AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಫ್ ಹೆಲ್ಮೆಟ್ ಹಾಕಿ ಸ್ಕೂಟರ್ ರೈಡ್ ಮಾಡುತ್ತಿದ್ದ ಪೊಲೀಸ್ ಗೆ ದಂಡ ವಿಧಿಸಿದ ಟ್ರಾಫಿಕ್ ಪೋಲಿಸ್!

ಟ್ರಾಫಿಕ್ ರೂಲ್ಸ್ ಪಾಲಿಸದೆ ಹಾಫ್ ಹೆಲ್ಮೆಟ್ ಹಾಕಿಕೊಂಡ ಸ್ಕೂಟರ್ ಚಾಲನೆ ಮಾಡುತ್ತಿದ್ದ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಬೆಂಗಳೂರಿನ ಆರ್ ಟಿ ನಗರದ ಸಂಚಾರಿ ಪೊಲೀಸರು ದಂಡ ವಿಧಿಸಿದ್ದಾರೆ.

ಹಾಫ್ ಹೆಲ್ಮೆಟ್ ಹಾಕಿ ಸ್ಕೂಟರ್ ರೈಡ್ ಮಾಡುತ್ತಿದ್ದ ಪೊಲೀಸ್ ಗೆ ದಂಡ ವಿಧಿಸಿದ ಟ್ರಾಫಿಕ್ ಪೋಲಿಸ್!
ಹಾಫ್ ಹೆಲ್ಮೆಟ್ ಹಾಕಿದ್ದ ಪೊಲೀಸ್ ಪೇದೆಗೆ ದಂಡ ವಿಧಿಸುತ್ತಿರುವ ಟ್ರಾಫಿಕ್ ಪೊಲೀಸ್Image Credit source: Twitter
Praveen Sannamani
|

Updated on:Oct 21, 2022 | 3:40 PM

Share

ಭಾರತದಲ್ಲಿ ರಸ್ತೆ ಅಪಘಾತಗಳನ್ನು ತಗ್ಗಿಸುವ ಉದ್ದೇಶಿದಿಂದ ಸುರಕ್ಷಿತ ವಾಹನ ಚಾಲನೆಗಾಗಿ ಹಲವಾರು ಕಠಿಣ ಕ್ರಮಗಳನ್ನು ಜಾರಿಗೆ ತಂದಿದ್ದು, ದ್ವಿ-ಚಕ್ರ ವಾಹನ ಸವಾರರಿಗೆ ಗರಿಷ್ಠ ರಕ್ಷಣೆಗಾಗಿ ಐಎಸ್ಐ ಪ್ರಮಾಣೀಕೃತ ಫುಲ್ ಸೈಜ್ ಹೆಲ್ಮೆಟ್ ಕಡ್ಡಾಯಗೊಳಿಸಿದೆ. ಆದರೆ ಹೊಸ ನಿಯಮ ಜಾರಿ ನಂತರವೂ ಇನ್ನು ಹಲವಾರು ದ್ವಿ-ಚಕ್ರ ವಾಹನ ಬಳಕೆದಾರರೂ ಕಾನೂನು ಬಾಹಿರವಾಗಿರುವ ಅಸುರಕ್ಷಿತ ಹಾಫ್ ಹೆಲ್ಮೆಟ್ ಬಳಕೆ ಮಾಡುತ್ತಿದ್ದಾರೆ.

ಹಾಫ್ ಹೆಲ್ಮೆಟ್ ಬಳಕೆ ಮಾಡದಂತೆ ಮತ್ತು ಸುರಕ್ಷತೆಗಾಗಿ ಫುಲ್ ಸೈಜ್ ಹೆಲ್ಮೆಟ್ ಬಳಸುವಂತೆ ಹಲವಾರು ಅಭಿಯಾನಗಳನ್ನು ಕೈಗೊಳ್ಳುತ್ತಿದ್ದರೂ ಇನ್ನು ಹಲವು ದ್ವಿ-ಚಕ್ರ ವಾಹನ ಸವಾರರು ಹಾಫ್ ಹೆಲ್ಮೆಟ್ ಬಳಕೆ ಮಾಡುತ್ತಿದ್ದಾರೆ. ಹೀಗಾಗಿ ಹಾಫ್ ಹೆಲ್ಮೆಟ್ ಬಳಕೆದಾರರ ವಿರುದ್ದ ವಿಶೇಷ ಕಾರ್ಯಾಚರಣೆ ಆರಂಭಿಸಿರುವ ನಮ್ಮ ಬೆಂಗಳೂರಿನ ಸಂಚಾರಿ ಪೊಲೀಸರು ಅಸುರಕ್ಷಿತ ಹಾಫ್ ಹೆಲ್ಮೆಟ್ ಬಳಕೆ ಮಾಡುತ್ತಿರುವುವರಿಗೆ ದಂಡ ವಿಧಿಸುತ್ತಿದ್ದಾರೆ.

ಹಾಫ್ ಹೆಲ್ಮೆಟ್ ಹಾಕಿದ್ದಕ್ಕೆ ದಂಡತೆತ್ತ ಪೊಲೀಸ್

ಬೆಂಗಳೂರಿನ ಆರ್ ಟಿ ನಗರದ ಸಂಚಾರಿ ಪೊಲೀಸರು ಹಾಫ್ ಹೆಲ್ಮೆಟ್ ಬಳಕೆದಾರರ ವಿರುದ್ದ ಕಾರ್ಯಾಚರಣೆ ಆರಂಭಿಸಿ ಪೊಲೀಸ್ ಪೆದೆಯೊಬ್ಬರಿಂದ ದಂಡ ವಸೂಲಿ ಮಾಡಿದ್ದಾರೆ. ಸಂಚಾರಿ ಪೊಲೀಸರ ಈ ಕ್ರಮವು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ.

ಹಾಫ್ ಹೆಲ್ಮೆಟ್ ಹಾಕಿದ್ದ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ದಂಡವಿಧಿಸಿರುವುದನ್ನು ಆರ್ ಟಿ ನಗರದ ಸಂಚಾರಿ ಪೊಲೀಸರು ಫೋಟೋ ಸಮೇತ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದು, ಪೊಲೀಸರು ಕ್ರಮಕ್ಕೆ ಸಾಕಷ್ಟು ಜನ ಮೆಚ್ಚುಗೆ ವ್ಯಕ್ತಪಡಿಸಿದರೆ ಇನ್ನು ಕೆಲವರು ಹೊಸ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇನ್ನು ಬೈಕ್ ಸವಾರಿ ವೇಳೆ ಸವಾರ ಮತ್ತು ಹಿಂಬದಿಯ ಸವಾರರಿಗೆ ಬಹುತೇಕ ರಾಜ್ಯಗಳಲ್ಲಿ ಹೆಲ್ಮೆಟ್ ಬಳಕೆಯ ಕಡ್ಡಾಯವಾಗಿದ್ದರೂ ಕೂಡಾ ದಿನನಿತ್ಯ ದೇಶದ ಪ್ರಮುಖ ನಗರಗಳಲ್ಲಿ ಸಾವಿರಾರು ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗುತ್ತಿರುವ ಕಳವಳಕಾರಿಯಾದ ಅಂಶವಾಗಿದೆ.

Published On - 3:34 pm, Fri, 21 October 22

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ