AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2023: ಭಾರತದ ಅಮೃತ ಕಾಲಕ್ಕೆ ಬೇಕಾದ ಎಲ್ಲ ಸೌಕರ್ಯ ಒದಗಿಸುವ ಬಜೆಟ್ – ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಲ್ಹಾದ್ ಜೋಶಿ ಬಣ್ಣನೆ

Azadi ka Amrit Mahotsav time: ಇಂದು ಮಂಡಿಸಿರುವ ಕೇಂದ್ರ ಬಜೆಟ್ ಭಾರತದ ಅಮೃತ ಕಾಲಕ್ಕೆ ತಕ್ಕಂತಿದೆ ಎಂದು ಕೇಂದ್ರ ಸಂಸದ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಬಣ್ಣಿಸಿದ್ದಾರೆ.

Budget 2023: ಭಾರತದ ಅಮೃತ ಕಾಲಕ್ಕೆ ಬೇಕಾದ ಎಲ್ಲ ಸೌಕರ್ಯ ಒದಗಿಸುವ ಬಜೆಟ್ - ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಲ್ಹಾದ್ ಜೋಶಿ ಬಣ್ಣನೆ
ಭಾರತದ ಅಮೃತ ಕಾಲಕ್ಕೆ ಬೇಕಾದ ಬಜೆಟ್ - ಪ್ರಲ್ಹಾದ್ ಜೋಶಿ ಬಣ್ಣನೆ
TV9 Web
| Updated By: ಸಾಧು ಶ್ರೀನಾಥ್​|

Updated on:Feb 01, 2023 | 8:52 PM

Share

ನವದೆಹಲಿ : ಇಂದು ಮಂಡಿಸಿರುವ ಕೇಂದ್ರ ಬಜೆಟ್ ಭಾರತದ ಅಮೃತ ಕಾಲಕ್ಕೆ (Azadi ka Amrit Mahotsav time) ತಕ್ಕಂತಿದೆ ಎಂದು ಕೇಂದ್ರ ಸಂಸದ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಬಣ್ಣಿಸಿದ್ದಾರೆ. ನವದೆಹಲಿಯಲ್ಲಿಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು ಸಂಭಾವ್ಯ ತೆರಿಗೆಯ ಮಿತಿಯನ್ನು ವಿಸ್ತರಿಸುವ ಮೂಲಕ ದೇಶದಲ್ಲಿರುವ ಸಣ್ಣ ಹಾಗೂ ಮಧ್ಯಮ ವರ್ಗದ ಉದ್ಯಮಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರಕಾರ ವಿಶೇಷವಾಗಿ ಕಾಳಜಿ ವಹಿಸಿದೆ ಎಂದು ಪ್ರಲ್ಹಾದ ಜೋಶಿಯವರು ಸುದ್ದಿಗೋಷ್ಟಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.

ವಿಶೇಷವಾಗಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿ ಅನುದಾನ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ವಿತ್ತ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮ್ ಅವರು ಹಾಗೂ ಜಲ ಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸಿದರು‌. ಈ ಅನುದಾನವು ಯೋಜನೆಯ ಅನುಷ್ಠಾನಕ್ಕೆ ಬಲ ನೀಡಲಿದ್ದು, ಮಧ್ಯ ಕರ್ನಾಟಕ ಭಾಗದ ಬರಪೀಡಿತ ಪ್ರದೇಶಗಳ ನೀರಿನ ಸಮಸ್ಯೆಯನ್ನು ಬಗೆಹರಿಸಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲಾಗಿದ್ದು, 5,300 ಕೋಟಿ ರೂ. ಹಣವನ್ನು ಮೀಸಲಿಡಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿದ್ದರಿಂದ 16,000 ಕೋಟಿ ರೂ. ಈ ಯೋಜನೆಗೆ ಲಭ್ಯವಾಗಲಿದೆ. ಯೋಜನೆಯಿಂದ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳ ಸುಮಾರು 2.25 ಲಕ್ಷ ಹೆಕ್ಟೇರ್‌ಗೆ ಸುಮಾರು 19 ಟಿಎಂಸಿ ಅಡಿ ನೀರಾವರಿ ಒದಗಿಸುತ್ತದೆ. ವಾಣಿ ವಿಲಾಸ ಜಲಾಶಯದ ಸಾಮರ್ಥ್ಯವನ್ನು ಹೆಚ್ಚಿಸುವುದರೊಂದಿಗೆ 10.8 ಟಿಎಂಸಿ ಅಡಿ ನೀರನ್ನು ಬಳಸಿ 350 ಕ್ಕೂ ಹೆಚ್ಚು ಟ್ಯಾಂಕ್‌ಗಳನ್ನು ತುಂಬಿಸಲು ಯೋಜಿಸಲಾಗಿದೆ ಎಂದರು‌.

ಇನ್ನು ಏಕಲವ್ಯ ಮಾದರಿ ವಸತಿ‌ ಶಾಲೆಗಳ ಮೂಲಕ 3.5 ಲಕ್ಷ ವಿದ್ಯಾರ್ಥಿಗಳಿಗೆ ಉಪಯೋಗವಾಗುವಂತೆ 38,800 ಶಿಕ್ಷಕರನ್ನು ನೇಮಿಸಲು ಮುಂದಾಗಿರುವ ಬಗ್ಗೆಯೂ ಹರ್ಷ ವ್ಯಕ್ತಪಡಿಸಿದ ಪ್ರಲ್ಹಾದ ಜೋಶಿಯವರು, “ದೇಶದಲ್ಲಿ ಇರುವ ಬುಡಕಟ್ಟು ಜನಾಂಗದ ಮಕ್ಕಳ ವಿದ್ಯಾಭ್ಯಾಸವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರಕಾರವು ಬಜೆಟ್ ಮಂಡನೆಯಲ್ಲಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ ಎಂದು ಸಂತಸ ವ್ಯಕ್ತಪಡಿಸಿದರು. ಏಕಲವ್ಯ ಮಾದರಿ ವಸತಿ‌ ಶಾಲೆಗಳ ಮೂಲಕ 3.5 ಲಕ್ಷ ವಿದ್ಯಾರ್ಥಿಗಳಿಗೆ ಉಪಯೋಗವಾಗಲಿದೆ. ದೇಶದ ಕಟ್ಟಕಡೆಯ ಜನರಿಗೂ ಕೂಡ ಶಿಕ್ಷಣ ಸೌಲಭ್ಯ ಒದಗಿಸಿ ಸಾಮಾನ್ಯ ಜನರ ಜೀವನವನ್ನು ಉತ್ತಮವಾಗಿಸಲು ಶ್ರಮಿಸುತ್ತಿರುವ ಪ್ರಧಾನ ಮಂತ್ರಿ ಮೋದಿಯವರ ನೇತೃತ್ವದ ಕೇಂದ್ರ ಸರಕಾರಕ್ಕೆ ಧನ್ಯವಾದಗಳು ಎಂದಿದ್ದಾರೆ.

ಇನ್ನು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಎಲ್ಲರಿಗೂ ವಸತಿ ಕಲ್ಪಿಸುವ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಲ್ಲಿ ಒಂದಾದ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಕಳೆದ ಬಜೆಟ್‌ನಲ್ಲಿ ರೂ. 48,000 ಕೋಟಿ ಘೋಷಿಸಿದ್ದ ಕೇಂದ್ರ ಸರಕಾರ, ಈ ಬಾರಿಯ ಬಜೆಟ್‌ನಲ್ಲಿ ರೂ. 79,000 ಕೋಟಿ ಘೋಷಿಸುವ ಮೂಲಕ ಜನಸಾಮಾನ್ಯರ ಪರವಾಗಿ ಬಜೆಟ್ ಮಂಡನೆ ಮಾಡಿದೆ. ಈ ಯೋಜನೆಯಿಂದ ವಸತಿ ವಂಚಿತ ಕುಟುಂಬಗಳು ಮನೆ ನಿರ್ಮಿಸಿ ಉತ್ತಮ ಜೀವನ‌ ನಡೆಸಬಹುದಾಗಿದೆ ಎಂದರು.

ಸಣ್ಣ ಮತ್ತು ಮಧ್ಯಮ ಸ್ತರದ ಉದ್ಯಮಗಳಿಗೆ ಉತ್ತೇಜನ ನೀಡುವ ಹಿನ್ನೆಲೆಯಲ್ಲಿ ಬಜೆಟ್‌ನಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿದ ಕೇಂದ್ರ ಸರಕಾರವು, ಸಂಭಾವ್ಯ ತೆರಿಗೆಯ ಮಿತಿಯನ್ನು ವಿಸ್ತರಿಸಿದೆ. ಈ ಮೂಲಕ ದೇಶದಲ್ಲಿರುವ ಸಣ್ಣ ಹಾಗೂ ಮಧ್ಯಮ ವರ್ಗದ ಉದ್ಯಮಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರ ವಿಶೇಷವಾಗಿ ಕಾಳಜಿ ವಹಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಸುದ್ದಿಗೋಷ್ಟಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.

ಇನ್ನಷ್ಟು ಬಜೆಟ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:43 pm, Wed, 1 February 23

ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್