AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP Budget: ಬಿಬಿಎಂಪಿ 11,157.83 ಕೋಟಿ ಗಾತ್ರದ ಆತ್ಮನಿರ್ಭರ್ ಬಜೆಟ್; ಇದರ ಹೈಲೈಟ್ಸ್

2023 BBMP Budget Highlights: ಪ್ರವಾಹ ಪರಿಸ್ಥಿತಿಯಿಂದ ಯಾವುದೇ ದೊಡ್ಡ ಹಾನಿಯಾಗದಿರಲು ವಿಶ್ವ ಬ್ಯಾಂಕ್ ನೆರವಿನೊಂದಿಗೆ 3,000 ಕೋಟಿ ರೂ ಮೊತ್ತದ ಸಮಗ್ರ ಯೋಜನೆ ಸಿದ್ಧಪಡಿಸಿ 2025-26 ರಲ್ಲಿ ಯೋಜನೆ ಜಾರಿಗೊಳಿಸಲು ಗುರಿ ಇಡಲಾಗಿದೆ.

BBMP Budget: ಬಿಬಿಎಂಪಿ 11,157.83 ಕೋಟಿ ಗಾತ್ರದ ಆತ್ಮನಿರ್ಭರ್ ಬಜೆಟ್; ಇದರ ಹೈಲೈಟ್ಸ್
ಬಿಬಿಎಂಪಿ
ಸುಗ್ಗನಹಳ್ಳಿ ವಿಜಯಸಾರಥಿ
| Updated By: Ganapathi Sharma|

Updated on:Mar 02, 2023 | 6:51 PM

Share

ಬೆಂಗಳೂರು: ಚುನಾವಣೆ ಅತೀ ಸಮೀಪ ಇರುವ ಹೊತ್ತಿನಲ್ಲೇ ಬಿಬಿಎಂಪಿ 2023-24ರ ಬಜೆಟ್ (BBMP Budget 2023-24) ಮಂಡನೆಯಾಗುವ ಮೂಲಕ ಎಲ್ಲರ ಗಮನ ಸೆಳೆದಿದೆ. ಬಿಬಿಎಂಪಿಯ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಮ್ ರಾಯಪುರ್ ಇಂದು ಗುರುವಾರ 11,157.83 ಕೋಟಿ ರೂ ಗಾತ್ರದ ಬಜೆಟ್ ಮಂಡನೆ ಮಾಡಿದರು. ಮೂಲಸೌಕರ್ಯ ನಿರ್ಮಾಣಕ್ಕೆ ಈ ಬಜೆಟ್​ನಲ್ಲಿ ಹೆಚ್ಚು ಒತ್ತುಕೊಡಲಾಗಿದೆ. ಹಾಗೆಯೇ, ಆಸ್ತಿ ತೆರಿಗೆ ಪರಿಷ್ಕರಣೆ, ಬಿ ಖಾತೆ ವರ್ಗಾವಣೆ ಇತ್ಯಾದಿ ಕ್ರಮಗಳ ಮೂಲಕ ಆಡಳಿತದ ಖಜಾನೆ ತುಂಬುವುದಕ್ಕೆ ಗಮನ ಕೊಡಲಾಗಿದೆ.

ಪಾಲಿಕೆ‌ ಅಧಿಕಾರಿ ಸಿಬ್ಬಂದಿಯಲ್ಲಿ ಗುಣಾತ್ಮಕ ಪರಿವರ್ತನೆಯ ಮನೋಭಾವ ಬೆಳೆಸುವ ಸದುದ್ದೇಶದಿಂದ ಪ್ರತಿ ವರ್ಷ ನಾಡಪ್ರಭು ಕೆಂಪೇಗೌಡ ಆವಿಷ್ಕಾರ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದ್ದು, ಅದಕ್ಕೆ 2 ಲಕ್ಷ ರೂ. ಮೊತ್ತದ ಪುರಸ್ಕಾರ ನಿಗದಿ ಮಾಡಲಾಗಿದೆ. ಹಾಗೆಯೇ, ಬಿ ಖಾತೆ ಇರುವ ನಿವೇಶನಗಳನ್ನು ಎ ಖಾತೆಯಾಗಿ ಪರಿವರ್ತಿಸುವ ಕಾರ್ಯ ಈ ವರ್ಷ ಮಾಡುವುದಾಗಿ ಆಯವ್ಯಯದಲ್ಲಿ ಘೋಷಿಸಲಾಗಿದೆ. ಪ್ರವಾಹ ಪರಿಸ್ಥಿತಿಯಿಂದ ಯಾವುದೇ ದೊಡ್ಡ ಹಾನಿಯಾಗದಿರಲು ವಿಶ್ವ ಬ್ಯಾಂಕ್ ನೆರವಿನೊಂದಿಗೆ 3,000 ಕೋಟಿ ರೂ ಮೊತ್ತದ ಸಮಗ್ರ ಯೋಜನೆ ಸಿದ್ಧಪಡಿಸಿ 2025-25 ರಲ್ಲಿ ಯೋಜನೆ ಜಾರಿಗೊಳಿಸಲು ಗುರಿ ಇಡಲಾಗಿದೆ.

ಬಿಬಿಎಂಪಿ ಬಜೆಟ್ 2023-24 ಮುಖ್ಯಾಂಶಗಳು:

  • ಮೇಲ್ಸೇತುವೆ ಮತ್ತು ಕೆಳಸೇತುವೆಗಳ ನಿರ್ಮಾಣಕ್ಕಾಗಿ ಒಟ್ಟು 210 ಕೋಟಿ
  • ಯಲಹಂಕ ಮೇಲ್ಸೇತುವೆ ಗ್ರೇಡ್ ಸೆಪರೇಟರ್​​ಗೆ 60 ಕೋಟಿ ರೂ.
  • ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ವಿತರಣೆ ವೇಳೆ $2 ಲಕ್ಷ ಪುರಸ್ಕಾರ
  • ಹೂಡಿ ಜಂಕ್ಷನ್, ಐಟಿಪಿಎಲ್, ಬಿಗ್ ಬಜಾರ್ ಜಂಕ್ಷನ್, ಹೋಪ್ ಫಾರಂ ಜಂಕ್ಷನ್ ಮೇಲ್ಸೇತುವೆ ನಿರ್ಮಾಣಕ್ಕೆ 124 ಕೋಟಿ ರೂ
  • ಮಿನರ್ವ ಜಂಕ್ಷನ್ ಗ್ರೇಡ್ ಸೆಪರೇಟರ್​​ಗೆ 137 ಕೋಟಿ ರೂಪಾಯಿ
  • ಹಳೆ ಮದರಾಸು ರಸ್ತೆಯ ಸುರಂಜನ್ ದಾಸ್ ಜಂಕ್ಷನ್ ಮೇಲ್ಸೇತುವೆ ನಿರ್ಮಾಣಕ್ಕೆ 104 ಕೋಟಿ
  • ಕೊಳಗೇರಿ ಪ್ರದೇಶಗಳ ಅಭಿವೃದ್ಧಿಗೆ 80 ಕೋಟಿ ರೂ. ಮೀಸಲು
  • ಜನವಸತಿ ಪ್ರದೇಶಗಳಲ್ಲಿ 10 ಹೊಸ ಸಿಟಿ ಪ್ಲಾಜಾಗಳ ನಿರ್ಮಾಣ
  • ಪ್ಲಾಜಾಗಳಲ್ಲಿ ಕಾರಂಜಿ, ಆಟದ ಸ್ಥಳಗಳು, ಆಹಾರ ಮಳಿಗೆ ನಿರ್ಮಾಣ
  • ಒತ್ತುವರಿ ತೆರವುಗೊಳಿಸಲು ಪ್ರತಿ ವಲಯಕ್ಕೆ 1 ಕೋಟಿ ರೂಪಾಯಿ
  • ಅನಧಿಕೃತ ಕಟ್ಟಡ ತೆರವುಗೊಳಿಸಲು 10 ಕೋಟಿ ರೂ. ಮೀಸಲು
  • ಕಸಾಯಿಖಾನೆ ನಿರ್ವಹಣೆಗಾಗಿ 1 ಕೋಟಿ ರಪಾಯಿ ಮೀಸಲು
  • ಬೀದಿ ವ್ಯಾಪಾರಿಗಳ ವಲಯಗಳಿಗಾಗಿ 25 ಕೋಟಿ ರೂಪಾಯಿ
  • ಮೇಲ್ಸೇತುವೆ, ಕೆಳಸೇತುವೆಗಳ ನಿರ್ಮಾಣಕ್ಕಾಗಿ 210 ಕೋಟಿ ರೂ.
  • ಬೀದಿ ವ್ಯಾಪಾರಿಗಳ ವಲಯಗಳಿಗಾಗಿ 25 ಕೋಟಿ
  • ಬೀದಿ ಮರಗಳ ನೆಡುವಿಕೆಗೆ ಮತ್ತು ನಿರ್ವಹಣೆಗಾಗಿ 40 ಕೋಟಿ ರೂಪಾಯಿ ಮೀಸಲು
  • ಬಿ ಖಾತೆ ನಿರ್ವೇಶನಗಳನ್ನ ಕ್ರಮಬದ್ಧಗೊಳಿಸಿ ಎ ಖಾತೆ ನೀಡುವ ಯೋಜನೆ ಈ ವರ್ಷವೇ ಆರಂಭ
  • ರಸ್ತಡ ಚರಂಡಿ, ಪಾದಚಾರಿ ಮಾರ್ಗ ರಿಪೇರಿ ಹಾಗೂ ನಿರ್ವಹಣೆಗೆ 243 ವಾರ್ಡ್ ಗಳಿಗೂ ತಲಾ 30 ಲಕ್ಷ
  • ಈಗಾಗಲೇ ನಗರದಲ್ಲಿ ಇರುವ 42 ಮೇಲ್ಸೇತುವೆ, 28 ಕೆಳಸೇತುವೆಗಳ ನಿರ್ವಹಣೆಗೆ 20 ಕೋಟಿ
  • ರಸ್ತೆ ಗುಂಡಿ ಮುಚ್ಚುವಿಕೆಗೆ ತಲಾ 15 ಲಕ್ಷ
  • ಪಾದಚಾರಿ ಮಾರ್ಗ ನಿರ್ವಹಣೆಗೆ ತಲಾ 25 ಲಕ್ಷ
  • ಬೆಂಗಳೂರಿನಲ್ಲಿ 180 ಕೋಟಿ ವೆಚ್ಚದಲ್ಲಿ ಕೆಂಪಾಂಬುದಿಕೆರೆ- ಬುಲ್ ಟೆಂಪಲ್ ರಸ್ತಡ ಪರಿಸರ, ಸ್ಯಾಂಕಿ ಕೆರೆ – ಕಾಡು ಮಲ್ಲೇಶ್ವರ ದೇಗುಲದ ಪರಿಸರ ಹಾಗೂ ಹಲಸೂರು ಕೆರೆ + ಸೋಮೇಶ್ವರ ದೇಗುಲದ ಪರಿಸರ ಗಳನ್ನು ಪ್ರವಾಸಿ ಕಾರಿಡಾರ್ ಗಳಾಗಿ ಅಭಿವೃದ್ಧಿ
  • 50 ಕೋಟಿ ವೆಚ್ಚದಲ್ಲಿ 10 ಹೊಸ ಸಿಟಿ ಪ್ಲಾಜಾ ಗಳನ್ನು ಜನವಸತಿ ಪ್ರದೇಶಗಳಲ್ಲಿ ನಿರ್ಮಾಣ
  • ಪ್ಲಾಜಾಗಳಲ್ಲಿ ಕಾರಂಜಿ, ಆಟದ ಸ್ಥಳಗಳು, ಆಹಾರ ಮಳಿಗೆಗಳು ನಿರ್ಮಾಣ
  • 209 ಕೋಟಿ ವೆಚ್ಚದಲ್ಲಿ ಸ್ಥಗಿತಗೊಂಡಿರುವ 4 ತ್ಯಾಜ್ಯ ಶೇಖರಣಾ ಕೇಂದ್ರಗಳಲ್ಲಿ ಜೈವಿಕ‌ ಗಣಿಗಾರಿಕೆ ಮಾಡಿ 22 ಲಕ್ಷ
  • ಮೆಟ್ರಿಕ್ ಟನ್ ತ್ಯಾಜ್ಉ ಕರಗಿಸುವುದು
  • ಮನುಷ್ಯ – ಪ್ರಾಣಿ ಸಮನ್ವಿತ ರೋಗ ನಿಯಂತ್ರಣಕ್ಕೆ 5 ಕೋಟಿ ವೆಚ್ಚದಲ್ಲಿ ಒಂದೇ ಆರೋಗ್ಯ ಯೋಜನೆ ಅಡಿ ಹೈಟೆಕದ ಲ್ಯಾಬೋರೇಟರಿ ಹಾಗೂ ಮೆಟ್ರೋಪಾಲಿಟನ್ ನಿಗಾ ಕೇಂದ್ರ
  • ಒತ್ತುವರಿ ತೆರವುಗೊಳಿಸಲು ವಲಯಕ್ಕೆ 1 ಕೋಟಿಯಂತೆ ಒಟ್ಟು 8 ಕೋಟಿ
  • ಅನಧಿಕೃತ ಕಟ್ಟಡ ತೆರವುಗೊಳಿಸಲು 10 ಕೋಟಿ
  • ಕಸಾಯಿಖಾನೆಗಳ ನಿರ್ವಹಣೆಗಾಗಿ 1 ಕೋಟಿ
  • ಆಡಳಿತಾಧಿಕಾರಿಗಳ ವಿವೇಚನೆಗೆ 100 ಕೋಟಿ
  • ಮುಖ್ಯ ಆಯುಕ್ತರ ವಿವೇಚನೆಗೆ 50 ಕೋಟಿ
  • ಬೆಂಗಳೂರು ಉಸ್ತುವಾರಿ ಮಂತ್ರಿಗಳ ವಿವೇಚನೆಗೆ250 ಕೋಟಿ ಮೀಸಲು.
  • ಬೆಂಗಳೂರು ಘನ ತ್ಯಾಜ್ಯ ನಿರ್ವಹಣೆಗೆ 700 ಕೋಟಿ ಸಹಾಯನುದಾನ
  • ಬೀದಿ ನಾಯಿಗಳ ನಿರ್ವಹಣೆಗೆ 20 ಕೋಟಿ ಮೀಸಲು
  • ಇಂದಿರಾ ಕ್ಯಾಂಟೀನ್​ಗೆ 50 ಕೋಟಿ ಮೀಸಲು
  • ಮರಗಳ ಗಣತಿಗಾಗಿ 4 ಕೋಟಿ
  • ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಶೂ ನೀಡಲು 24 ಕೋಟಿ

Published On - 2:46 pm, Thu, 2 March 23

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​