AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಬಜೆಟ್​ ಮಂಡನೆಗೆ ಕೆಲವೇ ಹೊತ್ತು ಬಾಕಿ; ರಾಷ್ಟ್ರಪತಿ ರಾಮನಾಥ ಕೋವಿಂದ್​ರನ್ನು ಭೇಟಿ ಮಾಡಿದ ನಿರ್ಮಲಾ ಸೀತಾರಾಮನ್​

Budget 2022: ಈ ಬಾರಿಯೂ ಸಹ ನಿರ್ಮಲಾ ಸೀತಾರಾಮನ್​ ಸಾಂಪ್ರದಾಯಿಕ ಬಹಿಖಾತಾ ಪದ್ಧತಿಯನ್ನು ಕೈಬಿಟ್ಟಿದ್ದಾರೆ. ಕೆಂಪು ಬಟ್ಟೆಯಲ್ಲಿ ಸ್ವದೇಶಿ ಟ್ಯಾಬ್​ ಇಟ್ಟುಕೊಂಡಿದ್ದು, ಅದರ ಮೂಲಕವೇ ಬಜೆಟ್​ ಮಂಡಿಸಲಿದ್ದಾರೆ.

ಕೇಂದ್ರ ಬಜೆಟ್​ ಮಂಡನೆಗೆ ಕೆಲವೇ ಹೊತ್ತು ಬಾಕಿ; ರಾಷ್ಟ್ರಪತಿ ರಾಮನಾಥ ಕೋವಿಂದ್​ರನ್ನು ಭೇಟಿ ಮಾಡಿದ ನಿರ್ಮಲಾ ಸೀತಾರಾಮನ್​
ರಾಷ್ಟ್ರಪತಿಯವರನ್ನು ಭೇಟಿ ಮಾಡಿದ ನಿರ್ಮಲಾ ಸೀತಾರಾಮನ್​
TV9 Web
| Edited By: |

Updated on:Feb 01, 2022 | 9:49 AM

Share

ಸಂಸತ್ತಿನ ಬಜೆಟ್​ ಅಧಿವೇಶನ (Budget Session 2022) ನಿನ್ನೆಯಿಂದ ಪ್ರಾರಂಭವಾಗಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಅಂದರೆ ಕೆಲವೇ ಹೊತ್ತಲ್ಲಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ತಮ್ಮ ನಾಲ್ಕನೇ ಕೇಂದ್ರ ಬಜೆಟ್​ ಮಂಡನೆ ಮಾಡಲಿದ್ದಾರೆ. ಲೋಕಸಭೆಯಲ್ಲಿ 2022-23ನೇ ಸಾಲಿನ ಆಯವ್ಯಯ ಮುಂಗಡ ಪತ್ರವನ್ನು ಮಂಡನೆ ಮಾಡಿದ ಒಂದು ತಾಸಿನಲ್ಲಿ, ನಿರ್ಮಲಾ ಸೀತಾರಾಮನ್​ ಅವರು ರಾಜ್ಯಸಭೆಯಲ್ಲೂ ಪ್ರಸ್ತುತ ಪಡಿಸುವರು. ಆದಾಯ ಮತ್ತು ಖರ್ಚುಗಳ ಮಾಹಿತಿ ನೀಡಲಿದ್ದಾರೆ.  ಈಗಾಗಲೇ ದೆಹಲಿಯ ನಾರ್ತ್​ ಬ್ಲಾಕ್​​ನಲ್ಲಿರುವ ಹಣಕಾಸು ಸಚಿವಾಲಯದ ಕಚೇರಿ ತಲುಪಿರುವ ನಿರ್ಮಲಾ ಸೀತಾರಾಮನ್​, ಅಲ್ಲಿ ಅಧಿಕಾರಿಗಳೊಟ್ಟಿಗೆ ಸಭೆ ನಡೆಸಿದ್ದಾರೆ. ಅದಾದ ಬಳಿಕ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ರಾಮನಾಥ ಕೋವಿಂದ್​ರನ್ನು ಭೇಟಿಯಾದರು. 

ಈ ಬಾರಿಯೂ ಸಹ ನಿರ್ಮಲಾ ಸೀತಾರಾಮನ್​ ಸಾಂಪ್ರದಾಯಿಕ ಬಹಿಖಾತಾ ಪದ್ಧತಿಯನ್ನು ಕೈಬಿಟ್ಟಿದ್ದಾರೆ. ಕೆಂಪು ಬಟ್ಟೆಯಲ್ಲಿ ಸ್ವದೇಶಿ ಟ್ಯಾಬ್​ ಇಟ್ಟುಕೊಂಡಿದ್ದು, ಅದರ ಮೂಲಕವೇ ಬಜೆಟ್​ ಮಂಡಿಸಲಿದ್ದಾರೆ. ಕಳೆದ ವರ್ಷ ಕೂಡ ಅವರು ಟ್ಯಾಬ್​​ ಸಹಾಯದಿಂದಲೇ ಬಜೆಟ್​ ಓದಿದ್ದಾರೆ. ಕೊರೊನಾ ಕಾರಣದಿಂದ ಕಳೆದವರ್ಷದಿಂದಲೂ ಕಾಗದ ರಹಿತ ಬೆಜಟ್​ ಮಂಡನೆಗೆ ಆದ್ಯತೆ ನೀಡಲಾಗುತ್ತಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ ಹಣಕಾಸು ಸಚಿವಾಲಯದಿಂದ ಹೊರಡುವ ಮುನ್ನ ಅಲ್ಲಿನ ಅಧಿಕಾರಿಗಳೊಂದಿಗೆ ಗ್ರೂಪ್​ ಫೋಟೋ ತೆಗೆಸಿಕೊಂಡಿದ್ದಾರೆ.

ನಿನ್ನೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಜೆಟ್​ ಅಧಿವೇಶನಕ್ಕೂ ಮೊದಲು ಮಾತನಾಡಿ, ಎಲ್ಲ ರಾಜಕೀಯ ಪಕ್ಷಗಳ, ಎಲ್ಲ ಸಂಸದರೂ ಮಕ್ತ ಮನಸಿನಿಂದ ಡಿಬೇಟ್​​ನಲ್ಲಿ ಪಾಲ್ಗೊಳ್ಳಿ.  ಆದರೆ ಮಾಡುವ ಚರ್ಚೆ ಮತ್ತು ಡಿಬೇಟ್​​ಗಳು ಅರ್ಥಪೂರ್ಣವಾಗಿರಲಿ. ಭಾರತವನ್ನು ಅಭಿವೃದ್ಧಿಯ ಹಾದಿಯಲ್ಲಿ ಇನ್ನಷ್ಟು ಮುನ್ನಡೆಸಲು ಪೂರಕವಾಗಿರಲಿ ಎಂದು ಹೇಳಿದ್ದರು.

ಇದನ್ನೂ ಓದಿ: Budget 2022 LIVE: ಇಂದು 2022-23ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ; ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:34 am, Tue, 1 February 22

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ