AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Budget 2023: ಕೇಂದ್ರ ಬಜೆಟ್​​ನಲ್ಲಿ ಮಹಿಳೆಯರಿಗೆ ಸಿಕ್ಕಿದ್ದೇನು?

ದೀನದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ, ಗ್ರಾಮೀಣ ಮಹಿಳೆಯರನ್ನು ಸಜ್ಜುಗೊಳಿಸುವ ಮೂಲಕ 81 ಲಕ್ಷ ಸ್ವಸಹಾಯ ಗುಂಪುಗಳನ್ನು ರಚಿಸಲಾಗಿದೆ.

Union Budget 2023: ಕೇಂದ್ರ ಬಜೆಟ್​​ನಲ್ಲಿ ಮಹಿಳೆಯರಿಗೆ ಸಿಕ್ಕಿದ್ದೇನು?
ನಿರ್ಮಲಾ ಸೀತಾರಾಮನ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Feb 01, 2023 | 4:25 PM

Share

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಬುಧವಾರ ಎರಡು ವರ್ಷಗಳ ಕಾಲ ಶೇ.7.5 ರಷ್ಟು ಸ್ಥಿರ ಬಡ್ಡಿದರದೊಂದಿಗೆ ‘ಮಹಿಳಾ ಸಮ್ಮಾನ್ ಬಚತ್ ಪತ್ರ'(Mahila Samman Bachat Patra Scheme) ಘೋಷಿಸಿದ್ದಾರೆ. ಇದರಲ್ಲಿ ಮಹಿಳೆ ಅಥವಾ ಹೆಣ್ಣು ಮಗುವಿನ ಹೆಸರಿನಲ್ಲಿ ಠೇವಣಿ ಇಡಬಹುದು. ಗರಿಷ್ಠ ಠೇವಣಿ ಮೊತ್ತವನ್ನು ₹ 2 ಲಕ್ಷ. ಯೋಜನೆಯು ಅರ್ಧದಲ್ಲೇ ಹಣ ಹಿಂಪಡೆಯುವ ಸೌಲಭ್ಯವನ್ನು ಹೊಂದಿರುತ್ತದೆ.”ಮಹಿಳಾ ಸಮ್ಮಾನ್ ಬಚತ್ ಪತ್ರ’ ಅಡಿಯಲ್ಲಿ ಒಂದು ಬಾರಿ ಮಾಡುವ ಹೊಸ ಸಣ್ಣ ಉಳಿತಾಯ ಯೋಜನೆ. ಮಹಿಳೆಯರು ಮತ್ತು ಹುಡುಗಿಯರಿಗೆ ಠೇವಣಿ ಸೌಲಭ್ಯವು ಶೇಕಡಾ 7.5 ರ ಬಡ್ಡಿದರದೊಂದಿಗೆ ಎರಡು ವರ್ಷಗಳ ಅವಧಿಗೆ ಇರುತ್ತದೆ” ಎಂದು ನಿರ್ಮಲಾ ಸೀತಾರಾಮನ್ ಘೋಷಿಸಿದರು.

ದೀನದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ, ಗ್ರಾಮೀಣ ಮಹಿಳೆಯರನ್ನು ಸಜ್ಜುಗೊಳಿಸುವ ಮೂಲಕ 81 ಲಕ್ಷ ಸ್ವಸಹಾಯ ಗುಂಪುಗಳನ್ನು ರಚಿಸಲಾಗಿದೆ.

ಇದನ್ನೂ ಓದಿ: Union Budget: ವಾಹನ, ಟಿವಿ, ಮೊಬೈಲ್ ಫೋನ್​ ಖರೀದಿಸ್ತೀರಾ? ತುಸು ತಾಳಿ, ಕಡಿಮೆಯಾಗಲಿದೆ ದರ

“ಈ ಗುಂಪುಗಳು ಹಲವಾರು ಸಾವಿರ ಸದಸ್ಯರನ್ನು ಹೊಂದಿರುವ ದೊಡ್ಡ ಉತ್ಪಾದಕ ಉದ್ಯಮಗಳು ಅಥವಾ ಸಮೂಹಗಳ ರಚನೆಯ ಮೂಲಕ ಆರ್ಥಿಕ ಸಬಲೀಕರಣದ ಮುಂದಿನ ಹಂತವನ್ನು ತಲುಪಲು ನಾವು ಈ ಗುಂಪುಗಳನ್ನು ಸಕ್ರಿಯಗೊಳಿಸುತ್ತೇವೆ” ಎಂದು ನಿರ್ಮಲಾ ಹೇಳಿದ್ದಾರೆ ಪಿಎಂ-ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ಸಣ್ಣ ರೈತರಿಗೆ ₹ 2.25 ಲಕ್ಷ ಕೋಟಿಗೂ ಹೆಚ್ಚು ಆರ್ಥಿಕ ನೆರವು ನೀಡಲಾಗಿದೆ. ಈ ಯೋಜನೆಯಡಿ ಸುಮಾರು ಮೂರು ಕೋಟಿ ಮಹಿಳಾ ರೈತರಿಗೆ ₹ 54,000 ಕೋಟಿ ನೀಡಲಾಗಿದೆ ಎಂದು ಹಣಕಾಸು ಸಚಿವರು ಹೇಳಿದರು.

ಹಿರಿಯ ನಾಗರಿಕರ ಉಳಿತಾಯ ಯೋಜನೆಯಲ್ಲಿ (ಎಸ್‌ಸಿಎಸ್‌ಎಸ್) ಹೂಡಿಕೆ ಮಾಡಬಹುದಾದ ಗರಿಷ್ಠ ಮೊತ್ತವನ್ನು ₹ 15 ಲಕ್ಷದಿಂದ ₹ 30 ಲಕ್ಷಕ್ಕೆ ಹೆಚ್ಚಿಸುವುದಾಗಿ ನಿರ್ಮಲಾ ಸೀತಾರಾಮನ್ ಘೋಷಿಸಿದರು. ಅಂಚೆ ಮಾಸಿಕ ಆದಾಯ ಯೋಜನೆಯು ಮಿತಿಯನ್ನು ಹೆಚ್ಚಿಸಿದೆ. ಒಂದೇ ಹೆಸರಿನಲ್ಲಿ ₹ 4.5 ಲಕ್ಷಕ್ಕೆ ಹೋಲಿಸಿದರೆ ₹ 9 ಲಕ್ಷ ಹೂಡಿಕೆ ಮಾಡಬಹುದು.

ಮಿತಿಗಳ ವರ್ಧನೆಯು ಹೆಚ್ಚಿನ ಹಣದುಬ್ಬರದ ಸಮಯದಲ್ಲಿ ನಿಯಮಿತ ಆದಾಯವನ್ನು ಹುಡುಕುತ್ತಿರುವ ಹೂಡಿಕೆದಾರರಿಗೆ ಸಾಂತ್ವನವಾಗಿದೆ.

ವಾಣಿಜ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:17 pm, Wed, 1 February 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​