AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Price Hike: ಟಿವಿಎಸ್ ದ್ವಿಚಕ್ರ ವಾಹನಗಳ ಬೆಲೆ ಮತ್ತಷ್ಟು ದುಬಾರಿ!

ಟಿವಿಎಸ್ ಮೋಟಾರ್ ಕಂಪನಿಯು ತನ್ನ ಹೊಸ ದ್ವಿಚಕ್ರ ವಾಹನಗಳ ಬೆಲೆಯಲ್ಲಿ ಶೇ.0.50 ರಿಂದ ಶೇ.2 ರಷ್ಟು ಹೆಚ್ಚಳ ಮಾಡಿದ್ದು, ಹೊಸ ದರವು ಇಂದಿನಿಂದಲೇ ಅನ್ವಯಿಸಲಿದೆ.

Price Hike: ಟಿವಿಎಸ್ ದ್ವಿಚಕ್ರ ವಾಹನಗಳ ಬೆಲೆ ಮತ್ತಷ್ಟು ದುಬಾರಿ!
TVS Two-Wheelers Prices Hike
Praveen Sannamani
|

Updated on:Oct 25, 2022 | 12:25 PM

Share

ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಟಿವಿಎಸ್ ಮೋಟಾರ್ ಕಂಪನಿಯು ತನ್ನ ಪ್ರಮುಖ ದ್ವಿಚಕ್ರ ವಾಹನಗಳ ಬೆಲೆಯಲ್ಲಿ ಹೆಚ್ಚಳ ಮಾಡಿದ್ದು, ಹಬ್ಬದ ಸಂಭ್ರಮದಲ್ಲಿ ಹೊಸ ವಾಹನಗಳ ಖರೀದಿ ಯೋಜನೆಯಲ್ಲಿದ್ದ ಗ್ರಾಹಕರಿಗೆ ಬೆಲೆ ಹೆಚ್ಚಳ ಬಿಸಿ ತಟ್ಟಲಿದೆ. ಹೊಸ ವಾಹನಗಳ ಬಿಡಿಭಾಗಗಳ ಬೆಲೆ ಹೆಚ್ಚಳ ಪರಿಣಾಮ ಹೊಸ ವಾಹನಗಳ ದರ ಹೆಚ್ಚಳವಾಗುತ್ತಿದ್ದು, ಇದು ಈ ವರ್ಷದ ನಾಲ್ಕನೇ ಬೆಲೆ ಹೆಚ್ಚಳವಾಗಿದೆ.

ಹೊಸ ದರಪಟ್ಟಿಯಲ್ಲಿ ಕಂಪನಿಯು ವಿವಿಧ ವೆರಿಯೆಂಟ್ ಗಳಿಗೆ ಅನುಗುಣವಾಗಿ ರೂ. 162ರಿಂದ ರೂ. 4,850 ದರ ಹೆಚ್ಚಿಸಲಾಗಿದ್ದು, ಈಗಾಗಲೇ ಬುಕಿಂಗ್ ಸಲ್ಲಿಸಿರುವ ಗ್ರಾಹಕರಿಗೆ ಹಳೆಯ ದರದಲ್ಲಿಯೇ ವಿತರಣೆಯಾಗಲಿದೆ. ಹೊಸ ದರಪಟ್ಟಿಯಲ್ಲಿ ಅಪಾಚೆ ಆರ್ ಟಿಆರ್ 160 4ವಿ ಬೆಲೆಯಲ್ಲಿ ಕಡಿಮೆ ಏರಿಕೆಯಾದರೆ ಸ್ಕೂಟಿ ಪೆಪ್ ಪ್ಲಸ್ ಸರಣಿ ಸ್ಕೂಟರ್ ಗಳ ಬೆಲೆಯಲ್ಲಿ ಹೆಚ್ಚಿನ ಬೆಲೆ ಏರಿಕೆಯಾಗಿದೆ.

Two-Wheeler Prices Hike

Two-Wheelers Prices Hike

ಇದನ್ನೂ ಓದಿ: ಅಚ್ಚರಿ ಬೆಲೆಯಲ್ಲಿ ಬಿಡುಗಡೆಯಾದ ಓಲಾ ಎಸ್1 ಏರ್ ಇವಿ ಸ್ಕೂಟರ್!

ದರಹೆಚ್ಚಳದ ನಂತರ ಅಪಾಚೆ ಆರ್ ಟಿಆರ್ 160 4ವಿ ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 1,21,790 ಬೆಲೆ ಹೊಂದಿದ್ದರೆ ಸ್ಟಾರ್ ಸಿಟಿ ಬೈಕ್ ಬೆಲೆ ರೂ. 74,990 ಕ್ಕೆ ತಲುಪಿದೆ. ರೆಡಿಯಾನ್ ಬೈಕ್ ಬೆಲೆಯು ರೂ. 64,050 ಬೆಲೆ ಹೆಚ್ಚಳವಾಗಿದ್ದರೆ ಸ್ಮಾರ್ಟ್ ಎಕ್ಸ್ ಕನೆಕ್ಟ್ ಬೈಕ್ ಬೆಲೆಯು ಆರಂಭಿಕವಾಗಿ 85,973 ಬೆಲೆ ಹೊಂದಿದೆ.

ಹೊಸದಟ್ಟಿಯಲ್ಲಿ ಅಪಾಚೆ ಆರ್ ಟಿಆರ್ 160 2ವಿ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.1,17,790 ರಿಂದ ಆರಂಭವಾಗಲಿದ್ದರೆ ಸ್ಕೂಟಿ ಪೆಪ್ ಪ್ಲಸ್ ಬೆಲೆಯು ರೂ. 63,284ಕ್ಕೆ ಮತ್ತು ಜೆಸ್ಟ್ ಸರಣಿ ಸ್ಕೂಟರ್ ಗಳ ಬೆಲೆಯು ಆರಂಭಿಕವಾಗಿ ರೂ. 71,636 ರಿಂದ ಆರಂಭವಾಗಲಿದೆ.

ಇದನ್ನೂ ಓದಿ: ಸ್ಮಾರ್ಟ್ಎಕ್ಸ್ ಕನೆಕ್ಟ್ ಟೆಕ್ ಹೊಂದಿರುವ ಟಿವಿಎಸ್ ರೈಡರ್ 125 ಬಿಡುಗಡೆ

ಇನ್ನು ಪ್ರಮುಖ ಸ್ಕೂಟರ್ ಮಾದರಿಗಳಾದ ಜೂಪಿಟರ್ ಸರಣಿ ಸ್ಕೂಟರ್ ಗಳು ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ. 69,990 ರಿಂದ ಟಾಪ್ ಎಂಡ್ ಮಾದರಿಯು ರೂ. 89,625 ಬೆಲೆ ಹೊಂದಿದ್ದು, ಪ್ರೀಮಿಯಂ ಸ್ಕೂಟರ್ ಮಾದರಿಯಾದ ಎನ್ ಟಾರ್ಕ್ 125 ಮಾದರಿಯು ಆರಂಭಿಕವಾಗಿ ರೂ. 79,956 ರಿಂದ ಟಾಪ್ ಎಂಡ್ ಮಾದರಿಯು ರೂ. 99,961 ಬೆಲೆ ಹೊಂದಿದೆ.

Published On - 12:21 pm, Tue, 25 October 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!