AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2022: 90 ನಿಮಿಷಗಳಲ್ಲಿ ಬಜೆಟ್​ ಭಾಷಣ ಮುಗಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​

2022 -23ನೇ ಸಾಲಿನ ಕೇಂದ್ರ ಬಜೆಟ್​ ಮುಕ್ತಾಯಗೊಂಡಿದೆ. 90 ನಿಮಿಷದೊಳಗೆ ತಮ್ಮ ಬಜೆಟ್ ಭಾಷಣವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮುಗಿಸಿದ್ದಾರೆ.

Budget 2022: 90 ನಿಮಿಷಗಳಲ್ಲಿ ಬಜೆಟ್​ ಭಾಷಣ ಮುಗಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​
ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
TV9 Web
| Updated By: Digi Tech Desk|

Updated on:Feb 01, 2022 | 3:46 PM

Share

2022 -23ನೇ ಸಾಲಿನ ಕೇಂದ್ರ ಬಜೆಟ್ (Budget 2022) ​ ಮುಕ್ತಾಯಗೊಂಡಿದೆ. 90 ನಿಮಿಷದೊಳಗೆ ತಮ್ಮ ಬಜೆಟ್ ಭಾಷಣವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಮುಗಿಸಿದ್ದಾರೆ. ಸ್ಪೀಕರ್ ಓಂ ಬಿರ್ಲಾ ಸೂಚನೆ ಮೇರೆಗೆ ಸಚಿವರು ಹಣಕಾಸು ವಿಧೇಯಕ ಮಂಡಿಸಿದರು. ನಿರ್ಮಲಾ ಸೀತಾರಾಮನ್​ನ ಈ ಹಿಂದಿನ ಬಜೆಟ್ ಭಾಷಣಗಳಿಗೆ ಹೋಲಿಸಿದರೆ ಇದು ಕಡಿಮೆ ಅವಧಿಯಾಗಿದೆ. ಈ ಬಾರಿ ವಿತ್ತ ಸಚಿವರು 90 ನಿಮಿಷಗಳಲ್ಲಿ ತಮ್ಮ ಬಜೆಟ್ ಭಾಷಣ ಮುಗಿಸಿದರು. 2020ರಲ್ಲಿ ದಾಖಲೆಯ 160 ನಿಮಿಷ ಬಜೆಟ್ ಮಂಡಿಸಿದ್ದರು. ಈ ಬಾರಿ 90  ನಿಮಿಷಗಳ ಕಾಲ ಬಜೆಟ್ ಮಂಡಿಸಿದ್ದಾರೆ. ತೆರಿಗೆ ವಿಚಾರ ಮಾತನಾಡುವಾಗ ಮಹಾಭಾರತದ ಉಲ್ಲೇಖ ಹೊರತುಪಡಿಸಿದರೆ ಉಳಿದಂತೆ ಯಾವುದೇ ಕಾವ್ಯವನ್ನು ಈ ಬಾರಿಯ ಭಾಷಣದಲ್ಲಿ ಉಲ್ಲೇಖಿಸಲಿಲ್ಲ. 

ಡಿಜಿಟಲ್​ ರೂಪದಲ್ಲಿ ಬಜೆಟ್ ಮಂಡನೆ: ನಿರ್ಮಲಾ  ಇಂದು 4ನೇ ಬಾರಿಗೆ ಬಜೆಟ್ ಮಂಡಿಸಿದ್ದು, ಇದು ನರೇಂದ್ರ ಮೋದಿ ನೇತೃತ್ವ ಸರ್ಕಾರದ 10ನೇ ಬಜೆಟ್. ಕೊರೊನಾ ಕಾರಣದಿಂದಾಗಿ ಬಜೆಟ್​ನಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಕಳೆದ 2 ವರ್ಷಗಳಿಂದ ಬಜೆಟ್ ಪ್ರತಿ ಮುದ್ರಿಸಲಾಗುತ್ತಿಲ್ಲ. ಬದಲಾಗಿದೆ ಡಿಜಿಟಲ್​ ರೂಪದಲ್ಲಿ ಬಜೆಟ್ ಮಂಡಿಸಿದರು.

ಸಿಂಪಲ್ ನಿರ್ಮಲಾ, ಬಿಳಿ ಅಂಚಿನ ಸುಂದರ ವಿನ್ಯಾಸ: ಜಗತ್ತಿನ ಬಲಾಢ್ಯ ಆರ್ಥಿಕತೆಗಳಲ್ಲಿ ಒಂದು ಎನಿಸಿರುವ ಭಾರತದ ಬಜೆಟ್​ ಅನ್ನು ಇಡೀ ವಿಶ್ವ ಕುತೂಹಲದಿಂದ ಗಮನಿಸುತ್ತದೆ. ವಿಶ್ವದ ಬಹುತೇಕ ಮಾಧ್ಯಮಗಳಲ್ಲಿ ಭಾರತದ ಬಜೆಟ್​ ಬಗ್ಗೆ ಚರ್ಚೆಗಳು ನಡೆಯುತ್ತವೆ. ಇಂಥ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಹಜವಾಗಿಯೇ ಎಲ್ಲ ಗಮನ ಸೆಳೆಯುವ ಕೇಂದ್ರಬಿಂದು ಎನಿಸಿದ್ದಾರೆ.

ಬಜೆಟ್ ಮಂಡನೆಯ ದಿನ ಸಚಿವರು ಉಟ್ಟಿರುವ ಸೀರೆ ಗಮನ ಸೆಳೆದಿದೆ. ಬಿಳಿ ಅಂಚಿನ, ಕೆಂಪು ಛಾಯೆಯ ಬೂದು ಬಣ್ಣದ ಸೀರೆಯ ಆಯ್ಕೆಯ ಬಗ್ಗೆಯೂ ಕೆಲ ಮಾಧ್ಯಮಗಳು ಚರ್ಚಿಸುತ್ತಿವೆ. ಬೂದು, ಕೆಂಪು ಮತ್ತು ಬಿಳಿ ಬಣ್ಣಗಳು ವಿಶ್ವಾಸಾರ್ಹತೆ, ಭದ್ರತೆ ಮತ್ತು ಸರುಕ್ಷೆಯನ್ನು ಬಿಂಬಿಸುತ್ತವೆ. ಈ ಸೀರೆಗೆ ಬಳಕೆಯಾಗಿರುವ ಬೂದು ಛಾಯೆಯ ಕೆಂಪು ಅಧಿಕಾರದೊಂದಿಗೆ ಬರುವ ಪ್ರೀತಿಯ ಸಂಕೇತ ಎಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ

Budget 2022: ಭಾರತದ ಆರ್ಥಿಕ ಬೆಳವಣಿಗೆ 9.27 ಪರ್ಸೆಂಟ್​, ಪ್ರಸಕ್ತ ಬಜೆಟ್​ನಲ್ಲಿ ಈ 7 ಅಂಶಗಳಿಗೆ ಪ್ರಾಮುಖ್ಯತೆ

Budget 2022: ಶೀಘ್ರದಲ್ಲೇ ಆರ್​ಬಿಐನಿಂದ ಡಿಜಿಟಲ್ ಕರೆನ್ಸಿ ಬಿಡುಗಡೆ; 2023ಕ್ಕೆ 5ಜಿ ಸ್ಪೆಕ್ಟ್ರಂ ಹರಾಜು

Published On - 12:52 pm, Tue, 1 February 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ