AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Budget: ಸರ್ಕಾರಕ್ಕೆ ಈ ನಾಲ್ಕು ಜಾತಿಗಳ ಏಳ್ಗೆ ಮುಖ್ಯ: ನಿರ್ಮಲಾ ಸೀತಾರಾಮನ್

FM Nirmala Sitharaman Budget updates: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರನೆ ಬಜೆಟ್ ಮಂಡನೆ ಮಾಡಿದ್ದಾರೆ. ಸರ್ಕಾರಕ್ಕೆ ನಾಲ್ಕು ಜಾತಿಗಳು ಪ್ರಧಾನವಾಗಿದ್ದು, ಬಡವರು, ಮಹಿಳೆಯರು, ಯುವಸಮುದಾಯದವರು ಮತ್ತು ರೈತರು ಈವರೇ ನಾಲ್ಕು ಜಾತಿಗಳವರು ಎಂದು ಸಚಿವೆ ತಮ್ಮ ಬಜೆಟ್ ಮಂಡನೆಯಲ್ಲಿ ಹೇಳಿದ್ದಾರೆ.

Union Budget: ಸರ್ಕಾರಕ್ಕೆ ಈ ನಾಲ್ಕು ಜಾತಿಗಳ ಏಳ್ಗೆ ಮುಖ್ಯ: ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 01, 2024 | 11:44 AM

Share

ನವದಹಲಿ, ಫೆಬ್ರುವರಿ 1: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ತಮ್ಮ ಸತತ ಆರನೇ ಬಾರಿ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಸರ್ಕಾರದ ಕಳೆದ 10 ವರ್ಷದಲ್ಲಿ ಮಾಡಿರುವ ಸಾಧನೆ ಹಾಗೂ ಸಮಾಜ ಮತ್ತು ಆರ್ಥಿಕತೆಯ ವಿವಿಧ ಮಜಲುಗಳಲ್ಲಿ ಆಗಿರುವ ಅಭಿವೃದ್ಧಿ ಬಗ್ಗೆ ಅವರು ವಿಸ್ತೃತವಾಗಿ ಮಾತನಾಡಿದ್ದಾರೆ, ವಿವರ ನೀಡಿದ್ದಾರೆ. ಇದೇ ವೇಳೆ ಅವರು ತಮ್ಮ ಸರ್ಕಾರ ನಾಲ್ಕು ಜಾತಿಗಳಿಗೆ ಹೆಚ್ಚು ಗಮನ ಕೊಡುತ್ತಿದೆ ಎಂದು ಹೇಳಿದ್ದಾರೆ. ಬಡವರು, ಮಹಿಳೆಯರು, ಯುವಸಮುದಾಯದವರು ಮತ್ತು ರೈತರು ಇವರೇ ತಮ್ಮ ಸರ್ಕಾರಕ್ಕೆ ನಾಲ್ಕು ಜಾತಿಗಳಾಗಿದ್ದು, ಇವರ ಏಳ್ಗೆ ತಮ್ಮ ಸರ್ಕಾರದ ಆದ್ಯತೆ ಆಗಿದೆ ಎಂದು ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದರು.

2047ರಷ್ಟರಲ್ಲಿ ಭಾರತವನ್ನು ವಿಕಸಿತ ಭಾರತ ಅಥವಾ ಮುಂದುವರಿದ ದೇಶವನ್ನಾಗಿ ಮಾಡುವುದು ತಮ್ಮ ಸರ್ಕಾರದ ಸಂಕಲ್ಪ ಎಂದು ಅವರು ಹೇಳಿದರು.

‘ಕಳೆದ 10 ವರ್ಷಗಳಲ್ಲಿ ಪ್ರತಿ ಕುಟುಂಬಕ್ಕೆ ನೀರು, ಗ್ಯಾಸ್, ವಿದ್ಯುತ್ ಸಂಪರ್ಕ ಕಲ್ಪಿಸುವ ಗುರಿ ಸಾಧನೆಗೆ ಸರ್ಕಾರ ಶ್ರಮಿಸಿದೆ. 80 ಕೋಟಿ ಜನರಿಗೆ ಉಚಿತ ಪಡಿತರ ನೀಡಿದ್ದೇವೆ. ಗ್ರಾಮೀಣ ಪ್ರದೇಶದ ಜನರ ಆರ್ಥಿಕತೆ ವೃದ್ಧಿಗೆ ಕ್ರಮ ಕೈಗೊಂಡಿದ್ದೇವೆ. ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ್ದೇವೆ.

ಲೈವ್ ಬಜೆಟ್ ಅಪ್​ಡೇಟ್ಸ್

‘ಕೇಂದ್ರದಲ್ಲಿ ಉದ್ಯೋಗ ಸೃಷ್ಟಿ ಹೆಚ್ಚಳವಾಗಿದೆ. ದೇಶದ ಜನರಿಗೆ ಸಾಮಾಜಿಕ ನ್ಯಾಯ ಕಲ್ಪಿಸುವುದು ನಮ್ಮ ಮಾದರಿಯಾಗಿದೆ. ಬಡವರು, ಮಹಿಳೆಯರು, ಅನ್ನದಾತರ ಅಗತ್ಯಗಳು, ಅವರ ಕಲ್ಯಾಣ ನಮ್ಮ ಪ್ರಮುಖ ಆದ್ಯತೆಯಾಗಿದೆ.

‘ಯುವಕರ ಸಬಲೀಕರಣಕ್ಕೆ ಎನ್​ಇಪಿ ಜಾರಿಗೊಳಿಸಲಾಗುತ್ತಿದೆ. ಗುಣಮಟ್ಟದ ಶಿಕ್ಷಣ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಸ್ಕಿಲ್ ಇಂಡಿಯಾ ಮಿಷನ್ ಅಡಿ 54 ಲಕ್ಷ ಯುವಕರಿಗೆ ತರಬೇತಿ ನೀಡಲಾಗುತ್ತಿದೆ. 7 ಐಐಟಿಗಳು, 16 ಟ್ರಪಲ್ ಐಟಿಗಳು ಮತ್ತು 390 ವಿಶ್ವವಿದ್ಯಾಲಯಗಳನ್ನು ಸ್ಥಾಪನೆ ಮಾಡಲಾಗಿದೆ.

‘ಭಾರತ ವಿಶ್ವದ ಅತಿದೊಡ್ಡ ಹಾಲಿನ ಉತ್ಪಾದಕ ದೇಶವಾಗಿದೆ. ಆದರೆ, ಹಾಲಿನ ಇಳುವರಿ ಬಹಳ ಕಡಿಮೆ. ಈ ಉದ್ಯಮ ಬಲಪಡಿಸಲು ಯೋಜನೆ ಹಾಕಿದ್ದೇವೆ’ ಎಂದು ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್​ನಲ್ಲಿ ಹೇಳಿದ್ದಾರೆ.

ಇನ್ನಷ್ಟು ಬಜೆಟ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​