AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Income Tax Rebate: ಸಿಹಿ ಸುದ್ದಿ; ಆದಾಯ ತೆರಿಗೆ ವಿನಾಯಿತಿ ಮಿತಿ 7 ಲಕ್ಷ ರೂ.ಗೆ ವಿಸ್ತರಣೆ

Budget 2023 Income Tax Rebate; ಹೊಸ ತೆರಿಗೆ ವಿಧಾನದ ಅಡಿಯಲ್ಲಿ ವೈಯಕ್ತಿಕ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 7 ಲಕ್ಷ ರೂ.ಗೆ ವಿಸ್ತರಣೆ ಮಾಡಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದರು.

Income Tax Rebate: ಸಿಹಿ ಸುದ್ದಿ; ಆದಾಯ ತೆರಿಗೆ ವಿನಾಯಿತಿ ಮಿತಿ 7 ಲಕ್ಷ ರೂ.ಗೆ ವಿಸ್ತರಣೆ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Feb 01, 2023 | 1:24 PM

ನವದೆಹಲಿ: ಹೊಸ ತೆರಿಗೆ ವಿಧಾನದ ಅಡಿಯಲ್ಲಿ ವೈಯಕ್ತಿಕ ಆದಾಯ ತೆರಿಗೆ (Income Tax) ವಿನಾಯಿತಿ ಮಿತಿಯನ್ನು 7 ಲಕ್ಷ ರೂ.ಗೆ ವಿಸ್ತರಣೆ ಮಾಡಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಘೋಷಣೆ ಮಾಡಿದರು. 2023-24ನೇ ಸಾಲಿನ ಬಜೆಟ್ (Budget 2023) ಮಂಡನೆ ಮಾಡಿದ ಅವರು, ಆದಾಯ ತೆರಿಗೆ ವಿನಾಯಿತಿ ಮಿತಿಯಲ್ಲಿ ಬದಲಾವಣೆ ಘೋಷಿಸಿದರು. ಮಧ್ಯಮ ವರ್ಗದ ವೇತನದಾರ ವರ್ಗದವರನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ. ಇದರಂತೆ ಹೊಸ ತೆರಿಗೆ ವಿಧಾನದ ಅಡಿಯಲ್ಲಿ 7 ಲಕ್ಷ ರೂ. ಆದಾಯದವರೆಗೂ ಆದಾಯ ತೆರಿಗೆ ಇರುವುದಿಲ್ಲ ಎಂದು ಅವರು ಹೇಳಿದರು. ಹಣಕಾಸು ಸಚಿವರು ಈ ಘೋಷಣೆ ಮಾಡುತ್ತಿದ್ದಂತೆಯೇ ಆಡಳಿತ ಪಕ್ಷದ ಸಂಸದರು ಚಪ್ಪಾಳೆ ತಟ್ಟಿ ಸಂಭ್ರಮ ವ್ಯಕ್ತಪಡಿಸಿದರು.

ತೆರಿಗೆ ಸ್ಲ್ಯಾಬ್​ ಅನ್ನು 5 ಹಂತಗಳಲ್ಲಿ ಬದಲಾಯಿಸಲಾಗಿದೆ ಎಂದು ಬಜೆಟ್​​ನಲ್ಲಿ ಘೋಷಣೆ ಮಾಡಲಾಗಿದೆ. ಇದರಂತೆ, 3ರಿಂದ 6 ಲಕ್ಷದ ರೂ.ವರೆಗಿನ ಆದಾಯಕ್ಕೆ ಶೇಕಡ 5ರಷ್ಟು ತೆರಿಗೆ ಇರಲಿದೆ. 6ರಿಂದ 9 ಲಕ್ಷ ರೂ.ವರೆಗಿನ ಆದಾಯಕ್ಕೆ ಶೇಕಡ 10ರಷ್ಟು ತೆರಿಗೆ, 9ರಿಂದ 12 ಲಕ್ಷ ರೂ.ವರೆಗಿನ ಆದಾಯಕ್ಕೆ ಶೇಕಡ 15ರಷ್ಟು ತೆರಿಗೆ ಹಾಗೂ 12ರಿಂದ 15 ಲಕ್ಷ ರೂ.ವರೆಗಿನ ಆದಾಯಕ್ಕೆ ಶೇಕಡ 20ರಷ್ಟು ಹಾಗೂ 15 ಲಕ್ಷ ರೂ. ಮೇಲ್ಪಟ್ಟ ಆದಾಯಕ್ಕೆ ಶೇ 30ರ ತೆರಿಗೆ ಇರಲಿದೆ. ಹೊಸ ತೆರಿಗೆ ಪದ್ಧತಿಯೇ ಇನ್ನು ಮುಂದೆ ಡಿಫಾಲ್ಟ್ ತೆರಿಗೆ ಪದ್ಧತಿ ಆಗಿರುತ್ತದೆ. ಆದರೆ ಹಳೆಯ ತೆರಿಗೆ ಪದ್ಧತಿಯೂ ಚಾಲ್ತಿಯಲ್ಲಿರುತ್ತದೆ. ತೆರಿಗೆ ಸ್ಲ್ಯಾಬ್​ಗಳನ್ನು 6 ಹಂತಗಳಿಂದ 5 ಹಂತಗಳಿಗೆ ಬದಲಿಸಲಾಗಿದೆ. ಹೊಸ ತೆರಿಗೆ ಪದ್ಧತಿ ಆರಿಸಿಕೊಳ್ಳುವವರಿಗೆ 7 ಲಕ್ಷದ ರೂ.ರೆಗಿನ ತೆರಿಗೆ ವಿನಾಯ್ತಿ ಲಭ್ಯವಾಗಲಿದೆ ಎಂದು ಬಜೆಟ್​​ನಲ್ಲಿ ತಿಳಿಸಲಾಗಿದೆ.

ಆದಾಯ ತೆರಿಗೆಗೆ ಸಂಬಂಧಿಸಿದ ಮುಖ್ಯ ಘೋಷಣೆಗಳೇನು?

  1. ವಿನಾಯ್ತಿ: 7 ಲಕ್ಷ ರೂ.ವರೆಗೆ ಆದಾಯ ತೆರಿಗೆ ವಿನಾಯ್ತಿ ನೀಡುವ ಬಗ್ಗೆ ಪ್ರಸ್ತಾಪಿಸಿದರು.
  2. ಟ್ಯಾಕ್ಸ್​ ಸ್ಲ್ಯಾಬ್​ಗಳು: ಹೊಸ ತೆರಿಗೆ ಪದ್ಧತಿಯಲ್ಲಿ ಟ್ಯಾಕ್ಸ್​ ಸ್ಲ್ಯಾಬ್​ಗಳನ್ನು (ತೆರಿಗೆ ಹಂತಗಳು) 5ಕ್ಕೆ ಮಿತಗೊಳಿಸಲಾಗಿದೆ. 3 ಲಕ್ಷ ರೂ.ನಿಂದ ತೆರಿಗೆ ಹಂತ ಆರಂಭವಾಗಲಿದೆ.
  3. ಸ್ಟಾಂಡರ್ಡ್​ ಡಿಡಕ್ಷನ್: ₹ 15.5 ಲಕ್ಷ ಅಥವಾ ಅದಕ್ಕೂ ಹೆಚ್ಚಿನ ಆದಾಯವನ್ನು ವೇತನದಿಂದ ಪಡೆಯುವವರಿಗೆ ₹ 52,500 ಸ್ಟಾಂಡರ್ಡ್​ ಡಿಡಕ್ಷನ್ ಸೌಲಭ್ಯ ಸಿಗಲಿದೆ.
  4. ಗರಿಷ್ಠ ತೆರಿಗೆ: ಈವರೆಗೆ ಗರಿಷ್ಠ ತೆರಿಗೆಯ ಮೇಲೆ ಶೇ 37ರಷ್ಟು ಸರ್​ಚಾರ್ಜ್ ವಿಧಿಸಲಾಗುತ್ತಿತ್ತು. ಈ ಪ್ರಮಾಣವನ್ನು ಹೊಸ ತೆರಿಗೆ ನೀತಿಯಡಿ ಶೇ 25ಕ್ಕೆ ಇಳಿಸಲಾಗಿದೆ. ಈ ಬೆಳವಣಿಗೆಯೊಂದಿಗೆ ದೇಶದಲ್ಲಿರುವ ಗರಿಷ್ಠ ತೆರಿಗೆ ದರವು ಶೇ 39ಕ್ಕೆ ಮಿತಗೊಳ್ಳಲಿದೆ.
  5. ಲೀವ್ ಎನ್​ಕ್ಯಾಶ್​ಮೆಂಟ್ (ರಜೆ ನಗದೀಕರಣ): ನಿವೃತ್ತರಾದಾಗ ಸಿಗುವ ರಜೆ ನಗದೀಕರಣ (ಲೀವ್ ಎನ್​ಕ್ಯಾಶ್​ಮೆಂಟ್) ಸೌಲಭ್ಯದ ಮೇಲೆ ಈವರೆಗೆ 3 ಲಕ್ಷ ರೂ.ವರೆಗೆ ಮಾತ್ರ ತೆರಿಗೆ ವಿನಾಯ್ತಿ ಇತ್ತು. ಈ ಮೊತ್ತವನ್ನು 25 ಲಕ್ಷ ರೂ.ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ.

ಬಜೆಟ್​ ಲೈವ್ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:29 pm, Wed, 1 February 23

ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ