AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2022: ಭಾರತದ ಆರ್ಥಿಕ ಬೆಳವಣಿಗೆ 9.27 ಪರ್ಸೆಂಟ್​, ಪ್ರಸಕ್ತ ಬಜೆಟ್​ನಲ್ಲಿ ಈ 7 ಅಂಶಗಳಿಗೆ ಪ್ರಾಮುಖ್ಯತೆ

ಸೂಕ್ಷ್ಮ ಮತ್ತು ಸ್ಥೂಲ ಆರ್ಥಿಕತೆಗೆ ಪೂರಕವಾಗಿ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಅದರೊಂದಿಗೆ ಡಿಜಿಟಲ್​ ಆರ್ಥಿಕತೆ, ಖಾಸಗಿ ಮತ್ತು ಸಾರ್ವಜನಿಕ ಹೂಡಿಕೆಗಳನ್ನು ಉತ್ತೇಜಿಸುವುದು ನಮ್ಮ ಗುರಿ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Budget 2022: ಭಾರತದ ಆರ್ಥಿಕ ಬೆಳವಣಿಗೆ 9.27 ಪರ್ಸೆಂಟ್​, ಪ್ರಸಕ್ತ ಬಜೆಟ್​ನಲ್ಲಿ ಈ 7 ಅಂಶಗಳಿಗೆ ಪ್ರಾಮುಖ್ಯತೆ
ಬಜೆಟ್​ ಮಂಡನೆ ಮಾಡುತ್ತಿರುವ ನಿರ್ಮಲಾ ಸೀತಾರಾಮನ್​
TV9 Web
| Edited By: |

Updated on:Feb 01, 2022 | 11:53 AM

Share

ದೆಹಲಿ: ಭಾರತದ ಆರ್ಥಿಕ ಬೆಳವಣಿಗೆ ಪ್ರಸಕ್ತ ವರ್ಷದಲ್ಲಿ ಅಂದಾಜು ಶೇ.9.27ರಷ್ಟಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಹೇಳಿದ್ದಾರೆ. 2022-23ನೇ ಸಾಲಿನ ಕೇಂದ್ರ ಬಜೆಟ್​ ಮಂಡನೆ ವೇಳೆ ಮಾಹಿತಿ ನೀಡಿದ ಅವರು, ಭಾರತದ ಬೆಳವಣಿಗೆ ಶೇ.9.2ರಷ್ಟಿದ್ದು, ಇದು ಅತ್ಯಂತ ದೊಡ್ಡ ಆರ್ಥಿಕತೆಗಳಲ್ಲಿ ಒಂದಾಗಿದೆ ಎಂದು ಹೇಳಿದರು. ಬಜೆಟ್​ ಮಂಡನೆ ಪ್ರಾರಂಭದಲ್ಲಿ  ಆಜಾದಿ ಕಾ ಅಮೃತ್ ಮಹೋತ್ಸವದ ಉಲ್ಲೇಖ ಮಾಡಿದ ನಿರ್ಮಲಾ ಸೀತಾರಾಮನ್​, @75ರಲ್ಲಿರುವ  ಇಂಡಿಯಾವನ್ನು @100ಕ್ಕೆ ಕೊಂಡೊಯ್ಯುವ ಆದ್ಯತೆಯನ್ನಿಟ್ಟುಕೊಂಡು ಪ್ರಸಕ್ತ ಸಾಲಿನ ಕೇಂದ್ರ ಬಜೆಟ್​ ರೂಪಿಸಲಾಗಿದೆ ಎಂದು ಹೇಳಿದರು.

ನಾವೀಗ ಆಜಾದಿ ಕಾ ಅಮೃತ ಮಹೋತ್ಸವ ಆಚರಣೆ ಮಾಡುತ್ತಿದ್ದೇವೆ. ಈ ಹೊತ್ತಲ್ಲಿ ಸೂಕ್ಷ್ಮ ಮತ್ತು ಸ್ಥೂಲ ಆರ್ಥಿಕತೆಗೆ ಪೂರಕವಾಗಿ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಅದರೊಂದಿಗೆ ಡಿಜಿಟಲ್​ ಆರ್ಥಿಕತೆ, ಖಾಸಗಿ ಮತ್ತು ಸಾರ್ವಜನಿಕ ಹೂಡಿಕೆಗಳನ್ನು ಉತ್ತೇಜಿಸುವುದು ನಮ್ಮ ಗುರಿ ಎಂದು ಹೇಳಿದರು. ಹಾಗೇ, ಪ್ರಸಕ್ರ ಬಾರಿಯ ಬಜೆಟ್​ನಲ್ಲಿ, ಪಿಎಂ ಗತಿಶಕ್ತಿ, ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿ, ಉತ್ಪಾದಕತೆಯ ವೃದ್ಧಿ, ಅವಕಾಶಗಳಲ್ಲಿ ಹೆಚ್ಚಳ, ವಿದ್ಯುತ್​ ಉತ್ಪಾದನೆ  ಮತ್ತು ವಿತರಣೆಯಲ್ಲಿ ಸುಧಾರಣೆ, ಪರಿಸರ ಸಂರಕ್ಷಣೆ, ವ್ಯವಸ್ಥಿತ ಹೂಡಿಕೆಗಳಿಗೆ ಒತ್ತು  ನೀಡಲು ಆದ್ಯತೆ ನೀಡಲಾಗಿದೆ. ಈ ಏಳು ಅಂಶಗಳಿಗೆ 2022-23ರ ಕೇಂದ್ರ ಬಜೆಟ್​​ನ ಪ್ರಾಮುಖ್ಯತೆ ನೀಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್​ ಹೇಳಿದರು.

ಹಾಗೇ, ಕೊರೊನಾ ಸಾಂಕ್ರಾಮಿಕ ಹೊತ್ತಲ್ಲಿ ಕೇಂದ್ರ ಸರ್ಕಾರ ಪ್ರಾರಂಭ ಮಾಡಿದ ಆತ್ಮ ನಿರ್ಭರ್​ ಭಾರತ ಅಭಿಯಾನದ ಬಗ್ಗೆ ಉಲ್ಲೇಖಿಸಿದ ನಿರ್ಮಲಾ ಸೀತಾರಾಮನ್​, ಆತ್ಮ ನಿರ್ಭರ ಭಾರತಕ್ಕೆ ದೇಶಾದ್ಯಂತ ಅತ್ಯುತ್ತಮ ಸ್ಪಂದನೆ ವ್ಯಕ್ತವಾಗಿದೆ. ಏರ್​ ಇಂಡಿಯಾ ಮಾರಾಟ ಯಶಸ್ವಿಯಾಗಿ ನಡೆದಿದೆ. ಬರುವ ದಿನಗಳಲ್ಲಿ ಎಲ್​ಐಸಿಯಿಂದ ಬಂಡವಾಳ ಹಿಂಪಡೆಯುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ನಿರ್ಮಲಾ ಸೀತಾರಾಮನ್​ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Budget 2022: ಮೂರು ವರ್ಷಗಳಲ್ಲಿ 400 ಹೊಸ ತಲೆಮಾರಿನ ವಂದೇ ಭಾರತ್ ರೈಲು: ನಿರ್ಮಲಾ ಸೀತಾರಾಮನ್

Published On - 11:51 am, Tue, 1 February 22

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!