AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಬಜೆಟ್​ ಮಂಡನೆಗೆ ಕೆಲವೇ ಹೊತ್ತು ಬಾಕಿ; ರಾಷ್ಟ್ರಪತಿ ರಾಮನಾಥ ಕೋವಿಂದ್​ರನ್ನು ಭೇಟಿ ಮಾಡಿದ ನಿರ್ಮಲಾ ಸೀತಾರಾಮನ್​

Budget 2022: ಈ ಬಾರಿಯೂ ಸಹ ನಿರ್ಮಲಾ ಸೀತಾರಾಮನ್​ ಸಾಂಪ್ರದಾಯಿಕ ಬಹಿಖಾತಾ ಪದ್ಧತಿಯನ್ನು ಕೈಬಿಟ್ಟಿದ್ದಾರೆ. ಕೆಂಪು ಬಟ್ಟೆಯಲ್ಲಿ ಸ್ವದೇಶಿ ಟ್ಯಾಬ್​ ಇಟ್ಟುಕೊಂಡಿದ್ದು, ಅದರ ಮೂಲಕವೇ ಬಜೆಟ್​ ಮಂಡಿಸಲಿದ್ದಾರೆ.

ಕೇಂದ್ರ ಬಜೆಟ್​ ಮಂಡನೆಗೆ ಕೆಲವೇ ಹೊತ್ತು ಬಾಕಿ; ರಾಷ್ಟ್ರಪತಿ ರಾಮನಾಥ ಕೋವಿಂದ್​ರನ್ನು ಭೇಟಿ ಮಾಡಿದ ನಿರ್ಮಲಾ ಸೀತಾರಾಮನ್​
ರಾಷ್ಟ್ರಪತಿಯವರನ್ನು ಭೇಟಿ ಮಾಡಿದ ನಿರ್ಮಲಾ ಸೀತಾರಾಮನ್​
TV9 Web
| Edited By: |

Updated on:Feb 01, 2022 | 9:49 AM

Share

ಸಂಸತ್ತಿನ ಬಜೆಟ್​ ಅಧಿವೇಶನ (Budget Session 2022) ನಿನ್ನೆಯಿಂದ ಪ್ರಾರಂಭವಾಗಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಅಂದರೆ ಕೆಲವೇ ಹೊತ್ತಲ್ಲಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ತಮ್ಮ ನಾಲ್ಕನೇ ಕೇಂದ್ರ ಬಜೆಟ್​ ಮಂಡನೆ ಮಾಡಲಿದ್ದಾರೆ. ಲೋಕಸಭೆಯಲ್ಲಿ 2022-23ನೇ ಸಾಲಿನ ಆಯವ್ಯಯ ಮುಂಗಡ ಪತ್ರವನ್ನು ಮಂಡನೆ ಮಾಡಿದ ಒಂದು ತಾಸಿನಲ್ಲಿ, ನಿರ್ಮಲಾ ಸೀತಾರಾಮನ್​ ಅವರು ರಾಜ್ಯಸಭೆಯಲ್ಲೂ ಪ್ರಸ್ತುತ ಪಡಿಸುವರು. ಆದಾಯ ಮತ್ತು ಖರ್ಚುಗಳ ಮಾಹಿತಿ ನೀಡಲಿದ್ದಾರೆ.  ಈಗಾಗಲೇ ದೆಹಲಿಯ ನಾರ್ತ್​ ಬ್ಲಾಕ್​​ನಲ್ಲಿರುವ ಹಣಕಾಸು ಸಚಿವಾಲಯದ ಕಚೇರಿ ತಲುಪಿರುವ ನಿರ್ಮಲಾ ಸೀತಾರಾಮನ್​, ಅಲ್ಲಿ ಅಧಿಕಾರಿಗಳೊಟ್ಟಿಗೆ ಸಭೆ ನಡೆಸಿದ್ದಾರೆ. ಅದಾದ ಬಳಿಕ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ರಾಮನಾಥ ಕೋವಿಂದ್​ರನ್ನು ಭೇಟಿಯಾದರು. 

ಈ ಬಾರಿಯೂ ಸಹ ನಿರ್ಮಲಾ ಸೀತಾರಾಮನ್​ ಸಾಂಪ್ರದಾಯಿಕ ಬಹಿಖಾತಾ ಪದ್ಧತಿಯನ್ನು ಕೈಬಿಟ್ಟಿದ್ದಾರೆ. ಕೆಂಪು ಬಟ್ಟೆಯಲ್ಲಿ ಸ್ವದೇಶಿ ಟ್ಯಾಬ್​ ಇಟ್ಟುಕೊಂಡಿದ್ದು, ಅದರ ಮೂಲಕವೇ ಬಜೆಟ್​ ಮಂಡಿಸಲಿದ್ದಾರೆ. ಕಳೆದ ವರ್ಷ ಕೂಡ ಅವರು ಟ್ಯಾಬ್​​ ಸಹಾಯದಿಂದಲೇ ಬಜೆಟ್​ ಓದಿದ್ದಾರೆ. ಕೊರೊನಾ ಕಾರಣದಿಂದ ಕಳೆದವರ್ಷದಿಂದಲೂ ಕಾಗದ ರಹಿತ ಬೆಜಟ್​ ಮಂಡನೆಗೆ ಆದ್ಯತೆ ನೀಡಲಾಗುತ್ತಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ ಹಣಕಾಸು ಸಚಿವಾಲಯದಿಂದ ಹೊರಡುವ ಮುನ್ನ ಅಲ್ಲಿನ ಅಧಿಕಾರಿಗಳೊಂದಿಗೆ ಗ್ರೂಪ್​ ಫೋಟೋ ತೆಗೆಸಿಕೊಂಡಿದ್ದಾರೆ.

ನಿನ್ನೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಜೆಟ್​ ಅಧಿವೇಶನಕ್ಕೂ ಮೊದಲು ಮಾತನಾಡಿ, ಎಲ್ಲ ರಾಜಕೀಯ ಪಕ್ಷಗಳ, ಎಲ್ಲ ಸಂಸದರೂ ಮಕ್ತ ಮನಸಿನಿಂದ ಡಿಬೇಟ್​​ನಲ್ಲಿ ಪಾಲ್ಗೊಳ್ಳಿ.  ಆದರೆ ಮಾಡುವ ಚರ್ಚೆ ಮತ್ತು ಡಿಬೇಟ್​​ಗಳು ಅರ್ಥಪೂರ್ಣವಾಗಿರಲಿ. ಭಾರತವನ್ನು ಅಭಿವೃದ್ಧಿಯ ಹಾದಿಯಲ್ಲಿ ಇನ್ನಷ್ಟು ಮುನ್ನಡೆಸಲು ಪೂರಕವಾಗಿರಲಿ ಎಂದು ಹೇಳಿದ್ದರು.

ಇದನ್ನೂ ಓದಿ: Budget 2022 LIVE: ಇಂದು 2022-23ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ; ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:34 am, Tue, 1 February 22

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ