AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2022: ಚಾಲ್ತಿ ಖಾತೆ ಕೊರತೆ ನಿಯಂತ್ರಣದಲ್ಲಿಡಲು ಚಿನ್ನದ ಉಳಿತಾಯ ಖಾತೆ ಆರಂಭಿಸುವ ಸಾಧ್ಯತೆ

ಚಾಲ್ತಿ ಖಾತೆ ಕೊರತೆಯು ವಿಸ್ತರಿಸುವುದನ್ನು ತಡೆಯುವ ನಿಟ್ಟಿನಲ್ಲಿ ಈ ಬಾರಿಯ ಬಜೆಟ್​ನಲ್ಲಿ ಕೇಂದ್ರ ಸರ್ಕಾರವು ಚಿನ್ನದ ಉಳಿತಾಯ ಖಾತೆ ಆರಂಭಿಸುವ ಸಾಧ್ಯತೆ ಇದೆ.

Budget 2022: ಚಾಲ್ತಿ ಖಾತೆ ಕೊರತೆ ನಿಯಂತ್ರಣದಲ್ಲಿಡಲು ಚಿನ್ನದ ಉಳಿತಾಯ ಖಾತೆ ಆರಂಭಿಸುವ ಸಾಧ್ಯತೆ
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on: Jan 22, 2022 | 1:01 PM

Share

ಈ ಬಾರಿಯ ಕೇಂದ್ರ ಬಜೆಟ್​ನಲ್ಲಿ (Union Budget 2022-23) ಚಿನ್ನಸ ಸೇವಿಂಗ್ಸ್ ಅಕೌಂಟ್​​ಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಚಿನ್ನವನ್ನು ಭೌತಿಕವಾಗಿ ಖರೀದಿಸುವುದನ್ನು ಉತ್ತೇಜಿಸಬಾರದು. ಕರೆಂಟ್ ಅಕೌಂಟ್ ಡೆಫಿಸಿಟ್ ವಿಸ್ತರಣೆ ಆಗದಂತೆ ಮಿತಿಯಲ್ಲಿ ಇರಿಸಿಕೊಳ್ಳಬೇಕು ಎಂಬ ಕಾರಣಕ್ಕೆ ಹೀಗೆ ಮಾಡಬಹುದು, ಎಂದು ಬ್ಯಾಂಕಿಂಗ್ ಮತ್ತು ವ್ಯವಹಾರ ಮೂಲಗಳು ತಿಳಿಸಿವೆ. ಗ್ರಾಹಕರು ಬ್ಯಾಂಕ್​ಗಳಲ್ಲಿ ಅಂಥ ಗೋಲ್ಡ್ ಅಕೌಂಟ್ಸ್ ತೆರೆಯಬಹುದು ಮತ್ತು ನಿಯಮಿತವಾಗಿ ಅದರಲ್ಲಿ ಹಣ ಹಾಕಬಹುದು, ಎಂದು ಮೂಲಗಳು ತಿಳಿಸಿವೆ. ವಿಥ್​ಡ್ರಾ ಮಾಡುವ ಸಂದರ್ಭದಲ್ಲಿ ಚಿನ್ನದ ಬೆಲೆ ಎಷ್ಟಿರುತ್ತದೋ ಅದರ ಆಧಾರದಲ್ಲಿ ಠೇವಣಿ ಹಿಂಪಡೆಯಬಹುದು, ಎಂದು ತಿಳಿಸಲಾಗಿದೆ.

ಹೀಗೆ ಮಾಡುವುದರಿಂದ ಭೌತಿಕವಾಗಿ ಚಿನ್ನದ ಮೇಲೆ ಹೂಡಿಕೆ ಮಾಡುವ ಬೇಡಿಕೆ ಕಡಿಮೆ ಆಗುತ್ತದೆ. ಅಂದಹಾಗೆ ಗೋಲ್ಡ್ ಸೇವಿಂಗ್ಸ್​ಗೆ ಬಡ್ಡಿ ಸಹ ದೊರೆಯುತ್ತದೆ. ಹೇಗೆ ಸವರನ್ ಗೋಲ್ಡ್ ಬಾಂಡ್​ (SGB)ಗೆ ವಾರ್ಷಿಕವಾಗಿ ಶೇ 2.5ರಷ್ಟು ಬಡ್ಡಿ ದೊರೆಯುತ್ತದೋ ಅದೇ ರೀತಿಯಲ್ಲಿ ಸಿಗುತ್ತದೆ. ಇದರ ಜತೆಗೆ ಡಿಜಿಟಲ್ ಗೋಲ್ಡ್​ಗೆ ನಿಯಂತ್ರಕರ ಚೌಕಟ್ಟನ್ನು ಸಹ ರೂಪಿಸುವ ಸಾಧ್ಯತೆ ಇದೆ.

ಭಾರತದ ವಾರ್ಷಿಕ ಚಿನ್ನದ ಅಗತ್ಯವಾದ 800ರಿಂದ 850 ಟನ್​ಗಳನ್ನು ಆಮದು ಮಾಡಿಕೊಳ್ಳುತ್ತದೆ. ಚಿನ್ನದ ಆಮದು ಸಿಎಡಿ (ಕರೆಂಟ್ ಅಕೌಂಟ್ ಡೆಫಿಸಿಟ್) ಮೇಲೆ ಪರಿಣಾಮ ಹೊಂದಿರುತ್ತದೆ. ಅದು ಈ ಹಣಕಾಸು ವರ್ಷದ ಏಪ್ರಿಲ್​ನಿಂದ ಡಿಸೆಂಬರ್​ ಮಧ್ಯೆ ದುಪ್ಪಟ್ಟಿಗೂ ಹೆಚ್ಚಾಗಿ 3800 ಕೋಟಿ ಅಮೆರಿಕನ್ ಡಾಲರ್ ಆಗಿದೆ. ಬ್ಯಾಂಕರ್​ಗಳು ಈ ಸಂಬಂಧವಾಗಿ ಸರ್ಕಾರದ ಜತೆಗೆ ಮಾತನಾಡಿರುವುದಾಗಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Akshaya Tritiya: ಚಿನ್ನದ ಗಟ್ಟಿಯೋ ಸವರನ್ ಗೋಲ್ಡ್ ಬಾಂಡ್ ಚಿನ್ನದ ಇಟಿಎಫ್ ಯಾವುದು ಹೂಡಿಕೆಗೆ ಉತ್ತಮ?

ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ