AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Father’s Day 2022: ನಮ್ಮ ಕಣ್ಣಿನಿಗೆ ಹೀರೋ ನನ್ನ ಅಪ್ಪ

ಪ್ರತಿಯೊಬ್ಬ ವ್ಯಕ್ತಿಯ ಬದುಕಿನಲ್ಲೂ ಮಹೋನ್ನತ ಸ್ಥಾನವನ್ನು ನಿರ್ವಹಿಸುವ, ಪ್ರೀತಿಯನ್ನು ಅವ್ಯಕ್ತವಾಗಿಯೇ ಉಳಿಸಿಕೊಳ್ಳುವ ಅಪ್ಪ, ಭಾಷೆಗೆ ನಿಲುಕದ, ಮಾತಿಗೆ ಮೀರಿದ, ಪ್ರಶ್ನಾತೀತ ವ್ಯಕ್ತಿತ್ವದ ಬಗ್ಗೆ ಎಷ್ಟು ಬರೆದರೂ ಮುಗಿಯದು.

Father’s Day 2022: ನಮ್ಮ ಕಣ್ಣಿನಿಗೆ ಹೀರೋ ನನ್ನ ಅಪ್ಪ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 19, 2022 | 7:50 AM

Share
ಅಪ್ಪ ನಾವು ಚಿಕ್ಕವರಿದ್ದಾಗಿನಿಂದಲೂ ನಮ್ಮ ಕಣ್ಣಲ್ಲಿ ಹೀರೋ ಆಗಿಯೇ ಉಳಿದು ಬಿಟ್ಟಿದ್ದಾನೆ! ನಮ್ಮ  ಬದುಕಿನ ಪಯಣದಲ್ಲಿ ಲೆಕ್ಕವಿಲ್ಲದಷ್ಟು ತಿರುವಿನಲ್ಲಿ ಸಿಕ್ಕ ಸಾವಿರಾರು ಜನರೂ ಅಪ್ಪನ ಸಮಕ್ಕೆ ನಿಲ್ಲುವುದಕ್ಕೆ ಸಾಧ್ಯವೇ ಇಲ್ಲದಷ್ಟು ನಮ್ಮ ಬದುಕನ್ನು ಅಪ್ಪ ಆವರಿಸಿಬಿಟ್ಟ.  ಅಪ್ಪ ಜೊತೆಯಲ್ಲಿದ್ದರೆ ಅದೇನೋ ಹೇಳ ತೀರದ ಧೈರ್ಯ. ಹೌದು, ಈ ಅಪ್ಪ ಎಂಬ ಮುತ್ತು. ನೂರಾರು ಕಷ್ಟಗಳನ್ನೂ ಎದೆಯಲ್ಲೇ ಬಚ್ಚಿಟ್ಟುಕೊಂಡು ನಗುತ್ತಲೇ ಇರುವವನು ಅಪ್ಪ. ಮನೆಯ ಎಲ್ಲಾ ಜವಾಬ್ದಾರಿಗಳನ್ನು ಹೊತ್ತರೂ, ತಾನು ಸಂತೋಷವಾಗಿಯೇ ಇದ್ದೀನೆಂದು ಮನೆ ಜನರನ್ನು ಸಂತೋಷದಲ್ಲಿ ಇಡುವ ವ್ಯಕ್ತಿ ಅಪ್ಪ.
ಈ ಸುದ್ದಿಯನ್ನು ಓದಲು ಇಲ್ಲಿ  ಕ್ಲಿಕ್ ಮಾಡಿ : ನೆನಪಿನ ಭಿತ್ತಿಯಲ್ಲಿ ಅಪ್ಪನ ಚಿತ್ರ
ಪ್ರತಿಯೊಬ್ಬ ವ್ಯಕ್ತಿಯ ಬದುಕಿನಲ್ಲೂ ಮಹೋನ್ನತ ಸ್ಥಾನವನ್ನು ನಿರ್ವಹಿಸುವ, ಪ್ರೀತಿಯನ್ನು ಅವ್ಯಕ್ತವಾಗಿಯೇ ಉಳಿಸಿಕೊಳ್ಳುವ ಅಪ್ಪ, ಭಾಷೆಗೆ ನಿಲುಕದ, ಮಾತಿಗೆ ಮೀರಿದ, ಪ್ರಶ್ನಾತೀತ ವ್ಯಕ್ತಿತ್ವದ ಬಗ್ಗೆ ಎಷ್ಟು ಬರೆದರೂ ಮುಗಿಯದು. ಎಲ್ಲವನ್ನೂ ಹೇಳಿದ ಮೇಲೂ ಏನೋ ಉಳಿದು ಬಿಡುವಂಥ ವ್ಯಕ್ತಿತ್ವ ಅಪ್ಪನದು.  ಅಪ್ಪ ಅಂದ್ರೆ ಆಕಾಶವೇ ಅಲ್ಲ, ಆಕಾಶವನ್ನು ಮೀರಿದ ವ್ಯಕ್ತಿತ್ವ ಅಪ್ಪನದು.  ಅಂಥ ಅಪ್ಪನನ್ನು ಪಡೆದ ನಾವೆಲ್ಲರೂ ಧನ್ಯರು.  ನಮ್ಮೆಲ್ಲರ ಬದುಕಿಗೊಂದು ಅರ್ಥ ನೀಡಿದ ಅಪ್ಪನಿಗೆ ಕೋಟಿ ನಮನ.  ಎಲ್ಲಾ ಅಪ್ಪಂದಿರಿಗೂ ಅಪ್ಪಂದಿರ ದಿನದ ಶುಭಾಶಯಗಳು
ಸುಮಾ ನರಸಿಂಹಮೂರ್ತಿ
ದೊಡ್ಡಬಳ್ಳಾಪುರ

Published On - 7:15 am, Sun, 19 June 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?