ಶೇ. 65.3ರಷ್ಟು ಕಾರ್ಮಿಕರಿಗೆ ಕೌಶಲ್ಯ ತರಬೇತಿ ಸಿಕ್ಕಿಲ್ಲ: ದೇಶದ ಉದ್ಯೋಗ ಕ್ಷೇತ್ರದ ಮುಂದಿರುವ ಸವಾಲು ಎತ್ತಿತೋರಿಸಿದ ಆರ್ಥಿಕ ಸಮೀಕ್ಷೆ

Pre-budget Economic survey report: ಭಾರತದಲ್ಲಿ ಶೇ. 65.3ರಷ್ಟು ಮಂದಿ ಕೆಲಸಗಾರರಿಗೆ ಅವಶ್ಯಕ ಕೌಶಲ್ಯಗಳ ತರಬೇತಿ ಸಿಕ್ಕಿಲ್ಲ ಎಂದು 2024-25ರ ಆರ್ಥಿಕ ಸಮೀಕ್ಷೆಯಲ್ಲಿ ಹೇಳಲಾಗಿದೆ. ಅರ್ಧಕ್ಕಿಂತ ಹೆಚ್ಚು ಪದವೀಧರರು ಕಡಿಮೆ ಕೌಶಲ್ಯ ಬೇಡುವ ಕೆಲಸಗಳಲ್ಲಿ ತೊಡಗಿದ್ದಾರೆ. ಶೇ. 36ರಷ್ಟು ಪೋಸ್ಟ್ ಗ್ರಾಜುಯೇಟ್​ಗಳೂ ಕೂಡ ತಮಗೆ ಹೊಂದಿಕೆಯಾಗದ ಕೆಲಸಗಳನ್ನು ಮಾಡುತ್ತಿರುವುದು ಕಂಡು ಬಂದಿದೆ.

ಶೇ. 65.3ರಷ್ಟು ಕಾರ್ಮಿಕರಿಗೆ ಕೌಶಲ್ಯ ತರಬೇತಿ ಸಿಕ್ಕಿಲ್ಲ: ದೇಶದ ಉದ್ಯೋಗ ಕ್ಷೇತ್ರದ ಮುಂದಿರುವ ಸವಾಲು ಎತ್ತಿತೋರಿಸಿದ ಆರ್ಥಿಕ ಸಮೀಕ್ಷೆ
ಕೌಶಲ್ಯಾಭಿವೃದ್ದಿ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 31, 2025 | 4:44 PM

ನವದೆಹಲಿ, ಜನವರಿ 31: ದೇಶದಲ್ಲಿ ಕೌಶಲ್ಯಾಭಿವೃದ್ದಿ ತೀವ್ರಗೊಳಿಸಲು ಸರ್ಕಾರ ಮಾಡುತ್ತಿರುವ ಹಲವು ಪ್ರಯತ್ನಗಳನ್ನು ಆರ್ಥಿಕ ಸಮೀಕ್ಷೆ ಮೆಚ್ಚಿಕೊಂಡಿದೆ. ಆದರೆ, ಈ ವಿಚಾರದಲ್ಲಿ ಇನ್ನೂ ಕೂಡ ಬಹಳಷ್ಟು ದೊಡ್ಡ ಸವಾಲು ಕಣ್ಮುಂದಿರುವುದನ್ನು ಅದು ಎತ್ತಿ ತೋರಿಸಿದೆ. ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ವಿ ಅನಂತನಾಗೇಶ್ವರನ್ ನೇತೃತ್ವದಲ್ಲಿ ತಯಾರಾಗಿರುವ 2024-25ರ ಸಾಲಿನ ಆರ್ಥಿಕ ಸಮೀಕ್ಷೆಯ ವರದಿಯನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಲೋಕಸಭೆಯಲ್ಲಿ ಮಂಡನೆ ಮಾಡಿದ್ದಾರೆ. ಇದರಲ್ಲಿ ಉದ್ಯೋಗಸೃಷ್ಟಿಗೆ ಸರ್ಕಾರ ತೆಗೆದುಕೊಂಡಿರುವ ಹಲವು ಪ್ರಯತ್ನಗಳನ್ನು ಶ್ಲಾಘಿಸಲಾಗಿದೆ. ಆದರೆ, ಕೆಲಸಗಾರರಲ್ಲಿ ಅಗತ್ಯ ಕೌಶಲ್ಯಗಳ ಕೊರತೆ ಇರುವುದನ್ನೂ ಅದು ಗಮನಿಸಿದೆ.

ಆರ್ಥಿಕ ಸಮೀಕ್ಷೆಯ ವರದಿ ಪ್ರಕಾರ ಶೇ. 65.3ರಷ್ಟು ಕಾರ್ಮಿಕರಿಗೆ ಯಾವುದೇ ಅಧಿಕೃತ ಕೌಶಲ್ಯ ತರಬೇತಿ ಇಲ್ಲ. ಇದರಿಂದ ಅವರಿಗೆ ಸರಿಯಾದ ಉದ್ಯೋಗ ಸಿಗುತ್ತಿಲ್ಲ ಎಂದು ಆರ್ಥಿಕ ಸಮೀಕ್ಷೆಯಲ್ಲಿ ಹೇಳಲಾಗಿದೆ. ಇನ್ನು, ಶೇ. 53ರಷ್ಟು ಪದವೀಧರರು, ಮತ್ತು ಶೇ. 36ರಷ್ಟು ಸ್ನಾತಕೋತ್ತರ ಪದವೀಧರರು ಕಡಿಮೆ ಕೌಶಲ್ಯದ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ದೇಶದ ವಾಸ್ತವ ಉದ್ಯೋಗ ಚಿತ್ರಣವನ್ನು ಈ ಸಮೀಕ್ಷೆಯಲ್ಲಿ ಪ್ರಸ್ತಾಪಿಸಲಾಗಿದೆ.

ಇದನ್ನೂ ಓದಿ: 2023ರ ಬಜೆಟ್​ನಲ್ಲಿ ಆರಂಭಗೊಂಡಿದ್ದ ಈ ಮಹಿಳಾ ಸ್ಕೀಮ್ ಮಾರ್ಚ್ 31ಕ್ಕೆ ಅಂತ್ಯ; ಈ ಬಜೆಟ್​ನಲ್ಲಿ ವಿಸ್ತರಣೆಯಾಗುತ್ತಾ?

ಕೌಶಲ್ಯಾಭಿವೃದ್ಧಿ ಯೋಜನೆಗಳು ಮಹಿಳೆಯರನ್ನು ನಿರೀಕ್ಷಿತ ಮಟ್ಟದಲ್ಲಿ ತಲುಪುತ್ತಿಲ್ಲ. ಮಕ್ಕಳ ಪಾಲನೆ, ಸಾಂಪ್ರದಾಯಿಕ ಕಟ್ಟುಪಾಡು ಇತ್ಯಾದಿ ಕಾರಣದಿಂದ ಮಹಿಳೆಯರು ಉದ್ಯೋಗ ಕ್ಷೇತ್ರಕ್ಕೆ ಬರುವುದು ಮತ್ತು ಅಗತ್ಯ ಕೌಶಲ್ಯಗಳನ್ನು ಕಲಿಯುವುದು ಕಷ್ಟವಾಗಿದೆ ಎಂಬ ಸಂಗತಿಗಳನ್ನು ಎತ್ತಿ ತೋರಿಸಿರುವ ಈ ಆರ್ಥಿಕ ಸಮೀಕ್ಷೆಯು, ಹೆಚ್ಚು ಮಹಿಳಾ ಕೇಂದ್ರಿತ ಕೌಶಲ್ಯ ತರಬೇತಿ ಯೋಜನೆಗಳನ್ನು ಜಾರಿಗೊಳಿಸಬೇಕು, ಮತ್ತು ಉದ್ಯೋಗಸ್ಥಳದಲ್ಲಿ ಮಹಿಳೆಯರಿಗೆ ಅನುಕೂಲವಾಗುವ ವಾತಾವರಣ ನಿರ್ಮಿಸಲು ಉತ್ತೇಜಿಸಬೇಕು ಎಂದು ಸಲಹೆ ನೀಡಿದೆ.

ಸರ್ಕಾರದ ಪ್ರಯತ್ನಗಳನ್ನು ಮೆಚ್ಚಿದ ಸಮೀಕ್ಷೆ…

ಉದ್ಯೋಗಸೃಷ್ಟಿಗೆ ಸರ್ಕಾರ ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿರುವುದನ್ನು ಆರ್ಥಿಕ ಸಮೀಕ್ಷೆಯಲ್ಲಿ ಗುರುತಿಸಲಾಗಿದೆ. ಮೊದಲ ಬಾರಿಗೆ ಉದ್ಯೋಗ ಸೇರುವ ಯುವಕರಿಗೆ ಒಂದು ತಿಂಗಳ ಸಂಬಳವನ್ನು ಉಚಿತವಾಗಿ ನೀಡುವ ಯೋಜನೆ; ಮ್ಯಾನುಫ್ಯಾಕ್ಚರಿಂಗ್ ಕ್ಷೇತ್ರದ ಕಂಪನಿಗಳು ಉದ್ಯೋಗಿಗಳಿಗೆ ನೀಡುವ ಇಪಿಎಫ್​ಒ ಕೊಡುಗೆಗಳಿಗೆ ಸಬ್ಸಿಡಿ ನೀಡುವುದು; ಹೆಚ್ಚುವರಿ ನೇಮಕಾತಿ ಮಾಡುವ ಸಂಸ್ಥೆಗಳಿಗೆ ತಿಂಗಳಿಗೆ 3 ಸಾವಿರ ರೂ ಪರಿಹಾರವನ್ನು ಎರಡು ವರ್ಷ ಕಾಲ ನೀಡುವುದು ಹೀಗೆ ವಿವಿಧ ಸ್ಕೀಮ್​ಗಳು ಉದ್ಯೋಗಸೃಷ್ಟಿಗೆ ಸಹಾಯವಾಗಿವೆ ಎಂದು ಈ ಸಮೀಕ್ಷೆಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಆರ್ಥಿಕ ಸಮೀಕ್ಷೆ ಮಂಡನೆ; ಶೇ. 6.8ರವರೆಗೆ ಜಿಡಿಪಿ ಹೆಚ್ಚಳ ನಿರೀಕ್ಷೆ; ಉದ್ಯಮಗಳಿಗೆ ಹೆಚ್ಚು ಸ್ವಾತಂತ್ರ್ಯ ನೀಡಲು ಸಲಹೆ

ಪಿಎಂ ಇಂಟರ್ನ್​ಶಿಪ್ ಸ್ಕೀಮ್, ಐಟಿಐ ಉನ್ನತೀಕರಣ ಯೋಜನೆ, ಕಾರ್ಮಿಕ ಕಾನೂನುಗಳ ಸುಧಾರಣೆ ಇತ್ಯಾದಿಗಳಿಂದ ಭಾರತದಲ್ಲಿ ಉದ್ಯೋಗಸೃಷ್ಟಿಗೆ ಪೂರಕವಾದ ವಾತಾವರಣ ನಿರ್ಮಾಣ ಆಗುತ್ತಿದೆ ಎಂದು ಈ ಸಮೀಕ್ಷೆ ವಿಶ್ವಾಸ ವ್ಯಕ್ತಪಡಿಸಿದೆ.

ಇನ್ನಷ್ಟು ಬಜೆಟ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ
ಸಿಬಿಐಗೆ ರಾಜ್ಯಸರ್ಕಾರ ಅನುಮತಿಯ ಅವಶ್ಯಕತೆ ಇರುತ್ತದೆ: ಪರಮೇಶ್ವರ್
ಸಿಬಿಐಗೆ ರಾಜ್ಯಸರ್ಕಾರ ಅನುಮತಿಯ ಅವಶ್ಯಕತೆ ಇರುತ್ತದೆ: ಪರಮೇಶ್ವರ್
ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್​ನಲ್ಲಿ ಅಗ್ನಿ ಅವಘಡ
ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್​ನಲ್ಲಿ ಅಗ್ನಿ ಅವಘಡ
ಅರ್ಜಿ ವಜಾಗೊಂಡರೂ ಸಿದ್ದರಾಮಯ್ಯ ವಿರುದ್ಧದ ಪಟ್ಟು ಸಡಿಲಿಸದ ಸ್ನೇಹಮಯಿ ಕೃಷ್ಣ
ಅರ್ಜಿ ವಜಾಗೊಂಡರೂ ಸಿದ್ದರಾಮಯ್ಯ ವಿರುದ್ಧದ ಪಟ್ಟು ಸಡಿಲಿಸದ ಸ್ನೇಹಮಯಿ ಕೃಷ್ಣ