AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2022: ಹೊಸ ಆರ್ಥಿಕ ವರ್ಷದಿಂದ ಯಾವುದು ಅಗ್ಗ ಹಾಗೂ ಯಾವುದು ದುಬಾರಿ?

ಕೇಂದ್ರ ಬಜೆಟ್​ 2022 ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ಏಪ್ರಿಲ್ 1ರ ಹೊಸ ಹಣಕಾಸು ವರ್ಷದಿಂದ ಯಾವ ಉತ್ಪನ್ನ ಅಗ್ಗವಾಗಲಿದೆ ಹಾಗೂ ಯಾವುದು ದುಬಾರಿ ಎಂಬ ಮಾಹಿತಿ ಇಲ್ಲಿದೆ.

Budget 2022: ಹೊಸ ಆರ್ಥಿಕ ವರ್ಷದಿಂದ ಯಾವುದು ಅಗ್ಗ ಹಾಗೂ ಯಾವುದು ದುಬಾರಿ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Feb 01, 2022 | 2:13 PM

Share

ಏಪ್ರಿಲ್ 1, 2022ರಿಂದ ಪ್ರಾರಂಭ ಆಗುವ ಹಣಕಾಸು ವರ್ಷದ ಕೇಂದ್ರ ಬಜೆಟ್ (Budget 2022)​ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. 2022- 2023ರ ಬಜೆಟ್‌ನಲ್ಲಿ ಏಷ್ಯಾದ ಮೂರನೇ ಅತಿದೊಡ್ಡ ಆರ್ಥಿಕತೆಯಾದ ಭಾರತವು ಕೊರೊನಾ ಕುಸಿತದಿಂದ ಹೊರಹೊಮ್ಮುವುದರಿಂದ ಸಾರ್ವಜನಿಕ ಹೂಡಿಕೆಯ ಮೂಲಕ ಆರ್ಥಿಕ ಬೆಳವಣಿಗೆಗೆ ಅಡಿಪಾಯ ಹಾಕುತ್ತದೆ ಎಂದು ಹಣಕಾಸು ಸಚಿವರು ಹೇಳಿದ್ದರಿಂದ ಮೂಲಸೌಕರ್ಯವು ನರೇಂದ್ರ ಮೋದಿ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. 2022-23ರ ಕೇಂದ್ರ ಬಜೆಟ್‌ನಲ್ಲಿ ಹಣಕಾಸು ಸಚಿವರು ಪ್ರಸ್ತಾಪಿಸಿದಂತೆ, ಮೊಬೈಲ್ ಫೋನ್‌ಗಳು ಮತ್ತು ಮೊಬೈಲ್ ಫೋನ್ ಚಾರ್ಜರ್‌ಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಸಾಮಾನ್ಯವಾಗಿ ಬಳಸುವ ವಸ್ತುಗಳು ಅಗ್ಗವಾಗಲಿವೆ. ಕತ್ತರಿಸಿದ ಮತ್ತು ಪಾಲಿಶ್ ಮಾಡಿದ ವಜ್ರಗಳು ಹಾಗೂ ರತ್ನದ ಕಲ್ಲುಗಳ ಮೇಲಿನ ಸೀಮಾ ಸುಂಕವನ್ನು ಶೇ 5ಕ್ಕೆ ಇಳಿಸಲಾಗಿದೆ. ಆ ನಂತರದಲ್ಲಿ 350ಕ್ಕೂ ಹೆಚ್ಚು ಸೀಮಾ ಸುಂಕ ವಿನಾಯಿತಿಗಳನ್ನು ಹಂತಹಂತವಾಗಿ ತೆಗೆದುಹಾಕಲು ಪ್ರಸ್ತಾಪಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಭಾರತದಲ್ಲಿ ಉತ್ಪಾದನೆ ಆಗುವ ಕೃಷಿ ವಲಯಕ್ಕೆ ಸಂಬಂಧಿಸಿದ ಉಪಕರಣಗಳ ಮೇಲಿನ ವಿನಾಯಿತಿಯ ವಿಸ್ತರಣೆಯನ್ನು ಹಣಕಾಸು ಸಚಿವರು ಘೋಷಿಸಿದ್ದಾರೆ.

ಹಣಕಾಸು 2023ರಲ್ಲಿ ಅಗ್ಗದ ಮತ್ತು ದುಬಾರಿಯಾಗುವ ವಸ್ತುಗಳ ಪಟ್ಟಿ ಇಲ್ಲಿದೆ: ಅಗ್ಗ:

– ಬಟ್ಟೆ

-ಎಲೆಕ್ಟ್ರಾನಿಕ್ ವಸ್ತುಗಳು

– ಆಭರಣ ವಸ್ತುಗಳು

– ಕೈಗಡಿಯಾರಗಳು

– ಚರ್ಮದ ವಸ್ತುಗಳು

– ಕೃಷಿ ಉಪಕರಣಗಳು

– ರತ್ನದ ಕಲ್ಲುಗಳು ಮತ್ತು ವಜ್ರಗಳು

– ತದ್ರೂಪಿ ಅಥವಾ ಅನುಕರಣೆ ಆಭರಣ

– ಮೊಬೈಲ್ ಫೋನ್‌ಗಳು

– ಮೊಬೈಲ್ ಫೋನ್ ಚಾರ್ಜರ್‌ಗಳು

– ಪೆಟ್ರೋಲಿಯಂ ಉತ್ಪನ್ನಗಳಿಗೆ ಅಗತ್ಯವಿರುವ ರಾಸಾಯನಿಕಗಳು

– ಮೆಥನಾಲ್ ಸೇರಿದಂತೆ ಕೆಲವು ರಾಸಾಯನಿಕಗಳು ಮೇಲಿನ ಕಸ್ಟಮ್ ಸುಂಕಗಳು

– ಸ್ಟೀಲ್ ಸ್ಕ್ರ್ಯಾಪ್

ದುಬಾರಿ

– ಎಲ್ಲ ಆಮದು ವಸ್ತುಗಳು

– ಕ್ರಿಪ್ಟೋಕರೆನ್ಸಿಗಳಲ್ಲಿ ಹೂಡಿಕೆ

– ಛತ್ರಿಗಳ ಮೇಲಿನ ಸುಂಕ ಹೆಚ್ಚಳ

ಇದನ್ನೂ ಓದಿ: ECLGS: ಕೇಂದ್ರ ಬಜೆಟ್​ನಲ್ಲಿ ಎಮರ್ಜೆನ್ಸಿ ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್ 2023ರ ಮಾರ್ಚ್​ವರೆಗೆ ವಿಸ್ತರಣೆ

Published On - 1:46 pm, Tue, 1 February 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್