AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Govt Insurance: ಆಯುಷ್ಮಾನ್ ಭಾರತ್ ಹೆಲ್ತ್ ಇನ್ಷೂರೆನ್ಸ್ ಸ್ಕೀಮ್, 10 ಲಕ್ಷ ರೂಗೆ ಕವರೇಜ್ ವಿಸ್ತರಣೆ; ಬಜೆಟ್​ನಲ್ಲಿ ಘೋಷಣೆ ಸಾಧ್ಯತೆ

Ayushman Bharat Health Insurance: ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಲ್ಲಿ ಇನ್ಷೂರೆನ್ಸ್ ಕವರೇಜ್ ಅನ್ನು ವರ್ಷಕ್ಕೆ 5 ಲಕ್ಷದಿಂದ 10 ಲಕ್ಷ ರೂಗೆ ಏರಿಸುವ ಸಾಧ್ಯತೆ ಇದೆ. ಹೆಲ್ತ್ ಇನ್ಷೂರೆನ್ಸ್ ಯೋಜನೆಯ ಫಲಾನುಭವಿಗಳ ಸಂಖ್ಯೆಯನ್ನು 50 ಕೋಟಿಯಿಂದ 100 ಕೋಟಿಗೆ ಹೆಚ್ಚಿಸುವ ಗುರಿ ಇದೆ. ಇನ್ಷೂರೆನ್ಸ್ ಕವರ್ ಮತ್ತು ಫಲಾನುಭವಿಗಳ ಸಂಖ್ಯೆ ಏರಿಕೆಯಿಂದ ಸರ್ಕಾರಕ್ಕೆ 12,000 ಕೋಟಿ ರೂನಷ್ಟು ಹೆಚ್ಚುವರಿ ಹೊರೆಯಾಗಬಹುದು.

Govt Insurance: ಆಯುಷ್ಮಾನ್ ಭಾರತ್ ಹೆಲ್ತ್ ಇನ್ಷೂರೆನ್ಸ್ ಸ್ಕೀಮ್, 10 ಲಕ್ಷ ರೂಗೆ ಕವರೇಜ್ ವಿಸ್ತರಣೆ; ಬಜೆಟ್​ನಲ್ಲಿ ಘೋಷಣೆ ಸಾಧ್ಯತೆ
ಆಯುಷ್ಮಾನ್ ಭಾರತ್ ಹೆಲ್ತ್ ಸ್ಕೀಮ್​
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jan 17, 2024 | 3:46 PM

Share

ನವದೆಹಲಿ, ಜನವರಿ 17: ಕ್ಯಾನ್ಸರ್, ಲಿವರ್ ಟ್ರಾನ್ಸ್​ಪ್ಲಾಂಟ್ ಇತ್ಯಾದಿಗೆ ವೈದ್ಯಕೀಯ ವೆಚ್ಚವೇ ಲಕ್ಷ ಲಕ್ಷ ರೂ ಆಗಬಹುದಾದ್ದರಿಂದ ಜನರಿಗೆ ಇಡೀ ಜೀವಮಾನದ ಉಳಿತಾಯ ಹಣ ಬಸಿದುಹೋಗಬಹುದು. ಇದನ್ನು ತಪ್ಪಿಸಲು ಸರ್ಕಾರ ಯೋಜಿಸಿದ್ದು, ಈ ನಿಟ್ಟಿನಲ್ಲಿ ಇನ್ಷೂರೆನ್ಸ್ ಕವರೇಜ್ ಮಿತಿಯನ್ನು (insurance cover per year) ಹೆಚ್ಚಿಸಲು ಹೊರಟಿದೆ. ವರದಿ ಪ್ರಕಾರ ಆಯುಷ್ಮಾನ್ ಭಾರತ್ ಹೆಲ್ತ್ ಸ್ಕೀಮ್​ನ ಅಡಿಯಲ್ಲಿ ಒದಗಿಸಲಾಗುವ ಇನ್ಷೂರೆನ್ಸ್ ಕವರ್ ಅನ್ನು ಎರಡು ಪಟ್ಟು ಹೆಚ್ಚಿಸುವ ಪ್ರಸ್ತಾಪ ಸರ್ಕಾರದ ಮುಂದಿದೆ. 5 ಲಕ್ಷ ರೂ ಇದ್ದ ವಿಮಾ ಮಿತಿಯನ್ನು 10 ಲಕ್ಷ ರೂಗೆ ಹೆಚ್ಚಿಸಬಹುದು. ಫೆಬ್ರುವರಿ 1ರಂದು ಮಂಡಿಲಾಗುವ ಮಧ್ಯಂತರ ಬಜೆಟ್​ನಲ್ಲೇ ವಿಮಾ ಕವರೇಜ್ ಮಿತಿ ಹೆಚ್ಚಳದ ಬಗ್ಗೆ ಘೋಷಣೆ ಆಗಬಹುದು ಎನ್ನಲಾಗುತ್ತಿದೆ.

ಆಶಾ ಕಾರ್ಯಕರ್ತೆಯರು, ಕಲ್ಲಿದ್ದಲೇತರ ಗಣಿ ಕಾರ್ಮಿಕರೂ ವಿಮಾ ವ್ಯಾಪ್ತಿಗೆ

ಆಯುಷ್ಮಾನ್ ಭಾರತ್ ಪಿಎಂ ಜನ್ ಆರೋಗ್ಯ ಯೋಜನೆ (AB PM JAY- Ayushman Bharat Pradhan Mantri Jan Arogya Yojana) ವ್ಯಾಪ್ತಿಗೆ ಬರುವ ಫಲಾನುಭವಿಗಳ ಸಂಖ್ಯೆಯನ್ನು ಎರಡು ಪಟ್ಟು ಹೆಚ್ಚಿಸಿ 100 ಕೋಟಿಗೆ ತರಲು ಕೇಂದ್ರ ಹಣಕಾಸು ಸಚಿವಾಲಯ ಯೋಜಿಸಿರುವ ಸುದ್ದಿ ಇದೆ.

ಇದನ್ನೂ ಓದಿ: Economy: ಭಾರತ ಮುಂದುವರಿದ ದೇಶವಾಗಲು ಖಾಸಗಿ ವಲಯದಿಂದ ಇನ್​ಫ್ರಾಸ್ಟ್ರಕ್ಚರ್​ನಲ್ಲಿ ಹೂಡಿಕೆ ಹೆಚ್ಚಬೇಕು; ಬಜೆಟ್​ನಲ್ಲಿ ನಿರೀಕ್ಷೆ ಏನು?

ವರದಿ ಪ್ರಕಾರ, ಮುಂದಿನ ಮೂರು ವರ್ಷದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿರುವ ಕೆಲಸಗಾರರು, ಕಲ್ಲಿದ್ದಲೇತರ ಗಣಿಗಳ ಕಾರ್ಮಿಕರು (Non-coal mining workers), ಆಶಾ ಕಾರ್ಯಕರ್ತೆಯರು ಹಾಗೂ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳನ್ನು ಆಯುಷ್ಮಾನ್ ಭಾರತ್ ಹೆಲ್ತ್ ಇನ್ಷೂರೆನ್ಸ್ ಸ್ಕೀಮ್ ವ್ಯಾಪ್ತಿಗೆ ತರುವ ಪ್ರಯತ್ನ ಮಾಡಬಹುದು.

ವರ್ಷವೊಂದಕ್ಕೆ ಒಂದು ಕುಟುಂಬಕ್ಕೆ ವಿಮಾ ಕವರೇಜ್ ಅನ್ನು 10 ಲಕ್ಷಕ್ಕೆ ಏರಿಸುವುದರಿಂದ ಹಾಗೂ ಯೋಜನೆಯ ಫಲಾನುಭವಿಗಳ ಸಂಖ್ಯೆಯನ್ನು 100 ಕೋಟಿಗೆ ಏರಿಸುವುದರಿಂದ ಕೇಂದ್ರ ಸರ್ಕಾರಕ್ಕೆ 12,076 ಕೋಟಿ ರೂಗಳಷ್ಟು ಹೆಚ್ಚುವರಿ ಹೊರೆ ಬೀಳಬಹುದು ಎಂದು ಅಂದಾಜಿಸಲಾಗಿದೆ.

2018ರಲ್ಲಿ ಆರಂಭವಾದ ಪಿಎಂ ಜನ್ ಆರೋಗ್ಯ ಯೋಜನೆ ಅಡಿಯಲ್ಲಿ 6.2 ಕೋಟಿಯಷ್ಟು ಆಸ್ಪತ್ರೆ ದಾಖಲಾತಿಗಳಾಗಿವೆ. ಒಟ್ಟು 79,157 ಕೋಟಿ ರೂನಷ್ಟು ಹಣ ಸಂದಾಯ ಮಾಡಲಾಗಿದೆ. ಕುತೂಹಲ ಎಂದರೆ, ಆಯುಷ್ಮಾನ್ ಭಾರತ್ ಹೆಲ್ತ್ ಇನ್ಷೂರೆನ್ಸ್ ಸ್ಕೀಮ್ ನೆರವಿಲ್ಲದೇ ಫಲಾನುಭವಿಗಳು ತಾವೇ ಸ್ವಂತವಾಗಿ ಚಿಕಿತ್ಸೆ ಮಾಡಿಕೊಂಡಿದ್ದರೆ ಎರಡು ಪಟ್ಟು ಹೆಚ್ಚು ಹಣ ತೆರಬೇಕಾಗಿರುತ್ತಂತೆ.

ಇದನ್ನೂ ಓದಿ: Interim Budget 2024: ಮೊಬೈಲ್ ಬಿಡಿಭಾಗಗಳಿಗೆ ಆಮದು ಸುಂಕ ಕಡಿಮೆ ಮಾಡುವ ಸಾಧ್ಯತೆ; ಆ್ಯಪಲ್​ನಂತಹ ಕಂಪನಿಗಳಿಗೆ ಅನುಕೂಲ

ಅಂದಹಾಗೆ, 2023-24ರ ಹಣಕಾಸು ವರ್ಷಕ್ಕೆ ಆಯುಷ್ಮಾನ್ ಭಾರತ್ ಯೋಜನೆಗೆ ಬಜೆಟ್​ನಲ್ಲಿ 7,200 ಕೋಟಿ ರೂ ನಿಯೋಜಿಸಲಾಗಿತ್ತು. ಈ ಬಾರಿ, ಅಂದರೆ 2024-25ರ ಹಣಕಾಸು ವರ್ಷಕ್ಕೆ ಬಜೆಟ್​ನಲ್ಲಿ 15,000 ಕೋಟಿ ರೂ ತೆಗೆದಿರಿಸುವ ಸಾಧ್ಯತೆ ಇದೆ.

ಇನ್ನಷ್ಟು ಬಜೆಟ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 3:41 pm, Wed, 17 January 24

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ