AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಲೆ ಇಳಿಕೆ ಮೂಲಕ ಇವಿ ಕಾರು ಖರೀದಿದಾರಿಗೆ ಬಂಪರ್ ಆಫರ್ ನೀಡಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ರಮುಖ ಎಲೆಕ್ಟ್ರಿಕ್ ಕಾರು ಮಾದರಿಗಳ ಬೆಲೆ ಇಳಿಕೆ ಮಾಡುವ ಮೂಲಕ ಹೊಸ ಸಂಚಲನ ಮೂಡಿಸಿದೆ.

ಬೆಲೆ ಇಳಿಕೆ ಮೂಲಕ ಇವಿ ಕಾರು ಖರೀದಿದಾರಿಗೆ ಬಂಪರ್ ಆಫರ್ ನೀಡಿದ ಟಾಟಾ ಮೋಟಾರ್ಸ್
ಟಾಟಾ ಮೋಟಾರ್ಸ್ ಎಲೆಕ್ಟ್ರಿಕ್ ಕಾರುಗಳು
Praveen Sannamani
Praveen Sannamani|

Updated on:Sep 10, 2024 | 8:44 PM

Share

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಟಾಟಾ ಮೋಟಾರ್ಸ್ (Tata Motors) ಕಂಪನಿಯು ಮುಂಬರುವ ಹಬ್ಬದ ಋತುವಿನಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ತನ್ನ ಪ್ರಮುಖ ಕಾರು ಮಾದರಿಗಳ ಬೆಲೆಯಲ್ಲಿ ಇಳಿಕೆ ಮಾಡಿದೆ. ಹೊಸ ಆಫರ್ ನಲ್ಲಿ ಟಿಯಾಗೋ ಇವಿ, ನೆಕ್ಸಾನ್ ಇವಿ ಮತ್ತು ಪಂಚ್ ಇವಿ ಬೆಲೆಯಲ್ಲಿ ಇಳಿಕೆ ಮಾಡಿದ್ದು, ಹೊಸ ದರಗಳು ಅಕ್ಟೋಬರ್ 31ರ ತನಕ ಮಾತ್ರ ಅನ್ವಯಿಸಲಿವೆ.

ಹೊಸ ಆಫರ್ ನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಇವಿ ಬೆಲೆಯಲ್ಲಿ ರೂ. 3 ಲಕ್ಷದ ತನಕ ಇಳಿಕೆ ಮಾಡಿದ್ದರೆ ಪಂಚ್ ಇವಿ ಕಾರಿನ ಬೆಲೆಯಲ್ಲಿ ರೂ. 1.20 ಲಕ್ಷ ಮತ್ತು ಟಿಯಾಗೋ ಕಾರಿನ ಬೆಲೆಯಲ್ಲಿ ರೂ. 40 ಸಾವಿರದಷ್ಟು ಬೆಲೆ ಇಳಿಕೆ ಮಾಡಿದೆ.

ಬೆಲೆ ಇಳಿಕೆಯ ನಂತರ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ. 12.49 ಲಕ್ಷದಿಂದ ರೂ. 16.29 ಲಕ್ಷ ನಿಗದಿಪಡಿಸಲಾಗಿದ್ದು, ಆರಂಭಿಕ ಮಾದರಿಯ ಬೆಲೆಯಲ್ಲಿ ರೂ. 2 ಲಕ್ಷದಷ್ಟು ಮತ್ತು ಟಾಪ್ ಎಂಡ್ ಮಾದರಿಯಲ್ಲಿ ರೂ. 3 ಲಕ್ಷದಷ್ಟು ಬೆಲೆ ಇಳಿಕೆಯಾಗಿದೆ.

ಪಂಚ್ ಇವಿ ಬೆಲೆಯಲ್ಲಿ ಇಳಿಕೆಯ ನಂತರ ಎಕ್ಸ್ ಶೋರೂಂ ಪ್ರಕಾರ ರೂ. 9.99 ಲಕ್ಷದಿಂದ ರೂ. 13.79 ಲಕ್ಷ ಬೆಲೆ ನಿಗದಿ ಮಾಡಲಾಗಿದ್ದು, ಆರಂಭಿಕ ಮಾದರಿಯ ಬೆಲೆಯಲ್ಲಿ ರೂ. 1 ಲಕ್ಷದಷ್ಟು ಮತ್ತು ಟಾಪ್ ಎಂಡ್ ಮಾದರಿಯಲ್ಲಿ ರೂ. 1.20 ಲಕ್ಷದಷ್ಟು ಬೆಲೆ ಇಳಿಕೆ ಮಾಡಿದೆ.

ಇದನ್ನೂ ಓದಿ: ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿರುವ ಟಾಪ್ 5 ಕಾರುಗಳಿವು!

ಹಾಗೆಯೇ ಟಿಯಾಗೋ ಎಲೆಕ್ಟ್ರಿಕ್ ಕಾರು ಬೆಲೆ ಇಳಿಕೆಯ ನಂತರ ರೂ. 7.99 ಲಕ್ಷದಿಂದ ರೂ. 10.99 ಲಕ್ಷ ಬೆಲೆ ಹೊಂದಿದ್ದು, ಇದರಲ್ಲಿ ಆರಂಭಿಕ ಮಾದರಿಯಲ್ಲಿ ಯಾವುದೇ ಬೆಲೆ ಬದಲಾವಣೆ ಮಾಡದೆ ಟಾಪ್ ಎಂಡ್ ಮಾದರಿಯಲ್ಲಿ ರೂ. 40 ಸಾವಿರದಷ್ಟು ಇಳಿಕೆ ಮಾಡಲಾಗಿದೆ.

ಬೆಲೆ ಇಳಿಕೆಯೊಂದಿಗೆ ಟಾಟಾ ಮೋಟಾರ್ಸ್ ಕಂಪನಿಯು ಹೊಸ ಎಲೆಕ್ಟ್ರಿಕ್ ಕಾರು ಖರೀದಿದಾರರಿಗೆ ಮತ್ತೊಂದು ಆಕರ್ಷಕ ಆಫರ್ ನೀಡುತ್ತಿದೆ. ನಿಗದಿತ ಅವಧಿಯಲ್ಲಿ ಇವಿ ಕಾರು ಖರೀದಿದಾರರಿಗೆ ದೇಶಾದ್ಯಂತ ಕಾರ್ಯಾಚರಣೆ ತನ್ನ ಟಾಟಾ ಪವರ್ ಇವಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳಲ್ಲಿ 6 ತಿಂಗಳು ಕಾಲ ಉಚಿತವಾಗಿ ಚಾರ್ಜ್ ಮಾಡಲು ಅವಕಾಶ ನೀಡುತ್ತಿದೆ.

Published On - 8:43 pm, Tue, 10 September 24

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್