AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Cars: ಏಪ್ರಿಲ್ ನಲ್ಲಿ ಬಿಡುಗಡೆಯಾಗಲಿರುವ ಪ್ರಮುಖ ಕಾರುಗಳಿವು..

ಭಾರತದಲ್ಲಿ ಹೊಸ ಕಾರುಗಳ ಮಾರಾಟ ಹೆಚ್ಚುತ್ತಿದ್ದು, ಶೀಘ್ರದಲ್ಲಿಯೇ ಮತ್ತಷ್ಟು ವಿನೂತನ ಶೈಲಿಯ ಕಾರುಗಳು ಮಾರುಕಟ್ಟೆಗೆ ಲಗ್ಗೆಯಿಡಲು ಸಿದ್ದಗೊಳ್ಳುತ್ತಿವೆ. ಹೊಸ ಕಾರುಗಳಲ್ಲಿ ಸಾಮಾನ್ಯ ಮಾದರಿಗಳ ಜೊತೆಗೆ ಎಲೆಕ್ಟ್ರಿಕ್ ಕಾರುಗಳು ಸಹ ಬಿಡುಗಡೆಯ ಸಿದ್ದತೆಯಲ್ಲಿದ್ದು, ಹೊಸ ಕಾರುಗಳು ಬಿಎಸ್ 6 ಎರಡನೇ ಹಂತದ ಮಾನದಂಡ ಪೂರೈಸಿವೆ.

Follow us
Praveen Sannamani
|

Updated on:Apr 03, 2023 | 4:57 PM

ಹೊಸ ಕಾರು(New Cars) ಮಾದರಿಗಳೊಂದಿಗೆ ಪ್ರಮುಖ ವಾಹನ ಉತ್ಪಾದನಾ ಕಂಪನಿಗಳು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಶೀಘ್ರದಲ್ಲಿಯೇ ಮತ್ತಷ್ಟು ಹೊಸ ಕಾರುಗಳು ಬಿಡುಗಡೆಯ ಸಿದ್ದತೆಯಲ್ಲಿವೆ. ಹೊಸ ಕಾರುಗಳಲ್ಲಿ ಸಾಮಾನ್ಯ ಮಾದರಿಗಳ ಜೊತೆಗೆ ಎಲೆಕ್ಟ್ರಿಕ್ ಆವೃತ್ತಿಗಳು ಸಹ ಬಿಡುಗಡೆಯಾಗುತ್ತಿದ್ದು, ಇವು ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬಂದಿರುವ ರಿಯಲ್ ಡ್ರೈವಿಂಗ್ ಎಮಿಷನ್ ಮಾನದಂಡದೊಂದಿಗೆ ಖರೀದಿಗೆ ಲಭ್ಯವಿರಲಿವೆ.

ಮಾರುತಿ ಸುಜುಕಿ ಫ್ರಾಂಕ್ಸ್ ಹೊಸ ಕಾರುಗಳ ಪಟ್ಟಿಯಲ್ಲಿ ಮಾರುತಿ ಸುಜುಕಿ ನಿರ್ಮಾಣದ ಹೊಚ್ಚ ಹೊಸ ಫ್ರಾಂಕ್ಸ್ ಕಾರು ಪ್ರಮುಖ ಆವೃತ್ತಿಯಾಗಿದೆ. ಇದು ಮುಂದಿನ ಕೆಲವೇ ವಾರಗಳಲ್ಲಿ ಬಿಡುಗಡೆಯಾಗಲಿದ್ದು, ಹೊಸ ಕಾರು ಮಾದರಿಯು ಕಂಪ್ಯಾಕ್ಟ್ ಎಸ್ ಯುವಿ ವಿಭಾಗಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳಲಿದೆ. ಹೊಸ ಕಾರಿನಲ್ಲಿ ಕಂಪನಿಯು 1.0 ಲೀಟರ್ ಪೆಟ್ರೋಲ್ ಮತ್ತು 1.2 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಿದೆ. ಹೊಸ ಕಾರು ಎಕ್ಸ್ ಶೋರೂಂ ಪ್ರಕಾರ ರೂ. 8 ಲಕ್ಷದಿಂದ ರೂ. 10 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುವ ನೀರಿಕ್ಷೆಯಿದ್ದು, ಇದು ಟಾಟಾ ನೆಕ್ಸಾನ್ ಮತ್ತು ಮಹೀಂದ್ರಾ ಎಕ್ಸ್ 300 ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಎಂಜಿ ಮೋಟಾರ್ ಕಂಪನಿ ಸಹ ಶೀಘ್ರದಲ್ಲಿ ಮತ್ತಷ್ಟು ಇವಿ ಕಾರುಗಳ ಬಿಡುಗಡೆಗೆ ಸಿದ್ದವಾಗ್ತಿದೆ. ಜೆಡ್ಎಸ್ ಇವಿ ನಂತರ ಇದೀಗ ಕಾಮೆಟ್ ಮೈಕ್ರೊ ಇವಿ ಬಿಡುಗಡೆಯ ಯೋಜನೆಯಲ್ಲಿದೆ. ಪರ್ಸನಲ್ ಮೊಲಿಬಿಟಿ ಉದ್ದೇಶಕ್ಕಾಗಿ ಈ ಹೊಸ ಇವಿ ಕಾರು ಬಿಡುಗಡೆಯಾಗುತ್ತಿದ್ದು, ಇದು 25 ಕೆವಿಹೆಚ್ ಬ್ಯಾಟರಿ ಪ್ಯಾಕ್ ಜೋಡಣೆ ಹೊಂದಿರಲಿದೆ. ಇದರೊಂದಿಗೆ ಹೊಸ ಇವಿ ಕಾರು ಪ್ರತಿ ಚಾರ್ಜ್ ಗೆ ಗರಿಷ್ಠ 250 ಕಿ.ಮೀ ರೇಂಜ್ ಹೊಂದಿರಲಿದ್ದು, ಎಕ್ಸ್ ಶೋರೂಂ ಪ್ರಕಾರ ರೂ. 6 ಲಕ್ಷ ಆರಂಭಿಕ ಬೆಲೆ ಹೊಂದಿರಲಿದೆ.

ಇದನ್ನೂ ಓದಿ: ಹೊಸ ಸಿ3 ಏರ್ ಕ್ರಾಸ್ ಕಾರು ಬಿಡುಗಡೆಗೆ ಸಿದ್ದವಾದ ಸಿಟ್ರನ್ ಇಂಡಿಯಾ

ಹೋಂಡಾ ಹೊಸ ಎಸ್ ಯುವಿ ಭಾರತದಲ್ಲಿ ಪ್ರೀಮಿಯಂ ಕಾರುಗಳ ಮೂಲಕ ಜನಪ್ರಿಯವಾಗಿರುವ ಹೋಂಡಾ ಕಾರ್ಸ್ ಕಂಪನಿ ಸಹ ಶೀಘ್ರದಲ್ಲಿಯೇ ಮತ್ತೊಂದು ಹೊಸ ಕಾರು ಬಿಡುಗಡೆಗೆ ಸಿದ್ದವಾಗುತ್ತಿದೆ. ಮಾರುಕಟ್ಟೆಯಲ್ಲಿ ಹೊಸ ಕಾರು ಮಾದರಿಗಳಿಂದ ತೀವ್ರ ಪೈಪೋಟಿ ಎದುರಿಸುತ್ತಿರುವ ಹೋಂಡಾ ಕಂಪನಿ ವಿನೂತನ ಕಾರು ಮಾದರಿಯನ್ನ ಬಿಡುಗಡೆ ಮಾಡುತ್ತಿದೆ. ಹೊಸ ಕಾರು ಮಾದರಿಯು ಮಧ್ಯಮ ಕ್ರಮಾಂಕದ ಎಸ್ ಯುವಿ ಆವೃತ್ತಿಯಾಗಿದ್ದು, ಇದು ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೊಸ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ. ಹೊಸ ಕಾರು ಈ ತಿಂಗಳಾಂತ್ಯಕ್ಕೆ ಅನಾವರಣಗೊಳ್ಳಲಿದ್ದು, ಇದು ವಿವಿಧ ಎಂಜಿನ್ ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ.

ಮರ್ಸಿಡಿಸ್ ಬೆಂಝ್ ಎಎಂಜಿ ಜಿಟಿ 63 ಇ-ಪರ್ಫಾಮೆನ್ಸ್ ಬಿಡುಗಡೆಯಾಗಲಿರುವ ಹೊಸ ಕಾರುಗಳಲ್ಲಿ ಐಷಾರಾಮಿ ಮಾದರಿಗಳು ಸಹ ಗಮನಸೆಳೆಯಲಿವೆ. ಹೊಸ ಐಷಾರಾಮಿ ಕಾರುಗಳ ಪಟ್ಟಿಯಲ್ಲಿ ಮರ್ಸಿಡಿಸ್ ಬೆಂಝ್ ನಿರ್ಮಾಣದ ಎಎಂಜಿ ಜಿಟಿ 63 ಇ-ಪರ್ಫಾಮೆನ್ಸ್ ಭಾರೀ ನೀರಿಕ್ಷೆ ಹುಟ್ಟು ಹಾಕಿದೆ. ಇದು ಭಾರತದಲ್ಲಿ ಬಿಡುಗಡೆಯಾಗುತ್ತಿರುವ ಮೊದಲ ಪ್ಲಗ್ ಇನ್ ಹೈಬ್ರಿಡ್ ಎಎಂಜಿ ಕಾರು ಮಾದರಿಯಾಗಿದ್ದು, 4.0 ಲೀಟರ್ ಟ್ವಿನ್ ಟರ್ಬೊ ಚಾರ್ಜ್ಡ್ ವಿ8 ಪೆಟ್ರೋಲ್ ಎಂಜಿನ್ ಹೊಂದಿರಲಿದೆ. ಈ ಮೂಲಕ ಇದು 843 ಹಾರ್ಸ್ ಪವರ್ ಹೊಂದಿರಲಿದ್ದು, ಎಕ್ಸ್ ಶೋರೂಂ ಪ್ರಕಾರ ರೂ. 3 ಕೋಟಿ ಬೆಲೆ ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ: ಹೋಂಡಾ ಸಿಟಿ vs ಹ್ಯುಂಡೈ ವೆರ್ನಾ…ಯಾವುದು ಬೆಸ್ಟ್?

ಲ್ಯಾಂಬೊರ್ಗಿನಿ ಉರುಸ್ ಎಸ್ ಈ ತಿಂಗಳಾಂತ್ಯಕ್ಕೆ ಬಿಡುಗಡೆಯಾಗಲಿರುವ ಹೊಸ ಕಾರುಗಳಲ್ಲಿ ಲ್ಯಾಂಬೊರ್ಗಿನಿ ನಿರ್ಮಾಣದ ಹೊಸ ಉರುಸ್ ಎಸ್ ವೆರಿಯೆಂಟ್ ಕೂಡಾ ಒಂದಾಗಿದೆ. ಇದು ಸ್ಟ್ಯಾಂಡರ್ಡ್ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಮಾದರಿಯಾಗಿದ್ದು, ಇದು ಎಕ್ಸ್ ಶೋರೂಂ ಪ್ರಕಾರ ರೂ. 4.22 ಕೋಟಿ ಬೆಲೆ ಪಡೆದುಕೊಳ್ಳುವ ನೀರಿಕ್ಷೆಗಳಿವೆ.

Published On - 4:56 pm, Mon, 3 April 23

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ