AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಪಿಟಲ್ ಗೇನ್​ನಿಂದ ಟ್ಯಾಕ್ಸ್ ರಿಬೇಟ್​ವರೆಗೆ…. ಹಿಂದಿನ ಬಜೆಟ್​ಗಳಲ್ಲಿ ತಂದ ಪ್ರಮುಖ ಬದಲಾವಣೆಗಳು

Past budget reforms: ಇವತ್ತು ಮೋದಿ 3.0 ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಆಗುತ್ತಿದೆ. ಈ ಬಜೆಟ್​ನಲ್ಲಿ ಬಹಳಷ್ಟು ನಿರೀಕ್ಷೆಗಳಿವೆ. ಹಿಂದಿನ ಬಜೆಟ್​ಗಳಲ್ಲಿ ಸರ್ಕಾರದಿಂದ ಒಂದಷ್ಟು ಸುಧಾರಣೆಗಳಿಗೆ ಪ್ರಯತ್ನ ಮಾಡಲಾಗಿತ್ತು. ಹೊಸ ಟ್ಯಾಕ್ಸ್ ರಿಜೈಮ್ ಮೂಲಕ ಆದಾಯ ತೆರಿಗೆ ವ್ಯವಸ್ಥೆಯನ್ನು ಸರಳಗೊಳಿಸುವ ಪ್ರಯತ್ನ ಮಾಡಲಾಯಿತು. ಕ್ಯಾಪಿಟಲ್ ಗೇನ್ ಟ್ಯಾಕ್ಸ್ ರಚನೆಯನ್ನು ಸರಳಗೊಳಿಸುವ ಪ್ರಯತ್ನವಾಗಿದೆ.

ಕ್ಯಾಪಿಟಲ್ ಗೇನ್​ನಿಂದ ಟ್ಯಾಕ್ಸ್ ರಿಬೇಟ್​ವರೆಗೆ.... ಹಿಂದಿನ ಬಜೆಟ್​ಗಳಲ್ಲಿ ತಂದ ಪ್ರಮುಖ ಬದಲಾವಣೆಗಳು
ಬಜೆಟ್​
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 01, 2025 | 9:58 AM

Share

ನವದೆಹಲಿ, ಫೆಬ್ರುವರಿ 1: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ತಮ್ಮ ಎಂಟನೇ ಬಜೆಟ್ ಮಂಡಿಸುತ್ತಿದ್ದಾರೆ. ಕಳೆದ ಕೆಲ ವರ್ಷಗಳಿಂದ ಮಂಡಿಸಲಾಗುತ್ತಿರುವ ಪ್ರತೀ ಬಜೆಟ್​ನಲ್ಲೂ ಕೆಲ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ನಿರ್ಮಲಾ ಸೀತಾರಾಮನ್ ಅವರೂ ಕೂಡ ತಮ್ಮ ಹಿಂದಿನ ಬಜೆಟ್​ಗಳಲ್ಲಿ ಸುಧಾರಣೆಗಳನ್ನು ಜಾರಿಗೆ ತಂದಿದ್ದಾರೆ. ಹೊಸ ಟ್ಯಾಕ್ಸ್ ರಿಜೈಮ್ ಅನ್ನು ಜಾರಿಗೆ ತಂದಿದ್ದರಿಂದ ಹಿಡಿದು, ಕ್ಯಾಪಿಟಲ್ ಗೇನ್ ಟ್ಯಾಕ್ಸ್, ಸ್ಟಾಂಡರ್ಡ್ ಡಿಡಕ್ಷನ್ ಇತ್ಯಾದಿಯಲ್ಲಿ ಕೆಲ ಸುಧಾರಣೆಗಳು ಮತ್ತು ಬದಲಾವಣೆಗಳನ್ನು ತರಲಾಗಿದೆ. ಈ ಬಗ್ಗೆ ಒಂದು ಸಂಕ್ಷಿಪ್ತ ನೋಟ…

ಹೊಸ ಟ್ಯಾಕ್ಸ್ ರಿಜೈಮ್

2020ರ ಬಜೆಟ್​ನಲ್ಲಿ ಹೊಸ ಆದಾಯ ತೆರಿಗೆ ಸಿಸ್ಟಂ ಅನ್ನು ಜಾರಿಗೆ ತರಲಾಯಿತು. ಹಿಂದೆ ಇದ್ದ ಹಳೆಯ ಟ್ಯಾಕ್ಸ್ ರಿಜೈಮ್ ಅನ್ನೂ ಉಳಿಸಿಕೊಂಡು ಹೊಸ ಟ್ಯಾಕ್ಸ್ ರಿಜೈಮ್ ಅನ್ನು ತರಲಾಯಿತು. ಇದರಲ್ಲಿ ತೆರಿಗೆ ವ್ಯವಸ್ಥೆಯನ್ನು ಸರಳಗೊಳಿಸಲಾಗಿದೆ. ಓಲ್ಡ್ ಟ್ಯಾಕ್ಸ್ ರಿಜೈಮ್​ನಲ್ಲಿದ್ದ ಕೆಲ ಡಿಡಕ್ಷನ್ ಇತ್ಯಾದಿ ಸೌಲಭ್ಯವನ್ನು ಕಡಿತಗೊಳಿಸಲಾಗಿದೆ. ಐಟಿ ಪಾವತಿದಾರರು ಬೇಕಾದಲ್ಲಿ ಹಳೆಯ ಟ್ಯಾಕ್ಸ್ ರಿಜೈಮ್​ನಲ್ಲೇ ಐಟಿ ರಿಟರ್ನ್ ಫೈಲ್ ಮಾಡಬಹುದು.

ಇದನ್ನೂ ಓದಿ: ಕೇಂದ್ರ ಬಜೆಟ್: ಕರ್ನಾಟಕಕ್ಕೆ ಬೆಟ್ಟದಷ್ಟು ನಿರೀಕ್ಷೆ, ಏನೇನು ಸಿಗಬಹುದು?

ಕ್ಯಾಪಿಟಲ್ ಗೇನ್ ಟ್ಯಾಕ್ಸ್

ಕಳೆದ ವರ್ಷದ ಬಜೆಟ್​ನಲ್ಲಿ (2024ರದ್ದು) ಕ್ಯಾಪಿಟಲ್ ಗೇನ್ ಟ್ಯಾಕ್ಸ್ ಸಿಸ್ಟಂನಲ್ಲಿ ಒಂದಷ್ಟು ಬದಲಾವಣೆ ತರಲಾಯಿತು. ಕಿರು ಅವಧಿ ಲಾಭ ಹೆಚ್ಚಳ ತೆರಿಗೆಯನ್ನು (ಎಸ್​ಟಿಸಿಜಿ) ಶೇ. 15ರಿಂದ ಶೇ. 20ಕ್ಕೆ ಹೆಚ್ಚಿಸಲಾಯಿತು.

ದೀರ್ಘಾವಧಿ ಲಾಭ ಹೆಚ್ಚಳ ತೆರಿಗೆಯನ್ನು (ಎಲ್​ಟಿಸಿಜಿ) ಶೇ. 20ರಿಂದ ಶೇ. 12.5ಕ್ಕೆ ಇಳಿಸಲಾಯಿತು. ಹಾಗೆಯೇ, ಕ್ಯಾಪಿಟಲ್ ಗೇನ್​ನಿಂದ ಬಂದ ಲಾಭದಲ್ಲಿ ಒಂದು ಲಕ್ಷ ರೂವರೆಗಿನ ಮೊತ್ತಕ್ಕೆ ತೆರಿಗೆ ವಿನಾಯಿತಿ ಇತ್ತು. ಅದನ್ನು 1.25 ಲಕ್ಷ ರೂಗೆ ಹೆಚ್ಚಿಸಲಾಯಿತು.

ಸ್ಟಾಂಡರ್ಡ್ ಡಿಡಕ್ಷನ್ ಹೆಚ್ಚಳ

ಕಳೆದ ಬಜೆಟ್​ನಲ್ಲಿ ಹೊಸ ಟ್ಯಾಕ್ಸ್ ರಿಜೈಮ್​ನಲ್ಲಿ ಸ್ಟಾಂಡರ್ಡ್ ಡಿಡಕ್ಷನ್ ಅನ್ನು 50,000 ರೂನಿಂದ 75,000 ರೂಗೆ ಏರಿಸಲಾಯಿತು. ಇದು ಸಂಬಳದ ಆದಾಯ ಪಡೆಯುವವರಿಗೆ. ಹಾಗೆಯೇ, ಕುಟುಂಬ ಪಿಂಚಣಿ ಪಡೆಯುವವರಿಗೆ ಸ್ಟಾಂಡರ್ಡ್ ಡಿಡಕ್ಷನ್ ಅನ್ನು 15,000 ರೂನಿಂದ 25,000 ರೂಗೆ ಏರಿಸಲಾಯಿತು. ಸಂಬಳದಾರರಿಗೆ ಸ್ಟಾಂಡರ್ಡ್ ಡಿಡಕ್ಷನ್ ಏರಿಕೆ ಮಾಡಿದ್ದರಿಂದ 7.75 ಲಕ್ಷ ರೂ ವಾರ್ಷಿಕ ಆದಾಯ ಪಡೆಯುತ್ತಿರುವ ಮಂದಿ ತೆರಿಗೆ ಕಟ್ಟುವ ಅವಶ್ಯಕತೆಯೇ ಇಲ್ಲದಂತಾಗುತ್ತದೆ.

ಇದನ್ನೂ ಓದಿ: ಕಂಪನಿಗಳಿಗೆ ಲಾಭ ಹೆಚ್ಚಿದರೂ ಉದ್ಯೋಗಸೃಷ್ಟಿ ಆಗಿಲ್ಲ, ವೇತನ ಹೆಚ್ಚಿಲ್ಲ: ಆರ್ಥಿಕ ಸಮೀಕ್ಷೆ ಆತಂಕ

ಆದಾಯ ತೆರಿಗೆ ಹೊಸ ಸ್ಲಾಬ್ ದರಗಳು

ಹೊಸ ಟ್ಯಾಕ್ಸ್ ರಿಜೈಮ್​ನಲ್ಲಿ ಕಳೆದ ಬಜೆಟ್​ನಲ್ಲಿ ಪುಟ್ಟ ಬದಲಾವಣೆ ಮಾಡಲಾಯಿತು. ವಾರ್ಷಿಕ ಮೂರು ಲಕ್ಷ ರೂವರೆಗಿನ ಆದಾಯಕ್ಕೆ ಯಾವ ತೆರಿಗೆಯೂ ಇರುವುದಿಲ್ಲ. 3ರಿಂದ 7 ಲಕ್ಷ ರೂವರೆಗಿನ ಆದಾಯಕ್ಕೆ ಶೇ. 5 ರಷ್ಟು ತೆರಿಗೆ; 7-10 ಲಕ್ಷ ರೂ ಆದಾಯಕ್ಕೆ ಶೇ. 10ರಷ್ಟು ತೆರಿಗೆ; 10-12 ಲಕ್ಷ ರೂ ಆದಾಯಕ್ಕೆ ಶೇ. 15 ತೆರಿಗೆ; 12-15 ಲಕ್ಷ ರೂ ಆದಾಯಕ್ಕೆ ಶೇ. 20ರಷ್ಟು ತೆರಿಗೆ; 15 ಲಕ್ಷ ರೂ ಮೇಲ್ಪಟ್ಟ ಆದಾಯಕ್ಕೆ ಶೇ. 30ರಷ್ಟು ತೆರಿಗೆ ನಿಗದಿ ಮಾಡಲಾಗಿದೆ.

ಟ್ಯಾಕ್ಸ್ ರಿಬೇಟ್….

2023ರ ಬಜೆಟ್​ನಲ್ಲಿ ಟ್ಯಾಕ್ಸ್ ರಿಬೇಟ್ ಸೌಲಭ್ಯ ಕೊಡಲಾಯಿತು. ಇದು ಬಹಳಷ್ಟು ಮಂದಿಗೆ ದೊಡ್ಡ ರಿಲೀಫ್ ತಂದಿತು. ಟ್ಯಾಕ್ಸ್ ರಿಬೇಟ್ ಅಥವಾ ತೆರಿಗೆ ವಿನಾಯಿತಿ ಸೌಲಭ್ಯವನ್ನು 5 ಲಕ್ಷ ರೂ ಆದಾಯ ಗಳಿಸುತ್ತಿರುವವರಿಗೆ ನೀಡಲಾಗಿತ್ತು. ಇದನ್ನು 7 ಲಕ್ಷ ರೂಗೆ ಏರಿಸಲಾಯಿತು. ಅಂದರೆ, ಸ್ಟಾಂಡರ್ಡ್ ಡಿಡಕ್ಷನ್ ಹೊರತುಪಡಿಸಿ ಉಳಿದ 7 ಲಕ್ಷ ರೂವರೆಗಿನ ಆದಾಯಕ್ಕೆ ರಿಬೇಟ್ ನೀಡಲಾಗಿದೆ. ಏಳೂವರೆ ಲಕ್ಷ ರೂವರೆಗೆ ವಾರ್ಷಿಕ ಆದಾಯ ಇರುವವರಿಗೆ ಟ್ಯಾಕ್ಸ್ ಪಾವತಿಯಿಂದ ವಿನಾಯಿತಿ ಸಿಕ್ಕಂತಾಯಿತು.

ಬಜೆಟ್ ಲೈವ್ ಅಪ್​ಡೇಟ್ಸ್​ಗೆ ಇಲ್ಲಿ ಕ್ಲಿಕ್ ಮಾಡಿ

ಇನ್ನಷ್ಟು ಬಜೆಟ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ