AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಲೆ ಇಳಿಕೆ ಮೂಲಕ ಇವಿ ಕಾರು ಖರೀದಿದಾರಿಗೆ ಬಂಪರ್ ಆಫರ್ ನೀಡಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ರಮುಖ ಎಲೆಕ್ಟ್ರಿಕ್ ಕಾರು ಮಾದರಿಗಳ ಬೆಲೆ ಇಳಿಕೆ ಮಾಡುವ ಮೂಲಕ ಹೊಸ ಸಂಚಲನ ಮೂಡಿಸಿದೆ.

ಬೆಲೆ ಇಳಿಕೆ ಮೂಲಕ ಇವಿ ಕಾರು ಖರೀದಿದಾರಿಗೆ ಬಂಪರ್ ಆಫರ್ ನೀಡಿದ ಟಾಟಾ ಮೋಟಾರ್ಸ್
ಟಾಟಾ ಮೋಟಾರ್ಸ್ ಎಲೆಕ್ಟ್ರಿಕ್ ಕಾರುಗಳು
Praveen Sannamani
Praveen Sannamani|

Updated on:Sep 10, 2024 | 8:44 PM

Share

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಟಾಟಾ ಮೋಟಾರ್ಸ್ (Tata Motors) ಕಂಪನಿಯು ಮುಂಬರುವ ಹಬ್ಬದ ಋತುವಿನಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ತನ್ನ ಪ್ರಮುಖ ಕಾರು ಮಾದರಿಗಳ ಬೆಲೆಯಲ್ಲಿ ಇಳಿಕೆ ಮಾಡಿದೆ. ಹೊಸ ಆಫರ್ ನಲ್ಲಿ ಟಿಯಾಗೋ ಇವಿ, ನೆಕ್ಸಾನ್ ಇವಿ ಮತ್ತು ಪಂಚ್ ಇವಿ ಬೆಲೆಯಲ್ಲಿ ಇಳಿಕೆ ಮಾಡಿದ್ದು, ಹೊಸ ದರಗಳು ಅಕ್ಟೋಬರ್ 31ರ ತನಕ ಮಾತ್ರ ಅನ್ವಯಿಸಲಿವೆ.

ಹೊಸ ಆಫರ್ ನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಇವಿ ಬೆಲೆಯಲ್ಲಿ ರೂ. 3 ಲಕ್ಷದ ತನಕ ಇಳಿಕೆ ಮಾಡಿದ್ದರೆ ಪಂಚ್ ಇವಿ ಕಾರಿನ ಬೆಲೆಯಲ್ಲಿ ರೂ. 1.20 ಲಕ್ಷ ಮತ್ತು ಟಿಯಾಗೋ ಕಾರಿನ ಬೆಲೆಯಲ್ಲಿ ರೂ. 40 ಸಾವಿರದಷ್ಟು ಬೆಲೆ ಇಳಿಕೆ ಮಾಡಿದೆ.

ಬೆಲೆ ಇಳಿಕೆಯ ನಂತರ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ. 12.49 ಲಕ್ಷದಿಂದ ರೂ. 16.29 ಲಕ್ಷ ನಿಗದಿಪಡಿಸಲಾಗಿದ್ದು, ಆರಂಭಿಕ ಮಾದರಿಯ ಬೆಲೆಯಲ್ಲಿ ರೂ. 2 ಲಕ್ಷದಷ್ಟು ಮತ್ತು ಟಾಪ್ ಎಂಡ್ ಮಾದರಿಯಲ್ಲಿ ರೂ. 3 ಲಕ್ಷದಷ್ಟು ಬೆಲೆ ಇಳಿಕೆಯಾಗಿದೆ.

ಪಂಚ್ ಇವಿ ಬೆಲೆಯಲ್ಲಿ ಇಳಿಕೆಯ ನಂತರ ಎಕ್ಸ್ ಶೋರೂಂ ಪ್ರಕಾರ ರೂ. 9.99 ಲಕ್ಷದಿಂದ ರೂ. 13.79 ಲಕ್ಷ ಬೆಲೆ ನಿಗದಿ ಮಾಡಲಾಗಿದ್ದು, ಆರಂಭಿಕ ಮಾದರಿಯ ಬೆಲೆಯಲ್ಲಿ ರೂ. 1 ಲಕ್ಷದಷ್ಟು ಮತ್ತು ಟಾಪ್ ಎಂಡ್ ಮಾದರಿಯಲ್ಲಿ ರೂ. 1.20 ಲಕ್ಷದಷ್ಟು ಬೆಲೆ ಇಳಿಕೆ ಮಾಡಿದೆ.

ಇದನ್ನೂ ಓದಿ: ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿರುವ ಟಾಪ್ 5 ಕಾರುಗಳಿವು!

ಹಾಗೆಯೇ ಟಿಯಾಗೋ ಎಲೆಕ್ಟ್ರಿಕ್ ಕಾರು ಬೆಲೆ ಇಳಿಕೆಯ ನಂತರ ರೂ. 7.99 ಲಕ್ಷದಿಂದ ರೂ. 10.99 ಲಕ್ಷ ಬೆಲೆ ಹೊಂದಿದ್ದು, ಇದರಲ್ಲಿ ಆರಂಭಿಕ ಮಾದರಿಯಲ್ಲಿ ಯಾವುದೇ ಬೆಲೆ ಬದಲಾವಣೆ ಮಾಡದೆ ಟಾಪ್ ಎಂಡ್ ಮಾದರಿಯಲ್ಲಿ ರೂ. 40 ಸಾವಿರದಷ್ಟು ಇಳಿಕೆ ಮಾಡಲಾಗಿದೆ.

ಬೆಲೆ ಇಳಿಕೆಯೊಂದಿಗೆ ಟಾಟಾ ಮೋಟಾರ್ಸ್ ಕಂಪನಿಯು ಹೊಸ ಎಲೆಕ್ಟ್ರಿಕ್ ಕಾರು ಖರೀದಿದಾರರಿಗೆ ಮತ್ತೊಂದು ಆಕರ್ಷಕ ಆಫರ್ ನೀಡುತ್ತಿದೆ. ನಿಗದಿತ ಅವಧಿಯಲ್ಲಿ ಇವಿ ಕಾರು ಖರೀದಿದಾರರಿಗೆ ದೇಶಾದ್ಯಂತ ಕಾರ್ಯಾಚರಣೆ ತನ್ನ ಟಾಟಾ ಪವರ್ ಇವಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳಲ್ಲಿ 6 ತಿಂಗಳು ಕಾಲ ಉಚಿತವಾಗಿ ಚಾರ್ಜ್ ಮಾಡಲು ಅವಕಾಶ ನೀಡುತ್ತಿದೆ.

Published On - 8:43 pm, Tue, 10 September 24

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ