AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSU Privatisation: ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳ ಖಾಸಗೀಕರಣ ಪ್ರಸ್ತಾವಕ್ಕೆ ಷೇರು ಮಾರ್ಕೆಟ್ ಪ್ರತಿಕ್ರಿಯೆ ಹೇಗಿದೆ?

ಕೇಂದ್ರ ಬಜೆಟ್ 2022ರಲ್ಲಿ ಸಾರ್ವಜನಿಕ ಸಂಸ್ಥೆಗಳ ಖಾಸಗೀಕರಣದ ಘೋಷಣೆಗೆ ಷೇರುಪೇಟೆಯಲ್ಲಿನ ಪಿಎಸ್​ಯು ಸೂಚ್ಯಂಕವು ಪ್ರತಿಕ್ರಿಯೆ ನೀಡಿದ್ದು ಹೇಗೆ ಎಂಬ ಮಾಹಿತಿ ಇಲ್ಲಿದೆ.

PSU Privatisation: ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳ ಖಾಸಗೀಕರಣ ಪ್ರಸ್ತಾವಕ್ಕೆ ಷೇರು ಮಾರ್ಕೆಟ್ ಪ್ರತಿಕ್ರಿಯೆ ಹೇಗಿದೆ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 01, 2022 | 11:33 AM

Share

ಕೇಂದ್ರ ಬಜೆಟ್​ 2022ರ ಮಂಡನೆ ವೇಳೆ ಹಣಕಾಸು ಸಚಿವೆ ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳ ಖಾಸಗೀಕರಣದ (Privatisation) ಬಗ್ಗೆ ಪ್ರಸ್ತಾವ ಮಾಡಿದ್ದಾರೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಎಲ್​ಐಸಿ ಐಪಿಒ ಮತ್ತು ಇಸ್ಪಾತ್ ನೀಲಾಂಚಲ್ ಅನ್ನು ಟಾಟಾ ಸ್ಟೀಲ್​ಗೆ ವಹಿಸುವ ಬಗ್ಗೆ ಕೂಡ ತಿಳಿಸಿದ್ದಾರೆ. ಇದರಿಂದಾಗಿ ಷೇರು ಮಾರುಕಟ್ಟೆಯಲ್ಲಿ ಸಾರ್ವಜನಿಕ ಸ್ವಾಮ್ಯದ ಕಂಪೆನಿಗಳ ಷೇರಿನ ಬೆಲೆಯಲ್ಲಿ ಹೆಚ್ಚಳವಾಗಿದೆ. ಬಿಎಸ್​ಇ ಪಿಎಸ್​ಯು ಸೂಚ್ಯಂಕವು ಈ ಹಿಂದಿನ ಟ್ರೇಡಿಂಗ್ ಸೆಷನ್​ನಲ್ಲಿ 9020.21 ಪಾಯಿಂಟ್ಸ್​​ನೊಂದಿಗೆ ವಹಿವಾಟು ಮುಕ್ತಾಯಗೊಳಿಸಿತ್ತು. ಇಂದು ಆರಂಭವಾಗಿದ್ದು 9113.04 ಪಾಯಿಂಟ್ಸ್​​ಗೆ. ಆ ನಂತರ ದಿನದ ಗರಿಷ್ಠ ಮಟ್ಟ 9114.15 ಪಾಯಿಂಟ್ಸ್ ತಲುಪಿತು.

ಅಂದ ಹಾಗೆ ಬಿಎಸ್​ಇ ಪಿಎಸ್​ಯು ಸೂಚ್ಯಂಕದ ವಾರ್ಷಿಕ ಕನಿಷ್ಠ ಮಟ್ಟ 5724.42 ಪಾಯಿಂಟ್ಸ್​ ಆಗಿದ್ದು, ಗರಿಷ್ಠ ಮಟ್ಟ 9,358.78 ಪಾಯಿಂಟ್ಸ್ ಆಗಿದೆ. ಇತ್ತೀಚೆಗೆ ಏರ್​ ಇಂಡಿಯಾವನ್ನು ಯಶಸ್ವಿಯಾಗಿ ಟಾಟಾ ಸಮೂಹಕ್ಕೆ ವರ್ಗಾವಣೆ ಮಾಡಿ ಮುಗಿಸಿರುವುದು ದೊಡ್ಡ ಮಟ್ಟದ ಆತ್ಮವಿಶ್ವಾಸ ನೀಡಿದೆ. ಸಾಲದ ಸುಳಿಯಲ್ಲಿ ಸಿಲುಕಿದ್ದ ಏರ್​ ಇಂಡಿಯಾದ ಷೇರಿನ ಪಾಲನ್ನು ಮಾರಾಟ ಮಾಡಿದ್ದು, ಇದೀಗ ಎಲ್​ಐಸಿ ಐಪಿಒ ಪ್ರಸಕ್ತ ಹಣಕಾಸು ವರ್ಷದಲ್ಲಿ ಅತಿ ದೊಡ್ಡ ನಿರೀಕ್ಷೆ ಆಗಿದೆ.

ಎಲ್​ಐಸಿ ಐಪಿಒ ಭಾರತದ ಇತಿಹಾಸದಲ್ಲೇ ಅತಿ ದೊಡ್ಡ ಐಪಿಒ ಆಗಿದೆ. ಇದರ ಜತೆಗೆ ಇತರ ಸಾರ್ವಜನಿಕ ಸ್ವಾಮ್ಯದ ಷೇರುಗಳ ಮಾರಾಟ ಕೂಡ 2022-23ರ ಹಣಕಾಸು ವರ್ಷದಲ್ಲಿ ಮಾಡಲಾಗುವುದು. ಈ ಲೇಖನವನ್ನು ಸಿದ್ಧ ಮಾಡುವ ಹೊತ್ತಿಗೆ ಅಲ್ಪ ಪ್ರಮಾಣದ ಇಳಿಕೆಯೊಂದಿಗೆ 9,019.46 ಪಾಯಿಂಟ್ಸ್​ನಲ್ಲಿ ವಹಿವಾಟು ನಡೆಸುತ್ತಿತ್ತು.

ಇದನ್ನೂ ಓದಿ: Air India: ಟಾಟಾ ಸಮೂಹಕ್ಕೆ ಏರ್​ ಇಂಡಿಯಾ ಹಸ್ತಾಂತರಿಸುವ ಕಾರ್ಯ ಸಂಪೂರ್ಣ ಎಂದು ಘೋಷಿಸಿದ ತುಹಿನ್ ಕಾಂತ್ ಪಾಂಡೆ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ