AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಲೆ ಇಳಿಕೆ ಮೂಲಕ ಇವಿ ಕಾರು ಖರೀದಿದಾರಿಗೆ ಬಂಪರ್ ಆಫರ್ ನೀಡಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ರಮುಖ ಎಲೆಕ್ಟ್ರಿಕ್ ಕಾರು ಮಾದರಿಗಳ ಬೆಲೆ ಇಳಿಕೆ ಮಾಡುವ ಮೂಲಕ ಹೊಸ ಸಂಚಲನ ಮೂಡಿಸಿದೆ.

ಬೆಲೆ ಇಳಿಕೆ ಮೂಲಕ ಇವಿ ಕಾರು ಖರೀದಿದಾರಿಗೆ ಬಂಪರ್ ಆಫರ್ ನೀಡಿದ ಟಾಟಾ ಮೋಟಾರ್ಸ್
ಟಾಟಾ ಮೋಟಾರ್ಸ್ ಎಲೆಕ್ಟ್ರಿಕ್ ಕಾರುಗಳು
Praveen Sannamani
|

Updated on:Sep 10, 2024 | 8:44 PM

Share

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಟಾಟಾ ಮೋಟಾರ್ಸ್ (Tata Motors) ಕಂಪನಿಯು ಮುಂಬರುವ ಹಬ್ಬದ ಋತುವಿನಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ತನ್ನ ಪ್ರಮುಖ ಕಾರು ಮಾದರಿಗಳ ಬೆಲೆಯಲ್ಲಿ ಇಳಿಕೆ ಮಾಡಿದೆ. ಹೊಸ ಆಫರ್ ನಲ್ಲಿ ಟಿಯಾಗೋ ಇವಿ, ನೆಕ್ಸಾನ್ ಇವಿ ಮತ್ತು ಪಂಚ್ ಇವಿ ಬೆಲೆಯಲ್ಲಿ ಇಳಿಕೆ ಮಾಡಿದ್ದು, ಹೊಸ ದರಗಳು ಅಕ್ಟೋಬರ್ 31ರ ತನಕ ಮಾತ್ರ ಅನ್ವಯಿಸಲಿವೆ.

ಹೊಸ ಆಫರ್ ನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಇವಿ ಬೆಲೆಯಲ್ಲಿ ರೂ. 3 ಲಕ್ಷದ ತನಕ ಇಳಿಕೆ ಮಾಡಿದ್ದರೆ ಪಂಚ್ ಇವಿ ಕಾರಿನ ಬೆಲೆಯಲ್ಲಿ ರೂ. 1.20 ಲಕ್ಷ ಮತ್ತು ಟಿಯಾಗೋ ಕಾರಿನ ಬೆಲೆಯಲ್ಲಿ ರೂ. 40 ಸಾವಿರದಷ್ಟು ಬೆಲೆ ಇಳಿಕೆ ಮಾಡಿದೆ.

ಬೆಲೆ ಇಳಿಕೆಯ ನಂತರ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ. 12.49 ಲಕ್ಷದಿಂದ ರೂ. 16.29 ಲಕ್ಷ ನಿಗದಿಪಡಿಸಲಾಗಿದ್ದು, ಆರಂಭಿಕ ಮಾದರಿಯ ಬೆಲೆಯಲ್ಲಿ ರೂ. 2 ಲಕ್ಷದಷ್ಟು ಮತ್ತು ಟಾಪ್ ಎಂಡ್ ಮಾದರಿಯಲ್ಲಿ ರೂ. 3 ಲಕ್ಷದಷ್ಟು ಬೆಲೆ ಇಳಿಕೆಯಾಗಿದೆ.

ಪಂಚ್ ಇವಿ ಬೆಲೆಯಲ್ಲಿ ಇಳಿಕೆಯ ನಂತರ ಎಕ್ಸ್ ಶೋರೂಂ ಪ್ರಕಾರ ರೂ. 9.99 ಲಕ್ಷದಿಂದ ರೂ. 13.79 ಲಕ್ಷ ಬೆಲೆ ನಿಗದಿ ಮಾಡಲಾಗಿದ್ದು, ಆರಂಭಿಕ ಮಾದರಿಯ ಬೆಲೆಯಲ್ಲಿ ರೂ. 1 ಲಕ್ಷದಷ್ಟು ಮತ್ತು ಟಾಪ್ ಎಂಡ್ ಮಾದರಿಯಲ್ಲಿ ರೂ. 1.20 ಲಕ್ಷದಷ್ಟು ಬೆಲೆ ಇಳಿಕೆ ಮಾಡಿದೆ.

ಇದನ್ನೂ ಓದಿ: ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿರುವ ಟಾಪ್ 5 ಕಾರುಗಳಿವು!

ಹಾಗೆಯೇ ಟಿಯಾಗೋ ಎಲೆಕ್ಟ್ರಿಕ್ ಕಾರು ಬೆಲೆ ಇಳಿಕೆಯ ನಂತರ ರೂ. 7.99 ಲಕ್ಷದಿಂದ ರೂ. 10.99 ಲಕ್ಷ ಬೆಲೆ ಹೊಂದಿದ್ದು, ಇದರಲ್ಲಿ ಆರಂಭಿಕ ಮಾದರಿಯಲ್ಲಿ ಯಾವುದೇ ಬೆಲೆ ಬದಲಾವಣೆ ಮಾಡದೆ ಟಾಪ್ ಎಂಡ್ ಮಾದರಿಯಲ್ಲಿ ರೂ. 40 ಸಾವಿರದಷ್ಟು ಇಳಿಕೆ ಮಾಡಲಾಗಿದೆ.

ಬೆಲೆ ಇಳಿಕೆಯೊಂದಿಗೆ ಟಾಟಾ ಮೋಟಾರ್ಸ್ ಕಂಪನಿಯು ಹೊಸ ಎಲೆಕ್ಟ್ರಿಕ್ ಕಾರು ಖರೀದಿದಾರರಿಗೆ ಮತ್ತೊಂದು ಆಕರ್ಷಕ ಆಫರ್ ನೀಡುತ್ತಿದೆ. ನಿಗದಿತ ಅವಧಿಯಲ್ಲಿ ಇವಿ ಕಾರು ಖರೀದಿದಾರರಿಗೆ ದೇಶಾದ್ಯಂತ ಕಾರ್ಯಾಚರಣೆ ತನ್ನ ಟಾಟಾ ಪವರ್ ಇವಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳಲ್ಲಿ 6 ತಿಂಗಳು ಕಾಲ ಉಚಿತವಾಗಿ ಚಾರ್ಜ್ ಮಾಡಲು ಅವಕಾಶ ನೀಡುತ್ತಿದೆ.

Published On - 8:43 pm, Tue, 10 September 24

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ