ಬೆಲೆ ಇಳಿಕೆ ಮೂಲಕ ಇವಿ ಕಾರು ಖರೀದಿದಾರಿಗೆ ಬಂಪರ್ ಆಫರ್ ನೀಡಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ರಮುಖ ಎಲೆಕ್ಟ್ರಿಕ್ ಕಾರು ಮಾದರಿಗಳ ಬೆಲೆ ಇಳಿಕೆ ಮಾಡುವ ಮೂಲಕ ಹೊಸ ಸಂಚಲನ ಮೂಡಿಸಿದೆ.

ಬೆಲೆ ಇಳಿಕೆ ಮೂಲಕ ಇವಿ ಕಾರು ಖರೀದಿದಾರಿಗೆ ಬಂಪರ್ ಆಫರ್ ನೀಡಿದ ಟಾಟಾ ಮೋಟಾರ್ಸ್
ಟಾಟಾ ಮೋಟಾರ್ಸ್ ಎಲೆಕ್ಟ್ರಿಕ್ ಕಾರುಗಳು
Follow us
|

Updated on:Sep 10, 2024 | 8:44 PM

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಟಾಟಾ ಮೋಟಾರ್ಸ್ (Tata Motors) ಕಂಪನಿಯು ಮುಂಬರುವ ಹಬ್ಬದ ಋತುವಿನಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ತನ್ನ ಪ್ರಮುಖ ಕಾರು ಮಾದರಿಗಳ ಬೆಲೆಯಲ್ಲಿ ಇಳಿಕೆ ಮಾಡಿದೆ. ಹೊಸ ಆಫರ್ ನಲ್ಲಿ ಟಿಯಾಗೋ ಇವಿ, ನೆಕ್ಸಾನ್ ಇವಿ ಮತ್ತು ಪಂಚ್ ಇವಿ ಬೆಲೆಯಲ್ಲಿ ಇಳಿಕೆ ಮಾಡಿದ್ದು, ಹೊಸ ದರಗಳು ಅಕ್ಟೋಬರ್ 31ರ ತನಕ ಮಾತ್ರ ಅನ್ವಯಿಸಲಿವೆ.

ಹೊಸ ಆಫರ್ ನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಇವಿ ಬೆಲೆಯಲ್ಲಿ ರೂ. 3 ಲಕ್ಷದ ತನಕ ಇಳಿಕೆ ಮಾಡಿದ್ದರೆ ಪಂಚ್ ಇವಿ ಕಾರಿನ ಬೆಲೆಯಲ್ಲಿ ರೂ. 1.20 ಲಕ್ಷ ಮತ್ತು ಟಿಯಾಗೋ ಕಾರಿನ ಬೆಲೆಯಲ್ಲಿ ರೂ. 40 ಸಾವಿರದಷ್ಟು ಬೆಲೆ ಇಳಿಕೆ ಮಾಡಿದೆ.

ಬೆಲೆ ಇಳಿಕೆಯ ನಂತರ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ. 12.49 ಲಕ್ಷದಿಂದ ರೂ. 16.29 ಲಕ್ಷ ನಿಗದಿಪಡಿಸಲಾಗಿದ್ದು, ಆರಂಭಿಕ ಮಾದರಿಯ ಬೆಲೆಯಲ್ಲಿ ರೂ. 2 ಲಕ್ಷದಷ್ಟು ಮತ್ತು ಟಾಪ್ ಎಂಡ್ ಮಾದರಿಯಲ್ಲಿ ರೂ. 3 ಲಕ್ಷದಷ್ಟು ಬೆಲೆ ಇಳಿಕೆಯಾಗಿದೆ.

ಪಂಚ್ ಇವಿ ಬೆಲೆಯಲ್ಲಿ ಇಳಿಕೆಯ ನಂತರ ಎಕ್ಸ್ ಶೋರೂಂ ಪ್ರಕಾರ ರೂ. 9.99 ಲಕ್ಷದಿಂದ ರೂ. 13.79 ಲಕ್ಷ ಬೆಲೆ ನಿಗದಿ ಮಾಡಲಾಗಿದ್ದು, ಆರಂಭಿಕ ಮಾದರಿಯ ಬೆಲೆಯಲ್ಲಿ ರೂ. 1 ಲಕ್ಷದಷ್ಟು ಮತ್ತು ಟಾಪ್ ಎಂಡ್ ಮಾದರಿಯಲ್ಲಿ ರೂ. 1.20 ಲಕ್ಷದಷ್ಟು ಬೆಲೆ ಇಳಿಕೆ ಮಾಡಿದೆ.

ಇದನ್ನೂ ಓದಿ: ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿರುವ ಟಾಪ್ 5 ಕಾರುಗಳಿವು!

ಹಾಗೆಯೇ ಟಿಯಾಗೋ ಎಲೆಕ್ಟ್ರಿಕ್ ಕಾರು ಬೆಲೆ ಇಳಿಕೆಯ ನಂತರ ರೂ. 7.99 ಲಕ್ಷದಿಂದ ರೂ. 10.99 ಲಕ್ಷ ಬೆಲೆ ಹೊಂದಿದ್ದು, ಇದರಲ್ಲಿ ಆರಂಭಿಕ ಮಾದರಿಯಲ್ಲಿ ಯಾವುದೇ ಬೆಲೆ ಬದಲಾವಣೆ ಮಾಡದೆ ಟಾಪ್ ಎಂಡ್ ಮಾದರಿಯಲ್ಲಿ ರೂ. 40 ಸಾವಿರದಷ್ಟು ಇಳಿಕೆ ಮಾಡಲಾಗಿದೆ.

ಬೆಲೆ ಇಳಿಕೆಯೊಂದಿಗೆ ಟಾಟಾ ಮೋಟಾರ್ಸ್ ಕಂಪನಿಯು ಹೊಸ ಎಲೆಕ್ಟ್ರಿಕ್ ಕಾರು ಖರೀದಿದಾರರಿಗೆ ಮತ್ತೊಂದು ಆಕರ್ಷಕ ಆಫರ್ ನೀಡುತ್ತಿದೆ. ನಿಗದಿತ ಅವಧಿಯಲ್ಲಿ ಇವಿ ಕಾರು ಖರೀದಿದಾರರಿಗೆ ದೇಶಾದ್ಯಂತ ಕಾರ್ಯಾಚರಣೆ ತನ್ನ ಟಾಟಾ ಪವರ್ ಇವಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳಲ್ಲಿ 6 ತಿಂಗಳು ಕಾಲ ಉಚಿತವಾಗಿ ಚಾರ್ಜ್ ಮಾಡಲು ಅವಕಾಶ ನೀಡುತ್ತಿದೆ.

Published On - 8:43 pm, Tue, 10 September 24

ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ