AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Agricultural Credit: ಕೃಷಿ ಸಾಲದ ಗುರಿಯನ್ನು 22ರಿಂದ 25 ಲಕ್ಷ ಕೋಟಿ ರೂಗೆ ಹೆಚ್ಚಿಸುವ ಸಾಧ್ಯತೆ

Budget Expectations: ಮುಂಬರುವ ಹಣಕಾಸು ವರ್ಷಕ್ಕೆ 22ರಿಂದ 25 ಲಕ್ಷ ಕೋಟಿ ರೂ ಕೃಷಿ ಸಾಲಕ್ಕೆ ಸರ್ಕಾರ ಗುರಿ ಇಟ್ಟಿದ್ದು ಬಜೆಟ್​ನಲ್ಲಿ ಅದನ್ನು ಘೋಷಿಸಬಹುದು. ಪ್ರಸಕ್ತ ಹಣಕಾಸು ವರ್ಷದಲ್ಲಿ ಸರ್ಕಾರದ ಕೃಷಿ ಸಾಲದ ಟಾರ್ಗೆಟ್ 20 ಲಕ್ಷ ಕೋಟಿ ರೂ ಇದೆ. ಕಳೆದ 10 ವರ್ಷಗಳಿಂದ ಸರ್ಕಾರ ತಾನು ನಿರೀಕ್ಷಿಸಿದಕ್ಕಿಂತ ಹೆಚ್ಚೇ ಕೃಷಿ ಸಾಲ ವಿತರಣೆ ಆಗಿದೆ.

Agricultural Credit: ಕೃಷಿ ಸಾಲದ ಗುರಿಯನ್ನು 22ರಿಂದ 25 ಲಕ್ಷ ಕೋಟಿ ರೂಗೆ ಹೆಚ್ಚಿಸುವ ಸಾಧ್ಯತೆ
ಕೃಷಿ ಸಾಲ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 23, 2024 | 5:06 PM

Share

ನವದೆಹಲಿ, ಜನವರಿ 23: ಕೃಷಿಕರ ಆದಾಯವನ್ನು ದ್ವಿಗುಣಗೊಳಿಸುವ ಇರಾದೆಯಲ್ಲಿರುವ ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಕೃಷಿ ಸಾಲದ (Agricultural Credit Target) ಪ್ರಮಾಣ ಹೆಚ್ಚಿಸುವ ಆಲೋಚನೆಯಲ್ಲಿದೆ. ವರದಿ ಪ್ರಕಾರ ಫೆಬ್ರುವರಿ 1ರ ಬಜೆಟ್​ನಲ್ಲಿ ಕೃಷಿ ಸಾಲದ ಪ್ರಮಾಣವನ್ನು 25 ಲಕ್ಷ ಕೋಟಿ ರೂಗೆ ಹೆಚ್ಚಿಸಬಹುದು ಎಂದು ನಿರೀಕ್ಷಿಸಲಾಗಿದೆ. ಸದ್ಯ ಈ ಹಣಕಾಸು ವರ್ಷದಲ್ಲಿ (2023-24) ಕೃಷಿ ಸಾಲದ ಗುರಿ 20 ಲಕ್ಷ ಕೋಟಿ ರೂ ಇದೆ. ಮುಂಬರುವ ಹಣಕಾಸು ವರ್ಷಕ್ಕೆ 22ರಿಂದ 25 ಲಕ್ಷ ಕೋಟಿ ರೂ ಕೃಷಿ ಸಾಲಗಳಿಗೆ ಗುರಿ ಇಡುವ ಸಾಧ್ಯತೆ ಇದೆ ಎಂದು ಮೂಲಗಳನ್ನು ಉಲ್ಲೇಖಿಸಿ ನ್ಯೂಸ್18 ವರದಿ ಮಾಡಿದೆ.

ರೈತರಿಗೆ ನೀಡಲಾಗುವ ಸಾಲಕ್ಕೆ ಬಡ್ಡಿ ಎಷ್ಟು?

ಗ್ರಾಮೀಣ ಭಾಗದ ಬ್ಯಾಂಕುಗಳಲ್ಲಿ ಕಿರು ಅವಧಿಯ ಕೃಷಿ ಸಾಲಗಳಿಗೆ ಬಡ್ಡಿದರ 2 ಪ್ರತಿಶತದಷ್ಟು ಕಡಿಮೆ ಇರುತ್ತದೆ. ಶೇ. 7ರ ಬಡ್ಡಿದರದಲ್ಲಿ ರೈತರು 3 ಲಕ್ಷ ರೂವರೆಗೂ ಸಾಲ ಪಡೆಯಬಹುದು. ಸರಿಯಾದ ಸಮಯಕ್ಕೆ ಸಾಲ ಮರುಪಾವತಿ ಮಾಡಿದರೆ ವಾರ್ಷಿಕ ಬಡ್ಡಿಯಲ್ಲಿ ಇನ್ನಷ್ಟು 3 ಪ್ರತಿಶತದಷ್ಟು ಕಡಿತ ಮಾಡಲಾಗುತ್ತದೆ. ಆದರೆ, ದೀರ್ಘಾವಧಿ ಸಾಲಗಳಿಗೆ ಈ ಸೌಲಭ್ಯ ಇರುವುದಿಲ್ಲ. ಬ್ಯಾಂಕ್​ನ ಸಾಮಾನ್ಯ ಬಡ್ಡಿದರದಲ್ಲೇ ಸಾಲ ಪಡೆಯಬೇಕಾಗುತ್ತದೆ.

ಇದನ್ನೂ ಓದಿ: ಫೆಬ್ರವರಿ 1 ರಂದು ಬಜೆಟ್ ಮಂಡಿಸಲಿದ್ದಾರೆ ನಿರ್ಮಲಾ ಸೀತಾರಾಮನ್, ಏನಿದು ಮಧ್ಯಂತರ ಬಜೆಟ್?

ಸರ್ಕಾರದ ನಿರೀಕ್ಷೆಯಂತೆ ಸಾಲದ ವಿತರಣೆ

ಕಳೆದ 10 ವರ್ಷದಲ್ಲಿ ಸರ್ಕಾರ ಕೃಷಿ ಸಾಲಕ್ಕೆ ಇಟ್ಟಿರುವ ಗುರಿ ಬಹುತೇಕ ಈಡೇರಿದೆ. 2023-24ರ ಹಣಕಾಸು ವರ್ಷಕ್ಕೆ 20 ಲಕ್ಷ ಕೋಟಿ ರೂನಷ್ಟು ಸಾಲ ವಿತರಣೆಯ ಗುರಿ ಇಡಲಾಗಿತ್ತು. ಡಿಸೆಂಬರ್​ವರೆಗೆ, ಅಂದರೆ ಮೂರು ತಿಂಗಳು ಇರುವಾಗಲೇ 16.37 ಲಕ್ಷ ಕೋಟಿ ರೂನಷ್ಟು ಸಾಲ ವಿತರಣೆ ಆಗಿದೆ. ಅಂದರೆ ಶೇ. 82ರಷ್ಟು ಗುರಿ ತಲುಪಲಾಗಿದೆ. ಖಾಸಗಿ ಮತ್ತು ಸರ್ಕಾರಿ ಬ್ಯಾಂಕುಗಳೆರಡರಿಂದಲೂ ವಿತರಣೆ ಆದ ಕೃಷಿ ಸಾಲಗಳ ದತ್ತಾಂಶ ಇದು.

ಹಿಂದಿನ ಕೆಲ ವರ್ಷಗಳಲ್ಲಿ ಸರ್ಕಾರ ಮಾಡಿದ್ದ ಅಂದಾಜಿಗಿಂತಲೂ ಹೆಚ್ಚು ಕೃಷಿ ಸಾಲಗಳ ವಿತರಣೆ ಆಗಿರುವುದು ಗಮನಾರ್ಹ. ಉದಾಹರಣೆಗೆ, 2022-23ರ ಹಣಕಾಸು ವರ್ಷದಲ್ಲಿ ಸರ್ಕಾರ 18.50 ಲಕ್ಷ ಕೋಟಿ ರೂನಷ್ಟು ಕೃಷಿ ಸಾಲಗಳ ಗುರಿ ಇಟ್ಟುಕೊಂಡಿತ್ತು. ವಾಸ್ತವದಲ್ಲಿ ಆ ಹಣಕಾಸು ವರ್ಷ ವಿತರಣೆ ಆದ ಕೃಷಿ ಸಾಲಗಳ ಪ್ರಮಾಣ 21.55 ಲಕ್ಷ ಕೋಟಿ ರೂ. ಅಂದರೆ ಸರ್ಕಾರದ ಗುರಿಗಿಂತಲೂ 3 ಲಕ್ಷ ಕೋಟಿ ರೂ ಹೆಚ್ಚೇ ಸಾಲ ನಿಡಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ