Budget 2022: ಫೆ 1ರಂದು ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣ: ಇಲ್ಲಿದೆ ಬಜೆಟ್ ಬಗ್ಗೆ ನೀವು ತಿಳಿಯಬೇಕಾದ ಮುಖ್ಯ ಮಾಹಿತಿ

Nirmala Sitharaman: ಸಂಸತ್ತಿನ ಬಜೆಟ್ ಅಧಿವೇಶನವು ಸೋಮವಾರದಿಂದ (ಜ 31) ಆರಂಭವಾಗಲಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಉಭಯ ಸದನಗಳ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಲಿದ್ದಾರೆ.

Budget 2022: ಫೆ 1ರಂದು ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣ: ಇಲ್ಲಿದೆ ಬಜೆಟ್ ಬಗ್ಗೆ ನೀವು ತಿಳಿಯಬೇಕಾದ ಮುಖ್ಯ ಮಾಹಿತಿ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jan 30, 2022 | 7:20 PM

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಮಂಗಳವಾರ (ಫೆ.1) ತಮ್ಮ ನಾಲ್ಕನೇ ಬಜೆಟ್ (Union Budget) ಮಂಡಿಸಲಿದ್ದಾರೆ. ಕೊರೊನಾ ಸೋಂಕಿನ 3ನೇ ಅಲೆಯ (Coronavirus 3rd Wave) ವಿರುದ್ಧ ದೇಶವು ಹೋರಾಡುತ್ತಿರುವ ಸಂಕಷ್ಟ ಪರಿಸ್ಥಿತಿಯಲ್ಲಿ ಈ ವರ್ಷದ ಬಜೆಟ್ ಮಂಡನೆಯಾಗಲಿದೆ. ಈ ಬಜೆಟ್​ನಿಂದ ತಮಗೆ ಏನಾದರೂ ರಿಯಾಯ್ತಿ ಅಥವಾ ಅನುಕೂಲಗಳು ಸಿಗಬಹುದು ಎಂದು ದೇಶದ ಎಲ್ಲ ನಾಗರಿಕರು ಕುತೂಹಲದಿಂದ (Budget Expectations) ಎದುರು ನೋಡುತ್ತಿದ್ದಾರೆ. ಸಂಸತ್ತಿನ ಬಜೆಟ್ ಅಧಿವೇಶನವು ಸೋಮವಾರದಿಂದ (ಜ 31) ಆರಂಭವಾಗಲಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಉಭಯ ಸದನಗಳ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಲಿದ್ದಾರೆ. ರಾಷ್ಟ್ರಪತಿ ಭಾಷಣದ ನಂತರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷಾ ವರದಿಯನ್ನು (Economic Survey) ಸಂಸತ್ತಿನಲ್ಲಿ ಮಂಡಿಸಲಿದ್ದಾರೆ.

ಪ್ರತಿವರ್ಷವೂ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಬಜೆಟ್ ಮಂಡನೆಗಳೂ ಮುನ್ನಾ ಆರ್ಥಿಕ ಸಮೀಕ್ಷೆ ಮಂಡಿಸುವುದು ವಾಡಿಕೆ. ಕಳೆದ ಒಂದು ವರ್ಷದ ಅವಧಿಯಲ್ಲಿ ದೇಶದ ಆರ್ಥಿಕ ವ್ಯವಸ್ಥೆಯ ಬೆಳವಣಿಗೆಗಳ ಮೇಲೆ ಈ ವರದಿಯು ಬೆಳಕು ಚೆಲ್ಲಲಿದೆ. ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಸವಾಲುಗಳು ಮತ್ತು ಅದಕ್ಕಿರುವ ಸಂಭಾವ್ಯ ಪರಿಹಾರಗಳ ಬಗ್ಗೆಯೂ ಈ ವರದಿ ಗಮನಸೆಳೆಯುತ್ತದೆ.

ಕಳೆದ ವರ್ಷದಂತೆ ಈ ವರ್ಷವೂ ಕೇಂದ್ರ ಬಜೆಟ್ ಕಾಗದ ರಹಿತವಾಗಿರುತ್ತದೆ. ಫೆ.7ರಂದು ಪ್ರಧಾನಿ ನರೇಂದ್ರ ಮೋದಿ ಬಜೆಟ್ ಬಗ್ಗೆ ಪ್ರತಿಕ್ರಿಯಿಸುವ ಸಾಧ್ಯತೆ ಇದೆ. ಬಜೆಟ್​ ಅನ್ನು ಸರ್ಕಾರದ ಪರವಾಗಿ ಪ್ರಧಾನಿ ಹೇಗೆ ಸಮರ್ಥಿಸಿಕೊಳ್ಳುತ್ತಾರೆ ಎನ್ನುವುದನ್ನು ಪ್ರತಿವರ್ಷವೂ ಕುತೂಹಲದಿಂದ ಎದುರುನೋಡಲಾಗುತ್ತದೆ. ಇದರ ಜೊತೆಗೆ ಅಧಿವೇಶನದಲ್ಲಿ ಪ್ರತಿಪಕ್ಷಗಳ ವರ್ತನೆಯೂ ಸುದ್ದಿಯಾಗುತ್ತದೆ. ರೈತರ ಸಮಸ್ಯೆಗಳು, ಪೆಗಾಸಸ್ ಸ್ಪೈವೇರ್ ಮೂಲಕ ನಡೆದ ಬೇಹುಗಾರಿಕೆ, ಚೀನಾ ಅತಿಕ್ರಮಣದಂಥ ವಿಷಯಗಳನ್ನು ಮುಂದಿರಿಸಿಕೊಂಡು ಸರ್ಕಾರವನ್ನು ಹಣಿಯಲು ವಿರೋಧ ಪಕ್ಷಗಳು ಸಿದ್ಧತೆ ನಡೆಸಿವೆ. ಪಂಚ ರಾಜ್ಯಗಳ ಚುನಾವಣೆಯು ಇದೇ ಅವಧಿಯಲ್ಲಿ ನಡೆಯಲಿರುವುದು ಬಜೆಟ್ ಬಗ್ಗೆ ನಿರೀಕ್ಷೆಗಳು ಹೆಚ್ಚಾಗಲು ಮತ್ತೊಂದು ಮುಖ್ಯ ಕಾರಣ ಎನಿಸಿದೆ.

ಕೇಂದ್ರ ಬಜೆಟ್ (Budget 2022-2023) ಮಂಡನೆ ಯಾವಾಗ? ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ (ಫೆ.1) ಬೆಳಿಗ್ಗೆ 11 ಗಂಟೆಗೆ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನದ ಮೊದಲಾರ್ಧವು ಫೆ.2ರಿಂದ 11ರವರೆಗೆ ನಡೆಯಲಿದೆ. ಅಲ್ಲಿಂದಾಚೆಗೆ ಸುಮಾರು ಒಂದು ತಿಂಗಳ ಅವಧಿ ವಿರಾಮ ಇರುತ್ತದೆ. ಅಧಿವೇಶನದ ದ್ವಿತೀಯಾರ್ಧವು ಮಾರ್ಚ್ 14ರಂದು ಆರಂಭವಾಗಲಿದ್ದು ಏಪ್ರಿಲ್ 8ಕ್ಕೆ ಮುಕ್ತಾಯವಾಗಲಿದೆ.

ಬಜೆಟ್ ಅಧಿವೇಶನ ಹೇಗೆ ನಡೆಯುತ್ತದೆ? ಒಂದು ದಿನದ ಪ್ರತ್ಯೇಕ ಅವಧಿಯಲ್ಲಿ ಸಂಸತ್ತಿನ ಎರಡೂ ಸದನಗಳು ಸಭೆ ಸೇರಲಿವೆ. ದಿನದ ಮೊದಲಾರ್ಧದಲ್ಲಿ ರಾಜ್ಯಸಭೆಯ ಅಧಿವೇಶನ ನಡೆದರೆ, ದ್ವಿತೀಯಾರ್ಧದಲ್ಲಿ ಲೋಕಸಭೆಯ ಅಧಿವೇಶನ ನಡೆಯಲಿದೆ. ಕೊವಿಡ್-19 ಶಿಷ್ಟಾಚಾರ ಪಾಲನೆಯಾಗಬೇಕು ಎನ್ನುವ ಉದ್ದೇಶದಿಂದ ಈ ರೀತಿಯ ನಿಯಮ ಜಾರಿಗೊಳಿಸಲಾಗಿದೆ. ಒಟ್ಟಾರೆ ಬಜೆಟ್​ ಅಧಿವೇಶನದಲ್ಲಿ 29 ಕಲಾಪಗಳು ನಡೆಯಲಿವೆ. ಪ್ರತಿದಿನ ವಾಡಿಕೆಗಿಂತ ಒಂದು ತಾಸು ಕಡಿಮೆ ಸದನಗಳು ಕಾರ್ಯನಿರ್ವಹಿಸಲಿವೆ. ರಾಜ್ಯಸಭೆಯಲ್ಲಿ ಶೂನ್ಯವೇಳೆಯ ಕಲಾಪವನ್ನು 30 ನಿಮಿಷಗಳಿಗೆ ಸೀಮಿತಗೊಳಿಸಲು ನಿರ್ಧರಿಸಲಾಗಿದೆ. ಮೊದಲ ಹಂತದ ಅಧಿವೇಶನದಲ್ಲಿ 10 ಮತ್ತು 2ನೇ ಹಂತದಲ್ಲಿ 19 ಕಲಾಪಗಳನ್ನು ನಿಗದಿ ಮಾಡಲಾಗಿದೆ. ಒಟ್ಟಾರೆ ಸುಮಾರು 80 ತಾಸು ಕಲಾಪ ನಡೆಯಲಿದೆ.

ಬಜೆಟ್ ಭಾಷಣದ ಅವಧಿ ಎಷ್ಟು? ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸುದೀರ್ಘ ಅವಧಿಯ ಬಜೆಟ್ ಭಾಷಣಗಳನ್ನು ಮಾಡಲು ಹೆಸರುವಾಸಿಯಾದವರು. 2019ರಲ್ಲಿ ಅವರು ದಾಖಲೆ ಅವಧಿಯ ಭಾಷಣ ಮಾಡಿದ್ದರು. 135 ನಿಮಿಷಗಳ ಈ ಭಾಷಣ ಸ್ವತಂತ್ರ ಭಾರತದ ಇತಿಹಾಸದಲ್ಲಿಯೇ ಅತ್ಯಂತ ಸುದೀರ್ಘವಾದುದು ಎಂದು ಹೆಸರುವಾಸಿಯಾಗಿತ್ತು. 2020ರಲ್ಲಿ ಅವರು ತಮ್ಮದೇ ದಾಖಲೆ ಮುರಿದರು. 162 ನಿಮಿಷಗಳ ಭಾಷಣ ಮಾಡಿದ್ದರು. ಈ ವರ್ಷವೂ ಸುದೀರ್ಘ ಭಾಷಣ ಇರಬಹುದು ಎಂಬ ನಿರೀಕ್ಷೆಗಳು ವ್ಯಕ್ತವಾಗಿವೆ.

ಇದನ್ನೂ ಓದಿ: ಬಜೆಟ್ 2022: ಕಾಗದರಹಿತ ಬಜೆಟ್ ಮಂಡನೆಗೆ ನಿರ್ಮಲಾ ಸೀತಾರಾಮನ್ ಸಿದ್ಧ; ಇಲ್ಲಿದೆ ಮಾಹಿತಿ ಇದನ್ನೂ ಓದಿ: ರಷ್ಯಾ-ಉಕ್ರೇನ್ ಸಂಘರ್ಷ: ತೈಲ ಬೆಲೆಗಳ ಏರಿಕೆ, ಬಜೆಟ್ ಮತ್ತು ಹಣದುಬ್ಬರದ ಮೇಲೆ ಹೇಗೆ ಪ್ರಭಾವ ಬೀರಲಿದೆ?

Published On - 7:19 pm, Sun, 30 January 22

ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್