AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ECLGS: ಕೇಂದ್ರ ಬಜೆಟ್​ನಲ್ಲಿ ಎಮರ್ಜೆನ್ಸಿ ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್ 2023ರ ಮಾರ್ಚ್​ವರೆಗೆ ವಿಸ್ತರಣೆ

ಎಮರ್ಜೆನ್ಸಿ ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್ ಅನ್ನು 2023ರ ಮಾರ್ಚ್ ತನಕ ವಿಸ್ತರಣೆ ಮಾಡಲಾಗಿದೆ. ಇದರ ಜತೆಗೆ ಮೊತ್ತವನ್ನು ಹೆಚ್ಚಿಸಲಾಗಿದೆ.

ECLGS: ಕೇಂದ್ರ ಬಜೆಟ್​ನಲ್ಲಿ ಎಮರ್ಜೆನ್ಸಿ ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್ 2023ರ ಮಾರ್ಚ್​ವರೆಗೆ ವಿಸ್ತರಣೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 01, 2022 | 12:41 PM

Share

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ 2022ರ ಭಾಷಣದಲ್ಲಿ ಎಮರ್ಜೆನ್ಸಿ ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್ (ECLGS) ಅನ್ನು 2023ರ ಮಾರ್ಚ್​ವರೆಗೆ ವಿಸ್ತರಿಸಲಾಗುವುದು ಎಂದು ಘೋಷಣೆ ಮಾಡಿದರು. ಅಲ್ಲದೆ, ಯೋಜನೆಯ ಖಾತ್ರಿ ಕವರ್ ಅನ್ನು ರೂ. 50,000 ಕೋಟಿಯಿಂದ ರೂ. 5 ಲಕ್ಷ ಕೋಟಿಗೆ ವಿಸ್ತರಿಸಲಾಗುವುದು ಎಂದರು. 2023ರ ಮಾರ್ಚ್​ವರೆಗೆ ವಿಸ್ತರಿಸಲಾದ ಎಮರ್ಜೆನ್ಸಿ ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್ ಎಂಎಸ್​ಎಂಇ ಕೇಂದ್ರೀಕೃತ ಬ್ಯಾಂಕ್‌ಗಳು ಮತ್ತು ಬ್ಯಾಂಕಿಂಗ್ ಅಲ್ಲದ ಹಣಕಾಸು ಕಂಪೆನಿಗಳಿಗೆ (NBFCs) ವ್ಯಾಪಾರ ಬೆಳವಣಿಗೆಗೆ ಬೆನಿಫಿಟ್​ ನೀಡುತ್ತದೆ ಎಂದು ಐಸಿಐಸಿಐ ಸೆಕ್ಯೂರಿಟೀಸ್‌ನ ವಿಶ್ಲೇಷಕರು ಹೇಳಿದ್ದಾರೆ ಎಂಬುದಾಗಿ ಮಿಂಟ್ ವರದಿ ಮಾಡಿದೆ. ಕೊವಿಡ್ ಬಾಧಿತ ಎಂಎಸ್​ಎಂಇಗಳನ್ನು ಮತ್ತಷ್ಟು ಬೆಂಬಲಿಸುವ ಸಲುವಾಗಿ ಸೆಪ್ಟೆಂಬರ್‌ನಲ್ಲಿ ಸರ್ಕಾರವು ತನ್ನ ತುರ್ತು ಕ್ರೆಡಿಟ್ ಲೈನ್ ಗ್ಯಾರಂಟಿ ಯೋಜನೆಯನ್ನು (ECLGS) 31 ಮಾರ್ಚ್, 2022ರವರೆಗೆ ಅಥವಾ ಯೋಜನೆಯಡಿ ರೂ. 4.5 ಲಕ್ಷ ಕೋಟಿ ಇವೆರಡರಲ್ಲಿ ಯಾವುದು ಮೊದಲೋ ಅಲ್ಲಿಯ ತನಕ ಖಾತ್ರಿ ನೀಡುವವರೆಗೆ ವಿಸ್ತರಿಸುವುದಾಗಿ ಘೋಷಿಸಿತ್ತು.

ಕಳೆದ ವರ್ಷ ಮೇ ತಿಂಗಳಲ್ಲಿ ಘೋಷಿಸಲಾದ ‘ಆತ್ಮನಿರ್ಭರ್ ಭಾರತ್ ಅಭಿಯಾನ’ ಅಡಿಯಲ್ಲಿ 20 ಟ್ರಿಲಿಯನ್ (ಲಕ್ಷ ಕೋಟಿ) ಆರ್ಥಿಕ ಉತ್ತೇಜಕ ಪ್ಯಾಕೇಜ್‌ನ ಪ್ರಮುಖ ಅಂಶಗಳಲ್ಲಿ ಇಸಿಎಲ್‌ಜಿಎಸ್ ಒಂದಾಗಿದೆ. ಇದು ಎಂಎಸ್‌ಎಂಇಗಳು ಮತ್ತು ವೃತ್ತಿಪರರಿಗೆ ಟರ್ಮ್ ಲೋನ್ ರೂಪದಲ್ಲಿ ಹೆಚ್ಚುವರಿ ವರ್ಕಿಂಗ್ ಕ್ಯಾಪಿಟಲ್ ಹಣಕಾಸು ಯೋಜನೆ ಅನ್ನು ನೀಡುತ್ತದೆ. ಆರಂಭದಲ್ಲಿ ಅದರ ನಿಧಿ 3 ಟ್ರಿಲಿಯನ್ ಆಗಿತ್ತು. ಇದನ್ನು ಕೊವಿಡ್ ಎರಡನೇ ಅಲೆಯ ನಂತರ ಜೂನ್‌ನಲ್ಲಿ 4.5 ಟ್ರಿಲಿಯನ್‌ಗೆ ಹೆಚ್ಚಿಸಲಾಯಿತು.

2022-2023ರ ಕೇಂದ್ರ ಬಜೆಟ್ ಅನ್ನು ಪೇಪರ್‌ಲೆಸ್ ಫಾರ್ಮ್ಯಾಟ್‌ನಲ್ಲಿ ಮಂಡಿಸಲಾಯಿತು. ಸೀತಾರಾಮನ್ ಅವರು ಸಾಂಪ್ರದಾಯಿಕ ‘ಬಹಿ ಖಾತಾ’ ಬದಲಿಗೆ ಟ್ಯಾಬ್ (ಗ್ಯಾಜೆಟ್​) ಮೂಲಕ ಸಂಸತ್ತಿನಲ್ಲಿ ಬಜೆಟ್ ಅನ್ನು ಓದಿದರು. ಸೀತಾರಾಮನ್ ಅವರು ಬಜೆಟ್ ಮಂಡನೆಗೂ ಮುನ್ನ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದರು. ಅವರೊಂದಿಗೆ ಹಣಕಾಸು ಖಾತೆಯ ರಾಜ್ಯ ಸಚಿವರಾದ ಪಂಕಜ್ ಚೌಧರಿ, ಭಾಗವತ್ ಕರದ್ ಮತ್ತು ಸಚಿವಾಲಯದ ಇತರ ಅಧಿಕಾರಿಗಳು ಇದ್ದರು.

ಇದನ್ನೂ ಓದಿ: ಸರ್ಕಾರದ ಯೋಜನೆಗಳು ಜನರನ್ನು ತಲುಪಲು ಬ್ಯಾಂಕ್​ಗಳು ಡಿಜಿಟಲ್ ವ್ಯವಸ್ಥೆ ಬಳಸಿಕೊಳ್ಳಬೇಕು: ನಿರ್ಮಲಾ ಸೀತಾರಾಮನ್

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ