ಕರ್ನಾಟಕದಲ್ಲಿ ಮತ್ತೊಂದು ಕಾರು ಉತ್ಪಾದನಾ ಘಟಕ ಘೋಷಣೆ ಮಾಡಿದ ಟೊಯೊಟಾ

ಭಾರತದಲ್ಲಿ ಮಧ್ಯಮ ಕ್ರಮಾಂಕದ ಪ್ರೀಮಿಯಂ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಟೊಯೊಟಾ ಇಂಡಿಯಾ ಕಂಪನಿಯು ಮೂರನೇ ಕಾರು ಉತ್ಪದನಾ ಘಟಕ ತೆರೆಯುತ್ತಿರುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದೆ.

ಕರ್ನಾಟಕದಲ್ಲಿ ಮತ್ತೊಂದು ಕಾರು ಉತ್ಪಾದನಾ ಘಟಕ ಘೋಷಣೆ ಮಾಡಿದ ಟೊಯೊಟಾ
ಕರ್ನಾಟಕದಲ್ಲಿ ಮತ್ತೊಂದು ಕಾರು ಉತ್ಪಾದನಾ ಘಟಕ ಘೋಷಣೆ ಮಾಡಿದ ಟೊಯೊಟಾ
Follow us
|

Updated on: Nov 21, 2023 | 9:11 PM

ಜಾಗತಿಕ ಮಾರುಕಟ್ಟೆಯಲ್ಲಿನ ಕಾರು ಉತ್ಪಾದನೆಯಲ್ಲಿ (Car Production) ಅಗ್ರಸ್ಥಾನ ಕಾಯ್ದುಕೊಂಡಿರುವ ಜಪಾನ್ ಕಾರು ಕಂಪನಿ ಟೊಯೊಟಾ (Toyota) ತನ್ನ ಉತ್ಪಾದನಾ ಸಾಮಾರ್ಥ್ಯವನ್ನು ಹೆಚ್ಚಿಸುತ್ತಿದ್ದು, ಹೊಸ ಯೋಜನೆಗಳ ಭಾಗವಾಗಿ ಭಾರತದಲ್ಲೂ ಹೊಸ ಹೂಡಿಕೆಗೆ ಸಿದ್ದವಾಗಿದೆ. ಕರ್ನಾಟಕದಲ್ಲಿ ಈಗಾಗಲೇ ಎರಡು ಕಾರು ಉತ್ಪಾದನಾ ಘಟಕಗಳನ್ನು ಹೊಂದಿರುವ ಟೊಯೊಟಾ ಕಂಪನಿಯು ಇದೀಗ ಮೂರನೇ ಘಟಕದ ಕಾರ್ಯಾಚರಣೆ ಆರಂಭಕ್ಕೆ ಸಿದ್ದವಾಗುತ್ತಿದೆ.

ಬೆಂಗಳೂರು ಹೊರವಲಯದ ಬಿಡದಿಯಲ್ಲಿ ಈಗಾಗಲೇ ಎರಡು ಕಾರು ಉತ್ಪಾದನಾ ಘಟಕಗಳನ್ನು ಹೊಂದಿರುವ ಟೊಯೊಟಾ ಕಂಪನಿಯು ಮೂರನೇ ಘಟಕವನ್ನು ಸಹ ಬಿಡದಿ ಸನೀಹದಲ್ಲಿ ತೆರೆಯಲು ನಿರ್ಧರಿಸಿದೆ. ಹೊಸ ಘಟಕ ಸ್ಥಾಪನೆಗಾಗಿ ರೂ. 3,300 ಕೋಟಿ ಬಂಡವಾಳ ಹೂಡಿಕೆಗೆ ಸಿದ್ದವಾಗಿದ್ದು, ಇದರಿಂದ ಬರೋಬ್ಬರಿ 2 ಸಾವಿರ ಜನರಿಗೆ ಉದ್ಯೋಗ ಸೃಷ್ಠಿಯಾಗಲಿದೆ.

ಹೊಸ ಯೋಜನೆಗಾಗಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು ಇಂದು ಕರ್ನಾಟಕ ಸರ್ಕಾರದ ನಡುವೆ ಅಧಿಕೃತವಾಗಿ ಒಡಂಬಡಿಕೆ ಮಾಡಿಕೊಂಡಿದ್ದು, 2026ರ ವೇಳೆಗೆ ಹೊಸ ಕಾರು ಉತ್ಪಾದನಾ ಘಟಕವನ್ನು ಕಾರ್ಯಾರಂಭ ಮಾಡುವ ಭರವಸೆ ನೀಡಿದೆ.

ಇದನ್ನೂ ಓದಿ: ಪ್ರತಿ ಚಾರ್ಜ್ ಗೆ ಬರೋಬ್ಬರಿ 738 ಕಿಮೀ ಮೈಲೇಜ್ ನೀಡುತ್ತೆ ಈ ಇವಿ ಎಂಪಿವಿ ಕಾರು..

ಭಾರತದಲ್ಲಿ ಕಾರು ಉತ್ಪಾದನೆ ಮತ್ತು ಮಾರಾಟ ಆರಂಭಿಸಿ 25 ವರ್ಷ ಪೂರೈಸಿರುವ ಟೊಯೊಟಾ ಕಂಪನಿಯು ಹಲವಾರು ಮಾರಾಟ ದಾಖಲೆಗಳನ್ನು ಸಾಧಿಸಿದ್ದು, ಇದೀಗ ಹೊಸ ಕಾರು ಉತ್ಪಾದನಾ ಘಟಕದ ಮೂಲಕ ವಾರ್ಷಿಕವಾಗಿ 4 ಲಕ್ಷ ಕಾರುಗಳನ್ನು ಉತ್ಪಾದನೆ ಮಾಡುವ ಗುರಿಹೊಂದಿದೆ.

ಜೊತೆಗೆ ಟೊಯೊಟಾ ಕಂಪನಿಯು ಮಾರುತಿ ಸುಜುಕಿ ಜೊತೆಗೂಡಿ ರೀಬ್ಯಾಡ್ಜ್ ಕಾರುಗಳ ಉತ್ಪಾದನೆ ಮಾಡುತ್ತಿದ್ದು, ಹೊಸ ಸಹಭಾಗಿತ್ವ ಯೋಜನೆಯೊಂದಿಗೆ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದೆ. ಇದಕ್ಕಾಗಿ ಕಂಪನಿಯು ಭಾರತದಿಂದಲೇ ಪ್ರಮುಖ ಮಾರುತಿ ಸುಜುಕಿ ಕಾರುಗಳ ರೀಬ್ಯಾಡ್ಜ್ ಆವೃತ್ತಿಗಳನ್ನು ಆಫ್ರಿಕಾ ಸೇರಿದಂತೆ ಪ್ರಮುಖ ಉದಯೋನ್ಮುಖ ಮಾರುಕಟ್ಟೆಗಳಿಗೆ ರಫ್ತು ಮಾಡುವ ಯೋಜನೆಯಲ್ಲಿದೆ.

ಇದನ್ನೂ ಓದಿ: ರೂ. 10 ಲಕ್ಷಕ್ಕೆ ಭರ್ಜರಿ ಮೈಲೇಜ್ ನೀಡುವ ಅತ್ಯುತ್ತಮ ಕಂಪ್ಯಾಕ್ಟ್ ಎಸ್ ಯುವಿ ಕಾರುಗಳಿವು!

ಇದಲ್ಲದೆ ಭಾರತದಲ್ಲಿ ಟೊಯೊಟಾ ಕಂಪನಿಯು ಮುಂಬರುವ ದಿನಗಳಲ್ಲಿ ಕರೊಲ್ಲಾ ಕ್ರಾಸ್ ಎಸ್ ಯುವಿ ಸೇರಿದಂತೆ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಇವು ಹಲವಾರು ವಿಶೇಷತೆಗಳೊಂದಿಗೆ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿವೆ. ಹೀಗಾಗಿ ಗ್ರಾಹಕರ ಬೇಡಿಕೆ ಪೂರೈಕೆಗಾಗಿ ಹೊಸ ಕಾರು ಉತ್ಪಾದನಾ ಘಟಕವನ್ನು ತೆರೆಯಲಾಗಿದ್ದು, ಹೊಸ ಕಾರು ಉತ್ಪಾದನಾ ಘಟಕದಲ್ಲಿ ವಾರ್ಷಿಕವಾಗಿ 60 ಸಾವಿರದಿಂದ 1 ಲಕ್ಷ ಯುನಿಟ್ ಉತ್ಪಾದನೆ ಮಾಡಬಹುದಾಗಿದೆ ಎನ್ನಲಾಗಿದೆ.

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್