AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2022: 90 ನಿಮಿಷಗಳಲ್ಲಿ ಬಜೆಟ್​ ಭಾಷಣ ಮುಗಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​

2022 -23ನೇ ಸಾಲಿನ ಕೇಂದ್ರ ಬಜೆಟ್​ ಮುಕ್ತಾಯಗೊಂಡಿದೆ. 90 ನಿಮಿಷದೊಳಗೆ ತಮ್ಮ ಬಜೆಟ್ ಭಾಷಣವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮುಗಿಸಿದ್ದಾರೆ.

Budget 2022: 90 ನಿಮಿಷಗಳಲ್ಲಿ ಬಜೆಟ್​ ಭಾಷಣ ಮುಗಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​
ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
TV9 Web
| Edited By: |

Updated on:Feb 01, 2022 | 3:46 PM

Share

2022 -23ನೇ ಸಾಲಿನ ಕೇಂದ್ರ ಬಜೆಟ್ (Budget 2022) ​ ಮುಕ್ತಾಯಗೊಂಡಿದೆ. 90 ನಿಮಿಷದೊಳಗೆ ತಮ್ಮ ಬಜೆಟ್ ಭಾಷಣವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಮುಗಿಸಿದ್ದಾರೆ. ಸ್ಪೀಕರ್ ಓಂ ಬಿರ್ಲಾ ಸೂಚನೆ ಮೇರೆಗೆ ಸಚಿವರು ಹಣಕಾಸು ವಿಧೇಯಕ ಮಂಡಿಸಿದರು. ನಿರ್ಮಲಾ ಸೀತಾರಾಮನ್​ನ ಈ ಹಿಂದಿನ ಬಜೆಟ್ ಭಾಷಣಗಳಿಗೆ ಹೋಲಿಸಿದರೆ ಇದು ಕಡಿಮೆ ಅವಧಿಯಾಗಿದೆ. ಈ ಬಾರಿ ವಿತ್ತ ಸಚಿವರು 90 ನಿಮಿಷಗಳಲ್ಲಿ ತಮ್ಮ ಬಜೆಟ್ ಭಾಷಣ ಮುಗಿಸಿದರು. 2020ರಲ್ಲಿ ದಾಖಲೆಯ 160 ನಿಮಿಷ ಬಜೆಟ್ ಮಂಡಿಸಿದ್ದರು. ಈ ಬಾರಿ 90  ನಿಮಿಷಗಳ ಕಾಲ ಬಜೆಟ್ ಮಂಡಿಸಿದ್ದಾರೆ. ತೆರಿಗೆ ವಿಚಾರ ಮಾತನಾಡುವಾಗ ಮಹಾಭಾರತದ ಉಲ್ಲೇಖ ಹೊರತುಪಡಿಸಿದರೆ ಉಳಿದಂತೆ ಯಾವುದೇ ಕಾವ್ಯವನ್ನು ಈ ಬಾರಿಯ ಭಾಷಣದಲ್ಲಿ ಉಲ್ಲೇಖಿಸಲಿಲ್ಲ. 

ಡಿಜಿಟಲ್​ ರೂಪದಲ್ಲಿ ಬಜೆಟ್ ಮಂಡನೆ: ನಿರ್ಮಲಾ  ಇಂದು 4ನೇ ಬಾರಿಗೆ ಬಜೆಟ್ ಮಂಡಿಸಿದ್ದು, ಇದು ನರೇಂದ್ರ ಮೋದಿ ನೇತೃತ್ವ ಸರ್ಕಾರದ 10ನೇ ಬಜೆಟ್. ಕೊರೊನಾ ಕಾರಣದಿಂದಾಗಿ ಬಜೆಟ್​ನಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಕಳೆದ 2 ವರ್ಷಗಳಿಂದ ಬಜೆಟ್ ಪ್ರತಿ ಮುದ್ರಿಸಲಾಗುತ್ತಿಲ್ಲ. ಬದಲಾಗಿದೆ ಡಿಜಿಟಲ್​ ರೂಪದಲ್ಲಿ ಬಜೆಟ್ ಮಂಡಿಸಿದರು.

ಸಿಂಪಲ್ ನಿರ್ಮಲಾ, ಬಿಳಿ ಅಂಚಿನ ಸುಂದರ ವಿನ್ಯಾಸ: ಜಗತ್ತಿನ ಬಲಾಢ್ಯ ಆರ್ಥಿಕತೆಗಳಲ್ಲಿ ಒಂದು ಎನಿಸಿರುವ ಭಾರತದ ಬಜೆಟ್​ ಅನ್ನು ಇಡೀ ವಿಶ್ವ ಕುತೂಹಲದಿಂದ ಗಮನಿಸುತ್ತದೆ. ವಿಶ್ವದ ಬಹುತೇಕ ಮಾಧ್ಯಮಗಳಲ್ಲಿ ಭಾರತದ ಬಜೆಟ್​ ಬಗ್ಗೆ ಚರ್ಚೆಗಳು ನಡೆಯುತ್ತವೆ. ಇಂಥ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಹಜವಾಗಿಯೇ ಎಲ್ಲ ಗಮನ ಸೆಳೆಯುವ ಕೇಂದ್ರಬಿಂದು ಎನಿಸಿದ್ದಾರೆ.

ಬಜೆಟ್ ಮಂಡನೆಯ ದಿನ ಸಚಿವರು ಉಟ್ಟಿರುವ ಸೀರೆ ಗಮನ ಸೆಳೆದಿದೆ. ಬಿಳಿ ಅಂಚಿನ, ಕೆಂಪು ಛಾಯೆಯ ಬೂದು ಬಣ್ಣದ ಸೀರೆಯ ಆಯ್ಕೆಯ ಬಗ್ಗೆಯೂ ಕೆಲ ಮಾಧ್ಯಮಗಳು ಚರ್ಚಿಸುತ್ತಿವೆ. ಬೂದು, ಕೆಂಪು ಮತ್ತು ಬಿಳಿ ಬಣ್ಣಗಳು ವಿಶ್ವಾಸಾರ್ಹತೆ, ಭದ್ರತೆ ಮತ್ತು ಸರುಕ್ಷೆಯನ್ನು ಬಿಂಬಿಸುತ್ತವೆ. ಈ ಸೀರೆಗೆ ಬಳಕೆಯಾಗಿರುವ ಬೂದು ಛಾಯೆಯ ಕೆಂಪು ಅಧಿಕಾರದೊಂದಿಗೆ ಬರುವ ಪ್ರೀತಿಯ ಸಂಕೇತ ಎಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ

Budget 2022: ಭಾರತದ ಆರ್ಥಿಕ ಬೆಳವಣಿಗೆ 9.27 ಪರ್ಸೆಂಟ್​, ಪ್ರಸಕ್ತ ಬಜೆಟ್​ನಲ್ಲಿ ಈ 7 ಅಂಶಗಳಿಗೆ ಪ್ರಾಮುಖ್ಯತೆ

Budget 2022: ಶೀಘ್ರದಲ್ಲೇ ಆರ್​ಬಿಐನಿಂದ ಡಿಜಿಟಲ್ ಕರೆನ್ಸಿ ಬಿಡುಗಡೆ; 2023ಕ್ಕೆ 5ಜಿ ಸ್ಪೆಕ್ಟ್ರಂ ಹರಾಜು

Published On - 12:52 pm, Tue, 1 February 22

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು