AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2022: ಭಾರತದ ಆರ್ಥಿಕ ಬೆಳವಣಿಗೆ 9.27 ಪರ್ಸೆಂಟ್​, ಪ್ರಸಕ್ತ ಬಜೆಟ್​ನಲ್ಲಿ ಈ 7 ಅಂಶಗಳಿಗೆ ಪ್ರಾಮುಖ್ಯತೆ

ಸೂಕ್ಷ್ಮ ಮತ್ತು ಸ್ಥೂಲ ಆರ್ಥಿಕತೆಗೆ ಪೂರಕವಾಗಿ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಅದರೊಂದಿಗೆ ಡಿಜಿಟಲ್​ ಆರ್ಥಿಕತೆ, ಖಾಸಗಿ ಮತ್ತು ಸಾರ್ವಜನಿಕ ಹೂಡಿಕೆಗಳನ್ನು ಉತ್ತೇಜಿಸುವುದು ನಮ್ಮ ಗುರಿ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Budget 2022: ಭಾರತದ ಆರ್ಥಿಕ ಬೆಳವಣಿಗೆ 9.27 ಪರ್ಸೆಂಟ್​, ಪ್ರಸಕ್ತ ಬಜೆಟ್​ನಲ್ಲಿ ಈ 7 ಅಂಶಗಳಿಗೆ ಪ್ರಾಮುಖ್ಯತೆ
ಬಜೆಟ್​ ಮಂಡನೆ ಮಾಡುತ್ತಿರುವ ನಿರ್ಮಲಾ ಸೀತಾರಾಮನ್​
TV9 Web
| Edited By: |

Updated on:Feb 01, 2022 | 11:53 AM

Share

ದೆಹಲಿ: ಭಾರತದ ಆರ್ಥಿಕ ಬೆಳವಣಿಗೆ ಪ್ರಸಕ್ತ ವರ್ಷದಲ್ಲಿ ಅಂದಾಜು ಶೇ.9.27ರಷ್ಟಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಹೇಳಿದ್ದಾರೆ. 2022-23ನೇ ಸಾಲಿನ ಕೇಂದ್ರ ಬಜೆಟ್​ ಮಂಡನೆ ವೇಳೆ ಮಾಹಿತಿ ನೀಡಿದ ಅವರು, ಭಾರತದ ಬೆಳವಣಿಗೆ ಶೇ.9.2ರಷ್ಟಿದ್ದು, ಇದು ಅತ್ಯಂತ ದೊಡ್ಡ ಆರ್ಥಿಕತೆಗಳಲ್ಲಿ ಒಂದಾಗಿದೆ ಎಂದು ಹೇಳಿದರು. ಬಜೆಟ್​ ಮಂಡನೆ ಪ್ರಾರಂಭದಲ್ಲಿ  ಆಜಾದಿ ಕಾ ಅಮೃತ್ ಮಹೋತ್ಸವದ ಉಲ್ಲೇಖ ಮಾಡಿದ ನಿರ್ಮಲಾ ಸೀತಾರಾಮನ್​, @75ರಲ್ಲಿರುವ  ಇಂಡಿಯಾವನ್ನು @100ಕ್ಕೆ ಕೊಂಡೊಯ್ಯುವ ಆದ್ಯತೆಯನ್ನಿಟ್ಟುಕೊಂಡು ಪ್ರಸಕ್ತ ಸಾಲಿನ ಕೇಂದ್ರ ಬಜೆಟ್​ ರೂಪಿಸಲಾಗಿದೆ ಎಂದು ಹೇಳಿದರು.

ನಾವೀಗ ಆಜಾದಿ ಕಾ ಅಮೃತ ಮಹೋತ್ಸವ ಆಚರಣೆ ಮಾಡುತ್ತಿದ್ದೇವೆ. ಈ ಹೊತ್ತಲ್ಲಿ ಸೂಕ್ಷ್ಮ ಮತ್ತು ಸ್ಥೂಲ ಆರ್ಥಿಕತೆಗೆ ಪೂರಕವಾಗಿ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಅದರೊಂದಿಗೆ ಡಿಜಿಟಲ್​ ಆರ್ಥಿಕತೆ, ಖಾಸಗಿ ಮತ್ತು ಸಾರ್ವಜನಿಕ ಹೂಡಿಕೆಗಳನ್ನು ಉತ್ತೇಜಿಸುವುದು ನಮ್ಮ ಗುರಿ ಎಂದು ಹೇಳಿದರು. ಹಾಗೇ, ಪ್ರಸಕ್ರ ಬಾರಿಯ ಬಜೆಟ್​ನಲ್ಲಿ, ಪಿಎಂ ಗತಿಶಕ್ತಿ, ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿ, ಉತ್ಪಾದಕತೆಯ ವೃದ್ಧಿ, ಅವಕಾಶಗಳಲ್ಲಿ ಹೆಚ್ಚಳ, ವಿದ್ಯುತ್​ ಉತ್ಪಾದನೆ  ಮತ್ತು ವಿತರಣೆಯಲ್ಲಿ ಸುಧಾರಣೆ, ಪರಿಸರ ಸಂರಕ್ಷಣೆ, ವ್ಯವಸ್ಥಿತ ಹೂಡಿಕೆಗಳಿಗೆ ಒತ್ತು  ನೀಡಲು ಆದ್ಯತೆ ನೀಡಲಾಗಿದೆ. ಈ ಏಳು ಅಂಶಗಳಿಗೆ 2022-23ರ ಕೇಂದ್ರ ಬಜೆಟ್​​ನ ಪ್ರಾಮುಖ್ಯತೆ ನೀಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್​ ಹೇಳಿದರು.

ಹಾಗೇ, ಕೊರೊನಾ ಸಾಂಕ್ರಾಮಿಕ ಹೊತ್ತಲ್ಲಿ ಕೇಂದ್ರ ಸರ್ಕಾರ ಪ್ರಾರಂಭ ಮಾಡಿದ ಆತ್ಮ ನಿರ್ಭರ್​ ಭಾರತ ಅಭಿಯಾನದ ಬಗ್ಗೆ ಉಲ್ಲೇಖಿಸಿದ ನಿರ್ಮಲಾ ಸೀತಾರಾಮನ್​, ಆತ್ಮ ನಿರ್ಭರ ಭಾರತಕ್ಕೆ ದೇಶಾದ್ಯಂತ ಅತ್ಯುತ್ತಮ ಸ್ಪಂದನೆ ವ್ಯಕ್ತವಾಗಿದೆ. ಏರ್​ ಇಂಡಿಯಾ ಮಾರಾಟ ಯಶಸ್ವಿಯಾಗಿ ನಡೆದಿದೆ. ಬರುವ ದಿನಗಳಲ್ಲಿ ಎಲ್​ಐಸಿಯಿಂದ ಬಂಡವಾಳ ಹಿಂಪಡೆಯುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ನಿರ್ಮಲಾ ಸೀತಾರಾಮನ್​ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Budget 2022: ಮೂರು ವರ್ಷಗಳಲ್ಲಿ 400 ಹೊಸ ತಲೆಮಾರಿನ ವಂದೇ ಭಾರತ್ ರೈಲು: ನಿರ್ಮಲಾ ಸೀತಾರಾಮನ್

Published On - 11:51 am, Tue, 1 February 22

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!