AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2022: ಚಾಲ್ತಿ ಖಾತೆ ಕೊರತೆ ನಿಯಂತ್ರಣದಲ್ಲಿಡಲು ಚಿನ್ನದ ಉಳಿತಾಯ ಖಾತೆ ಆರಂಭಿಸುವ ಸಾಧ್ಯತೆ

ಚಾಲ್ತಿ ಖಾತೆ ಕೊರತೆಯು ವಿಸ್ತರಿಸುವುದನ್ನು ತಡೆಯುವ ನಿಟ್ಟಿನಲ್ಲಿ ಈ ಬಾರಿಯ ಬಜೆಟ್​ನಲ್ಲಿ ಕೇಂದ್ರ ಸರ್ಕಾರವು ಚಿನ್ನದ ಉಳಿತಾಯ ಖಾತೆ ಆರಂಭಿಸುವ ಸಾಧ್ಯತೆ ಇದೆ.

Budget 2022: ಚಾಲ್ತಿ ಖಾತೆ ಕೊರತೆ ನಿಯಂತ್ರಣದಲ್ಲಿಡಲು ಚಿನ್ನದ ಉಳಿತಾಯ ಖಾತೆ ಆರಂಭಿಸುವ ಸಾಧ್ಯತೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Jan 22, 2022 | 1:01 PM

ಈ ಬಾರಿಯ ಕೇಂದ್ರ ಬಜೆಟ್​ನಲ್ಲಿ (Union Budget 2022-23) ಚಿನ್ನಸ ಸೇವಿಂಗ್ಸ್ ಅಕೌಂಟ್​​ಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಚಿನ್ನವನ್ನು ಭೌತಿಕವಾಗಿ ಖರೀದಿಸುವುದನ್ನು ಉತ್ತೇಜಿಸಬಾರದು. ಕರೆಂಟ್ ಅಕೌಂಟ್ ಡೆಫಿಸಿಟ್ ವಿಸ್ತರಣೆ ಆಗದಂತೆ ಮಿತಿಯಲ್ಲಿ ಇರಿಸಿಕೊಳ್ಳಬೇಕು ಎಂಬ ಕಾರಣಕ್ಕೆ ಹೀಗೆ ಮಾಡಬಹುದು, ಎಂದು ಬ್ಯಾಂಕಿಂಗ್ ಮತ್ತು ವ್ಯವಹಾರ ಮೂಲಗಳು ತಿಳಿಸಿವೆ. ಗ್ರಾಹಕರು ಬ್ಯಾಂಕ್​ಗಳಲ್ಲಿ ಅಂಥ ಗೋಲ್ಡ್ ಅಕೌಂಟ್ಸ್ ತೆರೆಯಬಹುದು ಮತ್ತು ನಿಯಮಿತವಾಗಿ ಅದರಲ್ಲಿ ಹಣ ಹಾಕಬಹುದು, ಎಂದು ಮೂಲಗಳು ತಿಳಿಸಿವೆ. ವಿಥ್​ಡ್ರಾ ಮಾಡುವ ಸಂದರ್ಭದಲ್ಲಿ ಚಿನ್ನದ ಬೆಲೆ ಎಷ್ಟಿರುತ್ತದೋ ಅದರ ಆಧಾರದಲ್ಲಿ ಠೇವಣಿ ಹಿಂಪಡೆಯಬಹುದು, ಎಂದು ತಿಳಿಸಲಾಗಿದೆ.

ಹೀಗೆ ಮಾಡುವುದರಿಂದ ಭೌತಿಕವಾಗಿ ಚಿನ್ನದ ಮೇಲೆ ಹೂಡಿಕೆ ಮಾಡುವ ಬೇಡಿಕೆ ಕಡಿಮೆ ಆಗುತ್ತದೆ. ಅಂದಹಾಗೆ ಗೋಲ್ಡ್ ಸೇವಿಂಗ್ಸ್​ಗೆ ಬಡ್ಡಿ ಸಹ ದೊರೆಯುತ್ತದೆ. ಹೇಗೆ ಸವರನ್ ಗೋಲ್ಡ್ ಬಾಂಡ್​ (SGB)ಗೆ ವಾರ್ಷಿಕವಾಗಿ ಶೇ 2.5ರಷ್ಟು ಬಡ್ಡಿ ದೊರೆಯುತ್ತದೋ ಅದೇ ರೀತಿಯಲ್ಲಿ ಸಿಗುತ್ತದೆ. ಇದರ ಜತೆಗೆ ಡಿಜಿಟಲ್ ಗೋಲ್ಡ್​ಗೆ ನಿಯಂತ್ರಕರ ಚೌಕಟ್ಟನ್ನು ಸಹ ರೂಪಿಸುವ ಸಾಧ್ಯತೆ ಇದೆ.

ಭಾರತದ ವಾರ್ಷಿಕ ಚಿನ್ನದ ಅಗತ್ಯವಾದ 800ರಿಂದ 850 ಟನ್​ಗಳನ್ನು ಆಮದು ಮಾಡಿಕೊಳ್ಳುತ್ತದೆ. ಚಿನ್ನದ ಆಮದು ಸಿಎಡಿ (ಕರೆಂಟ್ ಅಕೌಂಟ್ ಡೆಫಿಸಿಟ್) ಮೇಲೆ ಪರಿಣಾಮ ಹೊಂದಿರುತ್ತದೆ. ಅದು ಈ ಹಣಕಾಸು ವರ್ಷದ ಏಪ್ರಿಲ್​ನಿಂದ ಡಿಸೆಂಬರ್​ ಮಧ್ಯೆ ದುಪ್ಪಟ್ಟಿಗೂ ಹೆಚ್ಚಾಗಿ 3800 ಕೋಟಿ ಅಮೆರಿಕನ್ ಡಾಲರ್ ಆಗಿದೆ. ಬ್ಯಾಂಕರ್​ಗಳು ಈ ಸಂಬಂಧವಾಗಿ ಸರ್ಕಾರದ ಜತೆಗೆ ಮಾತನಾಡಿರುವುದಾಗಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Akshaya Tritiya: ಚಿನ್ನದ ಗಟ್ಟಿಯೋ ಸವರನ್ ಗೋಲ್ಡ್ ಬಾಂಡ್ ಚಿನ್ನದ ಇಟಿಎಫ್ ಯಾವುದು ಹೂಡಿಕೆಗೆ ಉತ್ತಮ?

ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ