Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy Teachers Day: ವಿದ್ಯಾರ್ಥಿಯ ಸಾಧನೆಗೆ ಗುರುವಿನ ಮಾರ್ಗದರ್ಶನ ಮುಖ್ಯ

Teachers Day: ತಂದೆ ತಾಯಿಯ ನಂತರ ಮಗುವಿಗೆ ಜೀವನದಲ್ಲಿ ಗುರುವನ್ನು ಎರಡನೇ ಪ್ರಮುಖ ವ್ಯಕ್ತಿ ಎಂದು ಪರಿಗಣಿಸಲಾಗುತ್ತದೆ. ರಾಧಾಕೃಷ್ಣನ್ ಒಬ್ಬ ಶ್ರೇಷ್ಠ ಶಿಕ್ಷಕ, ಇಂತಹ ಆದರ್ಶ ವ್ಯಕ್ತಿಯ ಜನ್ಮದಿನವನ್ನು ಭಾರತದಲ್ಲಿ ಪ್ರತಿ ವರ್ಷ ಸೆಪ್ಟೆಂಬರ್ 5 ರಂದು ವಿವಿಧ ಶಾಲಾ ಕಾಲೇಜುಗಳಲ್ಲಿ ಶಿಕ್ಷಕರ ದಿನವನ್ನು ಆಚರಿಸುತ್ತಾರೆ.

Happy Teachers Day: ವಿದ್ಯಾರ್ಥಿಯ ಸಾಧನೆಗೆ ಗುರುವಿನ ಮಾರ್ಗದರ್ಶನ ಮುಖ್ಯ
Happy Teachers Day
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Sep 05, 2022 | 9:32 AM

ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ ಗುರು ಸಾಕ್ಷಾತ್ ಪರಬ್ರಹ್ಮ ತದ್ಮೈ ಶ್ರೀ ಗುರುವೇ ನಮಃ” ವಿದ್ಯಾರ್ಥಿಗಳ ಬಾಳು ಹೊಂಬೆಳಕು ಶಿಕ್ಷಕರು, ಎಂದರೆ ತಪ್ಪಾಗಲಾರದು. ಪ್ರಾಚೀನ ಕಾಲದಲ್ಲಿ ಶಿಕ್ಷಕರನ್ನು ಗುರು ಎಂದು ಕರೆದಿದ್ದರು. ಗುರು ಎಂದರೆ ಸಾವಿರ ವಿದ್ಯಾರ್ಥಿಗಳ ಬಾಳಿಗೆ ಬೆಳಕನ್ನು ತಂದ ವ್ಯಕ್ತಿ. ಒಬ್ಬ ಗುರು ಇಲ್ಲದೆ ವಿದ್ಯಾರ್ಥಿ ಜೀವನವನ್ನು ಊಹಿಸಲು ಸಾಧ್ಯವಿಲ್ಲ. ಒಬ್ಬ ಗುರುವಿಗೆ ತಾನು ಕಳಿಸಿದ್ದ ಎಲ್ಲಾ ವಿದ್ಯಾರ್ಥಿಗಳು ತನ್ನ ಮಕ್ಕಳಂತೆ ತೋರುವವರು. ಒಂದು  ದೇಶದ ಭವಿಷ್ಯವನ್ನು ರೂಪಿಸುವುದು ಮಕ್ಕಳ ಕೈಯಲ್ಲಿದೆ ಎಂದು ಹೇಳಲಾಗುತ್ತದೆ. ಆದರೆ ಮಕ್ಕಳ ಭವಿಷ್ಯವನ್ನು ರೂಪಿಸುವುದು ಅಧ್ಯಾಪಕರ ಪ್ರಮುಖ ಪಾತ್ರ ವಹಿಸುತ್ತಾರೆ.

ತಂದೆ ತಾಯಿಯ ನಂತರ ಮಗುವಿಗೆ ಜೀವನದಲ್ಲಿ ಗುರುವನ್ನು ಎರಡನೇ ಪ್ರಮುಖ ವ್ಯಕ್ತಿ ಎಂದು ಪರಿಗಣಿಸಲಾಗುತ್ತದೆ. ರಾಧಾಕೃಷ್ಣನ್ ಒಬ್ಬ ಶ್ರೇಷ್ಠ ಶಿಕ್ಷಕ, ಇಂತಹ ಆದರ್ಶ ವ್ಯಕ್ತಿಯ ಜನ್ಮದಿನವನ್ನು ಭಾರತದಲ್ಲಿ ಪ್ರತಿ ವರ್ಷ ಸೆಪ್ಟೆಂಬರ್ 5 ರಂದು ವಿವಿಧ ಶಾಲಾ ಕಾಲೇಜುಗಳಲ್ಲಿ ಶಿಕ್ಷಕರ ದಿನವನ್ನು ಆಚರಿಸುತ್ತಾರೆ. ಒಬ್ಬ ವಿದ್ಯಾರ್ಥಿಯ ಸೃಷ್ಟಿಗೆ ಗುರುವಿನ ಪಾತ್ರ ಅತಿ ದೊಡ್ಡದು. ತಾಯಿ ಮಕ್ಕಳಿಗೆ ಜೀವ ನೀಡಿದರೆ ಶಿಕ್ಷಕರು ಮಕ್ಕಳಿಗೆ ಜೀವನವನ್ನು ನೀಡುತ್ತಾರೆ. ವಿದ್ಯಾರ್ಥಿಗಳಿಗೆ ತಮ್ಮ ಭವಿಷ್ಯದ ಬಗ್ಗೆ ಗುರಿಯನ್ನು ಕಟ್ಟಿಕೊಡುವವರು ಗುರುಗಳು. ಗುರುಗಳು ಪ್ರತಿ ಬಾರಿ ಸರಿಯಾದ ಸಮಯಕ್ಕೆ ಶಾಲೆಗೆ ಬರುತ್ತಾರೆ. ಸರಿಯಾದ ಸಮಯಕ್ಕೆ ಪಾಠ ಶುರು ಮಾಡಿ ಕೊನೆಗೊಳಿಸುತ್ತಾರೆ. ವಿದ್ಯಾರ್ಥಿಗಳ ಯಶಸ್ವಿಗೆ ಶಿಕ್ಷಕರು ಖುಷಿ ಪಡುತ್ತಾರೆ ವಿದ್ಯಾರ್ಥಿಗಳೊಂದಿಗೆ ಹೆಚ್ಚಿನ ಸಮಯವನ್ನು ಶಿಕ್ಷಕರು ಕಳೆಯುತ್ತಾರೆ.

ಬಾಲ್ಯದಲಿದ್ದಾಗ ವಿದ್ಯಾರ್ಥಿಗಳ ಕೈ ಹಿಡಿದು ಅಕ್ಷರ ಅಭ್ಯಾಸ ಮಾಡಿಸಿ, ಮಕ್ಕಳ ತುಂಟಾಟ ಕೀಟಲೆಗಳನ್ನೆಲ್ಲವನ್ನು ಸಹಿಸಿಕೊಂಡು ಸಣ್ಣಪುಟ್ಟ ತಪ್ಪುಗಳನ್ನು ತಿದ್ದಿಕೊಂಡು ವಿದ್ಯಾರ್ಥಿಗಳಿಗೆ ಬದುಕಿನ ಪಾಠಗಳನ್ನು ಸಣ್ಣ ಕಥೆಗಳ ರೂಪದಲ್ಲಿದೆ ಎಂದು ವಿವರಿಸುವವರು ಶಿಕ್ಷಕರು. ಸರಿ ತಪ್ಪುಗಳ ಬಗ್ಗೆ ಅರ್ಥಪೂರ್ಣವಾಗಿ ತಿಳಿಸಿ ತಿದ್ದಿ ಬುದ್ದಿ ಹೇಳುವವರು ಶಿಕ್ಷಕರು. ವಿದ್ಯಾರ್ಥಿಗಳ ಒಳ್ಳೆಯ ಪ್ರತಿಭೆಗಳಿಗೆ ಬೆಳಕು ಚೆಲ್ಲುವವರು ಶಿಕ್ಷಕರು. ವಿದ್ಯಾರ್ಥಿಗಳ ಸೋತಾಗ ಆತ್ಮಸ್ಥೈರ್ಯ ತುಂಬಿ ಧೈರ್ಯ ಹೇಳಿ ಪ್ರೋತ್ಸಾಹಿಸುವ ಶಿಕ್ಷಕರು ಆತ್ಮಸ್ಥೈರ್ಯ ತುಂಬಿ ಧೈರ್ಯ ಹೇಳಿ ಪ್ರೋತ್ಸಾಹಿಸುವ ಶಿಕ್ಷಕರು. ಗೆದ್ದಾಗ ಪ್ರೋತ್ಸಾಹಿಸುವವರು ಶಿಕ್ಷಕರು. ಒಂದು ಕಲ್ಲು ಸುಂದರವಾದ ಮೂತಿಯಾಗಿ ಮಾರ್ಪಡು ಮಾಡಲು ಅದರ ಹಿಂದೆ ಒಬ್ಬ ಅತ್ಯುತ್ತಮ ಶಿಲ್ಪಿ ಇದ್ದೇ ಇರುತ್ತಾನೆ. ಹಾಗೆ ಒಬ್ಬ ವಿದ್ಯಾರ್ಥಿಯ ಸಾಧನೆಯ ಬೆನ್ನ ಹಿಂದೆ ಶಿಕ್ಷಕರು ಇದ್ದೇ ಇರುತ್ತಾರೆ. ನನ್ನ ಜೀವನದಲ್ಲಿ ಹಲವಾರು ರೀತಿಯಲಿ ಮಹತ್ವದ ಪಾತ್ರನು ವಹಿಸಿರುವ ಶಿಕ್ಷಕರಿಗೆ ಕೃತಜ್ಞನಾಗಿರುತ್ತೇನೆ.

ಜಯಶ್ರೀ. ಸಂಪ

ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!