Budget 2025 Live Streaming: ಕೇಂದ್ರ ಬಜೆಟ್ ಮಂಡನೆ ದಿನ, ಸಮಯ ಮತ್ತು ಎಲ್ಲಿ ವೀಕ್ಷಿಸುವುದು?

Nirmala Sitharaman 8th Budget Presentation Live Streaming: ಸಾಕಷ್ಟು ನಿರೀಕ್ಷೆ, ಅಪೇಕ್ಷೆಗಳನ್ನು ಹೊಂದಿರುವ ಕೇಂದ್ರ ಬಜೆಟ್ ಅನ್ನು ಫೆಬ್ರುವರಿ 1ರಂದು ಮಂಡನೆ ಮಾಡಲಾಗುತ್ತಿದೆ. ಜನವರಿ 31, ಶುಕ್ರವಾರದಂದು ಬಜೆಟ್ ಅಧಿವೇಶನದ ಮೊದಲ ಹಂತ ಆರಂಭವಾಗಿ ಫೆಬ್ರುವರಿ 13ರವರೆಗೆ ಇರಲಿದೆ. ಎರಡನೇ ಹಂತದ ಅಧಿವೇಶನ ಮಾರ್ಚ್ 10ರಂದು ಆರಂಭವಾಗಿ ಏಪ್ರಿಲ್ 4ರವರೆಗೂ ನಡೆಯುತ್ತದೆ.

Budget 2025 Live Streaming: ಕೇಂದ್ರ ಬಜೆಟ್ ಮಂಡನೆ ದಿನ, ಸಮಯ ಮತ್ತು ಎಲ್ಲಿ ವೀಕ್ಷಿಸುವುದು?
ನಿರ್ಮಲಾ ಸೀತಾರಾಮನ್
Follow us
ಸುಗ್ಗನಹಳ್ಳಿ ವಿಜಯಸಾರಥಿ
| Updated By: Digi Tech Desk

Updated on:Jan 31, 2025 | 5:55 PM

ನವದೆಹಲಿ, ಜನವರಿ 30: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರುವರಿ 1, ಶನಿವಾರದಂದು ಬಜೆಟ್ ಮಂಡಿಸುತ್ತಿದ್ದಾರೆ. ಇದು ಅವರ ಸತತ ಎಂಟನೇ ಬಜೆಟ್ ಮಂಡನೆ ಆಗಿದೆ. ಮಂದಗೊಳ್ಳುವಂತೆ ತೋರುತ್ತಿರುವ ಆರ್ಥಿಕತೆಗೆ ಚುರುಕು ಮುಟ್ಟಿಸುವ ಬಹುದೊಡ್ಡ ಸವಾಲು ಮತ್ತು ನಿರೀಕ್ಷೆಗಳು ಈ ಬಜೆಟ್​ನಲ್ಲಿವೆ. ಮಧ್ಯಮ ವರ್ಗದವರ ಮೇಲಿರುವ ಅಪಾರ ತೆರಿಗೆ ಹೊರೆಯ ಭಾರ ಇಳಿಸುವ ಅಪೇಕ್ಷೆಯೂ ಇದೆ. ವಿವಿಧ ಉದ್ಯಮಗಳು ಹೆಚ್ಚಿನ ಉತ್ತೇಜನಕ್ಕಾಗಿ ಕಾಯುತ್ತಿವೆ. ಮೂಲಸೌಕರ್ಯಗಳ ಮೇಲೆ ಹೆಚ್ಚಿನ ಗಮನ ಹರಿಸಬೇಕೆಂಬ ಒತ್ತಡವೂ ಇದೆ. ಇಷ್ಟೆಲ್ಲಾ ನಿರೀಕ್ಷೆ, ಅಪೇಕ್ಷೆ, ಒತ್ತಡಗಳ ನಡುವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್​ನಲ್ಲಿ ಯಾವುದಕ್ಕೆ ಹೆಚ್ಚು ಗಮನ ಕೊಡಬಹುದು ಎನ್ನುವ ಕುತೂಹಲವಂತೂ ಇದೆ.

ಕೇಂದ್ರ ಬಜೆಟ್ ಭಾಷಣ….

ಫೆಬ್ರುವರಿ 1, ಶನಿವಾರ ಬೆಳಗ್ಗೆ 11 ಗಂಟೆಗೆ ನಿರ್ಮಲಾ ಸೀತಾರಾಮನ್ ಅವರಿಂದ ಸಂಸತ್ತಿನಲ್ಲಿ ಬಜೆಟ್ ಮಂಡನೆ ಆರಂಭವಾಗುತ್ತದೆ. 2024ರ ಬಜೆಟ್​ನಲ್ಲಿ ಅವರ ಭಾಷಣ ಸುದೀರ್ಘದ್ದಾಗಿತ್ತು. ಈ ಬಾರಿಯದ್ದು ಅವರಿಗೆ ಎಂಟನೇ ಬಜೆಟ್ ಆಗಿದೆ. ಇದರಲ್ಲಿ ಎರಡು ಮಧ್ಯಂತರ ಬಜೆಟ್ ಕೂಡ ಸೇರಿವೆ.

ಕೇಂದ್ರ ಬಜೆಟ್ ನೇರ ಪ್ರಸಾರ

ಜನವರಿ 31ರಂದು ಬಜೆಟ್ ಅಧಿವೇಶನ ಆರಂಭ; ರಾಷ್ಟ್ರಪತಿ ಭಾಷಣ

ಬಜೆಟ್​ಗೆ ಒಂದು ದಿನ ಮೊದಲು ಸಂಸತ್ತಿನಲ್ಲಿ ಬಜೆಟ್ ಅಧಿವೇಶನ ಆರಂಭವಾಗುತ್ತದೆ. ಬಜೆಟ್ ಅಧಿವೇಶನ ಎರಡು ಹಂತದಲ್ಲಿ ನಡೆಯುತ್ತದೆ. ಮೊದಲ ಹಂತವು ಜನವರಿ 31, ಶುಕ್ರವಾರ ಆರಂಭವಾಗುತ್ತದೆ. ಫೆಬ್ರುವರಿ 1ರಂದು ಬಜೆಟ್ ಮಂಡನೆ ಆಗುತ್ತದೆ. ಫೆಬ್ರುವರಿ 13ರವರೆಗೂ ಮೊದಲ ಹಂತದ ಬಜೆಟ್ ಸೆಷನ್ ಮುಂದುವರಿಯುತ್ತದೆ.

ಇದನ್ನೂ ಓದಿ: ಬಜೆಟ್ 2025: ಕೃಷಿ ವಲಯಕ್ಕೆ ಶೇ. 15ರಷ್ಟು ಹೆಚ್ಚು ಫಂಡಿಂಗ್ ಸಾಧ್ಯತೆ; ವಿವಿಧ ಕಾರ್ಯಗಳಿಗೆ ಹೆಚ್ಚು ಹಣ

ಎರಡನೇ ಹಂತದ ಬಜೆಟ್ ಅಧಿವೇಶನ ಮಾರ್ಚ್ 10ರಂದು ಆರಂಭವಾಗಿ ಏಪ್ರಿಲ್ 4ರವರೆಗೂ ನಡೆಯುತ್ತದೆ. ಈ ವೇಳೆ, ಬಜೆಟ್ ಮೇಲಿನ ಚರ್ಚೆಗಳು ನಡೆಯಲಿವೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜನವರಿ 31ರಂದು ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅಲ್ಲಿಂದ ಬಜೆಟ್ ಅಧಿವೇಶನಕ್ಕೆ ಚಾಲನೆ ಸಿಕ್ಕುತ್ತದೆ.

ಜನವರಿ 31ರಂದು ಆರ್ಥಿಕ ಸಮೀಕ್ಷೆ…

ಬಜೆಟ್​ನ ಮುಂಚೆ ಆರ್ಥಿಕ ಸಮೀಕ್ಷೆಯನ್ನು ಪ್ರಸ್ತುತಪಡಿಸಲಾಗುತ್ತದೆ. ವಾಡಿಕೆಯಂತೆ ಬಜೆಟ್ ಹಿಂದಿನ ದಿನವಾದ ಜನವರಿ 31ರಂದು ಆರ್ಥಿಕ ಸಮೀಕ್ಷೆಯ ವರದಿಯನ್ನು ಸಂಸತ್ತಿನಲ್ಲಿ ಮಂಡಿಸಲಾಗುತ್ತದೆ. ಕೇಂದ್ರ ಆರ್ಥಿಕ ವ್ಯವಹಾರಗಳ ಇಲಾಖೆಯ ಮುಖ್ಯಸ್ಥರ ನೇತೃತ್ವದಲ್ಲಿ ಸಿದ್ದಗೊಳ್ಳುವ ಈ ವರದಿಯನ್ನು ಹಣಕಾಸು ಸಚಿವರೇ ಸಂಸತ್ತಿನಲ್ಲಿ ಪ್ರಸ್ತುತಪಡಿಸುತ್ತಾರೆ.

ಇದನ್ನೂ ಓದಿ: ಕೇಂದ್ರ ಹಣಕಾಸು ಸಚಿವೆ ನೇತೃತ್ವದ ಬಜೆಟ್ ಟೀಮ್​ನ ಪ್ರಮುಖ ಸದಸ್ಯರಿವರು…

ಈ ಆರ್ಥಿಕ ಸಮೀಕ್ಷೆಯಲ್ಲಿ ದೇಶದ ಈಗಿನ ಆರ್ಥಿಕ ಸ್ಥಿತಿ ಹೇಗಿದೆ ಎನ್ನುವುದನ್ನು ಅವಲೋಕಿಸಲಾಗುತ್ತದೆ. ಆರ್ಥಿಕತೆಯ ಬಲಗಳೇನು, ದೌರ್ಬಲ್ಯಗಳೇನು ಎಂಬಿತ್ಯಾದಿ ಅಂಶಗಳನ್ನು ಪ್ರಸ್ತಾಪಿಸಲಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:05 am, Thu, 30 January 25

ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ
ಸಿಬಿಐಗೆ ರಾಜ್ಯಸರ್ಕಾರ ಅನುಮತಿಯ ಅವಶ್ಯಕತೆ ಇರುತ್ತದೆ: ಪರಮೇಶ್ವರ್
ಸಿಬಿಐಗೆ ರಾಜ್ಯಸರ್ಕಾರ ಅನುಮತಿಯ ಅವಶ್ಯಕತೆ ಇರುತ್ತದೆ: ಪರಮೇಶ್ವರ್
ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್​ನಲ್ಲಿ ಅಗ್ನಿ ಅವಘಡ
ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್​ನಲ್ಲಿ ಅಗ್ನಿ ಅವಘಡ
ಅರ್ಜಿ ವಜಾಗೊಂಡರೂ ಸಿದ್ದರಾಮಯ್ಯ ವಿರುದ್ಧದ ಪಟ್ಟು ಸಡಿಲಿಸದ ಸ್ನೇಹಮಯಿ ಕೃಷ್ಣ
ಅರ್ಜಿ ವಜಾಗೊಂಡರೂ ಸಿದ್ದರಾಮಯ್ಯ ವಿರುದ್ಧದ ಪಟ್ಟು ಸಡಿಲಿಸದ ಸ್ನೇಹಮಯಿ ಕೃಷ್ಣ