AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಲಿದೆ ಭರ್ಜರಿ ಮೈಲೇಜ್ ನೀಡುವ ಟಿವಿಎಸ್ ಜೂಪಿಟರ್ 125 ಸಿಎನ್​ಜಿ ವರ್ಷನ್

ಟಿವಿಎಸ್ ಮೋಟಾರ್ ಕಂಪನಿಯು ತನ್ನ ಹೊಸ ದ್ವಿಚಕ್ರವಾಹನಗಳ ಉತ್ಪನ್ನಗಳಲ್ಲಿ 125 ಸಿಸಿ ಸಾಮಾರ್ಥ್ಯದ ಸ್ಕೂಟರ್ ಮಾದರಿಯನ್ನು ಸಿಎನ್​ಜಿ ಆವೃತ್ತಿಯಲ್ಲಿ ಬಿಡುಗಡೆ ಮಾಡುವುದಾಗಿ ಖಚಿತಪಡಿಸಿದೆ.

ಬರಲಿದೆ ಭರ್ಜರಿ ಮೈಲೇಜ್ ನೀಡುವ ಟಿವಿಎಸ್ ಜೂಪಿಟರ್ 125  ಸಿಎನ್​ಜಿ ವರ್ಷನ್
ಟಿವಿಎಸ್ ಜೂಪಿಟರ್ 125
Praveen Sannamani
|

Updated on: Jul 11, 2024 | 10:13 PM

Share

ಭಾರತದಲ್ಲಿ ಪರಿಸರ ಸ್ನೇಹಿ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಸಾಂಪ್ರಾದಾಯಿಕ ಇಂಧನ ಚಾಲಿತ ವಾಹನಗಳ ಜೊತೆಗೆ ಎಲೆಕ್ಟ್ರಿಕ್ ಮತ್ತು ಸಿಎನ್​ಜಿ ಚಾಲಿತ ವಾಹನಗಳಿಗೂ ಉತ್ತಮ ಬೇಡಿಕೆ ದಾಖಲಾಗುತ್ತಿದೆ. ಸಿಎನ್​ಜಿ ಚಾಲಿತ ವಾಹನಗಳು ಆಕರ್ಷಕ ಬೆಲೆಯಲ್ಲಿ ಖರೀದಿಗೆ ಲಭ್ಯವಾಗುತ್ತಿದ್ದು, ಇವು ಕಡಿಮೆ ನಿರ್ವಹಣಾ ವೆಚ್ಚ ಮತ್ತು ಹೆಚ್ಚಿನ ಮೈಲೇಜ್ ಮೂಲಕ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿವೆ. ಹೀಗಾಗಿ ಟಿವಿಎಸ್ ಕಂಪನಿ ಕೂಡಾ ತನ್ನ ಹೊಸ ಸಿಎನ್ ಜಿ ಚಾಲಿತ ಸ್ಕೂಟರ್ ಮಾದರಿಯನ್ನು ಬಿಡುಗಡೆಗಾಗಿ ಸಿದ್ದವಾಗುತ್ತಿದೆ.

ಇತ್ತೀಚೆಗೆ ಸಿಎನ್ ಜಿ ಚಾಲಿತ ಬಜಾಜ್ ಫ್ರೀಡಂ 125 ಬೈಕ್ ಬಿಡುಗಡೆಯ ಬೆನ್ನಲ್ಲೇ ಟಿವಿಎಸ್ ಕೂಡಾ ತನ್ನ ಮೊದಲ ಸಿಎನ್ ಜಿ ಚಾಲಿತವಾಗಿರುವ ತನ್ನ ಹೊಸ ಸ್ಕೂಟರ್ ಬಿಡುಗಡೆಗಾಗಿ ಸಿದ್ದವಾಗುತ್ತಿದ್ದು, ಇದು ವಿನೂತನ ತಂತ್ರಜ್ಞಾನ ಪ್ರೇರಣೆಯೊಂದಿಗೆ ರಸ್ತೆಗಿಳಿಯಲಿದೆ. ಹೊಸ ಸಿಎನ್ ಜಿ ಸ್ಕೂಟರ್ ಕಾರ್ಯಕ್ಷಮತೆ ಕುರಿತಾಗಿ ಈಗಾಗಲೇ ಹಲವು ಸುತ್ತಿನ ಟೆಸ್ಟ್ ರೈಡ್ ನಡೆಸಲಾಗಿದ್ದು, ಈ ವರ್ಷಾಂತ್ಯಕ್ಕೆ ಹೊಸ ಸಿಎನ್ ಜಿ ಸ್ಕೂಟರ್ ಅಂತಿಮ ರೂಪ ಪಡೆದುಕೊಳ್ಳಲಿದೆ.

ಹೊಸ ಸಿಎನ್ ಜಿ ಚಾಲಿತ ಸ್ಕೂಟರ್ ಮಾದರಿಯನ್ನು ಸದ್ಯಕ್ಕೆ ಟಿವಿಎಸ್ ಕಂಪನಿಯು ಯು740 ಕೋಡ್ ನೇಮ್ ಮೂಲಕ ವಿವಿಧ ಹಂತದ ಪರೀಕ್ಷೆಗಳನ್ನು ಕೈಗೊಳ್ಳುತ್ತಿದ್ದು, ಇದು ಪೆಟ್ರೋಲ್ ಮತ್ತು ಸಿಎನ್ ಜಿ ಮೇಲೆ ಚಾಲನೆಗೊಳ್ಳಲಿದೆ. ಹೊಸ ಸ್ಕೂಟರಿನಲ್ಲಿ ಸಿಎನ್ ಜಿ ಸಿಲಿಂಡರ್ ಅನ್ನು ಬೂಟ್ ಸ್ಪೆಸ್ ಕೆಳ ಭಾಗದಲ್ಲಿ ಜೋಡಣೆ ಮಾಡಬಹುದಾದಿದ್ದು, ಸಿಲಿಂಡರ್ ಗೆ ಹಾನಿಯಾಗದಂತೆ ಸಾಕಷ್ಟು ಎಚ್ಚರಿಕೆ ವಹಿಸಲಾಗಿದೆ.

ಇದನ್ನೂ ಓದಿ: ಭರ್ಜರಿ ಮೈಲೇಜ್ ಪ್ರೇರಿತ ಬಜಾಜ್ ಫ್ರೀಡಂ 125 ಸಿಎನ್​ಜಿ ಬೈಕ್ ವಿಶೇಷತೆಗಳಿವು!

ಇನ್ನು ಟಿವಿಎಸ್ ಹೊಸ ಸಿಎನ್ ಜಿ ಸ್ಕೂಟರ್ ಸಾಮಾನ್ಯ ಮಾದರಿಯಲ್ಲಿರುವಂತೆ 125 ಸಿಸಿ ಎಂಜಿನ್ ಹೊಂದಿದಲಿದ್ದು, ವಾಹನ ಮಾಲೀಕರು ಇಂಧನ ಲಭ್ಯತೆ ಆಧಾರದ ಮೇಲೆ ಪೆಟ್ರೋಲ್ ಅಥವಾ ಸಿಎನ್ ಜಿಗೆ ಸ್ವಿಚ್ ಮಾಡಿಕೊಂಡು ಚಾಲನೆ ಮಾಡಬಹುದಾಗಿದೆ. ಪ್ರತಿ ಕೆಜಿ ಸಿಎನ್ ಜಿಗೆ ಹೊಸ ಸ್ಕೂಟರ್ ಗರಿಷ್ಠ 105ರಿಂದ 110 ಕಿ.ಮೀ ಮೈಲೇಜ್ ನೀಡಬಹುದಾಗಿದ್ದು, ಇದು ಸಾಮಾನ್ಯ ಪೆಟ್ರೋಲ್ ಮಾದರಿಗಿಂತಲೂ ತುಸು ದುಬಾರಿಯಾಗಿರಲಿದೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್