Budget 2022: ಚಾಲ್ತಿ ಖಾತೆ ಕೊರತೆ ನಿಯಂತ್ರಣದಲ್ಲಿಡಲು ಚಿನ್ನದ ಉಳಿತಾಯ ಖಾತೆ ಆರಂಭಿಸುವ ಸಾಧ್ಯತೆ

ಚಾಲ್ತಿ ಖಾತೆ ಕೊರತೆಯು ವಿಸ್ತರಿಸುವುದನ್ನು ತಡೆಯುವ ನಿಟ್ಟಿನಲ್ಲಿ ಈ ಬಾರಿಯ ಬಜೆಟ್​ನಲ್ಲಿ ಕೇಂದ್ರ ಸರ್ಕಾರವು ಚಿನ್ನದ ಉಳಿತಾಯ ಖಾತೆ ಆರಂಭಿಸುವ ಸಾಧ್ಯತೆ ಇದೆ.

Budget 2022: ಚಾಲ್ತಿ ಖಾತೆ ಕೊರತೆ ನಿಯಂತ್ರಣದಲ್ಲಿಡಲು ಚಿನ್ನದ ಉಳಿತಾಯ ಖಾತೆ ಆರಂಭಿಸುವ ಸಾಧ್ಯತೆ
ಸಾಂದರ್ಭಿಕ ಚಿತ್ರ
Follow us
| Updated By: Srinivas Mata

Updated on: Jan 22, 2022 | 1:01 PM

ಈ ಬಾರಿಯ ಕೇಂದ್ರ ಬಜೆಟ್​ನಲ್ಲಿ (Union Budget 2022-23) ಚಿನ್ನಸ ಸೇವಿಂಗ್ಸ್ ಅಕೌಂಟ್​​ಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಚಿನ್ನವನ್ನು ಭೌತಿಕವಾಗಿ ಖರೀದಿಸುವುದನ್ನು ಉತ್ತೇಜಿಸಬಾರದು. ಕರೆಂಟ್ ಅಕೌಂಟ್ ಡೆಫಿಸಿಟ್ ವಿಸ್ತರಣೆ ಆಗದಂತೆ ಮಿತಿಯಲ್ಲಿ ಇರಿಸಿಕೊಳ್ಳಬೇಕು ಎಂಬ ಕಾರಣಕ್ಕೆ ಹೀಗೆ ಮಾಡಬಹುದು, ಎಂದು ಬ್ಯಾಂಕಿಂಗ್ ಮತ್ತು ವ್ಯವಹಾರ ಮೂಲಗಳು ತಿಳಿಸಿವೆ. ಗ್ರಾಹಕರು ಬ್ಯಾಂಕ್​ಗಳಲ್ಲಿ ಅಂಥ ಗೋಲ್ಡ್ ಅಕೌಂಟ್ಸ್ ತೆರೆಯಬಹುದು ಮತ್ತು ನಿಯಮಿತವಾಗಿ ಅದರಲ್ಲಿ ಹಣ ಹಾಕಬಹುದು, ಎಂದು ಮೂಲಗಳು ತಿಳಿಸಿವೆ. ವಿಥ್​ಡ್ರಾ ಮಾಡುವ ಸಂದರ್ಭದಲ್ಲಿ ಚಿನ್ನದ ಬೆಲೆ ಎಷ್ಟಿರುತ್ತದೋ ಅದರ ಆಧಾರದಲ್ಲಿ ಠೇವಣಿ ಹಿಂಪಡೆಯಬಹುದು, ಎಂದು ತಿಳಿಸಲಾಗಿದೆ.

ಹೀಗೆ ಮಾಡುವುದರಿಂದ ಭೌತಿಕವಾಗಿ ಚಿನ್ನದ ಮೇಲೆ ಹೂಡಿಕೆ ಮಾಡುವ ಬೇಡಿಕೆ ಕಡಿಮೆ ಆಗುತ್ತದೆ. ಅಂದಹಾಗೆ ಗೋಲ್ಡ್ ಸೇವಿಂಗ್ಸ್​ಗೆ ಬಡ್ಡಿ ಸಹ ದೊರೆಯುತ್ತದೆ. ಹೇಗೆ ಸವರನ್ ಗೋಲ್ಡ್ ಬಾಂಡ್​ (SGB)ಗೆ ವಾರ್ಷಿಕವಾಗಿ ಶೇ 2.5ರಷ್ಟು ಬಡ್ಡಿ ದೊರೆಯುತ್ತದೋ ಅದೇ ರೀತಿಯಲ್ಲಿ ಸಿಗುತ್ತದೆ. ಇದರ ಜತೆಗೆ ಡಿಜಿಟಲ್ ಗೋಲ್ಡ್​ಗೆ ನಿಯಂತ್ರಕರ ಚೌಕಟ್ಟನ್ನು ಸಹ ರೂಪಿಸುವ ಸಾಧ್ಯತೆ ಇದೆ.

ಭಾರತದ ವಾರ್ಷಿಕ ಚಿನ್ನದ ಅಗತ್ಯವಾದ 800ರಿಂದ 850 ಟನ್​ಗಳನ್ನು ಆಮದು ಮಾಡಿಕೊಳ್ಳುತ್ತದೆ. ಚಿನ್ನದ ಆಮದು ಸಿಎಡಿ (ಕರೆಂಟ್ ಅಕೌಂಟ್ ಡೆಫಿಸಿಟ್) ಮೇಲೆ ಪರಿಣಾಮ ಹೊಂದಿರುತ್ತದೆ. ಅದು ಈ ಹಣಕಾಸು ವರ್ಷದ ಏಪ್ರಿಲ್​ನಿಂದ ಡಿಸೆಂಬರ್​ ಮಧ್ಯೆ ದುಪ್ಪಟ್ಟಿಗೂ ಹೆಚ್ಚಾಗಿ 3800 ಕೋಟಿ ಅಮೆರಿಕನ್ ಡಾಲರ್ ಆಗಿದೆ. ಬ್ಯಾಂಕರ್​ಗಳು ಈ ಸಂಬಂಧವಾಗಿ ಸರ್ಕಾರದ ಜತೆಗೆ ಮಾತನಾಡಿರುವುದಾಗಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Akshaya Tritiya: ಚಿನ್ನದ ಗಟ್ಟಿಯೋ ಸವರನ್ ಗೋಲ್ಡ್ ಬಾಂಡ್ ಚಿನ್ನದ ಇಟಿಎಫ್ ಯಾವುದು ಹೂಡಿಕೆಗೆ ಉತ್ತಮ?

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ