AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Budget 2023: ಕೇಂದ್ರ ಬಜೆಟ್​​ನಲ್ಲಿ ಮಹಿಳೆಯರಿಗೆ ಸಿಕ್ಕಿದ್ದೇನು?

ದೀನದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ, ಗ್ರಾಮೀಣ ಮಹಿಳೆಯರನ್ನು ಸಜ್ಜುಗೊಳಿಸುವ ಮೂಲಕ 81 ಲಕ್ಷ ಸ್ವಸಹಾಯ ಗುಂಪುಗಳನ್ನು ರಚಿಸಲಾಗಿದೆ.

Union Budget 2023: ಕೇಂದ್ರ ಬಜೆಟ್​​ನಲ್ಲಿ ಮಹಿಳೆಯರಿಗೆ ಸಿಕ್ಕಿದ್ದೇನು?
ನಿರ್ಮಲಾ ಸೀತಾರಾಮನ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Feb 01, 2023 | 4:25 PM

Share

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಬುಧವಾರ ಎರಡು ವರ್ಷಗಳ ಕಾಲ ಶೇ.7.5 ರಷ್ಟು ಸ್ಥಿರ ಬಡ್ಡಿದರದೊಂದಿಗೆ ‘ಮಹಿಳಾ ಸಮ್ಮಾನ್ ಬಚತ್ ಪತ್ರ'(Mahila Samman Bachat Patra Scheme) ಘೋಷಿಸಿದ್ದಾರೆ. ಇದರಲ್ಲಿ ಮಹಿಳೆ ಅಥವಾ ಹೆಣ್ಣು ಮಗುವಿನ ಹೆಸರಿನಲ್ಲಿ ಠೇವಣಿ ಇಡಬಹುದು. ಗರಿಷ್ಠ ಠೇವಣಿ ಮೊತ್ತವನ್ನು ₹ 2 ಲಕ್ಷ. ಯೋಜನೆಯು ಅರ್ಧದಲ್ಲೇ ಹಣ ಹಿಂಪಡೆಯುವ ಸೌಲಭ್ಯವನ್ನು ಹೊಂದಿರುತ್ತದೆ.”ಮಹಿಳಾ ಸಮ್ಮಾನ್ ಬಚತ್ ಪತ್ರ’ ಅಡಿಯಲ್ಲಿ ಒಂದು ಬಾರಿ ಮಾಡುವ ಹೊಸ ಸಣ್ಣ ಉಳಿತಾಯ ಯೋಜನೆ. ಮಹಿಳೆಯರು ಮತ್ತು ಹುಡುಗಿಯರಿಗೆ ಠೇವಣಿ ಸೌಲಭ್ಯವು ಶೇಕಡಾ 7.5 ರ ಬಡ್ಡಿದರದೊಂದಿಗೆ ಎರಡು ವರ್ಷಗಳ ಅವಧಿಗೆ ಇರುತ್ತದೆ” ಎಂದು ನಿರ್ಮಲಾ ಸೀತಾರಾಮನ್ ಘೋಷಿಸಿದರು.

ದೀನದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ, ಗ್ರಾಮೀಣ ಮಹಿಳೆಯರನ್ನು ಸಜ್ಜುಗೊಳಿಸುವ ಮೂಲಕ 81 ಲಕ್ಷ ಸ್ವಸಹಾಯ ಗುಂಪುಗಳನ್ನು ರಚಿಸಲಾಗಿದೆ.

ಇದನ್ನೂ ಓದಿ: Union Budget: ವಾಹನ, ಟಿವಿ, ಮೊಬೈಲ್ ಫೋನ್​ ಖರೀದಿಸ್ತೀರಾ? ತುಸು ತಾಳಿ, ಕಡಿಮೆಯಾಗಲಿದೆ ದರ

“ಈ ಗುಂಪುಗಳು ಹಲವಾರು ಸಾವಿರ ಸದಸ್ಯರನ್ನು ಹೊಂದಿರುವ ದೊಡ್ಡ ಉತ್ಪಾದಕ ಉದ್ಯಮಗಳು ಅಥವಾ ಸಮೂಹಗಳ ರಚನೆಯ ಮೂಲಕ ಆರ್ಥಿಕ ಸಬಲೀಕರಣದ ಮುಂದಿನ ಹಂತವನ್ನು ತಲುಪಲು ನಾವು ಈ ಗುಂಪುಗಳನ್ನು ಸಕ್ರಿಯಗೊಳಿಸುತ್ತೇವೆ” ಎಂದು ನಿರ್ಮಲಾ ಹೇಳಿದ್ದಾರೆ ಪಿಎಂ-ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ಸಣ್ಣ ರೈತರಿಗೆ ₹ 2.25 ಲಕ್ಷ ಕೋಟಿಗೂ ಹೆಚ್ಚು ಆರ್ಥಿಕ ನೆರವು ನೀಡಲಾಗಿದೆ. ಈ ಯೋಜನೆಯಡಿ ಸುಮಾರು ಮೂರು ಕೋಟಿ ಮಹಿಳಾ ರೈತರಿಗೆ ₹ 54,000 ಕೋಟಿ ನೀಡಲಾಗಿದೆ ಎಂದು ಹಣಕಾಸು ಸಚಿವರು ಹೇಳಿದರು.

ಹಿರಿಯ ನಾಗರಿಕರ ಉಳಿತಾಯ ಯೋಜನೆಯಲ್ಲಿ (ಎಸ್‌ಸಿಎಸ್‌ಎಸ್) ಹೂಡಿಕೆ ಮಾಡಬಹುದಾದ ಗರಿಷ್ಠ ಮೊತ್ತವನ್ನು ₹ 15 ಲಕ್ಷದಿಂದ ₹ 30 ಲಕ್ಷಕ್ಕೆ ಹೆಚ್ಚಿಸುವುದಾಗಿ ನಿರ್ಮಲಾ ಸೀತಾರಾಮನ್ ಘೋಷಿಸಿದರು. ಅಂಚೆ ಮಾಸಿಕ ಆದಾಯ ಯೋಜನೆಯು ಮಿತಿಯನ್ನು ಹೆಚ್ಚಿಸಿದೆ. ಒಂದೇ ಹೆಸರಿನಲ್ಲಿ ₹ 4.5 ಲಕ್ಷಕ್ಕೆ ಹೋಲಿಸಿದರೆ ₹ 9 ಲಕ್ಷ ಹೂಡಿಕೆ ಮಾಡಬಹುದು.

ಮಿತಿಗಳ ವರ್ಧನೆಯು ಹೆಚ್ಚಿನ ಹಣದುಬ್ಬರದ ಸಮಯದಲ್ಲಿ ನಿಯಮಿತ ಆದಾಯವನ್ನು ಹುಡುಕುತ್ತಿರುವ ಹೂಡಿಕೆದಾರರಿಗೆ ಸಾಂತ್ವನವಾಗಿದೆ.

ವಾಣಿಜ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:17 pm, Wed, 1 February 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು