AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSU Privatisation: ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳ ಖಾಸಗೀಕರಣ ಪ್ರಸ್ತಾವಕ್ಕೆ ಷೇರು ಮಾರ್ಕೆಟ್ ಪ್ರತಿಕ್ರಿಯೆ ಹೇಗಿದೆ?

ಕೇಂದ್ರ ಬಜೆಟ್ 2022ರಲ್ಲಿ ಸಾರ್ವಜನಿಕ ಸಂಸ್ಥೆಗಳ ಖಾಸಗೀಕರಣದ ಘೋಷಣೆಗೆ ಷೇರುಪೇಟೆಯಲ್ಲಿನ ಪಿಎಸ್​ಯು ಸೂಚ್ಯಂಕವು ಪ್ರತಿಕ್ರಿಯೆ ನೀಡಿದ್ದು ಹೇಗೆ ಎಂಬ ಮಾಹಿತಿ ಇಲ್ಲಿದೆ.

PSU Privatisation: ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳ ಖಾಸಗೀಕರಣ ಪ್ರಸ್ತಾವಕ್ಕೆ ಷೇರು ಮಾರ್ಕೆಟ್ ಪ್ರತಿಕ್ರಿಯೆ ಹೇಗಿದೆ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 01, 2022 | 11:33 AM

Share

ಕೇಂದ್ರ ಬಜೆಟ್​ 2022ರ ಮಂಡನೆ ವೇಳೆ ಹಣಕಾಸು ಸಚಿವೆ ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳ ಖಾಸಗೀಕರಣದ (Privatisation) ಬಗ್ಗೆ ಪ್ರಸ್ತಾವ ಮಾಡಿದ್ದಾರೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಎಲ್​ಐಸಿ ಐಪಿಒ ಮತ್ತು ಇಸ್ಪಾತ್ ನೀಲಾಂಚಲ್ ಅನ್ನು ಟಾಟಾ ಸ್ಟೀಲ್​ಗೆ ವಹಿಸುವ ಬಗ್ಗೆ ಕೂಡ ತಿಳಿಸಿದ್ದಾರೆ. ಇದರಿಂದಾಗಿ ಷೇರು ಮಾರುಕಟ್ಟೆಯಲ್ಲಿ ಸಾರ್ವಜನಿಕ ಸ್ವಾಮ್ಯದ ಕಂಪೆನಿಗಳ ಷೇರಿನ ಬೆಲೆಯಲ್ಲಿ ಹೆಚ್ಚಳವಾಗಿದೆ. ಬಿಎಸ್​ಇ ಪಿಎಸ್​ಯು ಸೂಚ್ಯಂಕವು ಈ ಹಿಂದಿನ ಟ್ರೇಡಿಂಗ್ ಸೆಷನ್​ನಲ್ಲಿ 9020.21 ಪಾಯಿಂಟ್ಸ್​​ನೊಂದಿಗೆ ವಹಿವಾಟು ಮುಕ್ತಾಯಗೊಳಿಸಿತ್ತು. ಇಂದು ಆರಂಭವಾಗಿದ್ದು 9113.04 ಪಾಯಿಂಟ್ಸ್​​ಗೆ. ಆ ನಂತರ ದಿನದ ಗರಿಷ್ಠ ಮಟ್ಟ 9114.15 ಪಾಯಿಂಟ್ಸ್ ತಲುಪಿತು.

ಅಂದ ಹಾಗೆ ಬಿಎಸ್​ಇ ಪಿಎಸ್​ಯು ಸೂಚ್ಯಂಕದ ವಾರ್ಷಿಕ ಕನಿಷ್ಠ ಮಟ್ಟ 5724.42 ಪಾಯಿಂಟ್ಸ್​ ಆಗಿದ್ದು, ಗರಿಷ್ಠ ಮಟ್ಟ 9,358.78 ಪಾಯಿಂಟ್ಸ್ ಆಗಿದೆ. ಇತ್ತೀಚೆಗೆ ಏರ್​ ಇಂಡಿಯಾವನ್ನು ಯಶಸ್ವಿಯಾಗಿ ಟಾಟಾ ಸಮೂಹಕ್ಕೆ ವರ್ಗಾವಣೆ ಮಾಡಿ ಮುಗಿಸಿರುವುದು ದೊಡ್ಡ ಮಟ್ಟದ ಆತ್ಮವಿಶ್ವಾಸ ನೀಡಿದೆ. ಸಾಲದ ಸುಳಿಯಲ್ಲಿ ಸಿಲುಕಿದ್ದ ಏರ್​ ಇಂಡಿಯಾದ ಷೇರಿನ ಪಾಲನ್ನು ಮಾರಾಟ ಮಾಡಿದ್ದು, ಇದೀಗ ಎಲ್​ಐಸಿ ಐಪಿಒ ಪ್ರಸಕ್ತ ಹಣಕಾಸು ವರ್ಷದಲ್ಲಿ ಅತಿ ದೊಡ್ಡ ನಿರೀಕ್ಷೆ ಆಗಿದೆ.

ಎಲ್​ಐಸಿ ಐಪಿಒ ಭಾರತದ ಇತಿಹಾಸದಲ್ಲೇ ಅತಿ ದೊಡ್ಡ ಐಪಿಒ ಆಗಿದೆ. ಇದರ ಜತೆಗೆ ಇತರ ಸಾರ್ವಜನಿಕ ಸ್ವಾಮ್ಯದ ಷೇರುಗಳ ಮಾರಾಟ ಕೂಡ 2022-23ರ ಹಣಕಾಸು ವರ್ಷದಲ್ಲಿ ಮಾಡಲಾಗುವುದು. ಈ ಲೇಖನವನ್ನು ಸಿದ್ಧ ಮಾಡುವ ಹೊತ್ತಿಗೆ ಅಲ್ಪ ಪ್ರಮಾಣದ ಇಳಿಕೆಯೊಂದಿಗೆ 9,019.46 ಪಾಯಿಂಟ್ಸ್​ನಲ್ಲಿ ವಹಿವಾಟು ನಡೆಸುತ್ತಿತ್ತು.

ಇದನ್ನೂ ಓದಿ: Air India: ಟಾಟಾ ಸಮೂಹಕ್ಕೆ ಏರ್​ ಇಂಡಿಯಾ ಹಸ್ತಾಂತರಿಸುವ ಕಾರ್ಯ ಸಂಪೂರ್ಣ ಎಂದು ಘೋಷಿಸಿದ ತುಹಿನ್ ಕಾಂತ್ ಪಾಂಡೆ

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ