Education Budget 2024: STEM ಕೋರ್ಸ್‌ಗಳಲ್ಲಿ ಮಹಿಳೆಯರ ದಾಖಲಾತಿ ಶೇ 28 ಹೆಚ್ಚಾಗಿದೆ: ನಿರ್ಮಲಾ ಸೀತಾರಾಮನ್

ಉನ್ನತ ಶಿಕ್ಷಣಕ್ಕೆ ಸರ್ಕಾರ ವಿಶೇಷ ಗಮನ ಹರಿಸಿದ್ದು. ಕಳೆದ 10 ವರ್ಷಗಳಲ್ಲಿ, ಒಟ್ಟು 390 ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ. 7 ಹೊಸ ಐಐಟಿಗಳು, 16 ಐಐಐಟಿಗಳು, 7 ಐಐಎಂಗಳು, 15 ಎಐಐಎಂಎಸ್, 3,000 ಹೊಸ ಐಟಿಐಗಳನ್ನೂ ಸ್ಥಾಪಿಸಲಾಗಿದೆ ಎಂದು ಮಧ್ಯಂತರ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Education Budget 2024: STEM ಕೋರ್ಸ್‌ಗಳಲ್ಲಿ ಮಹಿಳೆಯರ ದಾಖಲಾತಿ ಶೇ 28 ಹೆಚ್ಚಾಗಿದೆ: ನಿರ್ಮಲಾ ಸೀತಾರಾಮನ್
ಪ್ರಾತಿನಿಧಿಕ ಚಿತ್ರ
Follow us
|

Updated on:Feb 01, 2024 | 1:49 PM

ದೆಹಲಿ ಫೆಬ್ರವರಿ 01: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಇಂದು (ಗುರುವಾರ) ಮಧ್ಯಂತರ ಕೇಂದ್ರ ಬಜೆಟ್ 2024 (Interim budget 2024) ಮಂಡಿಸಿದ್ದಾರೆ. ಈ ವರ್ಷದ ಶಿಕ್ಷಣ ಬಜೆಟ್ 2024 (Education Budget)ನಲ್ಲಿ ‘ಅಮೃತ್ ಪೀಡಿ’, ಯುವಕರನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿದೆ. ಗುಣಮಟ್ಟದ ಬೋಧನೆ ಮತ್ತು ಸಮಗ್ರ ಮತ್ತು ಸುಸಂಘಟಿತ ವ್ಯಕ್ತಿಗಳನ್ನು ಪೋಷಿಸಲು ಸರ್ಕಾರ ಗಮನಹರಿಸುತ್ತಿದೆ ಎಂದು ಹಣಕಾಸು ಸಚಿವೆ ಹೇಳಿದರು. ಉನ್ನತ ಶಿಕ್ಷಣಕ್ಕೆ ಸರ್ಕಾರ ವಿಶೇಷ ಗಮನ ಹರಿಸಿದೆ. ಕಳೆದ 10 ವರ್ಷಗಳಲ್ಲಿ, ಒಟ್ಟು 390 ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ. 7 ಹೊಸ ಐಐಟಿಗಳು, 16 ಐಐಐಟಿಗಳು, 7 ಐಐಎಂಗಳು, 15 ಎಐಐಎಂಎಸ್, 3,000 ಹೊಸ ಐಟಿಐಗಳನ್ನೂ ಸ್ಥಾಪಿಸಲಾಗಿದೆ ಎಂದಿದ್ದಾರೆ ಅವರು.

ಶಿಕ್ಷಣ ಬಜೆಟ್ 2024 ಮುಖ್ಯಾಂಶಗಳು

ಉನ್ನತ ಶಿಕ್ಷಣದಲ್ಲಿ ಮಹಿಳಾ ದಾಖಲಾತಿ: STEM ಕೋರ್ಸ್‌ಗಳಲ್ಲಿ (Science, technology, engineering, and mathematics)  ಕಳೆದ 10 ವರ್ಷಗಳಲ್ಲಿ ಉನ್ನತ ಶಿಕ್ಷಣದಲ್ಲಿ ಮಹಿಳಾ ದಾಖಲಾತಿ 28 ಪ್ರತಿಶತದಷ್ಟು ಹೆಚ್ಚಾಗಿದೆ. STEM ಕೋರ್ಸ್‌ಗಳಿಗೆ ದಾಖಲಾದ ವಿದ್ಯಾರ್ಥಿಗಳಲ್ಲಿ 43 ಪ್ರತಿಶತದಷ್ಟು ಮಹಿಳೆಯರು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರ

NEP 2020: ರಾಷ್ಟ್ರೀಯ ಶಿಕ್ಷಣ ನೀತಿ 2020 ಉದಯೋನ್ಮುಖ ಭಾರತಕ್ಕಾಗಿ ಶಾಲೆಗಳಲ್ಲಿ ಸುಧಾರಣೆಗಳನ್ನು ಪರಿವರ್ತಿಸುವ ಗುರಿಯನ್ನು ಹೊಂದಿದೆ. ಪಿಎಂ ಶ್ರೀ ಶಾಲೆಯು ಗುಣಮಟ್ಟದ ಬೋಧನೆಯನ್ನು ನೀಡಲು ಮತ್ತು ಸಮಗ್ರ ಮತ್ತು ಸುಸಜ್ಜಿತ ವ್ಯಕ್ತಿಗಳನ್ನು ಪೋಷಿಸಲು ಕೇಂದ್ರೀಕರಿಸಿದೆ.

ವೈದ್ಯಕೀಯ ಕಾಲೇಜುಗಳು: ಈ ವರ್ಷ ಒಟ್ಟು 15 ಹೊಸ ಎಐಐಎಂಗಳನ್ನು ಪ್ರಾರಂಭಿಸಲಾಗಿದೆ. ಆಸ್ಪತ್ರೆಯ ಮೂಲಸೌಕರ್ಯವನ್ನು ಬಳಸಿಕೊಂಡು ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ಸರ್ಕಾರ ಚಿಂತಿಸುತ್ತಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ

ಉನ್ನತ ಶಿಕ್ಷಣ ಸಂಸ್ಥೆಗಳು: ಒಟ್ಟು 390 ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ. ಸರ್ಕಾರವು 7 ಹೊಸ ಐಐಟಿಗಳು, 16 ಐಐಐಟಿಗಳು, 7 ಐಐಎಂಗಳು, 15 ಎಐಐಎಂಎಸ್, 3,000 ಹೊಸ ಐಟಿಐಗಳನ್ನು ಸ್ಥಾಪಿಸಿದೆ.

ಸ್ಕಿಲ್ ಇಂಡಿಯಾ ಮಿಷನ್: ಸ್ಕಿಲ್ ಇಂಡಿಯಾ ಮಿಷನ್ 1.4 ಕೋಟಿ ಯುವಕರಿಗೆ ತರಬೇತಿ ನೀಡಿದೆ. 54 ಲಕ್ಷ ಯುವಕರಿಗೆ ಕೌಶಲ್ಯ ಮತ್ತು ಪುನರ್ ಕೌಶಲ್ಯವನ್ನು ನೀಡಿದೆ.

ಶಿಕ್ಷಣ ಸಾಲ: ಕಡಿಮೆ ಬಡ್ಡಿ ದರದೊಂದಿಗೆ ಶಿಕ್ಷಣ ಸಾಲದಲ್ಲಿ ದೀರ್ಘಾವಧಿಯ ಹಣಕಾಸು ಮತ್ತು ಮರು-ಹಣಕಾಸು ಒದಗಿಸುವ ನಿಧಿ ಸ್ಥಾಪಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ಇದನ್ನೂ ಓದಿ: Nirmala Sitharaman Saree: ಕಳೆದ ಬಜೆಟ್​ನಲ್ಲಿ ಕರ್ನಾಟಕದ ಇಳಕಲ್ ಸೀರೆಯಲ್ಲಿ ಮಿಂಚಿದ್ದ ನಿರ್ಮಲಾ ಸೀತಾರಾಮನ್ ಈ ಬಾರಿ ನೀಲಿ ಮೆರಗು

ಕಳೆದ ವರ್ಷ ಶಿಕ್ಷಣ ಕ್ಷೇತ್ರಕ್ಕೆ ಬಜೆಟ್‌ಗಾಗಿ 1,12,899 ಕೋಟಿ ರೂ ಮೀಸಲಿಡಲಾಗಿತ್ತು. ಕೇಂದ್ರ ಬಜೆಟ್‌ನಲ್ಲಿ ಉನ್ನತ ಶಿಕ್ಷಣಕ್ಕೆ 44,094.62 ಕೋಟಿ ರೂ., ಸಮಗ್ರ ಶಿಕ್ಷಾ ಅಭಿಯಾನ- 37,453 ಕೋಟಿ ರೂ., ಪ್ರಧಾನ ಮಂತ್ರಿ ಶಾಲೆಗಳಿಗೆ- 4,000 ಕೋಟಿ ರೂ ಅನುದಾನ ಘೋಷಣೆ ಆಗಿತ್ತು.

ಇನ್ನಷ್ಟು ಬಜೆಟ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 1:46 pm, Thu, 1 February 24

ತಾಜಾ ಸುದ್ದಿ
ಮಂಗಳೂರು, ಉಡುಪಿಯಲ್ಲಿ ಮಳೆ, ಕೆಲ ಪ್ರವಾಸಿ ತಾಣಗಳಿಗೆ ತೆರಳದಂತೆ ನಿರ್ಬಂಧ
ಮಂಗಳೂರು, ಉಡುಪಿಯಲ್ಲಿ ಮಳೆ, ಕೆಲ ಪ್ರವಾಸಿ ತಾಣಗಳಿಗೆ ತೆರಳದಂತೆ ನಿರ್ಬಂಧ
ಐಟಿಸಿ ಮೌರ್ಯ ಹೋಟೆಲ್​​ನಲ್ಲಿ ​​ಕೇಕ್​​ ಕತ್ತರಿಸಿದ ರಾಹುಲ್ ದ್ರಾವಿಡ್
ಐಟಿಸಿ ಮೌರ್ಯ ಹೋಟೆಲ್​​ನಲ್ಲಿ ​​ಕೇಕ್​​ ಕತ್ತರಿಸಿದ ರಾಹುಲ್ ದ್ರಾವಿಡ್
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ