AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣದ ಅಯೋಧ್ಯೆ ಕನ್ಯಾಡಿ ಶ್ರೀರಾಮ ಕ್ಷೇತ್ರ! ಇಲ್ಲಿದೆ ಅದ್ಭುತ ಶಿಲ್ಪಕಲೆಗಳು

ದಕ್ಷಿಣದ ಅಯೋಧ್ಯೆ ಎಂದೇ ಕರೆಯಲ್ಪಡುವ ಶ್ರೀರಾಮ ಕ್ಷೇತ್ರ ಧರ್ಮಸ್ಥಳದಿಂದ ಸುಮಾರು ಮೂರ್ನಾಲ್ಕು ಕಿಲೋ ಮೀಟರ್ ದೂರದಲ್ಲಿದೆ. ಕನ್ಯಾಡಿಯ ನಿತ್ಯಾನಂದ ನಗರದಲ್ಲಿ ನಿರ್ಮಾಣಗೊಂಡ ಈ ದೇವಾಲಯವು ನೇತ್ರಾವತಿ ನದಿಯ ಸಮೀಪದ ಪುಣ್ಯಕ್ಷೇತ್ರವಾಗಿದ್ದು ಸಂಪೂರ್ಣವಾಗಿ ದಕ್ಷಿಣೋತ್ತರ ಶಿಲ್ಪಕಲೆಯನ್ನು ಇಲ್ಲಿ ಬಿಂಬಿಸಲಾಗಿದೆ.

ದಕ್ಷಿಣದ ಅಯೋಧ್ಯೆ ಕನ್ಯಾಡಿ ಶ್ರೀರಾಮ ಕ್ಷೇತ್ರ! ಇಲ್ಲಿದೆ ಅದ್ಭುತ  ಶಿಲ್ಪಕಲೆಗಳು
South of Ayodhya
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on: Jul 02, 2022 | 7:00 AM

Share

ಹಲವು ಬಾರಿ ಧರ್ಮಸ್ಥಳ ಶ್ರೀ ಮಂಜುನಾಥನ ದರ್ಶನ ಪಡೆದಿದ್ದರೂ ಸಹ ಅದೇ ದಾರಿಯಲ್ಲಿ ಸಾಗುವಾಗ ಸಿಗುವ ಶ್ರೀರಾಮನ ಕ್ಷೇತ್ರವನ್ನು ಬಸ್ಸಿನಿಂದಲೇ ನೋಡಿದ್ದು ಬಿಟ್ಟರೆ ಒಂದು ಭಾರಿಯೂ ಭೇಟಿ ನೀಡಿರಲಿಲ್ಲ. ಏನೋ ಅಚಾನಕ್ಕಾಗಿ ಗೆಳತಿಯೊಬ್ಬಳು ಶ್ರೀರಾಮನ ಕ್ಷೇತ್ರಕ್ಕೆ ಹೋಗುವುದಾಗಿ ಮಾತು ಪ್ರಸ್ತಾಪಿಸಿದಾಗ ನಾನು ಹೊರಟು ಸಿದ್ಧಳಾದೆ. ಚಿಕ್ಕಂದಿನಿಂದಲೂ ಆಂಜನೇಯನ ಬಗ್ಗೆ ಅಪಾರ ಭಕ್ತಿ, ಪ್ರೀತಿ ಇದ್ದ ನನಗೆ ಈ ದೇವಸ್ಥಾನಕ್ಕೆ ಹೋಗುವ ಮುನ್ನವೇ ಖುಷಿ ನೀಡಿತ್ತು. ಶ್ರೀರಾಮನ ಕ್ಷೇತ್ರ ತಲುಪಿದ್ದೆ ತಡ ಇಲ್ಲಿನ ವಾಸ್ತುಶಿಲ್ಪಗಳೇ ವಿಶೇಷವಾಗಿತ್ತು. ದೇವಾಲಯವನ್ನೇ ಸೊಂಡಿಲಿನಿಂದ ಎತ್ತಿ ಹಿಡಿದಂತೆ ನಿರ್ಮಾಣಗೊಂಡ ಆನೆಯ ಮೂರ್ತಿಗಳು ಕೆಂಪು ಮತ್ತು ಬಂಗಾರ ವರ್ಣದಿಂದ ಲೇಪಿತವಾದ ಇಲ್ಲಿನ ಗೋಪುರಗಳು ಕಣ್ಮನ ಸೆಳೆಯಿತು. ವಿಭಿನ್ನತೆ ಒಳಗೊಂಡಿರುವ ಈ ದೇವಾಲಯದ ವಿಶೇಷತೆಯನ್ನು ತಿಳಿದುಕೊಳ್ಳಬೇಕೆನಿಸಿತು. ಹಾಗೆ ತಿಳಿದುಕೊಂಡ ಒಂದಷ್ಟು ಮಾಹಿತಿಗಳು ಇಲ್ಲಿವೆ.

ದಕ್ಷಿಣದ ಅಯೋಧ್ಯೆ ಎಂದೇ ಕರೆಯಲ್ಪಡುವ ಶ್ರೀರಾಮ ಕ್ಷೇತ್ರ ಧರ್ಮಸ್ಥಳದಿಂದ ಸುಮಾರು ಮೂರ್ನಾಲ್ಕು ಕಿಲೋ ಮೀಟರ್ ದೂರದಲ್ಲಿದೆ. ಕನ್ಯಾಡಿಯ ನಿತ್ಯಾನಂದ ನಗರದಲ್ಲಿ ನಿರ್ಮಾಣಗೊಂಡ ಈ ದೇವಾಲಯವು ನೇತ್ರಾವತಿ ನದಿಯ ಸಮೀಪದ ಪುಣ್ಯಕ್ಷೇತ್ರವಾಗಿದ್ದು ಸಂಪೂರ್ಣವಾಗಿ ದಕ್ಷಿಣೋತ್ತರ ಶಿಲ್ಪಕಲೆಯನ್ನು ಇಲ್ಲಿ ಬಿಂಬಿಸಲಾಗಿದೆ. ದೇವಾಲಯದ ಹೊರ ಭಾಗಗಳಲ್ಲಿ ರಾಮಾಯಣದ ಕಥೆಗಳನ್ನು ಸಾರುವ ಕೆತ್ತನೆಗಳನ್ನು ಕೆತ್ತಲಾಗಿದ್ದು ಇಲ್ಲಿನ ಪ್ರತಿಯೊಂದು ಶಿಲ್ಪಕಲೆಯು ಕಣ್ಮನ ಸೆಳೆಯುತ್ತದೆ. ಸೀತಾನ್ವೇಷಣೆಯ ಸಂದರ್ಭದಲ್ಲಿ ಶ್ರೀರಾಮನು ಹೆಜ್ಜೆ ಇಟ್ಟಲ್ಲೆಲ್ಲಾ ಒಂದೊಂದು ದೇವಾಲಯಗಳನ್ನು ನಿರ್ಮಿಸಲಾಗಿದೆ ಎಂಬುದು ಪುರಾಣ ಕಥೆಗಳಲ್ಲಿ ಉಲ್ಲೇಖಗೊಂಡಿದೆ. ಹಾಗೆಯೇ ಕನ್ಯಾಡಿಯ ಈ ಪ್ರದೇಶದಲ್ಲಿ ಶ್ರೀರಾಮನು ವನವಾಸದ ಸಂದರ್ಭದಲ್ಲಿ ಬಂದಿದ್ದಾನೆಂದು ನಂಬಿಕೆ.

ಇದನ್ನು ಓದಿ : ನೃತ್ಯ ಕ್ಷೇತ್ರದಲ್ಲಿ ಬೆಳೆಯುವ ಮಕ್ಕಳಿಗೆ ಸ್ಪೂರ್ತಿ ಕಿರಣ್ ಮುರಳಿ

ಇದನ್ನೂ ಓದಿ
Image
International Yoga Day 2022: ಮಾನವೀಯತೆಗೆ ಭಾರತ ನೀಡಿದ ಕೊಡುಗೆಯೇ ಯೋಗ; ರಾಷ್ಟ್ರಪತಿ ರಾಮನಾಥ ಕೋವಿಂದ್ ಬಣ್ಣನೆ
Image
International Yoga Day 2022: ಗಾರ್ಡಿಯನ್ ರಿಂಗ್ ಮೂಲಕ ವಿವಿಧ ದೇಶಗಳ ಯೋಗ ಪ್ರಸಾರ; 5 ಪ್ರಮುಖ ಅಂಶಗಳು ಇಲ್ಲಿವೆ
Image
Thyroid Disease and Yoga: ಈ ಯೋಗಾಸನಗಳನ್ನು ಮಾಡಿದರೆ ಥೈರಾಯ್ಡ್ ಸಮಸ್ಯೆಗೆ ಪರಿಹಾರ ಸಿಗುತ್ತದೆ
Image
International Yoga Day 2022: ಯಾವ ರಾಶಿಯವರು ಯಾವ ಯೋಗಾಸನಗಳನ್ನು ಮಾಡಬೇಕು? ಇಲ್ಲಿದೆ ಮಾಹಿತಿ

ಈ ಆಲಯವನ್ನು ಶ್ರೀ ನಿತ್ಯಾನಂದ ಸ್ವಾಮಿಯವರ ಪರಮ ಶಿಷ್ಯ ಶ್ರೀಶ್ರೀಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಗಳು ಕಟ್ಟಿಸಿದ್ದಾರೆ ಎಂದು ಹೇಳಲಾಗುತ್ತದೆ. ಈ ದೇವಾಲಯವು ಮೂರು ಅಂತಸ್ತುಗಳಿಂದ ಕೂಡಿದ್ದು, ಒಳ ಪ್ರವೇಶಿಸಿದೊಡನೆ ಒಂದೇ ಸೂರಿನಡಿಯಲ್ಲಿ 36 ದೇವರುಗಳ ಗರ್ಭಗುಡಿಗಳನ್ನು ಕಾಣಬಹುದು. ದೇವಾಲಯದ ಪ್ರಮುಖ ಗರ್ಭಗುಡಿಯೊಳಗೆ ಶ್ರೀರಾಮ, ಸೀತೆ, ಆಂಜನೇಯ ಸ್ವಾಮಿಯನ್ನು ಪೂಜಿಸಲಾಗುತ್ತದೆ. ಇದಲ್ಲದೆ ನವದುರ್ಗೆಯರು ಹಾಗೂ ನವಗ್ರಹಗಳನ್ನು ಕೂಡ ಪೂಜಿಸಲಾಗುತ್ತದೆ. ಶಿರಡಿ ಸಾಯಿಬಾಬಾ, ಬ್ರಹ್ಮ, ನಾರಾಯಣ ಗುರು, ನಾಗ ,ಬೆಳ್ಳಿ ರಥಗಳು ಸೇರಿದಂತೆ ಅತ್ಯದ್ಭುತ ಶಿಲ್ಪಕಲಾ ಶೈಲಿಯಲ್ಲಿ ಭಕ್ತಾದಿಗಳಿಗೆ ಈ ದೇವಸ್ಥಾನ ಸ್ವಾಗತ ನೀಡುತ್ತದೆ.

ರಾಮಾಯಣದ ಕಥೆಗಳನ್ನು ಸಾರುವ ವಿವಿಧ ಶಿಲ್ಪಕಲೆಗಳ ಕೆತ್ತನೆಯ ಜೊತೆಗೆ ಜನರನ್ನು ಆಕರ್ಷಿಸುವ ಪುಣ್ಯಕ್ಷೇತ್ರವೇ ಕನ್ಯಾಡಿ ನಿತ್ಯಾನಂದ ನಗರದ ಶ್ರೀರಾಮ ಕ್ಷೇತ್ರ. 2007ರಲ್ಲಿ ಈ ಕ್ಷೇತ್ರದ ಬ್ರಹ್ಮ ಪ್ರತಿಷ್ಠಾ ಕಲೋತ್ಸವ ಅದ್ದೂರಿಯಾಗಿ ನಡೆಸಲಾಯಿತು. ವರ್ಷಂಪ್ರತಿ ಶ್ರೀ ರಾಮ ನವಮಿಯಂದು ಶ್ರೀರಾಮನಾಮ ಸಪ್ತಾಹ, ಭಜನೆ, ದೀಪಾಲಂಕಾರದಿಂದ ನೋಡುವುದೇ ಕಣ್ಣಿಗೊಂದು ಹಬ್ಬ. ಕುಟುಂಬ ಸಮೇತರಾಗಿ ಭೇಟಿ ಕೊಡಬಹುದಾದ ಶ್ರೀಮಂತ ಶಿಲ್ಪಕಲೆಯ ಪವಿತ್ರ ಕ್ಷೇತ್ರವೇ ಕನ್ಯಾಡಿ ಶ್ರೀ ರಾಮ ಕ್ಷೇತ್ರ.

ಅಕ್ಷತಾ ಕೆ ವರ್ಕಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ