AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Year Ender 2023: ಇನ್ಮುಂದೆ ಈ ಒಂಬತ್ತು ಹೊಸ ಕಾರುಗಳು ಖರೀದಿಗೆ ಸಿಗುವುದಿಲ್ಲ..

ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರುಗಳ ಬಿಡುಗಡೆಗೆ ಸಿದ್ದವಾಗುತ್ತಿರುವ ವಿವಿಧ ಕಾರು ಕಂಪನಿಗಳು ಈ ಹಿಂದಿನ ಕೆಲವು ಕಾರುಗಳ ಮಾದರಿಗಳ ಮಾರಾಟ ಸ್ಥಗಿತಕ್ಕೆ ಸಿದ್ದವಾಗುತ್ತಿದ್ದು, ಹೊಸ ವರ್ಷದಿಂದ ಪ್ರಮುಖ ಕಾರಗಳ ಮಾರಾಟವು ಅಧಿಕೃತವಾಗಿ ಸ್ಥಗಿತವಾಗುವುದು ಬಹುತೇಕ ಖಚಿತವಾಗಿದೆ.

Year Ender 2023: ಇನ್ಮುಂದೆ ಈ ಒಂಬತ್ತು ಹೊಸ ಕಾರುಗಳು ಖರೀದಿಗೆ ಸಿಗುವುದಿಲ್ಲ..
ಇನ್ಮುಂದೆ ಈ ಹೊಸ ಕಾರುಗಳು ಖರೀದಿಗೆ ಸಿಗುವುದಿಲ್ಲ
Follow us
Praveen Sannamani
|

Updated on:Dec 28, 2023 | 10:22 PM

ಹೊಸ ವರ್ಷದಲ್ಲಿ ವಿವಿಧ ಕಾರು ಕಂಪನಿಗಳು ತಮ್ಮ ಬಹುನೀರಿಕ್ಷಿತ ಕಾರುಗಳ(Cars) ಬಿಡುಗಡೆಗೆ ಸಿದ್ದವಾಗುತ್ತಿವೆ. ಇದೇ ವೇಳೆ ಮಾರುಕಟ್ಟೆಯಲ್ಲಿರುವ ಕೆಲವು ಕಾರುಗಳು ಮಾರುಕಟ್ಟೆಯಿಂದ ನಿರ್ಗಮಿಸಲು ಸಿದ್ದವಾಗಿದ್ದು, ಇನ್ಮುಂದೆ ಈ ಕಾರುಗಳು ಗ್ರಾಹಕರಿಗೆ ಖರೀದಿಗೆ ಲಭ್ಯವಿರುವುದಿಲ್ಲ ಎನ್ನಬಹುದು. ಹಾಗಾದ್ರೆ ಮಾರುಕಟ್ಟೆಯಿಂದ ಈ ವರ್ಷ ನಿರ್ಗಮಿಸುತ್ತಿರುವ ಕಾರುಗಳು ಯಾವುವು? ನಿರ್ಗಮನಕ್ಕೆ ಕಾರಣವೇನು? ಈ ಎಲ್ಲಾ ಮಾಹಿತಿ ಇಲ್ಲಿದೆ.

ಪ್ರಸ್ತುತ ಕಾರು ಮಾರುಕಟ್ಟೆಯಲ್ಲಿ ಗ್ರಾಹಕರ ಬೇಡಿಕೆ ಆಧರಿಸಿ ಹಲವಾರು ಹೊಸ ಕಾರುಗಳು ಮಾರುಕಟ್ಟೆಗೆ ಲಗ್ಗೆಯಿಡುತ್ತಿದ್ದು, ಹಳೆಯ ಆವೃತ್ತಿಗಳ ಮಾರಾಟವನ್ನು ಸ್ಥಗಿತಗೊಳಿಸಿ ಹೊಸ ಆವೃತ್ತಿಗಳ ಬಿಡುಗಡೆ ಮಾಡಲಾಗುತ್ತಿದೆ. ಸ್ಥಗಿತಗೊಳ್ಳುವ ಕಾರುಗಳಲ್ಲಿ ಮಾರುತಿ ಸುಜುಕಿ, ಮಹೀಂದ್ರಾ, ಹೋಂಡಾ, ನಿಸ್ಸಾನ್, ಸ್ಕೋಡಾ ಮತ್ತು ಕಿಯಾ ಕಾರುಗಳು ಹೆಚ್ಚಿನ ಸಂಖ್ಯೆಯಲಿದ್ದು, ಸ್ಥಗಿತಗೊಳ್ಳಲಿರುವ ಹಳೆಯ ಕಾರುಗಳಲ್ಲಿ ಕೆಲವು ಕಾರುಗಳಲ್ಲಿ ಮಾತ್ರ ಹೊಸ ಆವೃತ್ತಿಯನ್ನು ಪರಿಚಯಿಸಲಾಗುತ್ತಿದೆ.

Discontinued Cars (1)

ಮಾರುತಿ ಆಲ್ಟೊ 800

ಅತಿ ಕಡಿಮೆ ಬೆಲೆಯ ಕಾರುಗಳಲ್ಲಿ ಪ್ರಮುಖ ಆವೃತ್ತಿಯಾಗಿದ್ದ ಮಾರುತಿ ಸುಜುಕಿ ಐಕಾನಿಕ್ ಕಾರು ಮಾದರಿಯಾದ ಆಲ್ಟೊ 800 ಮಾದರಿಯನ್ನು ಈಗಾಗಲೇ ಸ್ಥಗಿತಗೊಳಿಸಲಾಗಿದ್ದು, ಇದು ತ್ರಿ ಸಿಲಿಂಡರ್ 796 ಸಿಸಿ ಎಂಜಿನ್ ಹೊಂದಿತ್ತು. ಈ ವರ್ಷದ ಏಪ್ರಿಲ್ ನಲ್ಲಿ ಜಾರಿಗೆ ಬಂದ ರಿಯಲ್ ಡ್ರೈವ್ ಎಮಿಷನ್ ಮಾನದಂಡಗಳಿಗೆ ಅನುಗುಣವಾಗಿ ಆಲ್ಟೊ 800 ಮಾರಾಟ ಸ್ಥಗಿತಗೊಳಿಸಿದ ಮಾರುತಿ ಸುಜುಕಿ ಕಂಪನಿಯು ಕೇವಲ K10 ಸರಣಿ ಮಾದರಿಯ ಮೇಲೆ ಗಮನಹರಿಸುತ್ತಿದೆ.

ಇದನ್ನೂ ಓದಿ: ಭಾರತದಲ್ಲಿ ಅತ್ಯುತ್ತಮ ರೀಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಮಹೀಂದ್ರಾ ಕೆಯುವಿ100 ನೆಕ್ಸ್ಟ್

ಮಹೀಂದ್ರಾ ಕಂಪನಿಯ ಅತ್ಯಂತ ಕೈಗೆಟುಕುವ ಕಾರು ಮಾದರಿಯಾಗಿದ್ದ ಕೆಯುವಿ100 ನೆಕ್ಸ್ಟ್ ಮಾದರಿಯನ್ನು ಈ ವರ್ಷದ ಆರಂಭದಲ್ಲಿ ಸ್ಥಗಿತಗೊಳಿಸಲಾಗಿದೆ. ಹೊಸ ಮಾಲಿನ್ಯ ನಿಯಂತ್ರಣ ಮಾನದಂಡಗಳಿಗೆ ಅನುವಾಗಿ ಭಾರೀ ಬದಲಾವಣೆ ಅವಶ್ಯಕವಾಗಿದ್ದರಿಂದ ಕೆಯುವಿ100 ನೆಕ್ಸ್ಟ್ ಕಾರನ್ನು ಸ್ಥಗಿತಗೊಳಿಸಿದ ಮಹೀಂದ್ರಾ ಕಂಪನಿಯು ಇದೀಗ ಹೊಸ ತಲೆಮಾರಿನ ಕಾರು ಮಾದರಿಗಳ ಮೇಲೆ ಹೆಚ್ಚಿನ ಗಮನಹರಿಸುತ್ತಿದೆ.

ಹೋಂಡಾ ಜಾಝ್, ಸಿಟಿ, ಡಬ್ಲ್ಯುಆರ್-ವಿ

ಏಪ್ರಿಲ್ 1ರಿಂದ ಜಾರಿಗೆ ಬಂದ ಬಿಎಸ್-6 2ನೇ ಹಂತದ ಮಾಲಿನ್ಯ ನಿಯಂತ್ರಣ ಮಾನದಂಡಗಳಿಂದಾಗಿ ಜಾಝ್ ಹ್ಯಾಚ್ ಬ್ಯಾಕ್, ನಾಲ್ಕನೇ ತಲೆಮಾರಿನ ಸಿಟಿ ಸೆಡಾನ್ ಮತ್ತು ಡಬ್ಲ್ಯುಆರ್-ವಿ ಕಾರುಗಳನ್ನು ಹೋಂಡಾ ಕಂಪನಿಯು ಸ್ಥಗಿತಗೊಳಿಸಿದೆ. ಡಬ್ಲ್ಯುಆರ್-ವಿ ಸ್ಥಾನಕ್ಕೆ ಹೊಸ ಎಲಿವೇಟ್ ಬಿಡುಗಡೆ ಮಾಡಲಾಗಿದ್ದು, ಸೆಡಾನ್ ವಿಭಾಗದಲ್ಲಿ 5ನೇ ತಲೆಮಾರಿನ ಸಿಟಿ ಕಾರು ಹೆಚ್ಚಿನ ಬೇಡಿಕೆ ಪಡೆದುಕೊಳ್ಳುತ್ತಿದೆ. ಆದರೆ ಜಾಝ್ ಕಾರಿನ ಸ್ಥಾನಕ್ಕೆ ಹೊಸ ಫೇಸ್ ಲಿಫ್ಟ್ ಆವೃತ್ತಿಯ ಬಿಡುಗಡೆ ಮಾಡಬಹುದಾಗಿದ್ದು, ಇದು ಭಾರೀ ಬದಲಾವಣೆಯೊಂದಿಗೆ ಬಿಡುಗಡೆಯಾಗಬಹುದಾಗಿದೆ.

ನಿಸ್ಸಾನ್ ಕಿಕ್ಸ್

ಕಂಪ್ಯಾಕ್ಟ್ ಎಸ್ ಯುವಿ ವಿಭಾಗದಲ್ಲಿ ಉತ್ತಮ ಬೇಡಿಕೆ ಹೊಂದಿದ್ದ ನಿಸ್ಸಾನ್‌ ಕಿಕ್ಸ್ ಕಾರು ಮಾದರಿಯು ಹೊಸ ಮಾಲಿನ್ಯ ನಿಯಂತ್ರಣ ಮಾನದಂಡಗಳಿಂದಾಗಿ ಸ್ಥಗಿತಗೊಂಡಿದ್ದು, ಇದು ಮುಂಬರುವ ದಿನಗಳಲ್ಲಿ ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡುವ ಸಾಧ್ಯತೆಗಳಿವೆ. 1.3 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿರುವ ಕಿಕ್ಸ್ ಕಾರಿನಲ್ಲಿ ಸದ್ಯ ಹಲವಾರು ಬದಲಾವಣೆಗಳ ಅವಶ್ಯವಿದ್ದು, ಸದ್ಯ ನಿಸ್ಸಾನ್ ಕಂಪನಿಯು ಮಾಗ್ನೈಟ್ ಕಾರು ಮಾದರಿಯನ್ನು ಮಾತ್ರ ಮಾರಾಟ ಮಾಡುತ್ತಿದೆ.

ಸ್ಕೋಡಾ ಸೂಪರ್ಬ್ ಮತ್ತು ಆಕ್ಟಿವಿಯಾ

ಮಧ್ಯಮ ಕ್ರಮಾಂಕದ ಅತ್ಯುತ್ತಮ ಸೆಡಾನ್ ಕಾರು ಮಾದರಿಗಳಾಗಿದ್ದ ಸೂಪರ್ಬ್ ಮತ್ತು ಆಕ್ಟಿವಿಯಾ ಕಾರುಗಳು ಕಾರಣಾಂತರಗಳಿಂದ ಭಾರತದಲ್ಲಿ ಸ್ಥಗಿತಗೊಂಡಿವೆ. 2.0 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದ್ದ ಸೂಪರ್ಬ್ ಮತ್ತು ಆಕ್ಟಿವಿಯಾ ಸೆಡಾನ್ ಕಾರುಗಳು ಮುಂಬರುವ ದಿನಗಳಲ್ಲಿ ಹೈಬ್ರಿಡ್ ಪವರ್ ಟ್ರೈನ್ ನೊಂದಿಗೆ ಭಾರೀ ಬದಲಾವಣೆ ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಯುಬಿಯು ಯನಿಟ್ ಮೂಲಕ ಭಾರತದಲ್ಲಿ ಮಾರಾಟಗೊಳ್ಳಬಹುದಾಗಿದೆ.

ಇದನ್ನೂ ಓದಿ: 2023ರಲ್ಲಿ ಬಿಡುಗಡೆಯಾದ ಬೆಸ್ಟ್ ಮೈಲೇಜ್ ಸಿಎನ್​ಜಿ ಕಾರುಗಳಿವು!

ಕಿಯಾ ಕಾರ್ನಿವಾಲ್

ಮಧ್ಯಮ ಕ್ರಮಾಂಕದ ಐಷಾರಾಮಿ ಎಂಪಿವಿ ಆವೃತ್ತಿಯಾಗಿದ್ದ ಕಿಯಾ ಕಾರ್ನಿವಾಲ್ ಮಾರಾಟವು ಭಾರತದಲ್ಲಿ ಸದ್ಯ ಸ್ಥಗಿತಗೊಂಡಿದ್ದು, ಏಪ್ರಿಲ್ ನಲ್ಲಿ ಜಾರಿಯಾದ ಹೊಸ ಮಾಲಿನ್ಯ ನಿಯಂತ್ರಣ ಮಾನದಂಡದ ಪರಿಣಾಮ ಮಾರುಕಟ್ಟೆಯಿಂದ ನಿರ್ಗಮಿಸಿದೆ. ಕಾರ್ನಿವಾಲ್ ಕಾರು ಇತ್ತೀಚೆಗೆ ಪ್ರಮುಖ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಹೊಸ ತಲೆಮಾರಿನ ಆವೃತ್ತಿಯೊಂದಿಗೆ ಬಿಡುಗಡೆಗೊಂಡಿದ್ದು, ಭಾರತದಲ್ಲೂ ಮುಂದಿನ ಕೆಲವೇ ತಿಂಗಳಿನಲ್ಲಿ ಮಹತ್ವದ ಬದಲಾವಣೆಯೊಂದಿಗೆ ಹೊಸ ಎಂಜಿನ್ ಆಯ್ಕೆಯಲ್ಲಿ ಖರೀದಿ ಲಭ್ಯವಾಗಬಹುದಾಗಿದೆ.

Published On - 8:16 pm, Thu, 28 December 23

ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ