AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2022: ಚಾಲ್ತಿ ಖಾತೆ ಕೊರತೆ ನಿಯಂತ್ರಣದಲ್ಲಿಡಲು ಚಿನ್ನದ ಉಳಿತಾಯ ಖಾತೆ ಆರಂಭಿಸುವ ಸಾಧ್ಯತೆ

ಚಾಲ್ತಿ ಖಾತೆ ಕೊರತೆಯು ವಿಸ್ತರಿಸುವುದನ್ನು ತಡೆಯುವ ನಿಟ್ಟಿನಲ್ಲಿ ಈ ಬಾರಿಯ ಬಜೆಟ್​ನಲ್ಲಿ ಕೇಂದ್ರ ಸರ್ಕಾರವು ಚಿನ್ನದ ಉಳಿತಾಯ ಖಾತೆ ಆರಂಭಿಸುವ ಸಾಧ್ಯತೆ ಇದೆ.

Budget 2022: ಚಾಲ್ತಿ ಖಾತೆ ಕೊರತೆ ನಿಯಂತ್ರಣದಲ್ಲಿಡಲು ಚಿನ್ನದ ಉಳಿತಾಯ ಖಾತೆ ಆರಂಭಿಸುವ ಸಾಧ್ಯತೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 22, 2022 | 1:01 PM

Share

ಈ ಬಾರಿಯ ಕೇಂದ್ರ ಬಜೆಟ್​ನಲ್ಲಿ (Union Budget 2022-23) ಚಿನ್ನಸ ಸೇವಿಂಗ್ಸ್ ಅಕೌಂಟ್​​ಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಚಿನ್ನವನ್ನು ಭೌತಿಕವಾಗಿ ಖರೀದಿಸುವುದನ್ನು ಉತ್ತೇಜಿಸಬಾರದು. ಕರೆಂಟ್ ಅಕೌಂಟ್ ಡೆಫಿಸಿಟ್ ವಿಸ್ತರಣೆ ಆಗದಂತೆ ಮಿತಿಯಲ್ಲಿ ಇರಿಸಿಕೊಳ್ಳಬೇಕು ಎಂಬ ಕಾರಣಕ್ಕೆ ಹೀಗೆ ಮಾಡಬಹುದು, ಎಂದು ಬ್ಯಾಂಕಿಂಗ್ ಮತ್ತು ವ್ಯವಹಾರ ಮೂಲಗಳು ತಿಳಿಸಿವೆ. ಗ್ರಾಹಕರು ಬ್ಯಾಂಕ್​ಗಳಲ್ಲಿ ಅಂಥ ಗೋಲ್ಡ್ ಅಕೌಂಟ್ಸ್ ತೆರೆಯಬಹುದು ಮತ್ತು ನಿಯಮಿತವಾಗಿ ಅದರಲ್ಲಿ ಹಣ ಹಾಕಬಹುದು, ಎಂದು ಮೂಲಗಳು ತಿಳಿಸಿವೆ. ವಿಥ್​ಡ್ರಾ ಮಾಡುವ ಸಂದರ್ಭದಲ್ಲಿ ಚಿನ್ನದ ಬೆಲೆ ಎಷ್ಟಿರುತ್ತದೋ ಅದರ ಆಧಾರದಲ್ಲಿ ಠೇವಣಿ ಹಿಂಪಡೆಯಬಹುದು, ಎಂದು ತಿಳಿಸಲಾಗಿದೆ.

ಹೀಗೆ ಮಾಡುವುದರಿಂದ ಭೌತಿಕವಾಗಿ ಚಿನ್ನದ ಮೇಲೆ ಹೂಡಿಕೆ ಮಾಡುವ ಬೇಡಿಕೆ ಕಡಿಮೆ ಆಗುತ್ತದೆ. ಅಂದಹಾಗೆ ಗೋಲ್ಡ್ ಸೇವಿಂಗ್ಸ್​ಗೆ ಬಡ್ಡಿ ಸಹ ದೊರೆಯುತ್ತದೆ. ಹೇಗೆ ಸವರನ್ ಗೋಲ್ಡ್ ಬಾಂಡ್​ (SGB)ಗೆ ವಾರ್ಷಿಕವಾಗಿ ಶೇ 2.5ರಷ್ಟು ಬಡ್ಡಿ ದೊರೆಯುತ್ತದೋ ಅದೇ ರೀತಿಯಲ್ಲಿ ಸಿಗುತ್ತದೆ. ಇದರ ಜತೆಗೆ ಡಿಜಿಟಲ್ ಗೋಲ್ಡ್​ಗೆ ನಿಯಂತ್ರಕರ ಚೌಕಟ್ಟನ್ನು ಸಹ ರೂಪಿಸುವ ಸಾಧ್ಯತೆ ಇದೆ.

ಭಾರತದ ವಾರ್ಷಿಕ ಚಿನ್ನದ ಅಗತ್ಯವಾದ 800ರಿಂದ 850 ಟನ್​ಗಳನ್ನು ಆಮದು ಮಾಡಿಕೊಳ್ಳುತ್ತದೆ. ಚಿನ್ನದ ಆಮದು ಸಿಎಡಿ (ಕರೆಂಟ್ ಅಕೌಂಟ್ ಡೆಫಿಸಿಟ್) ಮೇಲೆ ಪರಿಣಾಮ ಹೊಂದಿರುತ್ತದೆ. ಅದು ಈ ಹಣಕಾಸು ವರ್ಷದ ಏಪ್ರಿಲ್​ನಿಂದ ಡಿಸೆಂಬರ್​ ಮಧ್ಯೆ ದುಪ್ಪಟ್ಟಿಗೂ ಹೆಚ್ಚಾಗಿ 3800 ಕೋಟಿ ಅಮೆರಿಕನ್ ಡಾಲರ್ ಆಗಿದೆ. ಬ್ಯಾಂಕರ್​ಗಳು ಈ ಸಂಬಂಧವಾಗಿ ಸರ್ಕಾರದ ಜತೆಗೆ ಮಾತನಾಡಿರುವುದಾಗಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Akshaya Tritiya: ಚಿನ್ನದ ಗಟ್ಟಿಯೋ ಸವರನ್ ಗೋಲ್ಡ್ ಬಾಂಡ್ ಚಿನ್ನದ ಇಟಿಎಫ್ ಯಾವುದು ಹೂಡಿಕೆಗೆ ಉತ್ತಮ?

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು