AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Budget 2023: ಕೇಂದ್ರ ಬಜೆಟ್​​ನಲ್ಲಿ ಮಹಿಳೆಯರಿಗೆ ಸಿಕ್ಕಿದ್ದೇನು?

ದೀನದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ, ಗ್ರಾಮೀಣ ಮಹಿಳೆಯರನ್ನು ಸಜ್ಜುಗೊಳಿಸುವ ಮೂಲಕ 81 ಲಕ್ಷ ಸ್ವಸಹಾಯ ಗುಂಪುಗಳನ್ನು ರಚಿಸಲಾಗಿದೆ.

Union Budget 2023: ಕೇಂದ್ರ ಬಜೆಟ್​​ನಲ್ಲಿ ಮಹಿಳೆಯರಿಗೆ ಸಿಕ್ಕಿದ್ದೇನು?
ನಿರ್ಮಲಾ ಸೀತಾರಾಮನ್
ರಶ್ಮಿ ಕಲ್ಲಕಟ್ಟ
|

Updated on:Feb 01, 2023 | 4:25 PM

Share

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಬುಧವಾರ ಎರಡು ವರ್ಷಗಳ ಕಾಲ ಶೇ.7.5 ರಷ್ಟು ಸ್ಥಿರ ಬಡ್ಡಿದರದೊಂದಿಗೆ ‘ಮಹಿಳಾ ಸಮ್ಮಾನ್ ಬಚತ್ ಪತ್ರ'(Mahila Samman Bachat Patra Scheme) ಘೋಷಿಸಿದ್ದಾರೆ. ಇದರಲ್ಲಿ ಮಹಿಳೆ ಅಥವಾ ಹೆಣ್ಣು ಮಗುವಿನ ಹೆಸರಿನಲ್ಲಿ ಠೇವಣಿ ಇಡಬಹುದು. ಗರಿಷ್ಠ ಠೇವಣಿ ಮೊತ್ತವನ್ನು ₹ 2 ಲಕ್ಷ. ಯೋಜನೆಯು ಅರ್ಧದಲ್ಲೇ ಹಣ ಹಿಂಪಡೆಯುವ ಸೌಲಭ್ಯವನ್ನು ಹೊಂದಿರುತ್ತದೆ.”ಮಹಿಳಾ ಸಮ್ಮಾನ್ ಬಚತ್ ಪತ್ರ’ ಅಡಿಯಲ್ಲಿ ಒಂದು ಬಾರಿ ಮಾಡುವ ಹೊಸ ಸಣ್ಣ ಉಳಿತಾಯ ಯೋಜನೆ. ಮಹಿಳೆಯರು ಮತ್ತು ಹುಡುಗಿಯರಿಗೆ ಠೇವಣಿ ಸೌಲಭ್ಯವು ಶೇಕಡಾ 7.5 ರ ಬಡ್ಡಿದರದೊಂದಿಗೆ ಎರಡು ವರ್ಷಗಳ ಅವಧಿಗೆ ಇರುತ್ತದೆ” ಎಂದು ನಿರ್ಮಲಾ ಸೀತಾರಾಮನ್ ಘೋಷಿಸಿದರು.

ದೀನದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ, ಗ್ರಾಮೀಣ ಮಹಿಳೆಯರನ್ನು ಸಜ್ಜುಗೊಳಿಸುವ ಮೂಲಕ 81 ಲಕ್ಷ ಸ್ವಸಹಾಯ ಗುಂಪುಗಳನ್ನು ರಚಿಸಲಾಗಿದೆ.

ಇದನ್ನೂ ಓದಿ: Union Budget: ವಾಹನ, ಟಿವಿ, ಮೊಬೈಲ್ ಫೋನ್​ ಖರೀದಿಸ್ತೀರಾ? ತುಸು ತಾಳಿ, ಕಡಿಮೆಯಾಗಲಿದೆ ದರ

“ಈ ಗುಂಪುಗಳು ಹಲವಾರು ಸಾವಿರ ಸದಸ್ಯರನ್ನು ಹೊಂದಿರುವ ದೊಡ್ಡ ಉತ್ಪಾದಕ ಉದ್ಯಮಗಳು ಅಥವಾ ಸಮೂಹಗಳ ರಚನೆಯ ಮೂಲಕ ಆರ್ಥಿಕ ಸಬಲೀಕರಣದ ಮುಂದಿನ ಹಂತವನ್ನು ತಲುಪಲು ನಾವು ಈ ಗುಂಪುಗಳನ್ನು ಸಕ್ರಿಯಗೊಳಿಸುತ್ತೇವೆ” ಎಂದು ನಿರ್ಮಲಾ ಹೇಳಿದ್ದಾರೆ ಪಿಎಂ-ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ಸಣ್ಣ ರೈತರಿಗೆ ₹ 2.25 ಲಕ್ಷ ಕೋಟಿಗೂ ಹೆಚ್ಚು ಆರ್ಥಿಕ ನೆರವು ನೀಡಲಾಗಿದೆ. ಈ ಯೋಜನೆಯಡಿ ಸುಮಾರು ಮೂರು ಕೋಟಿ ಮಹಿಳಾ ರೈತರಿಗೆ ₹ 54,000 ಕೋಟಿ ನೀಡಲಾಗಿದೆ ಎಂದು ಹಣಕಾಸು ಸಚಿವರು ಹೇಳಿದರು.

ಹಿರಿಯ ನಾಗರಿಕರ ಉಳಿತಾಯ ಯೋಜನೆಯಲ್ಲಿ (ಎಸ್‌ಸಿಎಸ್‌ಎಸ್) ಹೂಡಿಕೆ ಮಾಡಬಹುದಾದ ಗರಿಷ್ಠ ಮೊತ್ತವನ್ನು ₹ 15 ಲಕ್ಷದಿಂದ ₹ 30 ಲಕ್ಷಕ್ಕೆ ಹೆಚ್ಚಿಸುವುದಾಗಿ ನಿರ್ಮಲಾ ಸೀತಾರಾಮನ್ ಘೋಷಿಸಿದರು. ಅಂಚೆ ಮಾಸಿಕ ಆದಾಯ ಯೋಜನೆಯು ಮಿತಿಯನ್ನು ಹೆಚ್ಚಿಸಿದೆ. ಒಂದೇ ಹೆಸರಿನಲ್ಲಿ ₹ 4.5 ಲಕ್ಷಕ್ಕೆ ಹೋಲಿಸಿದರೆ ₹ 9 ಲಕ್ಷ ಹೂಡಿಕೆ ಮಾಡಬಹುದು.

ಮಿತಿಗಳ ವರ್ಧನೆಯು ಹೆಚ್ಚಿನ ಹಣದುಬ್ಬರದ ಸಮಯದಲ್ಲಿ ನಿಯಮಿತ ಆದಾಯವನ್ನು ಹುಡುಕುತ್ತಿರುವ ಹೂಡಿಕೆದಾರರಿಗೆ ಸಾಂತ್ವನವಾಗಿದೆ.

ವಾಣಿಜ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:17 pm, Wed, 1 February 23

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು