ಳಲಿದ್ದು, ಸಾಂಪ್ರಾದಾಯಿಕ ವಾಹನಗಳ ಬಳಕೆಯೇ ಮುಂದುವರಿಯಿದೆ. ಇನ್ನು ವಿಶ್ವಾದ್ಯಂತ ಇವಿ ವಾಹನಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದರೂ ಅದಕ್ಕೆ ಪೂರಕವಾಗಿ ವಿದ್ಯುತ್ ಉತ್ಪಾದನಾ ಮೂಲಗಳು ಕೂಡಾ ಸುಧಾರಣೆಗೊಳ್ಳಬೇಕಿದೆ. ಸದ್ಯ ಭಾರತದಲ್ಲಿನ ಇವಿ ಬಳಕೆ ಪ್ರಮಾಣವನ್ನು ನೋಡಿದರೆ ಮುಂಬರುವ ದಿನಗಳಲ್ಲಿ ಅದು ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಗಳಿವೆ. ಇವಿ ವಾಹನಗಳು ಪ್ರಸ್ತುತ ನಗರ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿದ್ದು, ಮುಂದಿನ ಕೆಲ ವರ್ಷಗಳಲ್ಲಿ ಗ್ರಾಮೀಣ ಭಾಗದಲ್ಲೂ ಇವಿ ವಾಹನಗಳ ಬಳಕೆ ಹೆಚ್ಚಲಿದೆ. ಆಗ ಖಂಡಿತವಾಗಿಯೂ ವಿದ್ಯುತ್ ಪೂರೈಕೆಯಲ್ಲಿ ಹೊಸ ಸವಾಲುಗಳು ಎದುರಾಗುವ ಸಾಧ್ಯತೆಯಿದೆ ಎನ್ನಬಹುದು.

Published On - 8:30 pm, Tue, 6 December 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ