AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSU Privatisation: ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳ ಖಾಸಗೀಕರಣ ಪ್ರಸ್ತಾವಕ್ಕೆ ಷೇರು ಮಾರ್ಕೆಟ್ ಪ್ರತಿಕ್ರಿಯೆ ಹೇಗಿದೆ?

ಕೇಂದ್ರ ಬಜೆಟ್ 2022ರಲ್ಲಿ ಸಾರ್ವಜನಿಕ ಸಂಸ್ಥೆಗಳ ಖಾಸಗೀಕರಣದ ಘೋಷಣೆಗೆ ಷೇರುಪೇಟೆಯಲ್ಲಿನ ಪಿಎಸ್​ಯು ಸೂಚ್ಯಂಕವು ಪ್ರತಿಕ್ರಿಯೆ ನೀಡಿದ್ದು ಹೇಗೆ ಎಂಬ ಮಾಹಿತಿ ಇಲ್ಲಿದೆ.

PSU Privatisation: ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳ ಖಾಸಗೀಕರಣ ಪ್ರಸ್ತಾವಕ್ಕೆ ಷೇರು ಮಾರ್ಕೆಟ್ ಪ್ರತಿಕ್ರಿಯೆ ಹೇಗಿದೆ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 01, 2022 | 11:33 AM

Share

ಕೇಂದ್ರ ಬಜೆಟ್​ 2022ರ ಮಂಡನೆ ವೇಳೆ ಹಣಕಾಸು ಸಚಿವೆ ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳ ಖಾಸಗೀಕರಣದ (Privatisation) ಬಗ್ಗೆ ಪ್ರಸ್ತಾವ ಮಾಡಿದ್ದಾರೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಎಲ್​ಐಸಿ ಐಪಿಒ ಮತ್ತು ಇಸ್ಪಾತ್ ನೀಲಾಂಚಲ್ ಅನ್ನು ಟಾಟಾ ಸ್ಟೀಲ್​ಗೆ ವಹಿಸುವ ಬಗ್ಗೆ ಕೂಡ ತಿಳಿಸಿದ್ದಾರೆ. ಇದರಿಂದಾಗಿ ಷೇರು ಮಾರುಕಟ್ಟೆಯಲ್ಲಿ ಸಾರ್ವಜನಿಕ ಸ್ವಾಮ್ಯದ ಕಂಪೆನಿಗಳ ಷೇರಿನ ಬೆಲೆಯಲ್ಲಿ ಹೆಚ್ಚಳವಾಗಿದೆ. ಬಿಎಸ್​ಇ ಪಿಎಸ್​ಯು ಸೂಚ್ಯಂಕವು ಈ ಹಿಂದಿನ ಟ್ರೇಡಿಂಗ್ ಸೆಷನ್​ನಲ್ಲಿ 9020.21 ಪಾಯಿಂಟ್ಸ್​​ನೊಂದಿಗೆ ವಹಿವಾಟು ಮುಕ್ತಾಯಗೊಳಿಸಿತ್ತು. ಇಂದು ಆರಂಭವಾಗಿದ್ದು 9113.04 ಪಾಯಿಂಟ್ಸ್​​ಗೆ. ಆ ನಂತರ ದಿನದ ಗರಿಷ್ಠ ಮಟ್ಟ 9114.15 ಪಾಯಿಂಟ್ಸ್ ತಲುಪಿತು.

ಅಂದ ಹಾಗೆ ಬಿಎಸ್​ಇ ಪಿಎಸ್​ಯು ಸೂಚ್ಯಂಕದ ವಾರ್ಷಿಕ ಕನಿಷ್ಠ ಮಟ್ಟ 5724.42 ಪಾಯಿಂಟ್ಸ್​ ಆಗಿದ್ದು, ಗರಿಷ್ಠ ಮಟ್ಟ 9,358.78 ಪಾಯಿಂಟ್ಸ್ ಆಗಿದೆ. ಇತ್ತೀಚೆಗೆ ಏರ್​ ಇಂಡಿಯಾವನ್ನು ಯಶಸ್ವಿಯಾಗಿ ಟಾಟಾ ಸಮೂಹಕ್ಕೆ ವರ್ಗಾವಣೆ ಮಾಡಿ ಮುಗಿಸಿರುವುದು ದೊಡ್ಡ ಮಟ್ಟದ ಆತ್ಮವಿಶ್ವಾಸ ನೀಡಿದೆ. ಸಾಲದ ಸುಳಿಯಲ್ಲಿ ಸಿಲುಕಿದ್ದ ಏರ್​ ಇಂಡಿಯಾದ ಷೇರಿನ ಪಾಲನ್ನು ಮಾರಾಟ ಮಾಡಿದ್ದು, ಇದೀಗ ಎಲ್​ಐಸಿ ಐಪಿಒ ಪ್ರಸಕ್ತ ಹಣಕಾಸು ವರ್ಷದಲ್ಲಿ ಅತಿ ದೊಡ್ಡ ನಿರೀಕ್ಷೆ ಆಗಿದೆ.

ಎಲ್​ಐಸಿ ಐಪಿಒ ಭಾರತದ ಇತಿಹಾಸದಲ್ಲೇ ಅತಿ ದೊಡ್ಡ ಐಪಿಒ ಆಗಿದೆ. ಇದರ ಜತೆಗೆ ಇತರ ಸಾರ್ವಜನಿಕ ಸ್ವಾಮ್ಯದ ಷೇರುಗಳ ಮಾರಾಟ ಕೂಡ 2022-23ರ ಹಣಕಾಸು ವರ್ಷದಲ್ಲಿ ಮಾಡಲಾಗುವುದು. ಈ ಲೇಖನವನ್ನು ಸಿದ್ಧ ಮಾಡುವ ಹೊತ್ತಿಗೆ ಅಲ್ಪ ಪ್ರಮಾಣದ ಇಳಿಕೆಯೊಂದಿಗೆ 9,019.46 ಪಾಯಿಂಟ್ಸ್​ನಲ್ಲಿ ವಹಿವಾಟು ನಡೆಸುತ್ತಿತ್ತು.

ಇದನ್ನೂ ಓದಿ: Air India: ಟಾಟಾ ಸಮೂಹಕ್ಕೆ ಏರ್​ ಇಂಡಿಯಾ ಹಸ್ತಾಂತರಿಸುವ ಕಾರ್ಯ ಸಂಪೂರ್ಣ ಎಂದು ಘೋಷಿಸಿದ ತುಹಿನ್ ಕಾಂತ್ ಪಾಂಡೆ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!