ಬರಲಿದೆ ಭರ್ಜರಿ ಮೈಲೇಜ್ ನೀಡುವ ಟಿವಿಎಸ್ ಜೂಪಿಟರ್ 125 ಸಿಎನ್​ಜಿ ವರ್ಷನ್

ಟಿವಿಎಸ್ ಮೋಟಾರ್ ಕಂಪನಿಯು ತನ್ನ ಹೊಸ ದ್ವಿಚಕ್ರವಾಹನಗಳ ಉತ್ಪನ್ನಗಳಲ್ಲಿ 125 ಸಿಸಿ ಸಾಮಾರ್ಥ್ಯದ ಸ್ಕೂಟರ್ ಮಾದರಿಯನ್ನು ಸಿಎನ್​ಜಿ ಆವೃತ್ತಿಯಲ್ಲಿ ಬಿಡುಗಡೆ ಮಾಡುವುದಾಗಿ ಖಚಿತಪಡಿಸಿದೆ.

ಬರಲಿದೆ ಭರ್ಜರಿ ಮೈಲೇಜ್ ನೀಡುವ ಟಿವಿಎಸ್ ಜೂಪಿಟರ್ 125  ಸಿಎನ್​ಜಿ ವರ್ಷನ್
ಟಿವಿಎಸ್ ಜೂಪಿಟರ್ 125
Follow us
|

Updated on: Jul 11, 2024 | 10:13 PM

ಭಾರತದಲ್ಲಿ ಪರಿಸರ ಸ್ನೇಹಿ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಸಾಂಪ್ರಾದಾಯಿಕ ಇಂಧನ ಚಾಲಿತ ವಾಹನಗಳ ಜೊತೆಗೆ ಎಲೆಕ್ಟ್ರಿಕ್ ಮತ್ತು ಸಿಎನ್​ಜಿ ಚಾಲಿತ ವಾಹನಗಳಿಗೂ ಉತ್ತಮ ಬೇಡಿಕೆ ದಾಖಲಾಗುತ್ತಿದೆ. ಸಿಎನ್​ಜಿ ಚಾಲಿತ ವಾಹನಗಳು ಆಕರ್ಷಕ ಬೆಲೆಯಲ್ಲಿ ಖರೀದಿಗೆ ಲಭ್ಯವಾಗುತ್ತಿದ್ದು, ಇವು ಕಡಿಮೆ ನಿರ್ವಹಣಾ ವೆಚ್ಚ ಮತ್ತು ಹೆಚ್ಚಿನ ಮೈಲೇಜ್ ಮೂಲಕ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿವೆ. ಹೀಗಾಗಿ ಟಿವಿಎಸ್ ಕಂಪನಿ ಕೂಡಾ ತನ್ನ ಹೊಸ ಸಿಎನ್ ಜಿ ಚಾಲಿತ ಸ್ಕೂಟರ್ ಮಾದರಿಯನ್ನು ಬಿಡುಗಡೆಗಾಗಿ ಸಿದ್ದವಾಗುತ್ತಿದೆ.

ಇತ್ತೀಚೆಗೆ ಸಿಎನ್ ಜಿ ಚಾಲಿತ ಬಜಾಜ್ ಫ್ರೀಡಂ 125 ಬೈಕ್ ಬಿಡುಗಡೆಯ ಬೆನ್ನಲ್ಲೇ ಟಿವಿಎಸ್ ಕೂಡಾ ತನ್ನ ಮೊದಲ ಸಿಎನ್ ಜಿ ಚಾಲಿತವಾಗಿರುವ ತನ್ನ ಹೊಸ ಸ್ಕೂಟರ್ ಬಿಡುಗಡೆಗಾಗಿ ಸಿದ್ದವಾಗುತ್ತಿದ್ದು, ಇದು ವಿನೂತನ ತಂತ್ರಜ್ಞಾನ ಪ್ರೇರಣೆಯೊಂದಿಗೆ ರಸ್ತೆಗಿಳಿಯಲಿದೆ. ಹೊಸ ಸಿಎನ್ ಜಿ ಸ್ಕೂಟರ್ ಕಾರ್ಯಕ್ಷಮತೆ ಕುರಿತಾಗಿ ಈಗಾಗಲೇ ಹಲವು ಸುತ್ತಿನ ಟೆಸ್ಟ್ ರೈಡ್ ನಡೆಸಲಾಗಿದ್ದು, ಈ ವರ್ಷಾಂತ್ಯಕ್ಕೆ ಹೊಸ ಸಿಎನ್ ಜಿ ಸ್ಕೂಟರ್ ಅಂತಿಮ ರೂಪ ಪಡೆದುಕೊಳ್ಳಲಿದೆ.

ಹೊಸ ಸಿಎನ್ ಜಿ ಚಾಲಿತ ಸ್ಕೂಟರ್ ಮಾದರಿಯನ್ನು ಸದ್ಯಕ್ಕೆ ಟಿವಿಎಸ್ ಕಂಪನಿಯು ಯು740 ಕೋಡ್ ನೇಮ್ ಮೂಲಕ ವಿವಿಧ ಹಂತದ ಪರೀಕ್ಷೆಗಳನ್ನು ಕೈಗೊಳ್ಳುತ್ತಿದ್ದು, ಇದು ಪೆಟ್ರೋಲ್ ಮತ್ತು ಸಿಎನ್ ಜಿ ಮೇಲೆ ಚಾಲನೆಗೊಳ್ಳಲಿದೆ. ಹೊಸ ಸ್ಕೂಟರಿನಲ್ಲಿ ಸಿಎನ್ ಜಿ ಸಿಲಿಂಡರ್ ಅನ್ನು ಬೂಟ್ ಸ್ಪೆಸ್ ಕೆಳ ಭಾಗದಲ್ಲಿ ಜೋಡಣೆ ಮಾಡಬಹುದಾದಿದ್ದು, ಸಿಲಿಂಡರ್ ಗೆ ಹಾನಿಯಾಗದಂತೆ ಸಾಕಷ್ಟು ಎಚ್ಚರಿಕೆ ವಹಿಸಲಾಗಿದೆ.

ಇದನ್ನೂ ಓದಿ: ಭರ್ಜರಿ ಮೈಲೇಜ್ ಪ್ರೇರಿತ ಬಜಾಜ್ ಫ್ರೀಡಂ 125 ಸಿಎನ್​ಜಿ ಬೈಕ್ ವಿಶೇಷತೆಗಳಿವು!

ಇನ್ನು ಟಿವಿಎಸ್ ಹೊಸ ಸಿಎನ್ ಜಿ ಸ್ಕೂಟರ್ ಸಾಮಾನ್ಯ ಮಾದರಿಯಲ್ಲಿರುವಂತೆ 125 ಸಿಸಿ ಎಂಜಿನ್ ಹೊಂದಿದಲಿದ್ದು, ವಾಹನ ಮಾಲೀಕರು ಇಂಧನ ಲಭ್ಯತೆ ಆಧಾರದ ಮೇಲೆ ಪೆಟ್ರೋಲ್ ಅಥವಾ ಸಿಎನ್ ಜಿಗೆ ಸ್ವಿಚ್ ಮಾಡಿಕೊಂಡು ಚಾಲನೆ ಮಾಡಬಹುದಾಗಿದೆ. ಪ್ರತಿ ಕೆಜಿ ಸಿಎನ್ ಜಿಗೆ ಹೊಸ ಸ್ಕೂಟರ್ ಗರಿಷ್ಠ 105ರಿಂದ 110 ಕಿ.ಮೀ ಮೈಲೇಜ್ ನೀಡಬಹುದಾಗಿದ್ದು, ಇದು ಸಾಮಾನ್ಯ ಪೆಟ್ರೋಲ್ ಮಾದರಿಗಿಂತಲೂ ತುಸು ದುಬಾರಿಯಾಗಿರಲಿದೆ.

Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ