AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Father’s Day 2022: ನಮ್ಮ ಕಣ್ಣಿನಿಗೆ ಹೀರೋ ನನ್ನ ಅಪ್ಪ

ಪ್ರತಿಯೊಬ್ಬ ವ್ಯಕ್ತಿಯ ಬದುಕಿನಲ್ಲೂ ಮಹೋನ್ನತ ಸ್ಥಾನವನ್ನು ನಿರ್ವಹಿಸುವ, ಪ್ರೀತಿಯನ್ನು ಅವ್ಯಕ್ತವಾಗಿಯೇ ಉಳಿಸಿಕೊಳ್ಳುವ ಅಪ್ಪ, ಭಾಷೆಗೆ ನಿಲುಕದ, ಮಾತಿಗೆ ಮೀರಿದ, ಪ್ರಶ್ನಾತೀತ ವ್ಯಕ್ತಿತ್ವದ ಬಗ್ಗೆ ಎಷ್ಟು ಬರೆದರೂ ಮುಗಿಯದು.

Father’s Day 2022: ನಮ್ಮ ಕಣ್ಣಿನಿಗೆ ಹೀರೋ ನನ್ನ ಅಪ್ಪ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 19, 2022 | 7:50 AM

Share
ಅಪ್ಪ ನಾವು ಚಿಕ್ಕವರಿದ್ದಾಗಿನಿಂದಲೂ ನಮ್ಮ ಕಣ್ಣಲ್ಲಿ ಹೀರೋ ಆಗಿಯೇ ಉಳಿದು ಬಿಟ್ಟಿದ್ದಾನೆ! ನಮ್ಮ  ಬದುಕಿನ ಪಯಣದಲ್ಲಿ ಲೆಕ್ಕವಿಲ್ಲದಷ್ಟು ತಿರುವಿನಲ್ಲಿ ಸಿಕ್ಕ ಸಾವಿರಾರು ಜನರೂ ಅಪ್ಪನ ಸಮಕ್ಕೆ ನಿಲ್ಲುವುದಕ್ಕೆ ಸಾಧ್ಯವೇ ಇಲ್ಲದಷ್ಟು ನಮ್ಮ ಬದುಕನ್ನು ಅಪ್ಪ ಆವರಿಸಿಬಿಟ್ಟ.  ಅಪ್ಪ ಜೊತೆಯಲ್ಲಿದ್ದರೆ ಅದೇನೋ ಹೇಳ ತೀರದ ಧೈರ್ಯ. ಹೌದು, ಈ ಅಪ್ಪ ಎಂಬ ಮುತ್ತು. ನೂರಾರು ಕಷ್ಟಗಳನ್ನೂ ಎದೆಯಲ್ಲೇ ಬಚ್ಚಿಟ್ಟುಕೊಂಡು ನಗುತ್ತಲೇ ಇರುವವನು ಅಪ್ಪ. ಮನೆಯ ಎಲ್ಲಾ ಜವಾಬ್ದಾರಿಗಳನ್ನು ಹೊತ್ತರೂ, ತಾನು ಸಂತೋಷವಾಗಿಯೇ ಇದ್ದೀನೆಂದು ಮನೆ ಜನರನ್ನು ಸಂತೋಷದಲ್ಲಿ ಇಡುವ ವ್ಯಕ್ತಿ ಅಪ್ಪ.
ಈ ಸುದ್ದಿಯನ್ನು ಓದಲು ಇಲ್ಲಿ  ಕ್ಲಿಕ್ ಮಾಡಿ : ನೆನಪಿನ ಭಿತ್ತಿಯಲ್ಲಿ ಅಪ್ಪನ ಚಿತ್ರ
ಪ್ರತಿಯೊಬ್ಬ ವ್ಯಕ್ತಿಯ ಬದುಕಿನಲ್ಲೂ ಮಹೋನ್ನತ ಸ್ಥಾನವನ್ನು ನಿರ್ವಹಿಸುವ, ಪ್ರೀತಿಯನ್ನು ಅವ್ಯಕ್ತವಾಗಿಯೇ ಉಳಿಸಿಕೊಳ್ಳುವ ಅಪ್ಪ, ಭಾಷೆಗೆ ನಿಲುಕದ, ಮಾತಿಗೆ ಮೀರಿದ, ಪ್ರಶ್ನಾತೀತ ವ್ಯಕ್ತಿತ್ವದ ಬಗ್ಗೆ ಎಷ್ಟು ಬರೆದರೂ ಮುಗಿಯದು. ಎಲ್ಲವನ್ನೂ ಹೇಳಿದ ಮೇಲೂ ಏನೋ ಉಳಿದು ಬಿಡುವಂಥ ವ್ಯಕ್ತಿತ್ವ ಅಪ್ಪನದು.  ಅಪ್ಪ ಅಂದ್ರೆ ಆಕಾಶವೇ ಅಲ್ಲ, ಆಕಾಶವನ್ನು ಮೀರಿದ ವ್ಯಕ್ತಿತ್ವ ಅಪ್ಪನದು.  ಅಂಥ ಅಪ್ಪನನ್ನು ಪಡೆದ ನಾವೆಲ್ಲರೂ ಧನ್ಯರು.  ನಮ್ಮೆಲ್ಲರ ಬದುಕಿಗೊಂದು ಅರ್ಥ ನೀಡಿದ ಅಪ್ಪನಿಗೆ ಕೋಟಿ ನಮನ.  ಎಲ್ಲಾ ಅಪ್ಪಂದಿರಿಗೂ ಅಪ್ಪಂದಿರ ದಿನದ ಶುಭಾಶಯಗಳು
ಸುಮಾ ನರಸಿಂಹಮೂರ್ತಿ
ದೊಡ್ಡಬಳ್ಳಾಪುರ

Published On - 7:15 am, Sun, 19 June 22

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ