AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kotigobba 3: ಕೋಟಿಗೊಬ್ಬ 3 ತಂಡದಿಂದ ಹೊರಬಿತ್ತು ಬಿಸಿಬಿಸಿ ಸುದ್ದಿ.. ಕಿಚ್ಚನ ಅಭಿಮಾನಿಗಳಿಗೆ ಸದ್ಯದಲ್ಲೇ ಸಿಹಿಯೂಟ

Kotigobba 3 Audio Launch: ಕೋಟಿಗೊಬ್ಬ 3 ಸಿನಿಮಾ ತಂಡಕ್ಕೂ ಮುನ್ನವೇ ಚಿತ್ರದ ಆಡಿಯೋ ರಿಲೀಸ್​ಗೆ ದಿನಾಂಕ ನಿಗದಿಪಡಿಸಿರುವ ಅಭಿಮಾನಿಗಳು ಮಾರ್ಚ್​ 28ರಂದು ಆಡಿಯೋ ಬಿಡುಗಡೆಯಾಗಲಿದೆ ಎಂದು ಹಂಚಿಕೊಳ್ಳುತ್ತಿದ್ದಾರೆ.

Kotigobba 3: ಕೋಟಿಗೊಬ್ಬ 3 ತಂಡದಿಂದ ಹೊರಬಿತ್ತು ಬಿಸಿಬಿಸಿ ಸುದ್ದಿ.. ಕಿಚ್ಚನ ಅಭಿಮಾನಿಗಳಿಗೆ ಸದ್ಯದಲ್ಲೇ ಸಿಹಿಯೂಟ
ಕೋಟಿಗೊಬ್ಬ 3
Skanda
| Edited By: ಸಾಧು ಶ್ರೀನಾಥ್​|

Updated on: Feb 04, 2021 | 12:47 PM

Share

ಕೊರೊನಾದಿಂದ ತಣ್ಣಗಾಗಿದ್ದ ಚಿತ್ರರಂಗದಲ್ಲಿ ಮತ್ತೆ ಚಟುವಟಿಕೆಗಳು ಆರಂಭವಾಗಿವೆ. ಒಂದರ ಹಿಂದೊಂದು ಹೊಸ ಸಿನಿಮಾಗಳು ತೆರೆಕಾಣಲು ಸಜ್ಜಾಗುತ್ತಿವೆ. ಇದೀಗ ಸುದೀಪ್​ ಅಭಿನಯದ ಬಹುನಿರೀಕ್ಷಿತ ಚಿತ್ರ ಕೋಟಿಗೊಬ್ಬ 3 ಕುರಿತಾದ ಬಿಸಿಬಿಸಿ ಸುದ್ದಿಯೊಂದು ಹೊರಬಿದ್ದಿದ್ದು, ಆಡಿಯೋ ರಿಲೀಸ್​ ಶೀಘ್ರದಲ್ಲೇ ಆಗಲಿದೆ ಎನ್ನುವ ವಿಚಾರವನ್ನು ಸುದೀಪ್ ಅಭಿಮಾನಿಗಳು ಹಂಚಿಕೊಂಡಿದ್ದಾರೆ.

ಮೊನ್ನೆಯಷ್ಟೇ ಕಿಚ್ಚ ಸುದೀಪ ಚಿತ್ರರಂಗಕ್ಕೆ ಕಾಲಿಟ್ಟು 25ವರ್ಷ ಪೂರೈಸಿದ ಸಂಭ್ರಮದಲ್ಲಿ ದುಬೈನಲ್ಲಿರುವ ವಿಶ್ವದ ಅತಿ ಎತ್ತರದ ಕಟ್ಟಡವಾದ ಬುರ್ಜ್​ ಖಲೀಫಾ ಮೇಲೆ ನಿಂತು ತಮ್ಮ ಹೊಸ ಸಿನಿಮಾ ವಿಕ್ರಾಂತ್​ ರೋಣ ಟೈಟಲ್​ ಅನಾವರಣಗೊಳಿಸಿದ್ದಾರೆ. ಈ ಮೂಲಕ ಇಡೀ ಭಾರತೀಯ ಚಿತ್ರರಂಗವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಅಭಿಮಾನಿಗಳನ್ನು ಹೊಂದಿರುವ ಸುದೀಪ್​ ಅವರ ಹೊಸ ಸಿನಿಮಾ ವಿಕ್ರಾಂತ್​ ರೋಣ ಭಾರತದ ಭಾಷೆಗಳಲ್ಲಷ್ಟೇ ಅಲ್ಲದೇ ವಿದೇಶಿ ಭಾಷೆಯಲ್ಲೂ ತೆರೆಕಾಣಲಿದೆ ಎನ್ನಲಾಗಿದೆ.

ಇದೀಗ ವಿಕ್ರಾಂತ್​ ರೋಣಕ್ಕೂ ಮುನ್ನ ತೆರೆಗಪ್ಪಳಿಸಲು ಸಜ್ಜಾಗಿರುವ ಕೋಟಿಗೊಬ್ಬ 3 ಸಿನಿಮಾ ಕುರಿತು ಸುದೀಪ್​ ಅಭಿಮಾನಿಗಳು ಬಹಳ ಉತ್ಸುಕರಾಗಿದ್ದಾರೆ. ಹೀಗಾಗಿ ಸಿನಿಮಾ ತಂಡಕ್ಕೂ ಮುನ್ನವೇ ಚಿತ್ರದ ಆಡಿಯೋ ರಿಲೀಸ್​ಗೆ ದಿನಾಂಕ ನಿಗದಿಪಡಿಸಿರುವ ಅಭಿಮಾನಿಗಳು ಮಾರ್ಚ್​ 28ರಂದು ಆಡಿಯೋ ಬಿಡುಗಡೆಯಾಗಲಿದೆ ಎಂದು ಹಂಚಿಕೊಳ್ಳುತ್ತಿದ್ದಾರೆ.

ಕೆಲ ಮೂಲಗಳ ಪ್ರಕಾರ ಕೋಟಿಗೊಬ್ಬ3 ಚಿತ್ರತಂಡ ಕೂಡ ಮಾರ್ಚ್​ 28ಕ್ಕೆ ಆಡಿಯೋ ಬಿಡುಗಡೆ ಮಾಡಲು ಸಜ್ಜಾಗಿದ್ದು, ಏಪ್ರಿಲ್​ 29ಕ್ಕೆ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಕಾಣಲಿದೆ ಎನ್ನಲಾಗುತ್ತಿದೆ. ಸದ್ಯ ಟ್ವಿಟರ್​ನಲ್ಲಿ #Kotigobba3audioonmarch28 #K3audioonmarch28 ಎಂಬ ಹ್ಯಾಶ್​ಟ್ಯಾಗ್​ಗಳು ಸಖತ್​ ಸದ್ದು ಮಾಡುತ್ತಿದ್ದು, ಸಿನಿಪ್ರೇಮಿಗಳ ಕುತೂಹಲ ಕೆರಳಿಸಿದೆ.

Vikrant Rona On Burj Khalifa ಬುರ್ಜ್ ಖಲೀಫಾ ಮೇಲೆ ರಾರಾಜಿಸಿದ ಕಿಚ್ಚ ಸುದೀಪ್ ಕಟೌಟ್!

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ