AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kotigobba 3: ಕೋಟಿಗೊಬ್ಬ 3 ತಂಡದಿಂದ ಹೊರಬಿತ್ತು ಬಿಸಿಬಿಸಿ ಸುದ್ದಿ.. ಕಿಚ್ಚನ ಅಭಿಮಾನಿಗಳಿಗೆ ಸದ್ಯದಲ್ಲೇ ಸಿಹಿಯೂಟ

Kotigobba 3 Audio Launch: ಕೋಟಿಗೊಬ್ಬ 3 ಸಿನಿಮಾ ತಂಡಕ್ಕೂ ಮುನ್ನವೇ ಚಿತ್ರದ ಆಡಿಯೋ ರಿಲೀಸ್​ಗೆ ದಿನಾಂಕ ನಿಗದಿಪಡಿಸಿರುವ ಅಭಿಮಾನಿಗಳು ಮಾರ್ಚ್​ 28ರಂದು ಆಡಿಯೋ ಬಿಡುಗಡೆಯಾಗಲಿದೆ ಎಂದು ಹಂಚಿಕೊಳ್ಳುತ್ತಿದ್ದಾರೆ.

Kotigobba 3: ಕೋಟಿಗೊಬ್ಬ 3 ತಂಡದಿಂದ ಹೊರಬಿತ್ತು ಬಿಸಿಬಿಸಿ ಸುದ್ದಿ.. ಕಿಚ್ಚನ ಅಭಿಮಾನಿಗಳಿಗೆ ಸದ್ಯದಲ್ಲೇ ಸಿಹಿಯೂಟ
ಕೋಟಿಗೊಬ್ಬ 3
Skanda
| Edited By: ಸಾಧು ಶ್ರೀನಾಥ್​|

Updated on: Feb 04, 2021 | 12:47 PM

Share

ಕೊರೊನಾದಿಂದ ತಣ್ಣಗಾಗಿದ್ದ ಚಿತ್ರರಂಗದಲ್ಲಿ ಮತ್ತೆ ಚಟುವಟಿಕೆಗಳು ಆರಂಭವಾಗಿವೆ. ಒಂದರ ಹಿಂದೊಂದು ಹೊಸ ಸಿನಿಮಾಗಳು ತೆರೆಕಾಣಲು ಸಜ್ಜಾಗುತ್ತಿವೆ. ಇದೀಗ ಸುದೀಪ್​ ಅಭಿನಯದ ಬಹುನಿರೀಕ್ಷಿತ ಚಿತ್ರ ಕೋಟಿಗೊಬ್ಬ 3 ಕುರಿತಾದ ಬಿಸಿಬಿಸಿ ಸುದ್ದಿಯೊಂದು ಹೊರಬಿದ್ದಿದ್ದು, ಆಡಿಯೋ ರಿಲೀಸ್​ ಶೀಘ್ರದಲ್ಲೇ ಆಗಲಿದೆ ಎನ್ನುವ ವಿಚಾರವನ್ನು ಸುದೀಪ್ ಅಭಿಮಾನಿಗಳು ಹಂಚಿಕೊಂಡಿದ್ದಾರೆ.

ಮೊನ್ನೆಯಷ್ಟೇ ಕಿಚ್ಚ ಸುದೀಪ ಚಿತ್ರರಂಗಕ್ಕೆ ಕಾಲಿಟ್ಟು 25ವರ್ಷ ಪೂರೈಸಿದ ಸಂಭ್ರಮದಲ್ಲಿ ದುಬೈನಲ್ಲಿರುವ ವಿಶ್ವದ ಅತಿ ಎತ್ತರದ ಕಟ್ಟಡವಾದ ಬುರ್ಜ್​ ಖಲೀಫಾ ಮೇಲೆ ನಿಂತು ತಮ್ಮ ಹೊಸ ಸಿನಿಮಾ ವಿಕ್ರಾಂತ್​ ರೋಣ ಟೈಟಲ್​ ಅನಾವರಣಗೊಳಿಸಿದ್ದಾರೆ. ಈ ಮೂಲಕ ಇಡೀ ಭಾರತೀಯ ಚಿತ್ರರಂಗವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಅಭಿಮಾನಿಗಳನ್ನು ಹೊಂದಿರುವ ಸುದೀಪ್​ ಅವರ ಹೊಸ ಸಿನಿಮಾ ವಿಕ್ರಾಂತ್​ ರೋಣ ಭಾರತದ ಭಾಷೆಗಳಲ್ಲಷ್ಟೇ ಅಲ್ಲದೇ ವಿದೇಶಿ ಭಾಷೆಯಲ್ಲೂ ತೆರೆಕಾಣಲಿದೆ ಎನ್ನಲಾಗಿದೆ.

ಇದೀಗ ವಿಕ್ರಾಂತ್​ ರೋಣಕ್ಕೂ ಮುನ್ನ ತೆರೆಗಪ್ಪಳಿಸಲು ಸಜ್ಜಾಗಿರುವ ಕೋಟಿಗೊಬ್ಬ 3 ಸಿನಿಮಾ ಕುರಿತು ಸುದೀಪ್​ ಅಭಿಮಾನಿಗಳು ಬಹಳ ಉತ್ಸುಕರಾಗಿದ್ದಾರೆ. ಹೀಗಾಗಿ ಸಿನಿಮಾ ತಂಡಕ್ಕೂ ಮುನ್ನವೇ ಚಿತ್ರದ ಆಡಿಯೋ ರಿಲೀಸ್​ಗೆ ದಿನಾಂಕ ನಿಗದಿಪಡಿಸಿರುವ ಅಭಿಮಾನಿಗಳು ಮಾರ್ಚ್​ 28ರಂದು ಆಡಿಯೋ ಬಿಡುಗಡೆಯಾಗಲಿದೆ ಎಂದು ಹಂಚಿಕೊಳ್ಳುತ್ತಿದ್ದಾರೆ.

ಕೆಲ ಮೂಲಗಳ ಪ್ರಕಾರ ಕೋಟಿಗೊಬ್ಬ3 ಚಿತ್ರತಂಡ ಕೂಡ ಮಾರ್ಚ್​ 28ಕ್ಕೆ ಆಡಿಯೋ ಬಿಡುಗಡೆ ಮಾಡಲು ಸಜ್ಜಾಗಿದ್ದು, ಏಪ್ರಿಲ್​ 29ಕ್ಕೆ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಕಾಣಲಿದೆ ಎನ್ನಲಾಗುತ್ತಿದೆ. ಸದ್ಯ ಟ್ವಿಟರ್​ನಲ್ಲಿ #Kotigobba3audioonmarch28 #K3audioonmarch28 ಎಂಬ ಹ್ಯಾಶ್​ಟ್ಯಾಗ್​ಗಳು ಸಖತ್​ ಸದ್ದು ಮಾಡುತ್ತಿದ್ದು, ಸಿನಿಪ್ರೇಮಿಗಳ ಕುತೂಹಲ ಕೆರಳಿಸಿದೆ.

Vikrant Rona On Burj Khalifa ಬುರ್ಜ್ ಖಲೀಫಾ ಮೇಲೆ ರಾರಾಜಿಸಿದ ಕಿಚ್ಚ ಸುದೀಪ್ ಕಟೌಟ್!

Follow Us
Skanda
Skanda
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್