AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕರ ಕೈಗೆ ಕೆಲಸ ನೀಡುವುದು ಸರ್ಕಾರಕ್ಕೆ ದೊಡ್ಡ ಸವಾಲು; ಬಜೆಟ್​ನಲ್ಲಿ ದೊಡ್ಡ ನಿರೀಕ್ಷೆ

Union budget 2025, focus on youth and jobs: ಆರ್ಥಿಕ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲಗಳ ಸದ್ಬಳಕೆ ಬಹಳ ಮುಖ್ಯ. ಯುವಜನರ ಕೈಗೆ ಕೆಲಸ ಕೊಡುವುದು ಮುಖ್ಯ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ಕಡಿಮೆ ಆಗಿಲ್ಲ. ಆರ್ಥಿಕ ಬೆಳವಣಿಗೆಯೂ ಮಂದಗೊಂಡಿದೆ. ಫೆಬ್ರುವರಿ 1ರ ಬಜೆಟ್​ನಲ್ಲಿ ಯುವಜನರಿಗೆ ಉದ್ಯೋಗಾವಕಾಶ ಹೆಚ್ಚಿಸುವತ್ತ ಗಮನ ಹರಿಸುವ ನಿರೀಕ್ಷೆ ಇದೆ.

ಯುವಕರ ಕೈಗೆ ಕೆಲಸ ನೀಡುವುದು ಸರ್ಕಾರಕ್ಕೆ ದೊಡ್ಡ ಸವಾಲು; ಬಜೆಟ್​ನಲ್ಲಿ ದೊಡ್ಡ ನಿರೀಕ್ಷೆ
ಯುವಶಕ್ತಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 20, 2025 | 11:31 AM

Share

ನವದೆಹಲಿ, ಜನವರಿ 20: ಭಾರತದ ಆರ್ಥಿಕತೆಯ ಬೆಳವಣಿಗೆ ಇತ್ತೀಚೆಗೆ ಮಂದಗೊಂಡಿದ್ದರೂ ವಿಶ್ವದ ಪ್ರಮುಖ ಆರ್ಥಿಕತೆಗಳಲ್ಲಿ ಅತಿ ಹೆಚ್ಚು ವೇಗದಲ್ಲಿ ಬೆಳೆಯುತ್ತಿರುವುದು ಭಾರತವೇ. ಈ ದೇಶದ ಯುವಶಕ್ತಿಯೇ ಪ್ರಮುಖ ಬಂಡವಾಳವಾಗಿದೆ. ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಯುವಶಕ್ತಿ ಹೆಚ್ಚಿನ ಸಂಖ್ಯೆಯಲ್ಲಿದೆ. ಭಾರತಕ್ಕೆ ಅತ್ಯಂತ ಅನುಕೂಲಕರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಅನುಕೂಲಕರ ಪರಿಸ್ಥಿತಿಯನ್ನು ಸರಿಯಾಗಿ ಬಳಸಿಕೊಳ್ಳುವ ದೊಡ್ಡ ಸವಾಲು ಕೂಡ ಭಾರತದ ಮುಂದಿದೆ. ಇದೇ ಅನುಕೂಲಕರ ಪರಿಸ್ಥಿತಿಯು ದೊಡ್ಡ ಅನನುಕೂಲಕರ ಪರಿಸ್ಥಿತಿಗೆ ಎಡೆ ಮಾಡಿಕೊಡಲೂ ಬಹುದು.

ಯುವಶಕ್ತಿ ಸಂಪನ್ಮೂಲದ ಸದುಪಯೋಗ ಅಗತ್ಯ…

ಬೆಳೆಯುತ್ತಿರುವ ಆರ್ಥಿಕತೆಗೆ ಹೆಚ್ಚಿನ ಯುವಶಕ್ತಿ ಅಗತ್ಯ. ಹಾಗೆಯೇ ಹೆಚ್ಚಿನ ಸಂಖ್ಯೆಯ ಯುವಶಕ್ತಿಯನ್ನು ಸರಿಯಾಗಿ ಬಳಸಿಕೊಳ್ಳಬೇಕಾದರೆ ಆರ್ಥಿಕತೆ ಉತ್ತಮ ವೇಗದಲ್ಲಿ ಬೆಳವಣಿಗೆ ಹೊಂದಬೇಕು. ಎರಡೂ ಕೂಡ ಒಂದಕ್ಕೊಂದು ಪೂರಕವಾಗಿರುವ ಸಂಗತಿ. ಇದರಲ್ಲಿ ಒಂದು ಕಡಿಮೆ ಆದರೂ ಮತ್ತೊಂದೂ ಕೂಡ ನಶಿಸುತ್ತದೆ. ಹೀಗಾಗಿ, ಯುವಶಕ್ತಿಯನ್ನು ಸರಿಯಾಗಿ ಬಳಸಿಕೊಳ್ಳುವ ದೊಡ್ಡ ಸವಾಲು ಸರ್ಕಾರದ ಮುಂದಿದೆ.

ಇದನ್ನೂ ಓದಿ: ಮಹಿಳೆಯರಿಗೆ ಉತ್ಸಾಹ ಹೆಚ್ಚಿಸಿದ ಕೇಂದ್ರ ಯೋಜನೆಗಳು; 2025ರ ಬಜೆಟ್​ನಲ್ಲಿ ಮತ್ತಷ್ಟು ಪುಷ್ಟಿ ಸಾಧ್ಯತೆ

ಸರ್ಕಾರವು ಉದ್ಯೋಗಸೃಷ್ಟಿಗೆ ಬಹಳಷ್ಟು ಕಸರತ್ತು ನಡೆಸುತ್ತಿದೆ. ಸ್ಟಾರ್ಟಪ್​ಗಳ ಸಂಖ್ಯೆ ಅದ್ವಿತೀಯವಾಗಿ ಏರುತ್ತಿದೆ. ಮ್ಯಾನುಫ್ಯಾಕ್ಚರಿಂಗ್ ಕ್ಷೇತ್ರಕ್ಕೆ ಸರ್ಕಾರ ಸಕಲ ರೀತಿಯಲ್ಲಿ ಉತ್ತೇಜನ ನೀಡುತ್ತಿದೆ. ಆದರೂ ಕೂಡ ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಲೆನೋವು ಸೃಷ್ಟಿಸುವುದು ಮುಂದುವರಿದಿದೆ. ವೇತನದಲ್ಲಿ ಇಳಿಮುಖ, ಭಾರತೀಯ ಕಾರ್ಪೊರೇಟ್ ಸಂಸ್ಥೆಗಳ ವಿಸ್ತರಣೆಯಲ್ಲಿ ಚುರುಕತನ ಕಾಣದೇ ಇರುವುದು ಇವೆಲ್ಲವೂ ಭಾರತದ ಮಂದ ವೇಗದ ಆರ್ಥಿಕ ಬೆಳವಣಿಗೆಯನ್ನು ಸೂಚಿಸುತ್ತಿವೆ.

ಯುವಜನರ ಕೈಗೆ ಸರಿಯಾಗಿ ಕೆಲಸ ಇಲ್ಲವಾದರೆ ಆರ್ಥಿಕ ಬೆಳವಣಿಗೆ ಕಷ್ಟವಾಗುವುದು ಹೌದು. ಈ ನಿಟ್ಟಿನಲ್ಲಿ ಈ ನಿರುದ್ಯೋಗ ಸಮಸ್ಯೆ ನಿವಾರಿಸಲು ಬಜೆಟ್​ನಲ್ಲಿ ಹೆಚ್ಚಿನ ಮುತುವರ್ಜಿ ತೋರಬಹುದೆಂದು ನಿರೀಕ್ಷಿಸಬಹುದು. ಕೌಶಲ್ಯಾಭಿವೃದ್ಧಿ ಹೆಚ್ಚಿಸುವ ಪ್ರಯತ್ನ ಮತ್ತಷ್ಟು ತೀವ್ರಗೊಳ್ಳಬಹುದು. ಹೆಚ್ಚು ಉದ್ಯೋಗ ಸೃಷ್ಟಿಸಬಲ್ಲ ವಲಯಗಳಿಗೆ ಬಜೆಟ್​ನಲ್ಲಿ ಹೆಚ್ಚು ಪುಷ್ಟಿ ನೀಡಲು ಯತ್ನಿಸಬಹುದು.

ಇದನ್ನೂ ಓದಿ: ಪಿಎಂ ಇಂಟರ್ನ್​ಶಿಪ್ ಸ್ಕೀಮ್; ಶೇ. 80ಕ್ಕೂ ಹೆಚ್ಚು ಭಾರತೀಯ ಕಂಪನಿಗಳಿಂದ ಬೆಂಬಲ

ಫೆಬ್ರುವರಿ 1ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಕಳೆದ ಬಾರಿಯ ಬಜೆಟ್​ನಲ್ಲಿ ಅವರು ಮಹಿಳೆಯರು, ಯುವಜನರು, ರೈತರು ಮತ್ತು ಬಡವರು ಈ ನಾಲ್ಕು ವರ್ಗಗಳತ್ತ ಗಮನ ಕೊಡುತ್ತಿರುವುದಾಗಿ ಹೇಳಿದ್ದರು. ಈ ಬಾರಿಯ ಬಜೆಟ್​ನಲ್ಲೂ ಈ ನಾಲ್ಕು ವರ್ಗಗಳತ್ತ ಗಮನ ಮುಂದುವರಿಯಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು